AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yash Dhull: ಚೊಚ್ಚಲ ಪಂದ್ಯದಲ್ಲೇ ಶತಕ ಸಿಡಿಸಿ ಮಿಂಚಿದ ಯಶ್ ಧುಲ್

Yash Dhull: ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ ಧುಲ್ ಸೆಮಿಫೈನಲ್​ ಗೆಲುವಿನ ರೂವಾರಿಯಾಗಿದ್ದರು. ಈ ಭರ್ಜರಿ ಪ್ರದರ್ಶನದ ಫಲವಾಗಿ ಈ ಬಾರಿ ದೆಹಲಿ ರಣಜಿ ತಂಡದಲ್ಲಿ 19 ರ ಹರೆಯದ ಯುವ ಆಟಗಾರನಿಗೆ ಚಾನ್ಸ್ ನೀಡಲಾಗಿತ್ತು.

Yash Dhull: ಚೊಚ್ಚಲ ಪಂದ್ಯದಲ್ಲೇ ಶತಕ ಸಿಡಿಸಿ ಮಿಂಚಿದ ಯಶ್ ಧುಲ್
Yash Dhull
TV9 Web
| Edited By: |

Updated on: Feb 17, 2022 | 3:24 PM

Share

ಟೀಮ್ ಇಂಡಿಯಾ ಅಂಡರ್-19 ತಂಡದ ನಾಯಕ ಯಶ್ ಧುಲ್ ರಣಜಿ ಟ್ರೋಫಿ ಕ್ರಿಕೆಟ್​ನಲ್ಲಿ ಶತಕದೊಂದಿಗೆ ಪಾದಾರ್ಪಣೆ ಮಾಡಿದ್ದಾರೆ. ತಮಿಳುನಾಡುವ ವಿರುದ್ದದ ಪಂದ್ಯದಲ್ಲಿ ದೆಹಲಿ ಪರ ಆರಂಭಿಕನಾಗಿ ಹೊಸ ಇನಿಂಗ್ಸ್​ ಆರಂಭಿಸಿರುವ ಯಶ್ ಮೊದಲ ಪಂದ್ಯದಲ್ಲೇ ಸೆಂಚುರಿ ಬಾರಿಸಿ ಎಲ್ಲರ ಗಮನ ಸೆಳೆದರು. ಆರಂಭದಿಂದಲೂ ಬಿರುಸಿನ ಇನಿಂಗ್ಸ್​ ಆಡಿದ ಯಶ್ ಧುಲ್ ಅರ್ಧಶತಕ ಪೂರೈಸಲು 57 ಎಸೆತಗಳನ್ನು ತೆಗೆದುಕೊಂಡರು. ಇದಾದ ಬಳಿಕ ದೊಡ್ಡ ಇನಿಂಗ್ಸ್​ನತ್ತ ಮುಖ ಮಾಡಿದ ಯುವ 133 ಎಸೆತಗಳಲ್ಲಿ ಚೊಚ್ಚಲ ರಣಜಿ ಶತಕ ಪೂರೈಸಿದರು. ಅದು ಕೂಡ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡುವ ಮೂಲಕ ಎಂಬುದು ವಿಶೇಷ.

ಏಕೆಂದರೆ ದೆಹಲಿ ತಂಡವು ಕೇವಲ 7 ರನ್​ಗಳಿಗೆ 2 ವಿಕೆಟ್ ಕಳೆದುಕೊಂಡು ಆರಂಭಿಕ ಆಘಾತಕ್ಕೆ ಒಳಗಾಗಿತ್ತು. ಈ ಹಂತದಲ್ಲಿ ಎಚ್ಚರಿಕೆಯ ಆಟವಾಡಿದ 19 ವರ್ಷದ ಯಶ್ ಧುಲ್ ತಂಡವನ್ನು ಮುನ್ನಡೆ ಸಾಧಿಸಿದರು. ಮೂರನೇ ವಿಕೆಟ್‌ಗೆ ನಿತೀಶ್ ರಾಣಾ ಅವರೊಂದಿಗೆ ಅದ್ಭುತ ಅರ್ಧಶತಕದ ಜೊತೆಯಾಟವಾಡಿದರು. 25 ರನ್​ಗಳಿಸಿ ರಾಣಾ ಔಟ್ ಆಗಿ ಹೊರನಡೆದರೂ, ಮತ್ತೊಂದೆಡೆ ಯಶ್ ಧುಲ್ ತಮಿಳುನಾಡು ಬೌಲರುಗಳನ್ನು ನಿರಾಯಾಸವಾಗಿ ಎದುರಿಸಿ ಶತಕ ಸಿಡಿಸಿದರು.

ಇನ್ನು 4ನೇ ವಿಕೆಟ್​ಗೆ ಜಾಂಟಿ ಸಿಧು ಜೊತೆ ಶತಕದ ಜೊತೆಯಾಟವಾಡುವ ಮೂಲಕ 67 ಕ್ಕೆ 3 ವಿಕೆಟ್ ಕಳೆದುಕೊಂಡಿದ್ದ ದೆಹಲಿ ತಂಡವನ್ನು ಯಶ್ ಧುಲ್ 200 ರ ಗಡಿದಾಟಿಸಿದರು. ಈ ಮೂಲಕ ದೇಶೀಯ ಅಂಗಳದಲ್ಲಿ ಚೊಚ್ಚಲ ಪಂದ್ಯದಲ್ಲೇ ತಮ್ಮ ಬ್ಯಾಟಿಂಗ್ ಸಾಮರ್ಥ್ಯವನ್ನು ತೆರೆದಿಟ್ಟರು. ಇತ್ತೀಚೆಗಷ್ಟೇ ಅಂಡರ್ 19 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾವನ್ನು ಯಶ್ ಧುಲ್ ಮುನ್ನಡೆಸಿದ್ದರು. ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ ಧುಲ್ ಸೆಮಿಫೈನಲ್​ ಗೆಲುವಿನ ರೂವಾರಿಯಾಗಿದ್ದರು. ಈ ಭರ್ಜರಿ ಪ್ರದರ್ಶನದ ಫಲವಾಗಿ ಈ ಬಾರಿ ದೆಹಲಿ ರಣಜಿ ತಂಡದಲ್ಲಿ 19 ರ ಹರೆಯದ ಯುವ ಆಟಗಾರನಿಗೆ ಚಾನ್ಸ್ ನೀಡಲಾಗಿತ್ತು.

ಅಲ್ಲದೆ ದೆಹಲಿ ನಾಯಕ ಪ್ರದೀಪ್ ಸಾಂಗ್ವಾನ್ ಯುವ ಆಟಗಾರನ ಮೇಲೆ ನಂಬಿಕೆಯಿರಿಸಿ ಆರಂಭಿಕನಾಗಿ ಕಣಕ್ಕಿಳಿಸಿದ್ದರು. ಇದೀಗ ನಾಯಕನ ನಿರೀಕ್ಷೆಯನ್ನು ಹುಸಿಗೊಳಿಸದಂತೆ ಯಶ್ ಧುಲ್ ಚೊಚ್ಚಲ ಪಂದ್ಯದಲ್ಲೇ 113 ರನ್​ ಬಾರಿಸುವ ಮೂಲಕ ಮಿಂಚಿದ್ದಾರೆ. ಅಂದಹಾಗೆ ಐಪಿಎಲ್ ಸೀಸನ್ 15 ಗಾಗಿ ಯಶ್ ಧುಲ್ ಅವರನ್ನು ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು 50 ಲಕ್ಷ ರೂ. ನೀಡಿ ಖರೀದಿಸಿದೆ.

ಇದನ್ನೂ ಓದಿ: IPL 2022 ನಲ್ಲಿ ಕೋಟಿ ಸಿಗುತ್ತಿದ್ದಂತೆ ಪಾಕಿಸ್ತಾನ ಸೂಪರ್ ಲೀಗ್ ತೊರೆದ ಸ್ಟಾರ್ ಆಟಗಾರ

ಇದನ್ನೂ ಓದಿ: IPL 2022: RCB ತಂಡ ಕಟ್ಟಿದೆ…ಆದರೆ ಆರಂಭಿಕ ಯಾರು ಎಂಬುದೇ ಈಗ ಪ್ರಶ್ನೆ..?

ಇದನ್ನೂ ಓದಿ: IPL 2022: RCB ತಂಡದಲ್ಲಿ ಇಬ್ಬರು ಕನ್ನಡಿಗರು..! 

(Yash Dhull scores century on first-class debut for Delhi)

ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ