AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಶ್ಲೀ ಗಾರ್ಡ್ನರ್ ಮಿಂಚಿಂಗ್​: ಗುಜರಾತ್ ಜೈಂಟ್ಸ್​ಗೆ ಜಯ

WPL 2025: ವುಮೆನ್ಸ್ ಪ್ರೀಮಿಯರ್ ಲೀಗ್​ನ ಮೊದಲ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ 37 ಎಸೆತಗಳಲ್ಲಿ ಅಜೇಯ 79 ರನ್ ಬಾರಿಸಿದ್ದ ಆಶ್ಲೀ ಗಾರ್ಡ್ನರ್ ಇದೀಗ ಮತ್ತೊಮ್ಮೆ ಅರ್ಧಶತಕ ಬಾರಿಸಿದ್ದಾರೆ. ಈ ಅರ್ಧಶತಕದೊಂದಿಗೆ ಗುಜರಾತ್ ಜೈಂಟ್ಸ್ ತಂಡಕ್ಕೆ ಗೆಲುವು ತಂದುಕೊಡುವಲ್ಲಿ ಆಸ್ಟ್ರೇಲಿಯನ್ ಆಟಗಾರ್ತಿ ಯಶಸ್ವಿಯಾಗಿದ್ದಾರೆ.

ಆಶ್ಲೀ ಗಾರ್ಡ್ನರ್ ಮಿಂಚಿಂಗ್​: ಗುಜರಾತ್ ಜೈಂಟ್ಸ್​ಗೆ ಜಯ
Gujarat Gaints
ಝಾಹಿರ್ ಯೂಸುಫ್
|

Updated on: Feb 17, 2025 | 7:20 AM

Share

ವುಮೆನ್ಸ್ ಪ್ರೀಮಿಯರ್ ಲೀಗ್​ನ ಮೂರನೇ ಪಂದ್ಯದ ಮೂಲಕ ಗುಜರಾತ್ ಜೈಂಟ್ಸ್ ತಂಡವು ಗೆಲುವಿನ ಖಾತೆ ತೆರೆದಿದೆ. ವಡೋದರಾದ ಕೋಟಂಬಿ ಸ್ಟೇಡಿಯಂನಲ್ಲಿ ನಡೆದ ಯುಪಿ ವಾರಿಯರ್ಸ್ ವಿರುದ್ಧದ ಈ ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಜೈಂಟ್ಸ್ ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಯುಪಿ ವಾರಿಯರ್ಸ್ ತಂಡದ ಪರ ನಾಯಕಿ ದೀಪ್ತಿ ಶರ್ಮಾ 39 ರನ್ ಬಾರಿಸಿದ್ದು ಗರಿಷ್ಠ ಸ್ಕೋರ್. ಇತ್ತ 4 ಓವರ್​ಗಳನ್ನು ಎಸೆದ ಪ್ರಿಯಾ ಮಿಶ್ರಾ ಕೇವಲ 25 ರನ್ ನೀಡಿ 3 ವಿಕೆಟ್ ಕಬಳಿಸಿದರು. ಪರಿಣಾಮ ಯುಪಿ ವಾರಿಯರ್ಸ್ ತಂಡವು 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 143 ರನ್​ಗಳಿಸಲಷ್ಟೇ ಶಕ್ತರಾದರು.

144 ರನ್​ಗಳ ಸುಲಭ ಗುರಿ ಪಡೆದ ಗುಜರಾತ್ ಜೈಂಟ್ಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ್ತಿ ಬೆತ್ ಮೂನಿ (0) ಹಾಗೂ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ದಯಾಳನ್ ಹೇಮಲತಾ (0) ಶೂನ್ಯಕ್ಕೆ ಔಟಾದರು.

ಈ ಹಂತದಲ್ಲಿ ಕಣಕ್ಕಿಳಿದ ನಾಯಕಿ ಆಶ್ಲೀ ಗಾರ್ಡ್ನರ್ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಅಲ್ಲದೆ 32 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ 52 ರನ್ ಬಾರಿಸಿದರು. ಆ ಬಳಿಕ ಬಂದ ಹರ್ಲಿನ್ ಡಿಯೋಲ್ 34 ರನ್ ಬಾರಿಸಿದರೆ, ಡಿಯಾಂಡ್ರಾ ಡಾಟಿನ್ 33 ರನ್​ ಚಚ್ಚಿದರು. ಈ ಮೂಲಕ ಗುಜರಾತ್ ಜೈಂಟ್ಸ್ ತಂಡವು 18 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 144 ರನ್ ಕಲೆಹಾಕಿ 6 ವಿಕೆಟ್​ಗಳ ಜಯ ಸಾಧಿಸಿತು.

ಗುಜರಾತ್ ಜೈಂಟ್ಸ್ ಪ್ಲೇಯಿಂಗ್ 11: ಬೆತ್ ಮೂನಿ (ವಿಕೆಟ್ ಕೀಪರ್) , ಲಾರಾ ವೋಲ್ವಾರ್ಡ್ಟ್ , ದಯಾಲನ್ ಹೇಮಲತಾ , ಆಶ್ಲೀ ಗಾರ್ಡ್ನರ್ (ನಾಯಕಿ) , ಡಿಯಾಂಡ್ರಾ ಡಾಟಿನ್ , ಸಿಮ್ರಾನ್ ಶೇಖ್ , ಹರ್ಲೀನ್ ಡಿಯೋಲ್ , ತನುಜಾ ಕನ್ವರ್ , ಸಯಾಲಿ ಸತ್ಘರೆ , ಕಾಶ್ವೀ ಗೌತಮ್ , ಪ್ರಿಯಾ ಮಿಶ್ರಾ.

ಇದನ್ನೂ ಓದಿ: WPL 2025: ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಇತಿಹಾಸ ನಿರ್ಮಿಸಿದ RCB

ಯುಪಿ ವಾರಿಯರ್ಸ್ ಪ್ಲೇಯಿಂಗ್ 11: ಉಮಾ ಚೆಟ್ರಿ (ವಿಕೆಟ್ ಕೀಪರ್) , ವೃಂದಾ ದಿನೇಶ್ , ಗ್ರೇಸ್ ಹ್ಯಾರಿಸ್ , ದೀಪ್ತಿ ಶರ್ಮಾ (ನಾಯಕಿ) , ತಹ್ಲಿಯಾ ಮೆಗ್ರಾತ್ , ಕಿರಣ್ ನವಗಿರೆ , ಶ್ವೇತಾ ಸೆಹ್ರಾವತ್ , ಸೋಫಿ ಎಕ್ಲೆಸ್ಟೋನ್ , ಅಲನಾ ಕಿಂಗ್ , ಸೈಮಾ ಠಾಕೋರ್ , ಕ್ರಾಂತಿ ಗೌಡ್.

Follow Us
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ