AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final: ಫೈನಲ್​ಗೇರಲು ಟೀಮ್ ಇಂಡಿಯಾಗೆ 3 ಗೆಲುವಿನ ಅವಶ್ಯಕತೆ

WTC final 2025: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಪಾಯಿಂಟ್ಸ್ ಟೇಬಲ್​ನಲ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸುವ ತಂಡಗಳು ಫೈನಲ್ ಆಡಲಿದೆ. ಇದೀಗ ಟೀಮ್ ಇಂಡಿಯಾ ಅಗ್ರಸ್ಥಾನದಲ್ಲಿದ್ದರೆ, ಆಸ್ಟ್ರೇಲಿಯಾ ತಂಡ ದ್ವಿತೀಯ ಸ್ಥಾನದಲ್ಲಿದೆ. ಆದರೆ ಫೈನಲ್​​ನಲ್ಲಿ ಸ್ಥಾನ ಖಚಿತಪಡಿಸಿಕೊಳ್ಳಲು ಉಭಯ ತಂಡಗಳಿಗೆ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ನಿರ್ಣಾಯಕ.

WTC Final: ಫೈನಲ್​ಗೇರಲು ಟೀಮ್ ಇಂಡಿಯಾಗೆ 3 ಗೆಲುವಿನ ಅವಶ್ಯಕತೆ
Team India
ಝಾಹಿರ್ ಯೂಸುಫ್
|

Updated on: Nov 27, 2024 | 8:56 AM

Share

ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಭಾರತ ತಂಡವು ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್​ನ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಹೀಗೆ ಅಗ್ರಸ್ಥಾನ ಅಲಂಕರಿಸುವ ಮೂಲಕ ಭಾರತ ತಂಡವು WTC ಫೈನಲ್ ಆಸೆಯನ್ನು ಜೀವಂತವಿರಿಸಿಕೊಂಡಿದೆ. ಅಷ್ಟೇ ಅಲ್ಲದೆ ಆಸ್ಟ್ರೇಲಿಯಾ ತಂಡವನ್ನು ಮುಂದಿನ ಮೂರು ಪಂದ್ಯಗಳಲ್ಲಿ ಸೋಲಿಸಿ, ಒಂದು ಮ್ಯಾಚ್​​ ಅನ್ನು ಡ್ರಾ ಮಾಡಿಕೊಂಡರೆ ಭಾರತ ತಂಡವು ನೇರವಾಗಿ ಫೈನಲ್​​​ಗೇರಬಹುದು.

ಅತ್ತ ನ್ಯೂಝಿಲೆಂಡ್ ತಂಡವು ಮುಂದಿನ ಮೂರು ಪಂದ್ಯಗಳಲ್ಲಿ ವಿಜಯ ಸಾಧಿಸಿದರೂ, ಮೊದಲ ಅಥವಾ ಎರಡನೇ ಸ್ಥಾನದೊಂದಿಗೆ ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್ ಫೈನಲ್​ ಆಡುವುದು ಖಚಿತವಾಗಲಿದೆ.

  • ಭಾರತ ತಂಡವು ಆಸ್ಟ್ರೇಲಿಯಾವನ್ನು 4-0 ಅಂತರದಿಂದ ಸೋಲಿಸಿದರೆ, ವಿಶ್ವ ಟೆಸ್ಟ್ ಚಾಂಪಿಯನ್​​ಶಪ್ ಅಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಶೇಕಡಾವಾರು ಅಂಕ 65.79 ಕ್ಕೆ ತಲುಪಲಿದೆ.
  • ಮತ್ತೊಂದೆಡೆ ಇಂಗ್ಲೆಂಡ್ ವಿರುದ್ಧದ ಸರಣಿಯನ್ನು ನ್ಯೂಝಿಲೆಂಡ್ ತಂಡವು 3-0 ಅಂತರದಿಂದ ಗೆದ್ದುಕೊಂಡರೂ ಶೇಕಡಾವಾರು ಅಂಕ 64.29 ಕ್ಕೆ ಬಂದು ನಿಲ್ಲಲಿದೆ.
  • ಇನ್ನು ಸೌತ್ ಆಫ್ರಿಕಾ ತಂಡವು ಪಾಕಿಸ್ತಾನ್ ಹಾಗೂ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯ ಎಲ್ಲಾ ಪಂದ್ಯಗಳನ್ನು ಗೆದ್ದುಕೊಂಡರೆ ಒಟ್ಟು 69.44 ಶೇಕಡಾವಾರು ಅಂಕ ಪಡೆಯಲಿದೆ.

ಅಂದರೆ ಇಲ್ಲಿ ಸೌತ್ ಆಫ್ರಿಕಾ ತಂಡವು ಮುಂದಿನ ಎಲ್ಲಾ ಪಂದ್ಯಗಳನ್ನು ಗೆದ್ದುಕೊಂಡರೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಲಿದೆ.

ಹಾಗೆಯೇ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧದ 4 ಪಂದ್ಯಗಳಲ್ಲಿ 3 ರಲ್ಲಿ ಜಯ ಸಾಧಿಸಿ, 1 ಪಂದ್ಯವನ್ನು ಡ್ರಾ ಮಾಡಿಕೊಂಡರೆ WTC ಪಾಯಿಂಟ್ಸ್ ಟೇಬಲ್​​ನಲ್ಲಿ ದ್ವಿತೀಯ ಸ್ಥಾನ ಅಲಂಕರಿಸಲಿದೆ. ಈ ಮೂಲಕ ಭಾರತ ತಂಡವು ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್​ನಲ್ಲಿ ಫೈನಲ್​ಗೇರಬಹುದು.

ಒಂದು ವೇಳೆ ಸೋತರೆ?

ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯನ್ನು 2-3 ಅಂತರದಿಂದ ಸೋತರೆ, ಉಳಿದ ತಂಡಗಳ ಸರಣಿಯ ಫಲಿತಾಂಶಗಳು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕವಾಗಲಿದೆ.

ಇಲ್ಲಿ ನ್ಯೂಝಿಲೆಂಡ್-ಇಂಗ್ಲೆಂಡ್ ನಡುವಣ ಸರಣಿಯು 1-1 ಅಂತರದಲ್ಲಿ ಅಂತ್ಯಗೊಳ್ಳಬೇಕು. ಹಾಗೆಯೇ ಸೌತ್ ಆಫ್ರಿಕಾ-ಶ್ರೀಲಂಕಾ/ಪಾಕಿಸ್ತಾನ್ ನಡುವಣ ಸರಣಿಯು 1-1 ಅಂತರದಲ್ಲಿ ಕೊನೆಗೊಳ್ಳಬೇಕು. ಅದೇ ರೀತಿ ಆಸ್ಟ್ರೇಲಿಯಾ-ಶ್ರೀಲಂಕಾ ನಡುವಣ ಸರಣಿಯು 0-0 ಅಂತರದಿಂದ ಡ್ರಾಗೊಳ್ಳಬೇಕು.

ಹೀಗಾದಲ್ಲಿ ಆಸ್ಟ್ರೇಲಿಯಾ ತಂಡವು 58.77 ಶೇಕಡಾವಾರು ಅಂಕಗಳೊಂದಿಗೆ ಅಗ್ರಸ್ಥಾನ ಅಲಂಕರಿಸಲಿದೆ. ಹಾಗೆಯೇ ಟೀಮ್ ಇಂಡಿಯಾ 53.51% ಅಂಕಗಳೊಂದಿಗೆ ದ್ವಿತೀಯ ಸ್ಥಾನದೊಂದಿಗೆ ಫೈನಲ್​​ಗೆ ಅರ್ಹತೆ ಪಡೆಯಲಿದೆ.

ಇದನ್ನೂ ಓದಿ: IPL 2025: ಐಪಿಎಲ್​ ಅಖಾಡದಲ್ಲಿ 13 ಕನ್ನಡಿಗರು

ಅಂದರೆ ಇಲ್ಲಿ ಟೀಮ್ ಇಂಡಿಯಾ ನೇರವಾಗಿ ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್​ನಲ್ಲಿ ಫೈನಲ್​​ಗೇರಬೇಕಿದ್ದರೆ ಆಸ್ಟ್ರೇಲಿಯಾ ತಂಡವನ್ನು 4-0 ಅಂತರದಿಂದ ಬಗ್ಗು ಬಡಿಯಲೇಬೇಕು. ಇಲ್ಲದಿದ್ದರೆ ಉಳಿದ ತಂಡಗಳ ಫಲಿತಾಂಶಗಳ ಮೇಲೆ ಭಾರತ ತಂಡದ WTC ಫೈನಲ್ ಭವಿಷ್ಯ ನಿರ್ಧಾರವಾಗಲಿದೆ.

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ