AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC ಫೈನಲ್​ಗೇರಲು ಟೀಮ್ ಇಂಡಿಯಾ ಎಷ್ಟು ಪಂದ್ಯ ಗೆಲ್ಲಬೇಕು?

WTC 2025: ಮೂರನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಫೈನಲ್ ಪಂದ್ಯವು ಜೂನ್ ತಿಂಗಳಲ್ಲಿ ನಡೆಯಲಿದೆ. ಅಲ್ಲದೆ ಈ ಪಂದ್ಯಕ್ಕೆ ಇಂಗ್ಲೆಂಡ್​ನ ಲಾರ್ಡ್ಸ್​ ಮೈದಾನ ಆತಿಥ್ಯವಹಿಸುವ ಸಾಧ್ಯತೆಯಿದೆ. ಈ ಹಿಂದಿನ ಎರಡು ಆವೃತ್ತಿಗಳಲ್ಲಿ ಭಾರತ ತಂಡ ಫೈನಲ್​ಗೆ ಪ್ರವೇಶಿಸಿದರೂ, ಟ್ರೋಫಿ ಗೆಲ್ಲಲು ಸಾಧ್ಯವಾಗಿರಲಿಲ್ಲ. ಇದೀಗ ಮೂರನೇ ಬಾರಿಗೆ ಅಂತಿಮ ಸುತ್ತಿಗೆ ಪ್ರವೇಶಿಸುವ ಹಾದಿಯಲ್ಲಿದೆ.

WTC ಫೈನಲ್​ಗೇರಲು ಟೀಮ್ ಇಂಡಿಯಾ ಎಷ್ಟು ಪಂದ್ಯ ಗೆಲ್ಲಬೇಕು?
Team India
ಝಾಹಿರ್ ಯೂಸುಫ್
|

Updated on: Jul 23, 2024 | 7:21 AM

Share

ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು ಇಂಗ್ಲೆಂಡ್ 2-0 ಅಂತರದಿಂದ ವಶಪಡಿಸಿಕೊಂಡಿದೆ. ಆಂಗ್ಲರ ಈ ಗೆಲುವಿನ ಬೆನ್ನಲ್ಲೇ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಪಾಯಿಂಟ್ಸ್ ಟೇಬಲ್​ನಲ್ಲೂ ಮಹತ್ವದ ಬದಲಾವಣೆಯಾಗಿದೆ. ಇದಾಗ್ಯೂ ಭಾರತ ತಂಡ WTC ಅಂಕ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದೆ.

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಸರಣಿಯಲ್ಲಿ ಈವರೆಗೆ 9 ಪಂದ್ಯಗಳನ್ನಾಡಿರುವ ಭಾರತ ತಂಡವು 6 ಗೆಲುವು ಮತ್ತು 2 ಸೋಲು ಹಾಗೂ 1 ಡ್ರಾನೊಂದಿಗೆ 74 ಅಂಕಗಳನ್ನು ಕಲೆಹಾಕಿದೆ. ಈ ಮೂಲಕ 68.52 ಗೆಲುವಿನ ಶೇಕಡಾವಾರಿನೊಂದಿಗೆ ಅಗ್ರಸ್ಥಾನದಲ್ಲಿದೆ. ಇದಾಗ್ಯೂ ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಫೈನಲ್ ಆಡುವುದು ಖಚಿತವಾಗಿಲ್ಲ.

ಏಕೆಂದರೆ ಭಾರತದೊಂದಿಗೆ ಆಸ್ಟ್ರೇಲಿಯಾ, ನ್ಯೂಝಿಲೆಂಡ್, ಶ್ರೀಲಂಕಾ ಮತ್ತು ಪಾಕಿಸ್ತಾನ್ ತಂಡಗಳು ಕೂಡ ಫೈನಲ್​ ರೇಸ್​ನಲ್ಲಿದೆ. ಹೀಗಾಗಿ ಮುಂಬರುವ ಸರಣಿಗಳು ಟೀಮ್ ಇಂಡಿಯಾ ಪಾಲಿಗೆ ತುಂಬಾ ಮಹತ್ವದ್ದು. ಏಕೆಂದರೆ ಮುಂದಿನ ಎರಡು ಸರಣಿಗಳ ಮೂಲಕ ಭಾರತ ತಂಡವು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಫೈನಲ್​ಗೇರುವುದನ್ನು ಖಚಿತಪಡಿಸಿಕೊಳ್ಳಬಹುದು.

ಫೈನಲ್​ಗೇರಲು ಭಾರತ ಎಷ್ಟು ಪಂದ್ಯ ಗೆಲ್ಲಬೇಕು?

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಭಾರತ ತಂಡವು ನೇರವಾಗಿ ಫೈನಲ್​ಗೇರಲು ಮುಂದಿನ ಮೂರು ಸರಣಿಗಳಲ್ಲಿ 2 ಸರಣಿಗಳಲ್ಲಿ ಭರ್ಜರಿ ಜಯ ಸಾಧಿಸಿದರೆ ಸಾಕು. ಇಲ್ಲಿ ಭಾರತ ತಂಡದ ಎದುರಾಳಿಗಳು ಬಾಂಗ್ಲಾದೇಶ್, ನ್ಯೂಝಿಲೆಂಡ್ ಮತ್ತು ಆಸ್ಟ್ರೇಲಿಯಾ.

  • ಭಾರತ ತಂಡವು ನ್ಯೂಝಿಲೆಂಡ್ ವಿರುದ್ಧ ಮೂರು ಪಂದ್ಯಗಳ ಟೆಸ್ಟ್ ಸರಣಿ ಆಡಲಿದೆ.
  • ಟೀಮ್ ಇಂಡಿಯಾ ಬಾಂಗ್ಲಾದೇಶ್ ವಿರುದ್ಧ 2 ಪಂದ್ಯಗಳ ಟೆಸ್ಟ್ ಸರಣಿ ಆಡಬೇಕಿದೆ.
  • ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ 5 ಪಂದ್ಯಗಳನ್ನಾಡಲಿದೆ.
  • ಇಲ್ಲಿ ಭಾರತದ ಮುಂದಿರುವ ದೊಡ್ಡ ಸವಾಲೆಂದರೆ ಆಸ್ಟ್ರೇಲಿಯಾ. ಹೀಗಾಗಿ ಈ ಸರಣಿಗೂ ಮುನ್ನ ನ್ಯೂಝಿಲೆಂಡ್ ಹಾಗೂ ಬಾಂಗ್ಲಾದೇಶ್ ವಿರುದ್ಧದ ಎಲ್ಲಾ ಪಂದ್ಯಗಳಲ್ಲಿ ಜಯ ಸಾಧಿಸಿದರೆ ಸಾಕು. ಈ ಮೂಲಕ ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಹಾದಿಯನ್ನು ಸುಗಮಗೊಳಿಸಬಹುದು.
  • ಹಾಗೆಯೇ ಮುಂದಿನ 10 ಟೆಸ್ಟ್ ಪಂದ್ಯಗಳಲ್ಲಿ ಟೀಮ್ ಇಂಡಿಯಾ 6-7 ಪಂದ್ಯಗಳನ್ನು ಗೆದ್ದರೂ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್ ಆಡುವುದು ಖಚಿತವಾಗಲಿದೆ.
  • ಭಾರತ ತಂಡವು ಬಾಂಗ್ಲಾದೇಶ್ ಮತ್ತು ನ್ಯೂಝಿಲೆಂಡ್ ವಿರುದ್ಧದ ಐದು ಹೋಮ್ ಟೆಸ್ಟ್​ಗಳಲ್ಲಿ ಗೆದ್ದರೆ, ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಯಾವುದೇ ಒತ್ತಡ ಇರುವುದಿಲ್ಲ.

ಇದನ್ನೂ ಓದಿ: ಚಾಂಪಿಯನ್ಸ್​ ಟ್ರೋಫಿಯಿಂದ ಟೀಮ್ ಇಂಡಿಯಾ ಹಿಂದೆ ಸರಿದರೆ, ಯಾವ ತಂಡಕ್ಕೆ ಚಾನ್ಸ್?

ಒಂದು ವೇಳೆ ಬಾಂಗ್ಲಾದೇಶ್ ಮತ್ತು ನ್ಯೂಝಿಲೆಂಡ್ ಸರಣಿಗಳಲ್ಲಿ ಕೆಲ ಪಂದ್ಯಗಳನ್ನು ಕಳೆದುಕೊಂಡರೂ, ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಮೂಲಕ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್​ಗೇರುವುದನ್ನು ಎದುರು ನೋಡಬೇಕಾಗುತ್ತದೆ. ಹೀಗಾಗಿಯೇ ಭಾರತದಲ್ಲಿ ನಡೆಯಲಿರುವ ಬಾಂಗ್ಲಾದೇಶ್ ಮತ್ತು ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗಳ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿಕೊಳ್ಳಬೇಕಾದ ಅನಿವಾರ್ಯತೆ ಟೀಮ್ ಇಂಡಿಯಾ ಮುಂದಿದೆ.

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​