Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2025: ಡೆಲ್ಲಿ ವಿರುದ್ಧ ಗೆದ್ದ ಗುಜರಾತ್; ಆರ್​ಸಿಬಿಗೆ ಅಗ್ನಿಪರೀಕ್ಷೆ

WPL 2025: ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ಗುಜರಾತ್ ಜೈಂಟ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಹೈ-ವೋಲ್ಟೇಜ್ ಪಂದ್ಯದಲ್ಲಿ ಗುಜರಾತ್ ಜಯಗಳಿಸಿತು.ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ 177 ರನ್ ಗಳಿಸಿದರೆ, ಗುರಿ ಬೆನ್ನಟ್ಟಿದ ಗುಜರಾತ್ ಕೊನೆಯ ಓವರ್‌ನಲ್ಲಿ ಗುರಿ ಮುಟ್ಟಿತು. ಈ ಗೆಲುವಿನೊಂದಿಗೆ ಗುಜರಾತ್ ಪ್ಲೇ ಆಫ್‌ಗೆ ಇನ್ನಷ್ಟು ಹತ್ತಿರವಾಯಿತು.

WPL 2025: ಡೆಲ್ಲಿ ವಿರುದ್ಧ ಗೆದ್ದ ಗುಜರಾತ್; ಆರ್​ಸಿಬಿಗೆ ಅಗ್ನಿಪರೀಕ್ಷೆ
Gujarat Giants
Follow us
ಪೃಥ್ವಿಶಂಕರ
|

Updated on:Mar 07, 2025 | 11:23 PM

ಮಹಿಳಾ ಪ್ರೀಮಿಯರ್ ಲೀಗ್ (WPL 2025) ಟೂರ್ನಿಯ 17ನೇ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಪ್ಲೇಆಫ್ ದೃಷ್ಟಿಯಿಂದ ಈ ಪಂದ್ಯ ಎರಡೂ ತಂಡಗಳಿಗೆ ಬಹುಮುಖ್ಯವಾಗಿತ್ತು. ಒಂದೆಡೆ ಈ ಪಂದ್ಯವನ್ನು ಗೆದ್ದಿದ್ದರೆ, ಡೆಲ್ಲಿ ನೇರವಾಗಿ ಫೈನಲ್​ಗೇರುತ್ತಿತ್ತು. ಇತ್ತ ಗುಜರಾತ್‌, ಪ್ಲೇಆಫ್​ಗೆ ಇನ್ನಷ್ಟು ಹತ್ತಿರವಾಗುತ್ತಿತ್ತು. ಹೀಗಾಗಿ ಉಭಯ ತಂಡಗಳು ಗೆಲ್ಲಲೇಬೇಕಾದ ಒತ್ತಡದಲ್ಲಿದ್ದವು. ಹೀಗಾಗಿ ಈ ಹೈವೋಲ್ಟೇಜ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ 5 ವಿಕೆಟ್ ನಷ್ಟಕ್ಕೆ 177 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಗುಜರಾತ್ ತಂಡ ಕೊನೆಯ ಓವರ್​ನಲ್ಲಿ ಗೆಲುವಿನ ದಡ ಮುಟ್ಟಿತು.

ಲ್ಯಾನಿಂಗ್- ಶಫಾಲಿ ಸ್ಫೋಟಕ ಬ್ಯಾಟಿಂಗ್

ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಪರ ಆರಂಭಿಕರಾದ ಮೆಗ್ ಲ್ಯಾನಿಂಗ್ ಮತ್ತು ಶಫಾಲಿ ವರ್ಮಾ ಆಕ್ರಮಣಕಾರಿ ಆಟದ ಮೂಲಕ ತಂಡಕ್ಕೆ ಸ್ಫೋಟಕ ಆರಂಭ ಒದಗಿಸಿದರು. ಇವರಿಬ್ಬರು ಮೊದಲ ವಿಕೆಟ್‌ಗೆ 83 ರನ್‌ಗಳ ಜೊತೆಯಾಟ ನೀಡಿದರು. ಶಫಾಲಿ ವರ್ಮಾ 27 ಎಸೆತಗಳಲ್ಲಿ 40 ರನ್ ಗಳಿಸಿ ಔಟಾದರು. ಶಫಾಲಿ ವಿಕೆಟ್ ನಂತರ ಡೆಲ್ಲಿ ಕ್ಯಾಪಿಟಲ್ಸ್ ಪತನ ಆರಂಭವಾಯಿತು. ಜೊನಾಸ್ಸೆನ್ ಮತ್ತು ಜೆಮಿಮಾ ರೊಡ್ರಿಗಸ್ ಬೇಗನೇ ಔಟಾದರು. ಅನ್ನಾಬೆಲ್ ಸದರ್ಲ್ಯಾಂಡ್ ಕೂಡ ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡರು.

ಮತ್ತೊಂದೆಡೆ, ಆರಂಭದಿಂದಲೂ ಆಕ್ರಮಣಕಾರಿ ಆಟ ಮುಂದುವರೆಸಿದ ಮೆಗ್ ಲ್ಯಾನಿಂಗ್ 57 ಎಸೆತಗಳಲ್ಲಿ 15 ಬೌಂಡರಿ ಮತ್ತು ಒಂದು ಸಿಕ್ಸರ್ ನೆರವಿನಿಂದ 92 ರನ್ ಗಳಿಸಿದರು. ಆದರೆ ಅವರು ಕೇವಲ 8 ರನ್‌ಗಳಿಂದ ಶತಕ ವಂಚಿತರಾದರು. ಅಂತಿಮವಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 177 ರನ್ ಗಳಿಸಿ, ಗೆಲುವಿಗೆ 178 ರನ್‌ಗಳ ಗುರಿಯನ್ನು ನೀಡಿತು.

ಇದನ್ನೂ ಓದಿ
Image
ಸೂಪರ್ ಓವರ್ ಸೋಲಿಗೆ ಸೇಡು ತೀರಿಸಿಕೊಳ್ಳುತ್ತಾ ಆರ್​ಸಿಬಿ?
Image
ಗುಜರಾತ್ ವಿರುದ್ಧವೂ ಸೋತ ಆರ್​ಸಿಬಿ
Image
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
Image
ಸತತ ಸೋಲುಗಳಿಂದ ಕಂಗೆಟ್ಟಿರುವ ಆರ್​ಸಿಬಿ ಮತ್ತೆ ಗೆಲುವಿನ ಲಯಕ್ಕೆ ಮರಳುತ್ತಾ?

ಹರ್ಲೀನ್ ಆಟಕ್ಕೆ ಒಲಿದ ಜಯ

178 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಗುಜರಾತ್ ತಂಡದ ಆರಂಭ ಉತ್ತಮವಾಗಿರಲಿಲ್ಲ. ದಯಾಲನ್ ಹೇಮಲತಾ ಕೇವಲ 1 ರನ್ ಗಳಿಸಿ ಔಟಾದರು. ಮೊದಲ ವಿಕೆಟ್ ಪತನದ ನಂತರ, ಬೆತ್ ಮೂನಿ ಮತ್ತು ಹರ್ಲೀನ್ ಇನ್ನಿಂಗ್ಸ್‌ನ ಜವಾಬ್ದಾರಿಯನ್ನು ವಹಿಸಿಕೊಂಡರು. ಇಬ್ಬರೂ 85 ರನ್‌ಗಳ ಜೊತೆಯಾಟ ನಡೆಸಿದರು. ಬೆತ್ ಮೂನಿ 44 ರನ್ ಗಳಿಸಿ ಔಟಾದರು. ಅವರ ನಂತರ ಬಂದ ಆಶ್ಲೀ ಗಾರ್ಡ್ನರ್ ಕೂಡ 22 ರನ್ ಗಳಿಸಿ ಔಟಾದರು.

ಸ್ಫೋಟಕ ಬ್ಯಾಟರ್ ಡಿಯಾಂಡ್ರಾ ಡಾಟಿನ್ 10 ಎಸೆತಗಳಲ್ಲಿ 24 ರನ್‌ಗಳ ತ್ವರಿತ ಇನ್ನಿಂಗ್ಸ್ ಆಡಿ ತಂಡವನ್ನು ಮತ್ತೆ ಗೆಲುವಿನ ಟ್ರ್ಯಾಕ್​ಗೆ ತಂದರು. ಆದರೆ ಜೊನಾಸ್ಸೆನ್ ಎಸೆತದಲ್ಲಿ ಬಿಗ್ ಶಾಟ್ ಆಡುವ ಯತ್ನದಲ್ಲಿ ಡಾಟಿನ್ ಔಟಾದರು. ಆ ನಂತರ ಬಂದ ಫೋಬೆ ಲಿಚ್‌ಫೀಲ್ಡ್ ಖಾತೆ ತೆರೆಯದೆಯೇ ಔಟಾದರು. ಕೊನೆಯಲ್ಲಿ ಹರ್ಲೀನ್ ಹೊಡಿಬಡಿ ಆಟದ ಮೂಲಕ ಗುಜರಾತ್‌ಗೆ ಗೆಲುವು ತಂದುಕೊಟ್ಟರು. ಹರ್ಲೀನ್ 49 ಎಸೆತಗಳಲ್ಲಿ 70 ರನ್ ಗಳಿಸಿ ಇನ್ನಿಂಗ್ಸ್ ಆಡಿದರು. ಅವರ ಇನ್ನಿಂಗ್ಸ್‌ನಲ್ಲಿ 7 ಬೌಂಡರಿ ಮತ್ತು 1 ಸಿಕ್ಸರ್ ಕೂಡ ಸೇರಿತ್ತು.

ಇದನ್ನೂ ಓದಿ: WPL 2025: ಯುಪಿ ವಿರುದ್ಧ ಗೆದ್ದರಷ್ಟೇ ಆರ್​ಸಿಬಿಗೆ ಉಳಿಗಾಲ; ಸೋತರೆ ಟೂರ್ನಿಯಿಂದ ಔಟ್

ಆರ್​ಸಿಬಿಗೆ ಅಗ್ನಿ ಪರೀಕ್ಷೆ

ಇದೀಗ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗುಜರಾತ್‌ ಜೈಂಟ್ಸ್ ಗೆದ್ದಿರುವ ಕಾರಣ, ಈ ಎರಡು ತಂಡಗಳು ಇದೀಗ ಪಾಯಿಂಟ್ ಪಟ್ಟಿಯಲ್ಲಿ ಮೊದಲೆರಡು ಸ್ಥಾನವನ್ನು ಪಡೆದುಕೊಂಡಿವೆ. ಉಳಿದಂತೆ ಮುಂಬೈ ಇಂಡಿಯನ್ಸ್ ಮೂರನೇ ಸ್ಥಾನದಲ್ಲಿದ್ದರೆ, ಆರ್​ಸಿಬಿ ನಾಲ್ಕನೇ ಸ್ಥಾನದಲ್ಲಿದೆ. ಡೆಲ್ಲಿ ಹೊರತುಪಡಿಸಿ ಯಾವ ತಂಡವೂ ಪ್ಲೇಆಫ್​ಗೆ ಅರ್ಹತೆ ಪಡೆದುಕೊಂಡಿಲ್ಲ. ಇದೀಗ ಉಳಿದಿರುವ ಎರಡು ಪಂದ್ಯಗಳಲ್ಲಿ ಆರ್​ಸಿಬಿ ಗೆಲ್ಲಲೇಬೇಕಾಗಿದೆ. ಅದರಲ್ಲೂ ಬೃಹತ್ ಅಂತರದಲ್ಲಿ ಆರ್​ಸಿಬಿ ಗೆಲ್ಲಬೇಕಾಗಿದೆ. ಏಕೆಂದರೆ ಆರ್​ಸಿಬಿಗೆ ಹೋಲಿಸಿದರೆ, ಮುಂಬೈ ಹಾಗೂ ಗುಜರಾತ್ ತಂಡದ ನೆಟ್ ರನ್​ರೇಟ್​ ಉತ್ತಮವಾಗಿದೆ. ಹೀಗಾಗಿ ಆರ್​ಸಿಬಿ ಎರಡು ಪಂದ್ಯಗಳನ್ನು ಗೆಲ್ಲುವುದರ ಜೊತೆಗೆ ಭಾರಿ ಅಂತರದ ಗೆಲುವನ್ನು ಸಾಧಿಸಬೇಕಿದೆ. ಇದರಲ್ಲಿ ಒಂದು ಪಂದ್ಯ ಸೋತರೂ ಆರ್​ಸಿಬಿ ಪ್ಲೇ ಆಫ್ ಕನಸು ಭಗ್ನವಾಗಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:20 pm, Fri, 7 March 25

ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇ4 ರಷ್ಟು ಮೀಸಲಾತಿ ಅಸವಿಂಧಾನಿಕ: ಸೂರ್ಯ
ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇ4 ರಷ್ಟು ಮೀಸಲಾತಿ ಅಸವಿಂಧಾನಿಕ: ಸೂರ್ಯ
ಕೇಂದ್ರ ನೀಡಿರೋದು ₹ 10,000 ಕೋಟಿ ಅಲ್ಲ, ₹1030 ಕೋಟಿ ಮಾತ್ರ: ಸಿದ್ದರಾಮಯ್ಯ
ಕೇಂದ್ರ ನೀಡಿರೋದು ₹ 10,000 ಕೋಟಿ ಅಲ್ಲ, ₹1030 ಕೋಟಿ ಮಾತ್ರ: ಸಿದ್ದರಾಮಯ್ಯ
ಕಾರಿಂದ ಇಳಿಯುವ ಮೊದಲು ಸುಮಾರು ಹೊತ್ತು ಫೋನಲ್ಲಿ ಸಿಎಂ ಮಾತು!
ಕಾರಿಂದ ಇಳಿಯುವ ಮೊದಲು ಸುಮಾರು ಹೊತ್ತು ಫೋನಲ್ಲಿ ಸಿಎಂ ಮಾತು!
ಮಕ್ಕಳ ಜೊತೆ ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ ಪುನೀತ್
ಮಕ್ಕಳ ಜೊತೆ ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ ಪುನೀತ್
ಪುನೀತ್ ತರಹೇವಾರಿ ಅಭಿಮಾನಿಗಳು, ಆದರೆ ಇಂಥ ಅಭಿಮಾನಿ ಪ್ರಾಯಶಃ ಕಾಣಸಿಗರು!
ಪುನೀತ್ ತರಹೇವಾರಿ ಅಭಿಮಾನಿಗಳು, ಆದರೆ ಇಂಥ ಅಭಿಮಾನಿ ಪ್ರಾಯಶಃ ಕಾಣಸಿಗರು!
ನಟನ ಹೆಸರಲ್ಲಿ ಅನ್ನದಾನ ಕಾರ್ಯಕ್ರಮ ಏರ್ಪಡಿಸಿರುವ ಬೀದಿಬದಿ ವ್ಯಾಪಾರಿಗಳು
ನಟನ ಹೆಸರಲ್ಲಿ ಅನ್ನದಾನ ಕಾರ್ಯಕ್ರಮ ಏರ್ಪಡಿಸಿರುವ ಬೀದಿಬದಿ ವ್ಯಾಪಾರಿಗಳು
ಮಂಡ್ಯ: ಕಂಕಣ ಭಾಗ್ಯಕ್ಕಾಗಿ ಮಹದೇಶ್ವರ ಬೆಟ್ಟಕ್ಕೆ ಬ್ರಹ್ಮಚಾರಿಗಳ ಪಾದಯಾತ್ರೆ
ಮಂಡ್ಯ: ಕಂಕಣ ಭಾಗ್ಯಕ್ಕಾಗಿ ಮಹದೇಶ್ವರ ಬೆಟ್ಟಕ್ಕೆ ಬ್ರಹ್ಮಚಾರಿಗಳ ಪಾದಯಾತ್ರೆ
ವೃಂದಾವನದಲ್ಲಿ ಮೊಬೈಲ್ ಕದ್ದು ಮಂಗನಿಂದ ಬ್ಲ್ಯಾಕ್​ಮೇಲ್
ವೃಂದಾವನದಲ್ಲಿ ಮೊಬೈಲ್ ಕದ್ದು ಮಂಗನಿಂದ ಬ್ಲ್ಯಾಕ್​ಮೇಲ್
ಮಕ್ಕಳಿಲ್ಲದಿದ್ದರೆ ಶ್ರಾದ್ಧ ಕರ್ಮ ಯಾರು ಮಾಡಬೇಕು?
ಮಕ್ಕಳಿಲ್ಲದಿದ್ದರೆ ಶ್ರಾದ್ಧ ಕರ್ಮ ಯಾರು ಮಾಡಬೇಕು?
Daily Horoscope: ಸಿಂಹ ರಾಶಿಯವರಿಗೆ ಇಂದು ಧನಯೋಗ ಮತ್ತು ಆರ್ಥಿಕ ಪ್ರಗತಿ
Daily Horoscope: ಸಿಂಹ ರಾಶಿಯವರಿಗೆ ಇಂದು ಧನಯೋಗ ಮತ್ತು ಆರ್ಥಿಕ ಪ್ರಗತಿ