AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC​ ಫೈನಲ್​ಗೇರಲು ಯಾವ ತಂಡ ಎಷ್ಟು ಪಂದ್ಯ ಗೆಲ್ಲಬೇಕು?

ICC World Test Championship 2025 final: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಒಟ್ಟು 9 ತಂಡಗಳಿವೆ. 2023 ರಿಂದ 2025 ರವರೆಗೆ ಆಡಿದ ಟೆಸ್ಟ್ ಪಂದ್ಯಗಳಿಗೆ ಅನುಗುಣವಾಗಿ ಇಲ್ಲಿ ಅಂಕಗಳನ್ನು ನೀಡಲಾಗುತ್ತದೆ. ಈ ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಪಡೆಯುವ ತಂಡಗಳು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಆಡಲಿದೆ.

WTC​ ಫೈನಲ್​ಗೇರಲು ಯಾವ ತಂಡ ಎಷ್ಟು ಪಂದ್ಯ ಗೆಲ್ಲಬೇಕು?
WTC
ಝಾಹಿರ್ ಯೂಸುಫ್
|

Updated on: Sep 05, 2024 | 12:07 PM

Share

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್ ಪಂದ್ಯಕ್ಕೆ ಡೇಟ್ ಫಿಕ್ಸ್ ಆಗಿದೆ. ಲಂಡನ್​ನ ಲಾರ್ಡ್ಸ್​ ಮೈದಾನದಲ್ಲಿ ಜೂನ್ 11 ರಿಂದ ಶುರುವಾಗಲಿರುವ ಈ ಪಂದ್ಯಕ್ಕಾಗಿ ಇನ್ನೂ ಕೂಡ ತಂಡಗಳು ಫೈನಲ್​ ಆಗಿಲ್ಲ. ಏಕೆಂದರೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಅಂಕ ಪಟ್ಟಿಯಲ್ಲಿರುವ ಅಗ್ರ 5 ತಂಡಗಳಿಗೂ ಫೈನಲ್​ಗೆ ಪ್ರವೇಶಿಸಲು ಉತ್ತಮ ಅವಕಾಶವಿದೆ. ಅದರಲ್ಲೂ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಟೀಮ್ ಇಂಡಿಯಾ ಫೈನಲ್​ಗೇರುವ ಸಾಧ್ಯತೆ ಹೆಚ್ಚಿದೆ. ಇಲ್ಲಿ ಯಾವ ತಂಡ ಎಷ್ಟು ಪಂದ್ಯಗಳನ್ನು ಗೆದ್ದರೆ ಫೈನಲ್​ಗೆ ಪ್ರವೇಶಿಸಬಹುದು ಎಂದು ನೋಡುವುದಾದರೆ…

ಭಾರತ: ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿಯ 9 ಪಂದ್ಯಗಳಲ್ಲಿ 6 ಮ್ಯಾಚ್ ಗೆದ್ದಿದೆ. ಇನ್ನು 1 ಪಂದ್ಯವನ್ನು ಡ್ರಾ ಮಾಡಿಕೊಂಡಿದೆ. ಈ ಮೂಲಕ ಒಟ್ಟು 68.52% ಗೆಲುವಿನ ಶೇಕಡಾವಾರು ಹೊಂದಿರುವ ಟೀಮ್ ಇಂಡಿಯಾ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಇನ್ನುಳಿದ 10 ಟೆಸ್ಟ್ ಪಂದ್ಯಗಳಲ್ಲಿ ಭಾರತ ತಂಡವು ಎಲ್ಲಾ ಪಂದ್ಯಗಳನ್ನು ಗೆದ್ದರೆ ಗರಿಷ್ಠ 85.08 ಅಂಕಗಳನ್ನು ಪಡೆಯಲಿದೆ. ಈ ಮೂಲಕ ನೇರವಾಗಿ ಫೈನಲ್​ಗೆ ಪ್ರವೇಶಿಸಬಹುದು. ಒಂದು ವೇಳೆ ಬಾಂಗ್ಲಾದೇಶ್ ಹಾಗೂ ನ್ಯೂಝಿಲೆಂಡ್ ವಿರುದ್ಧದ ಸರಣಿಗಳನ್ನು ಟೀಮ್ ಇಂಡಿಯಾ ಕ್ಲೀನ್ ಸ್ವೀಪ್ ಮಾಡಿಕೊಂಡರೆ ಫೈನಲ್ ಆಡುವುದು ಬಹುತೇಕ ಖಚಿತವಾಗಲಿದೆ.

ಆಸ್ಟ್ರೇಲಿಯಾ: ಆಸೀಸ್ ಪಡೆಯು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಈವರೆಗೆ 12 ಪಂದ್ಯಗಳನ್ನಾಡಿದ್ದು, ಈ ವೇಳೆ 8 ಜಯ ಹಾಗೂ 1 ಡ್ರಾನೊಂದಿಗೆ 62.5% ಗೆಲುವಿನ ಶೇಕಡಾವಾರು ಹೊಂದಿದೆ. ಈ ಮೂಲಕ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವ ಆಸ್ಟ್ರೇಲಿಯಾ ತಂಡಕ್ಕೆ ಭಾರತ ಮತ್ತು ನ್ಯೂಝಿಲೆಂಡ್ ವಿರುದ್ಧದ ಸರಣಿಗಳು ನಿರ್ಣಾಯಕ. ಈ ಸರಣಿಗಳಲ್ಲಿ ಭಾರೀ ಅಂತರದಿಂದ ಗೆದ್ದರೆ ಆಸ್ಟ್ರೇಲಿಯಾ ಕೂಡ ನೇರವಾಗಿ ಫೈನಲ್​ಗೆ ಪ್ರವೇಶಿಸಲಿದೆ.

ನ್ಯೂಝಿಲೆಂಡ್: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಅಂಕ ಪಟ್ಟಿಯಲ್ಲಿ ನ್ಯೂಝಿಲೆಂಡ್ ತಂಡವು ಮೂರನೇ ಸ್ಥಾನದಲ್ಲಿದೆ. ಈವರೆಗೆ ಆಡಿರುವ 6 ಪಂದ್ಯಗಳಲ್ಲಿ 3 ಜಯದೊಂದಿಗೆ ನ್ಯೂಝಿಲೆಂಡ್ 50% ಗೆಲುವಿನ ಶೇಕಡಾವಾರು ಹೊಂದಿದೆ. ಇನ್ನು ಕಿವೀಸ್ ಪಡೆಯು ಶ್ರೀಲಂಕಾ, ಇಂಗ್ಲೆಂಡ್ ಹಾಗೂ ಭಾರತದ ವಿರುದ್ಧದ ಸರಣಿಗಳನ್ನು ಗೆದ್ದುಕೊಂಡರೆ ಫೈನಲ್​ಗೆ ಪ್ರವೇಶಿಸಬಹುದು.

ಬಾಂಗ್ಲಾದೇಶ್: ಪಾಕಿಸ್ತಾನ್ ವಿರುದ್ಧದ ಟೆಸ್ಟ್ ಸರಣಿ ಗೆಲುವಿನೊಂದಿಗೆ ಬಾಂಗ್ಲಾದೇಶ್ ತಂಡವು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಅಂಕ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದೆ. ಈವರೆಗೆ 6 ಪಂದ್ಯಗಳನ್ನಾಡಿರುವ ಬಾಂಗ್ಲಾದೇಶ್ ತಂಡವು 3 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಈ ಮೂಲಕ 45.83% ಗೆಲುವಿನ ಶೇಕಡಾವಾರು ಹೊಂದಿರುವ ಬಾಂಗ್ಲಾದೇಶ್ ತಂಡಕ್ಕೆ ಮುಂಬರುವ ಟೀಮ್ ಇಂಡಿಯಾ ವಿರುದ್ಧದ ಸರಣಿ ಬಹಳ ಮುಖ್ಯ. ಏಕೆಂದರೆ ಭಾರತ ಮತ್ತು ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗಳಲ್ಲಿ ಗೆಲ್ಲುವ ಮೂಲಕ ಅಂಕ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರುವ ಅವಕಾಶ ಬಾಂಗ್ಲಾದೇಶ್ ತಂಡದ ಮುಂದಿದೆ. ಈ ಮೂಲಕ ಫೈನಲ್​ಗೆ ಅರ್ಹತೆಗಿಟ್ಟಿಸಿಕೊಳ್ಳಬಹುದು.

ಇದನ್ನೂ ಓದಿ: ಕೇವಲ 10 ರನ್​ಗೆ ಆಲೌಟ್: 5 ಎಸೆತಗಳಲ್ಲಿ ಮುಗಿದ ಟಿ20 ಪಂದ್ಯ

ಇಂಗ್ಲೆಂಡ್: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಈಗಾಗಲೇ 15 ಪಂದ್ಯಗಳನ್ನಾಡಿರುವ ಇಂಗ್ಲೆಂಡ್ ತಂಡವು 8 ಜಯ ಹಾಗೂ 1 ಡ್ರಾ ಸಾಧಿಸಿದೆ. ಇದೀಗ 45.0% ಗೆಲುವಿನ ಶೇಕಡಾವಾರು ಹೊಂದಿರುವ ಇಂಗ್ಲೆಂಡ್ ತಂಡಕ್ಕೆ ಪಾಕಿಸ್ತಾನ್ ಮತ್ತು ನ್ಯೂಝಿಲೆಂಡ್ ವಿರುದ್ಧದ ಸರಣಿಗಳು ನಿರ್ಣಾಯಕ. ಈ ಸರಣಿಗಳನ್ನು ಕ್ಲೀನ್ ಸ್ವೀಪ್ ಮಾಡಿಕೊಂಡರೆ ಫೈನಲ್​ಗೇರುವ ಚಾನ್ಸ್ ಸಿಗಲಿದೆ. ಇಲ್ಲಿ ಆಸ್ಟ್ರೇಲಿಯಾ ಮತ್ತು ಭಾರತ ತಂಡವು ಮುಂಬರುವ ಸರಣಿಗಳಲ್ಲಿ ಉತ್ತಮ ಪ್ರದರ್ಶನ ನೀಡಿದರೆ ಇಂಗ್ಲೆಂಡ್ ತಂಡವು ಫೈನಲ್ ರೇಸ್​ನಿಂದ ಹೊರಬೀಳಲಿದೆ. ಹೀಗಾಗಿ ಇಂಗ್ಲೆಂಡ್ ಪಾಲಿಗೆ ಮುಂದಿನ ಪಂದ್ಯಗಳ ಜೊತೆ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ಪ್ರದರ್ಶನ ಕೂಡ ನಿರ್ಣಾಯಕ.

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ