AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC ಫೈನಲ್​ಗೇರಲು ಟೀಮ್ ಇಂಡಿಯಾ ಇನ್ನೆಷ್ಟು ಪಂದ್ಯ ಗೆಲ್ಲಬೇಕು?

WTC 2024: ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್ ಸರಣಿಗಳ ಮುಕ್ತಾಯದ ವೇಳೆಗೆ ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸುವ ತಂಡಗಳು ಫೈನಲ್​ ಆಡಲಿದೆ. ಅದರಂತೆ ಫೈನಲ್ ಪ್ರವೇಶಿಸುವ ತಂಡಗಳು ಮುಂದಿನ ವರ್ಷ ಜೂನ್ 11 ರಿಂದ 15 ರವರೆಗೆ ಇಂಗ್ಲೆಂಡ್​ನ ಲಾರ್ಡ್ಸ್ ಮೈದಾನದಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್ ಪಟ್ಟಕ್ಕಾಗಿ ಸೆಣಸಲಿದೆ.

WTC ಫೈನಲ್​ಗೇರಲು ಟೀಮ್ ಇಂಡಿಯಾ ಇನ್ನೆಷ್ಟು ಪಂದ್ಯ ಗೆಲ್ಲಬೇಕು?
Team India
ಝಾಹಿರ್ ಯೂಸುಫ್
|

Updated on:Oct 02, 2024 | 10:38 AM

Share

ಬಾಂಗ್ಲಾದೇಶ್ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಭಾರತ ತಂಡವು 2-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಕಾಯ್ದುಕೊಂಡಿದೆ. ಇದಾಗ್ಯೂ ಭಾರತ ತಂಡ WTC ಫೈನಲ್​ಗೆ ಅರ್ಹತೆ ಪಡೆದಿಲ್ಲ ಎಂಬುದು ವಿಶೇಷ.

ಏಕೆಂದರೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಭಾರತ ತಂಡವು ಇನ್ನೂ 8 ಪಂದ್ಯಗಳನ್ನಾಡಬೇಕಿದೆ. ಈ ಎಂಟು ಪಂದ್ಯಗಳ ಮೂಲಕ ಟೀಮ್ ಇಂಡಿಯಾದ ಫೈನಲ್​ ಅರ್ಹತೆ ನಿರ್ಧಾರವಾಗಲಿದೆ.

ಇಲ್ಲಿ ಭಾರತ ತಂಡವು ನ್ಯೂಝಿಲೆಂಡ್ ವಿರುದ್ಧ 3 ಟೆಸ್ಟ್​ ಪಂದ್ಯಗಳನ್ನಾಡಲಿದ್ದು, ಇದಾದ ಬಳಿಕ ಆಸ್ಟ್ರೇಲಿಯಾ ವಿರುದ್ಧ 5 ಟೆಸ್ಟ್ ಪಂದ್ಯಗಳ ಬಾರ್ಡರ್-ಗವಾಸ್ಕರ್ ಟೂರ್ನಿ ಆಡಲಿದೆ. ಈ ಎಂಟು ಪಂದ್ಯಗಳಲ್ಲಿ ಟೀಮ್ ಇಂಡಿಯಾ ಬ್ಯಾಕ್ ಟು ಬ್ಯಾಕ್ ಮೂರು ಪಂದ್ಯಗಳಲ್ಲಿ ಜಯ ಸಾಧಿಸಿದರೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಫೈನಲ್ ಆಡುವುದು ಬಹುತೇಕ ಖಚಿತವಾಗಲಿದೆ.

ಅಂದರೆ ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯನ್ನು ಟೀಮ್ ಇಂಡಿಯಾ ಕ್ಲೀನ್ ಸ್ವೀಪ್ ಮಾಡಿಕೊಂಡರೆ ಫೈನಲ್​ಗೆ ಅರ್ಹತೆಗಿಟ್ಟಿಸಿಕೊಳ್ಳುವುದು ಬಹುತೇಕ ಕನ್ಫರ್ಮ್​. ಹೀಗಾಗಿ ಭಾರತ ತಂಡದ ಪಾಲಿಗೆ ಮುಂದಿನ ಸರಣಿ ತುಂಬಾ ಮಹತ್ವದ್ದು.

ಟೀಮ್ ಇಂಡಿಯಾ WTC ಫೈನಲ್​ಗೆ ಅರ್ಹತೆ ಪಡೆಯುವುದೇಗೆ?

  • ಭಾರತವು ತವರಿನಲ್ಲಿ ನ್ಯೂಝಿಲೆಂಡ್ ಅನ್ನು ವೈಟ್‌ವಾಶ್ ಮಾಡಿ ಸರಣಿ ಗೆದ್ದರೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಅಂಕ ಪಟ್ಟಿಯಲ್ಲಿ ಶೇ.70 ಕ್ಕಿಂತ ಹೆಚ್ಚು ಗೆಲುವಿನ ಶೇಕಡಾವಾರು ಕಾಯ್ದುಕೊಳ್ಳಬಹುದು. ಇದಾದ ಬಳಿಕ ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಸರಣಿಯಲ್ಲಿ 2 ಮ್ಯಾಚ್ ಗೆದ್ದರೆ ಸಾಕು, ನೇರವಾಗಿ ಫೈನಲ್​ಗೆ ಅರ್ಹತೆ ಪಡೆಯಬಹುದು.
  • ಭಾರತ ತಂಡವು ನ್ಯೂಝಿಲೆಂಡ್ ಅನ್ನು 3-0 ರಿಂದ ಸೋಲಿಸಿದರೆ ಮತ್ತು ಆಸ್ಟ್ರೇಲಿಯಾ ವಿರುದ್ಧ 3-1 ಸೋತರೂ ಸಹ ಫೈನಲ್​ಗೆ ಅರ್ಹತೆಗಿಟ್ಟಿಸಿಕೊಳ್ಳಬಹುದು. ಏಕೆಂದರೆ ಆಸೀಸ್ ವಿರುದ್ಧ 3-1 ಅಂತರದಿಂದ ಸೋತರೆ ಟೀಮ್ ಇಂಡಿಯಾದ ಗೆಲುವಿನ ಶೇಕಡಾವಾರು 65.78% ಇರಲಿದ್ದು, ಈ ಮೂಲಕ ಫೈನಲ್​ಗೆ ಪ್ರವೇಶಿಸಬಹುದು.
  • ಒಂದು ವೇಳೆ ನ್ಯೂಝಿಲೆಂಡ್ ತಂಡವು ಟೀಮ್ ಇಂಡಿಯಾ ವಿರುದ್ಧ 3-0 ಅಂತರದಿಂದ ಜಯ ಸಾಧಿಸಿದರೆ, ಆಸ್ಟ್ರೇಲಿಯಾ ಭಾರತವನ್ನು 5-0 ಅಂತರದಿಂದ ಸೋಲಿಸಿದರೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಅಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಗೆಲುವಿನ ಶೇಕಡಾವಾರು 58.77% ಗೆ ಇಳಿಯಲಿದೆ. ಹೀಗಾದರೆ ಮಾತ್ರ ಭಾರತ ತಂಡವು ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್ ಫೈನಲ್ ರೇಸ್​ನಿಂದ ಹೊರಬೀಳಲಿದೆ.
  • ಆದರೆ ಪ್ರಸ್ತುತ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಅಂಕ ಪಟ್ಟಿಯಲ್ಲಿ ಶೇ. 74.24 ರಷ್ಟು ಗೆಲುವಿನ ಶೇಕಡಾವಾರು ಹೊಂದಿರುವ ಟೀಮ್ ಇಂಡಿಯಾ ನ್ಯೂಝಿಲೆಂಡ್ ವಿರುದ್ಧ ಸರಣಿ ಗೆದ್ದು, ಆಸ್ಟ್ರೇಲಿಯಾ ವಿರುದ್ಧ ಸರಣಿ ಡ್ರಾ ಮಾಡಿಕೊಂಡರೂ ಫೈನಲ್​ಗೆ ಅರ್ಹತೆಗಿಟ್ಟಿಸಿಕೊಳ್ಳಬಹುದು. ಹೀಗಾಗಿ ಈ ಬಾರಿ ಕೂಡ ಭಾರತ ತಂಡವನ್ನು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ನಲ್ಲಿ ಎದುರು ನೋಡಬಹುದು.

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಅಂಕ ಪಟ್ಟಿ:

ಸ್ಥಾನ ತಂಡ ಪಂದ್ಯಗಳು ಗೆಲುವು ಸೋಲು ಡ್ರಾ ಎನ್ಆರ್ ಅಂಕಗಳು ಗೆಲುವಿನ ಶೇಕಡಾವಾರು
1 ಭಾರತ 11 8 2 1 0 98 74.24
2 ಆಸ್ಟ್ರೇಲಿಯಾ 12 8 3 1 0 90 62.5
3 ಶ್ರೀಲಂಕಾ 9 5 4 0 0 60 55.56
4 ಇಂಗ್ಲೆಂಡ್ 16 8 7 1 0 81 42.19
5 ದಕ್ಷಿಣ ಆಫ್ರಿಕಾ 6 2 3 1 0 28 38.89
6 ನ್ಯೂಝಿಲೆಂಡ್ 8 3 5 0 0 36 37.5
7 ಬಾಂಗ್ಲಾದೇಶ್ 8 3 5 0 0 33 34.38
8 ಪಾಕಿಸ್ತಾನ್ 7 2 5 0 0 16 19.05
9 ವೆಸ್ಟ್ಇಂಡೀಸ್ 9 1 6 2 0 20 18.52

Published On - 10:35 am, Wed, 2 October 24

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು