AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final 2023: ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್ ಫೈನಲ್​ಗಾಗಿ ಟೀಮ್ ಇಂಡಿಯಾಗೆ ಇಬ್ಬರ ಎಂಟ್ರಿ..?

WTC Final 2023: ಇಂಗ್ಲೆಂಡ್​ನ ಓವಲ್​ ಮೈದಾನದಲ್ಲಿ ಜೂನ್ 7 ರಿಂದ 11 ರವರೆಗೆ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ನಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ಮುಖಾಮುಖಿಯಾಗಲಿದೆ.

WTC Final 2023: ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್ ಫೈನಲ್​ಗಾಗಿ ಟೀಮ್ ಇಂಡಿಯಾಗೆ ಇಬ್ಬರ ಎಂಟ್ರಿ..?
Team India
TV9 Web
| Updated By: ಝಾಹಿರ್ ಯೂಸುಫ್|

Updated on: Mar 15, 2023 | 9:23 PM

Share

World Test Championship Final 2023: ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಈಗಾಗಲೇ ಭರ್ಜರಿ ಪ್ಲ್ಯಾನ್​ಗಳನ್ನು ರೂಪಿಸುತ್ತಿದೆ. ಬಾರ್ಡರ್​-ಗವಾಸ್ಕರ್ ಟೆಸ್ಟ್ ಸರಣಿಯನ್ನು ಗೆದ್ದು ಬೀಗಿರುವ ಟೀಮ್ ಇಂಡಿಯಾ ಇಂಗ್ಲೆಂಡ್​ನ ಪಿಚ್​ಗಾಗಿ ತಂಡದಲ್ಲಿ ಬದಲಾವಣೆ ತರುವ ಸಾಧ್ಯತೆ ಹೆಚ್ಚಿದೆ. ಏಕೆಂದರೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ ಪಂದ್ಯವು ಇಂಗ್ಲೆಂಡ್​ನ ಓವಲ್ ಮೈದಾನದಲ್ಲಿ ನಡೆಯಲಿದ್ದು, ಈ ಮೈದಾನವು ಸ್ಪಿನ್​ಗಿಂತ ವೇಗದ ಬೌಲರ್​ಗಳು ಹೆಚ್ಚಿನ ನೆರವು ನೀಡಲಿದೆ. ಹೀಗಾಗಿ ಫೈನಲ್​ ಫೈಟ್​ಗಾಗಿ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ರೂಪಿಸಬೇಕಿದೆ.

ಏಕೆಂದರೆ ಭಾರತ ತಂಡದ ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಿಂದ ಹೊರಗುಳಿಯಲಿದ್ದಾರೆ. ಹೀಗಾಗಿ ಬದಲಿ ವೇಗದ ಬೌಲರ್​ನ ಅವಶ್ಯಕತೆ ಟೀಮ್ ಇಂಡಿಯಾ ಮುಂದಿದೆ. ಆದರೆ ಇಲ್ಲಿ ಟೀಮ್ ಇಂಡಿಯಾ ಮುಂದೆ ಇಬ್ಬರು ವೇಗದ ಬೌಲರ್ ಆಲ್​ರೌಂಡರ್​ಗಳ ಆಯ್ಕೆಯಿದ್ದು, ಹೀಗಾಗಿ ಇವರಿಬ್ಬರನ್ನು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್ ಪಂದ್ಯಕ್ಕಾಗಿ ಆಯ್ಕೆ ಮಾಡಲಿದೆ ಎಂಬ ಮಾತುಗಳು ಕೇಳಿ ಬರುತ್ತಿದೆ. ಅವರೆಂದರೆ…

ಹಾರ್ದಿಕ್ ಪಾಂಡ್ಯ: ಭಾರತದ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ 2018ರಲ್ಲಿ ಕೊನೆಯ ಟೆಸ್ಟ್ ಪಂದ್ಯವನ್ನಾಡಿದ್ದರು. ಆದರೆ ಇದೀಗ ಸೀಮಿತ ಓವರ್​ಗಳಲ್ಲಿ ಮ್ಯಾಚ್ ವಿನ್ನರ್ ಪ್ರದರ್ಶನ ನೀಡುವ ಮೂಲಕ ಪಾಂಡ್ಯ ಮಿಂಚುತ್ತಿದ್ದಾರೆ. ಇದೇ ಕಾರಣದಿಂದಾಗಿ ಹಾರ್ದಿಕ್​ಗೆ ಟೆಸ್ಟ್ ತಂಡದಲ್ಲೂ ಸ್ಥಾನ ನೀಡಬೇಕೆಂಬ ಅಭಿಪ್ರಾಯಗಳು ಕೇಳಿ ಬರುತ್ತಿದೆ.

ಒಂದು ವೇಳೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್ ಪಂದ್ಯಕ್ಕೆ ಹಾರ್ದಿಕ್ ಪಾಂಡ್ಯರನ್ನು ಆಯ್ಕೆ ಮಾಡಿದರೆ, ಹೆಚ್ಚುವರಿ ವೇಗದ ಬೌಲರ್ ಆಗಿ ಬಳಸಿಕೊಳ್ಳಬಹುದು. ಅಲ್ಲದೆ ಕೆಲ ಕ್ರಮಾಂಕದಲ್ಲಿ ಪಂದ್ಯದ ಗತಿಯನ್ನೇ ಬದಲಿಸಬಲ್ಲ ಬ್ಯಾಟ್ಸ್​ಮನ್ ಆಗಿ ಕೂಡ ಪಾಂಡ್ಯ ಕಾಣಿಸಿಕೊಳ್ಳಲಿದ್ದಾರೆ. ಹೀಗಾಗಿಯೇ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ಗೆ ಹಾರ್ದಿಕ್ ಪಾಂಡ್ಯ ಅವರ ಅಗತ್ಯವಿದೆ ಎಂಬ ಅಭಿಪ್ರಾಯಗಳು ಇದೀಗ ಜೋರಾಗಿದೆ.

ಶಾರ್ದೂಲ್ ಠಾಕೂರ್: ಟೀಮ್ ಇಂಡಿಯಾ ಪರ ಇದುವರೆಗೆ 8 ಟೆಸ್ಟ್ ಪಂದ್ಯಗಳನ್ನು ಆಡಿರುವ ಶಾರ್ದೂಲ್ ಠಾಕೂರ್, ಈ ಹಿಂದೆ ಇಂಗ್ಲೆಂಡ್​ನಲ್ಲಿ ಟೆಸ್ಟ್ ಮ್ಯಾಚ್​ಗಳನ್ನು ಆಡಿದ ಅನುಭವ ಹೊಂದಿದ್ದಾರೆ. ಅದರಲ್ಲೂ ವೇಗದ ಬೌಲಿಂಗ್ ಆಲ್​ರೌಂಡರ್ ಆಗಿರುವ ಕಾರಣ ಕೆಲ ಕ್ರಮಾಂಕದಲ್ಲಿ ಅವರಿಂದ ರನ್​ ನಿರೀಕ್ಷಿಸಬಹುದು.

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ಗೆ ಶಾರ್ದೂಲ್ ಠಾಕೂರ್ ಬಗ್ಗೆ ಆಯ್ಕೆಗಾರರು ಯೋಚಿಸಬೇಕು ಎಂದು ಭಾರತದ ಮಾಜಿ ಕೋಚ್ ರವಿಶಾಸ್ತ್ರಿ ಈಗಾಗಲೇ ಹೇಳಿದ್ದಾರೆ. ಅಕ್ಷರ್ ಪಟೇಲ್ ಬದಲಿಗೆ ಶಾರ್ದೂಲ್ ತಂಡದಲ್ಲಿ ಸ್ಥಾನ ಪಡೆಯಬಹುದು ಎಂದು ದಿನೇಶ್ ಕಾರ್ತಿಕ್ ಕೂಡ ಅಭಿಪ್ರಾಯಪಟ್ಟಿದ್ದಾರೆ. ಹೀಗಾಗಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ಗಾಗಿ ಶಾರ್ದೂಲ್ ಠಾಕೂರ್ ಕೂಡ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡುವ ಸಾಧ್ಯತೆಯಿದೆ. ಈ ಇಬ್ಬರು ಆಟಗಾರರ ಸೇರ್ಪಡೆಯೊಂದಿಗೆ ಟೀಮ್ ಇಂಡಿಯಾ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ರೂಪಿಸಬಹುದು.

ಇದನ್ನೂ ಓದಿ: Virat Kohli: ಸಚಿನ್ ಹೆಸರಿನಲ್ಲಿದ್ದ ಮತ್ತೊಂದು ದಾಖಲೆ ಮುರಿದ ಕಿಂಗ್ ಕೊಹ್ಲಿ

ಇಂಗ್ಲೆಂಡ್​ನ ಓವಲ್​ ಮೈದಾನದಲ್ಲಿ ಜೂನ್ 7 ರಿಂದ 11 ರವರೆಗೆ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ನಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ಮುಖಾಮುಖಿಯಾಗಲಿದೆ.

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್