AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL Auction 2026: ಆರ್​ಸಿಬಿ ಸೇರಿದ 12 ಆಟಗಾರ್ತಿರು ಇವರೇ.. ಇಲ್ಲಿದೆ ಪೂರ್ಣ ತಂಡ

RCB Team WPL 2026 Players List: ನವದೆಹಲಿಯಲ್ಲಿ ನಡೆದ WPL ಮೆಗಾ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 12 ಹೊಸ ಆಟಗಾರ್ತಿಯರನ್ನು ಸೇರಿಸಿಕೊಂಡಿದೆ. 2024ರ ಚಾಂಪಿಯನ್ ಆಗಿದ್ದ ಆರ್​ಸಿಬಿ, 6.15 ಕೋಟಿ ಬಜೆಟ್ ಬಳಸಿ ಸ್ಮೃತಿ ಮಂಧಾನಾ, ಎಲ್ಲಿಸ್ ಪೆರ್ರಿ ಸೇರಿದಂತೆ ಪ್ರಮುಖರನ್ನು ಉಳಿಸಿಕೊಂಡು ಪ್ರಬಲ ತಂಡ ರಚಿಸಿದೆ. ಹರಾಜಿನಲ್ಲಿ ಖರೀದಿಸಿದ ಆಟಗಾರ್ತಿಯರ ಸಂಪೂರ್ಣ ಪಟ್ಟಿ ಇಲ್ಲಿದೆ.

WPL Auction 2026: ಆರ್​ಸಿಬಿ ಸೇರಿದ 12 ಆಟಗಾರ್ತಿರು ಇವರೇ.. ಇಲ್ಲಿದೆ ಪೂರ್ಣ ತಂಡ
Rcb Women
ಪೃಥ್ವಿಶಂಕರ
|

Updated on: Nov 27, 2025 | 10:17 PM

Share

ನವದೆಹಲಿಯಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ ಮೆಗಾಹರಾಜಿನಲ್ಲಿ (WPL Auction 2026) ಒಟ್ಟು 276 ಆಟಗಾರ್ತಿಯರು ಹರಾಜಿನಲ್ಲಿ ಭಾಗವಹಿಸಿದ್ದರು. ಇದರಲ್ಲಿ ಖಾಲಿ ಇದ್ದ 73 ಸ್ಥಾನಗಳಿಗೆ 67 ಆಟಗಾರ್ತಿರು ಭರ್ತಿಯಾಗಿದ್ದಾರೆ. ಅದರಲ್ಲೂ ಪ್ರಮುಖವಾಗಿ ಎರಡನೇ ಆವೃತ್ತಿಯಲ್ಲಿ ಚಾಂಪಿಯನ್ ಆಗಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಮೇಲೆ ಎಲ್ಲರ ದೃಷ್ಟಿ ನೆಟ್ಟಿತ್ತು. ಏಕೆಂದರೆ 2024 ರ ಆವೃತ್ತಿಯಲ್ಲಿ ಚಾಂಪಿಯನ್ ಆಗಿದ್ದ ಆರ್​ಸಿಬಿ ಹರಾಜಿಗೂ ಮುನ್ನ ಕೇವಲ ನಾಲ್ವರನ್ನು ತಂಡದಲ್ಲಿ ಉಳಿಸಿಕೊಂಡು ಉಳಿದವರನ್ನು ತಂಡದಿಂದ ಕೈಬಿಟ್ಟಿತ್ತು. ಕೈಬಿಟ್ಟ ಆಟಗಾರ್ತಿಯರಲ್ಲಿ ಹಲವರು ಸ್ಟಾರ್ ಆಟಗಾರ್ತಿಯರೇ ಸೇರಿದ್ದರು. ಹೀಗಾಗಿ ಹರಾಜಿನಲ್ಲಿ ಆರ್​ಸಿಬಿ ಯಾವ ಆಟಗಾರ್ತಿಯರ ಹಿಂದೆ ಬೀಳಬಹುದು ಎಂಬ ನಿರೀಕ್ಷೆ ಇತ್ತು. ಅದರಂತೆ 6.15 ಕೋಟಿ ರೂಪಾಯಿ ಬಜೆಟ್​ನೊಂದಿಗೆ ಹರಾಜಿಗೆ ಬಂದಿದ್ದ ಆರ್​ಸಿಬಿ ಒಟ್ಟು 12 ಆಟಗಾರ್ತಿಯರನ್ನು ತನ್ನ ತಂಡಕ್ಕೆ ಸೇರಿಸಿಕೊಂಡಿದೆ.

ಹರಾಜಿಗೆ ಮುನ್ನ ಆರ್‌ಸಿಬಿ ಉಳಿಸಿಕೊಂಡಿದ್ದ ಆಟಗಾರ್ತಿಯರು

  1. ಸ್ಮೃತಿ ಮಂಧಾನ- 3.5 ಕೋಟಿ
  2. ಎಲ್ಲಿಸ್ ಪೆರ್ರಿ- 2 ಕೋಟಿ
  3. ರಿಚಾ ಘೋಷ್- 2.4 ಕೋಟಿ
  4. ಶ್ರೇಯಾಂಕ ಪಾಟೀಲ್- 60 ಲಕ್ಷ

ಹರಾಜಿನಲ್ಲಿ ಖರೀದಿಸಿದ ಆಟಗಾರ್ತಿಯರು

  1. ಜಾರ್ಜಿಯಾ ವೋಲ್-60 ಲಕ್ಷ
  2. ನಡಿನ್ ಡಿ ಕ್ಲರ್ಕ್-65 ಲಕ್ಷ
  3. ರಾಧಾ ಯಾದವ್- 65 ಲಕ್ಷ
  4. ಲಾರೆನ್ ಬೆಲ್- 90 ಲಕ್ಷ
  5. ಲೆನ್ಸಿ ಸ್ಮಿತ್- 30 ಲಕ್ಷ
  6. ಪ್ರೇಮಾ ರಾವತ್- 20 ಲಕ್ಷ (ರೈಟ್ ಮ್ಯಾಚ್ ಕಾರ್ಡ್​)
  7. ಅರುಂಧತಿ ರೆಡ್ಡಿ- 75 ಲಕ್ಷ
  8. ಪೂಜಾ ವಸ್ತ್ರಕರ್- 85 ಲಕ್ಷ
  9. ಗ್ರೇಸ್ ಹ್ಯಾರಿಸ್- 75 ಲಕ್ಷ
  10. ಗೌತಮಿ ನಾಯ್ಕ್- 10 ಲಕ್ಷ
  11. ಪ್ರತ್ಯೂಷಾ ಕುಮಾರ್- 10 ಲಕ್ಷ
  12. ಡಿ ಹೇಮಲತಾ- 30 ಲಕ್ಷ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪೂರ್ಣ ತಂಡ

ಸ್ಮೃತಿ ಮಂಧಾನ, ರಿಚಾ ಘೋಷ್, ಎಲ್ಲಿಸ್ ಪೆರ್ರಿ, ಲಾರೆನ್ ಬೆಲ್, ಪೂಜಾ ವಸ್ತ್ರಾಕರ್, ಅರುಂಧತಿ ರೆಡ್ಡಿ, ಗ್ರೇಸ್ ಹ್ಯಾರಿಸ್, ರಾಧಾ ಯಾದವ್, ನಡಿನ್ ಡಿ ಕ್ಲರ್ಕ್, ಶ್ರೇಯಾಂಕಾ ಪಾಟೀಲ್, ಜಾರ್ಜಿಯಾ ವೋಲ್, ಲಿನ್ಸೆ ಸ್ಮಿತ್, ಪ್ರೇಮಾ ರಾವತ್, ಗೌತಮಿ ನಾಯಕ್, ಪ್ರತ್ಯೂಷ ಕುಮಾರ್, ದಯಾಲನ್ ಹೇಮಲತಾ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಧಾರವಾಡದಲ್ಲಿ ಜೈಲರ್ ಆತ್ಮಹತ್ಯೆ: ಅಲೋಕ್ ಕುಮಾರ್ ವಿರುದ್ಧ ಗಂಭೀರ ಆರೋಪ
ಧಾರವಾಡದಲ್ಲಿ ಜೈಲರ್ ಆತ್ಮಹತ್ಯೆ: ಅಲೋಕ್ ಕುಮಾರ್ ವಿರುದ್ಧ ಗಂಭೀರ ಆರೋಪ
ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್
ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್