AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL ಇತಿಹಾಸದಲ್ಲಿ ಮೊದಲ ಸೂಪರ್ ಓವರ್; ತನ್ನ ತಪ್ಪಿನಿಂದಲೇ ಸೋತ ಆರ್​ಸಿಬಿ

WPL 2025 Super Over: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಯುಪಿ ವಾರಿಯರ್ಸ್ ನಡುವಿನ ರಣರೋಚಕ ಡಬ್ಲ್ಯುಪಿಎಲ್ ಪಂದ್ಯವು ಸೂಪರ್ ಓವರ್‌ನಲ್ಲಿ ಕೊನೆಗೊಂಡಿತು. ಎಲ್ಲಿಸ್ ಪೆರ್ರಿ ಅವರ ಅದ್ಭುತ ಇನ್ನಿಂಗ್ಸ್‌ನಿಂದ ಆರ್‌ಸಿಬಿ 180 ರನ್ ಗಳಿಸಿತು. ಗುರಿ ಬೆನ್ನಟ್ಟಿದ ಯುಪಿ ವಾರಿಯರ್ಸ್ ಕೂಡಾ 180 ರನ್ ಗಳಿಸಿ ಪಂದ್ಯವನ್ನು ಸಮಬಲಗೊಳಿಸಿತು. ಸೂಪರ್ ಓವರ್‌ನಲ್ಲಿ ಯುಪಿ ವಾರಿಯರ್ಸ್ 8 ರನ್ ಗಳಿಸಿ ಆರ್‌ಸಿಬಿಯನ್ನು 4 ರನ್‌ಗಳಿಂದ ಸೋಲಿಸಿತು. ಇದು WPL ಇತಿಹಾಸದಲ್ಲಿ ಮೊದಲ ಸೂಪರ್ ಓವರ್ ಪಂದ್ಯವಾಗಿತ್ತು.

WPL ಇತಿಹಾಸದಲ್ಲಿ ಮೊದಲ ಸೂಪರ್ ಓವರ್; ತನ್ನ ತಪ್ಪಿನಿಂದಲೇ ಸೋತ ಆರ್​ಸಿಬಿ
ಆರ್​ಸಿಬಿ
Follow us
ಪೃಥ್ವಿಶಂಕರ
|

Updated on:Feb 24, 2025 | 11:54 PM

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಯುಪಿ ವಾರಿಯರ್ಸ್ ನಡುವಿನ ರಣ ರೋಚಕ ಪಂದ್ಯಕ್ಕೆ ಸಾಕ್ಷಿಯಾಯಿತು. ಡಬ್ಲ್ಯುಪಿಎಲ್ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಸೂಪರ್ ಓವರ್ ಪಂದ್ಯ ಈ ಎರಡು ತಂಡಗಳ ನಡುವೆ ನಡೆಯಿತು. ಅಂತಿಮವಾಗಿ ಯುಪಿ ವಾರಿಯರ್ಸ್​ ತಂಡ ಆರ್​ಸಿಬಿ ತಂಡವನ್ನು ಸೂಪರ್​ ಓವರ್​ನಲ್ಲಿ 4 ರನ್​ಗಳಿಂದ ಮಣಿಸಿತು. ಸೂಪರ್ ಓವರ್​ನಲ್ಲಿ ಮೊದಲು ಬ್ಯಾಟ್ ಮಾಡಿದ ಯುಪಿ ವಾರಿಯರ್ಸ್​ ತಂಡ 8 ರನ್ ಕಲೆಹಾಕಿದರೆ, ಈ ಗುರಿ ಬೆನ್ನಟ್ಟಿದ ಆರ್​ಸಿಬಿ ಕೇವಲ 4 ರನ್ ಕಲೆಹಾಕಲಷ್ಟೇ ಶಕ್ತವಾಯಿತು.

ಪೆರ್ರಿ ಅಜೇಯ 90 ರನ್

ಈ ಪಂದ್ಯದಲ್ಲಿ ಟಾಸ್ ಗೆದ್ದ ಯುಪಿ ವಾರಿಯರ್ಸ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಎಲ್ಲಿಸ್ ಪೆರ್ರಿ ಅದ್ಭುತ ಇನ್ನಿಂಗ್ಸ್ ಆಡಿದರು. ಇದರಿಂದಾಗಿ ಆರ್‌ಸಿಬಿ ತಂಡವು 20 ಓವರ್‌ಗಳಲ್ಲಿ 6 ವಿಕೆಟ್‌ಗಳ ನಷ್ಟಕ್ಕೆ 180 ರನ್ ಗಳಿಸಿತು. ಎಲ್ಲಿಸ್ ಪೆರ್ರಿ 56 ಎಸೆತಗಳಲ್ಲಿ 9 ಬೌಂಡರಿ ಮತ್ತು 3 ಸಿಕ್ಸರ್‌ಗಳ ನೆರವಿನಿಂದ ಅಜೇಯ 90 ರನ್ ಗಳಿಸಿದರು. ಅವರಲ್ಲದೆ, ಡ್ಯಾನಿ ವ್ಯಾಟ್ ಕೂಡ 57 ರನ್‌ಗಳ ಕೊಡುಗೆ ನೀಡಿದರು. ಪೆರ್ರಿ ಡ್ಯಾನಿ ವ್ಯಾಟ್ ಜೊತೆ ಅರ್ಧಶತಕದ ಪಾಲುದಾರಿಕೆಯನ್ನು ಹಂಚಿಕೊಂಡರು.

ರೇಣುಕಾ ದುಬಾರಿ ಓವರ್

ಮತ್ತೊಂದೆಡೆ, ಈ ಗುರಿ ಬೆನ್ನಟ್ಟಿದ ಯುಪಿ ವಾರಿಯರ್ಸ್ 20 ಓವರ್‌ಗಳಲ್ಲಿ 180 ರನ್‌ಗಳನ್ನು ಮಾತ್ರ ಗಳಿಸಲು ಶಕ್ತವಾಗಿ ಆಲ್ ಔಟ್ ಆಯಿತು. ಈ ಪಂದ್ಯದಲ್ಲಿ ಶ್ವೇತಾ ಸೆಹ್ರಾವತ್ 31 ರನ್, ದೀಪ್ತಿ ಶರ್ಮಾ 25 ರನ್ ಮತ್ತು ಸೋಫಿ ಎಕ್ಲೆಸ್ಟೋನ್ ಅಜೇಯ 33 ರನ್ ಗಳಿಸಿದರು. ಕೊನೆಯ ಓವರ್‌ನಲ್ಲಿ ಯುಪಿ ಗೆಲ್ಲಲು 18 ರನ್‌ಗಳು ಬೇಕಾಗಿದ್ದವು. ಈ ಓವರ್ ಅನ್ನು ರೇಣುಕಾ ಸಿಂಗ್ ಬೌಲ್ ಮಾಡಿದರು. ಈ ಓವರ್‌ನಲ್ಲಿ ಸೋಫಿ ಎಕ್ಲೆಸ್ಟೋನ್ 2 ಸಿಕ್ಸರ್‌ ಮತ್ತು 1 ಬೌಂಡರಿ ಬಾರಿಸುವ ಮೂಲಕ ಪಂದ್ಯವನ್ನು ರೋಮಾಂಚನಗೊಳಿಸಿದರು. ಆದರೆ ಕೊನೆಯ ಎಸೆತದಲ್ಲಿ ತಂಡಕ್ಕೆ ಗೆಲ್ಲಲು 1 ರನ್ ಅಗತ್ಯವಿತ್ತು. ಸ್ಟ್ರೈಕ್‌ನಲ್ಲಿದ್ದ ಕ್ರಾಂತಿ ಗೌಡ್ ಈ ಬಾಲನ್ನು ಹೊಡಿಯಲಾಗಲಿಲ್ಲ. ಹೀಗಾಗಿ ಚೆಂಡು ಕೀಪರ್​ ಕೈಗೆ ಹೋಯಿತು. ಹೀಗಾಗಿ ರನ್​ಗಾಗಿ ಓಡಿದ ಸೋಫಿ ಎಕ್ಲೆಸ್ಟೋನ್ ರನ್ ಔಟ್ ಆದರು, ಇದರಿಂದಾಗಿ ಪಂದ್ಯವು ಟೈ ಆಯಿತು.

ಸೂಪರ್​ ಓವರ್

ಸೂಪರ್ ಓವರ್‌ನಲ್ಲಿ ಯುಪಿ ವಾರಿಯರ್ಸ್ ತಂಡ ಮೊದಲು ಬ್ಯಾಟಿಂಗ್ ಮಾಡಿ 6 ಎಸೆತಗಳಲ್ಲಿ ಕೇವಲ 8 ರನ್ ಕಲೆಹಾಕಿತು. ಅಂತಿಮವಾಗಿ, ಆರ್‌ಸಿಬಿಗೆ ಗೆಲ್ಲಲು 9 ರನ್‌ಗಳ ಗುರಿ ಸಿಕ್ಕಿತು. ಆದರೆ ಈ ಬಾರಿ ಸೋಫಿ ಎಕ್ಲೆಸ್ಟೋನ್ ಬೌಲಿಂಗ್‌ನಲ್ಲಿ ಅದ್ಭುತಗಳನ್ನು ಮಾಡಿ ಆರ್‌ಸಿಬಿಯಿಂದ ಜಯವನ್ನು ಕಸಿದುಕೊಂಡರು. ಈ ಓವರ್‌ನಲ್ಲಿ ಸೋಫಿ ಎಕ್ಲೆಸ್ಟೋನ್ ಕೇವಲ 4 ರನ್‌ಗಳನ್ನು ನೀಡಿದರು, ಇದರಿಂದಾಗಿ ಯುಪಿ ವಾರಿಯರ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 4 ರನ್‌ಗಳಿಂದ ಸೋಲಿಸಿತು.

ಆರ್​ಸಿಬಿ ಮಾಡಿದ ಮಹಾತಪ್ಪು

ವಾಸ್ತವವಾಗಿ ಸೂಪರ್​ ಓವರ್​ಗೆ ಪಂದ್ಯವನ್ನು ತೆಗೆದುಕೊಂಡು ಹೋಗದೆ ಆರ್​ಸಿಬಿ ಪಂದ್ಯವನ್ನು ಗೆಲ್ಲಬಹುದಿತ್ತು. ಆದರೆ ಯುಪಿ ತಂಡದ ಸ್ಫೋಟಕ ಬ್ಯಾಟರ್ ಚಿನೆಲ್ಲೆ ಹೆನ್ರಿ ಅವರ ವಿಕೆಟ್ ಉರುಳಿಸಿದ ಬಳಿಕ ಆರ್​ಸಿಬಿ ಪಂದ್ಯದ ಮೇಲೆ ಕೊಂಚ ನಿರ್ಲಕ್ಷ್ಯ ತೋರಿತು. ಇದರ ಲಾಭ ಪಡೆದ ಯುಪಿ ಬಾಲಂಗೋಚಿಗಳು ಕೂಡ ಸುಲಭವಾಗಿ ಸಿಕ್ಸರ್​ಗಳನ್ನು ಬಾರಿಸಿದರು. 9ನೇ ಕ್ರಮಾಂಕದಲ್ಲಿ ಬಂದ ಸೈಮಾ ಠಾಕೂರ್ ಕೂಡ ಒತ್ತಡದಲ್ಲೂ ಸಿಕ್ಸರ್ ಬಾರಿಸಿದರು. 20ನೇ ಓವರ್​ನಲ್ಲಿ ರೇಣುಕಾ ಸಿಂಗ್ ನಿರೀಕ್ಷೆಗೂ ಮೀರಿದ ರೀತಿಯಲ್ಲಿ ಅತಿ ಕೆಟ್ಟದಾಗಿ ಬೌಲಿಂಗ್ ಮಾಡಿದರು. ಗೆಲುವಿಗೆ 18 ರನ್​ಗಳು ಬೇಕಾಗಿದ್ದಾಗ ಟೀಂ ಇಂಡಿಯಾದ ಬೌಲಿಂಗ್ ವಿಭಾಗವನ್ನು ಮುನ್ನಡೆಸುತ್ತಿರುವ ರೇಣುಕಾ ಸಿಂಗ್ 2 ಸಿಕ್ಸರ್ ಹಾಗೂ 1 ಬೌಂಡರಿ ಹೊಡೆಸಿಕೊಂಡರು. ಇಲ್ಲಿಯೇ ಪಂದ್ಯ ಆರ್​ಸಿಬಿಯಿಂದ ಕೈಜಾರಿತು.

ಇನ್ನು ಸೂಪರ್​ ಓವರ್​ನಲ್ಲಿಯೂ ಆರ್​ಸಿಬಿ ದೊಡ್ಡ ಪ್ರಮಾದ ಎಸೆಗಿತು. ಕಳೆದೆರಡು ಪಂದ್ಯಗಳಿಂದ ರನ್​ಗಾಗಿ ಪರದಾಡುತ್ತಿರುವ ಸ್ಮೃತಿ ಮಂಧಾನ ಹಾಗೂ ರಿಚಾ ಘೋಷ್ ಅವರನ್ನು ಬ್ಯಾಟಿಂಗ್​ಗೆ ಇಳಿಸಿತು. ಆದರೆ ಈ ಇಬ್ಬರು ಅರ್ಧ ಒತ್ತಡದಲ್ಲಿಯೇ ಚೆಂಡನ್ನು ಎದುರಿಸಿ ಬಿಗ್ ಶಾಟ್​ಗಳನ್ನು ಹೊಡೆಯುವಲ್ಲಿ ವಿಫಲರಾದರು. ವಿಪರ್ಯಾಸವೆಂದರೆ ತಂಡದ ಸ್ಫೋಟಕ ಬ್ಯಾಟರ್ ಹಾಗೂ ಈ ಪಂದ್ಯದಲ್ಲಿ 90 ರನ್ ಬಾರಿಸಿದ್ದ ಎಲ್ಲಿಸ್ ಪೆರ್ರಿ ಅವರನ್ನು ಮೊದಲಿಗೆ ಬ್ಯಾಟಿಂಗ್​ಗೆ ಕಳುಹಿಸದಿರುವುದು ಆರ್​ಸಿಬಿ ಸೋಲಿಗೆ ಪ್ರಮುಖ ಕಾರಣವಾಯಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:42 pm, Mon, 24 February 25

ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ