AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC 2023: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ಗೇರಲು ಭಾರತ ಎಷ್ಟು ಪಂದ್ಯ ಗೆಲ್ಲಬೇಕು?

ICC World Test Championship 2023: ಭಾರತಕ್ಕೆ ನೇರವಾಗಿ ಫೈನಲ್​ಗೇರುವ ಉತ್ತಮ ಅವಕಾಶ ಕೂಡ ಇದೆ. ಹಾಗಿದ್ರೆ ಭಾರತ ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್​ ಫೈನಲ್​ಗೆ ಹೇಗೆ ಅರ್ಹತೆ ಪಡೆಯಬಹುದು ಎಂದು ತಿಳಿಯೋಣ...

WTC 2023: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ಗೇರಲು ಭಾರತ ಎಷ್ಟು ಪಂದ್ಯ ಗೆಲ್ಲಬೇಕು?
ಟೀಮ್ ಇಂಡಿಯಾ
TV9 Web
| Edited By: |

Updated on: Dec 29, 2022 | 10:29 PM

Share

ICC World Test Championship 2021-2023: ಮೆಲ್ಬೋರ್ನ್​ನಲ್ಲಿ ನಡೆದ ಸೌತ್ ಆಫ್ರಿಕಾ (South Africa) ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ಆಸ್ಟ್ರೇಲಿಯಾ (Australia) ತಂಡವು ಸರಣಿ ವಶಪಡಿಸಿಕೊಂಡಿದೆ. ಈ ಸರಣಿ ಗೆಲುವಿನೊಂದಿಗೆ ಆಸ್ಟ್ರೇಲಿಯಾ ತಂಡ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್ ಆಡುವುದು ಖಚಿತವಾಗಿದೆ. ಇದಾಗ್ಯೂ ಆಸೀಸ್​ ತಂಡದ ಅಂತಿಮ ಎದುರಾಳಿ ಯಾರು ಎಂಬುದು ಇನ್ನೂ ಕೂಡ ನಿರ್ಧಾರವಾಗಿಲ್ಲ. ಏಕೆಂದರೆ ಪ್ರಸ್ತುತ ಸನ್ನಿವೇಶದಲ್ಲಿ ಮೂರು ತಂಡಗಳು ಫೈನಲ್​ ರೇಸ್​ನಲ್ಲಿದೆ. ಅಂದರೆ 14 ಪಂದ್ಯಗಳನ್ನಾಡಿ 10 ಗೆಲುವಿನೊಂದಿಗೆ ಆಸ್ಟ್ರೇಲಿಯಾ ತಂಡವು 78.57% ರಷ್ಟು (ಗೆಲುವಿನ ಶೇಕಡಾವಾರು) ಅಂಕಗಳೊಂದಿಗೆ ಪಾಯಿಂಟ್ ಟೇಬಲ್​ನಲ್ಲಿ ಅಗ್ರಸ್ಥಾನದಲ್ಲಿದೆ. ಇನ್ನು ಎರಡನೇ ಸ್ಥಾನದಲ್ಲಿರುವ ಭಾರತ ತಂಡವು ಭಾರತ 14 ಪಂದ್ಯಗಳಲ್ಲಿ 8 ಗೆಲುವು ದಾಖಲಿಸಿ ಶೇ. 58.93% ರಷ್ಟು ಪಾಯಿಂಟ್ ಹೊಂದಿದೆ.

ಆದರೆ ಮೂರನೇ ಸ್ಥಾನದಲ್ಲಿರುವ ಶ್ರೀಲಂಕಾ ತಂಡವು 10 ಪಂದ್ಯಗಳಲ್ಲಿ 5 ಗೆಲುವು ಸಾಧಿಸಿ 53.33% ಪಾಯಿಂಟ್ ಕಲೆಹಾಕಿದೆ. ಮತ್ತೊಂದೆಡೆ 12 ಪಂದ್ಯಗಳನ್ನಾಡಿರುವ ಸೌತ್ ಆಫ್ರಿಕಾ 12 ಪಂದ್ಯಗಳಲ್ಲಿ 6 ಜಯ ಸಾಧಿಸಿ 50.0% ಪಾಯಿಂಟ್ ಹೊಂದಿದೆ. ಅಂದರೆ ಇಲ್ಲಿ ಭಾರತ, ಶ್ರೀಲಂಕಾ ಹಾಗೂ ಸೌತ್ ಆಫ್ರಿಕಾ ನಡುವೆ ಫೈನಲ್​ಗೇರಲು ಪೈಪೋಟಿ ಏರ್ಪಟ್ಟಿದೆ. ಇದಾಗ್ಯೂ ಭಾರತಕ್ಕೆ ನೇರವಾಗಿ ಫೈನಲ್​ಗೇರುವ ಉತ್ತಮ ಅವಕಾಶ ಕೂಡ ಇದೆ. ಹಾಗಿದ್ರೆ ಭಾರತ ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್​ ಫೈನಲ್​ಗೆ ಹೇಗೆ ಅರ್ಹತೆ ಪಡೆಯಬಹುದು ಎಂದು ತಿಳಿಯೋಣ…

  • – 2023 ರಲ್ಲಿ ಭಾರತ-ಆಸ್ಟ್ರೇಲಿಯಾ ವಿರುದ್ಧದ ನಾಲ್ಕು ಪಂದ್ಯಗಳ ಸರಣಿ ಆಡಲಿದೆ. ಈ ಸರಣಿಯನ್ನು ಭಾರತ 4-0, 3-0 ಅಥವಾ 3-1 ಅಂತರದಿಂದ ಗೆದ್ದರೆ ನೇರವಾಗಿ ಫೈನಲ್‌ಗೆ ಅರ್ಹತೆ ಪಡೆಯಲಿದೆ.
  • – ಒಂದು ವೇಳೆ ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ 2-0 ಅಂತರದಿಂದ ಸರಣಿ ಜಯಿಸಿದರೂ ಫೈನಲ್​ಗೆ ಅರ್ಹತೆ ಪಡೆಯಬಹುದು. ಆದರೆ ಇದಕ್ಕೆ ಶ್ರೀಲಂಕಾ ಹಾಗೂ ನ್ಯೂಜಿಲೆಂಡ್ ನಡುವಣ ಟೆಸ್ಟ್ ಸರಣಿಯ ಫಲಿತಾಂಶ ಮೇಲೆ ಅವಲಂಬಿಸಬೇಕಾಗುತ್ತದೆ. ಅಂದರೆ ಇಲ್ಲಿ ಶ್ರೀಲಂಕಾ ತಂಡವು ನ್ಯೂಜಿಲೆಂಡ್ ಅನ್ನು 2-0 ಅಂತರದಿಂದ ಮಣಿಸಿದರೆ, ಅದು ಭಾರತ ಪಾಲಿಗೆ ಮುಳುವಾಗಬಹುದು. ಅಲ್ಲದೆ ಪಾಯಿಂಟ್ಸ್​ನಲ್ಲಿ ಹಿಂದಿಕ್ಕಿ ಶ್ರೀಲಂಕಾಗೆ ಫೈನಲ್​ಗೇರುವ ಅವಕಾಶ ಹೆಚ್ಚಾಗಲಿದೆ.
  • – ಒಂದು ವೇಳೆ ಆಸ್ಟ್ರೇಲಿಯಾ ವಿರುದ್ಧ ಭಾರತ 1-0 ಅಂತರದಿಂದ ಸರಣಿ ಗೆದ್ದುಕೊಂಡರೆ,  ನ್ಯೂಜಿಲೆಂಡ್ ವಿರುದ್ಧ ಶ್ರೀಲಂಕಾ 3-0 ಅಂತರದಿಂದ ಸರಣಿ ಗೆಲ್ಲುವುದನ್ನು ಎದುರು ನೋಡಬೇಕು. ಈ ಮೂಲಕ ಶೇಕಡಾವಾರು ಲೆಕ್ಕಚಾರದಲ್ಲಿ ಫೈನಲ್​ಗೇರುವ ಅವಕಾಶವನ್ನು ಟೀಮ್ ಇಂಡಿಯಾ ಎದುರು ನೋಡಬಹುದು.
  • – ಇನ್ನು ಭಾರತ-ಆಸ್ಟ್ರೇಲಿಯಾ ನಡುವಣ ನಾಲ್ಕು ಪಂದ್ಯಗಳ ಸರಣಿಯು ಡ್ರಾನಲ್ಲಿ ಅಂತ್ಯಗೊಂಡರೆ, ಭಾರತದ ಪಾಯಿಂಟ್ಸ್​ 56.94% ನಲ್ಲೇ ಉಳಿಯಲಿದೆ. ಇದರಿಂದ ಶ್ರೀಲಂಕಾ ಹಾಗೂ ಸೌತ್ ಆಫ್ರಿಕಾ ತಂಡಗಳಿಗೂ ಫೈನಲ್​ಗೇರುವ ಅವಕಾಶ ಹೆಚ್ಚಾಗಲಿದೆ.
  • – ಒಂದು ವೇಳೆ ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ ತವರಿನಲ್ಲಿ ಟೆಸ್ಟ್ ಸರಣಿ ಸೋತರೆ ವಿಶ್ವ ಟೆಸ್ಟ್​ ಚಾಂಪಿಯನ್​​ಶಿಪ್​ನಲ್ಲಿ ಫೈನಲ್ ಆಡುವ ಕನಸು ಬಹುತೇಕ ಕೊನೆಗೊಳ್ಳಲಿದೆ. ಹೀಗಾಗಿ ಆಸೀಸ್​ ವಿರುದ್ಧ ಮುಂದಿನ ಸರಣಿಯು ಟೀಮ್ ಇಂಡಿಯಾ ಪಾಲಿಗೆ ತುಂಬಾ ಮಹತ್ವದ್ದು.
ಇದನ್ನೂ ಓದಿ
Image
Team India: ಟೀಮ್ ಇಂಡಿಯಾ ಟಿ20 ತಂಡದಿಂದ 9 ಆಟಗಾರರು ಔಟ್..!
Image
IPL 2023: ಐಪಿಎಲ್​ಗೆ ಆಯ್ಕೆಯಾಗಿರುವ ಪಾಕ್ ಮೂಲದ 3 ಕ್ರಿಕೆಟಿಗರು ಯಾರು ಗೊತ್ತಾ?
Image
IPL ಆಡಿದ್ದ 11 ಪಾಕ್ ಆಟಗಾರರು ಯಾರು ಗೊತ್ತಾ?
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ