AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yashasvi Jaiswal: ಕನ್ನಡಿಗನ ದಾಖಲೆ ಮುರಿದು ​ಹೊಸ ಇತಿಹಾಸ ಬರೆದ ಯಶಸ್ವಿ ಜೈಸ್ವಾಲ್

Yashasvi Jaiswal Records: ನ್ಯೂಝಿಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ ಯಶಸ್ವಿ ಜೈಸ್ವಾಲ್ 77 ರನ್​ಗಳ ಭರ್ಜರಿ ಇನಿಂಗ್ಸ್ ಆಡಿದ್ದರು. ಈ ಇನಿಂಗ್ಸ್​ನೊಂದಿಗೆ ಯುವ ದಾಂಡಿಗ ಟೆಸ್ಟ್ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ 45 ವರ್ಷಗಳ ದಾಖಲೆ ಮುರಿಯುವ ಮೂಲಕ ಎಂಬುದು ವಿಶೇಷ.

Yashasvi Jaiswal: ಕನ್ನಡಿಗನ ದಾಖಲೆ ಮುರಿದು ​ಹೊಸ ಇತಿಹಾಸ ಬರೆದ ಯಶಸ್ವಿ ಜೈಸ್ವಾಲ್
ಝಾಹಿರ್ ಯೂಸುಫ್
|

Updated on: Oct 27, 2024 | 2:00 PM

Share

ಭಾರತದಲ್ಲಿ ಟೆಸ್ಟ್ ಕ್ರಿಕೆಟ್​ ಇತಿಹಾಸದಲ್ಲೇ ವರ್ಷದೊಳಗೆ ಸಾವಿರ ರನ್ ಕಲೆಹಾಕಿದ್ದು ಕೇವಲ ಇಬ್ಬರು ಬ್ಯಾಟರ್​ಗಳು ಮಾತ್ರ. ಆ ಇಬ್ಬರು ಬ್ಯಾಟರ್​ಗಳಲ್ಲಿ ಎರಡನೇಯವರು ಯಶಸ್ವಿ ಜೈಸ್ವಾಲ್. ಈ ಸಾಧನೆ ಮಾಡಿದ ಮೊದಲ ಭಾರತೀಯ ನಮ್ಮೆಲ್ಲರ ಹೆಮ್ಮೆಯ ಕನ್ನಡಿಗ ಗುಂಡಪ್ಪ ವಿಶ್ವನಾಥ್.

1979 ರಲ್ಲಿ ಭಾರತದಲ್ಲಿ ನಡೆದ ಟೆಸ್ಟ್ ಪಂದ್ಯಗಳ ಮೂಲಕ ಗುಂಡಪ್ಪ ವಿಶ್ವನಾಥ್ ಬರೋಬ್ಬರಿ 1047 ರನ್​ ಕಲೆಹಾಕಿದ್ದರು. ಈ ಮೂಲಕ ಟೆಸ್ಟ್ ಕ್ರಿಕೆಟ್​ನಲ್ಲಿ ಒಂದು ವರ್ಷದೊಳಗೆ ತವರಿನಲ್ಲಿ ಸಾವಿರ ರನ್ ಪೇರಿಸಿದ ಭಾರತದ ಏಕೈಕ ಬ್ಯಾಟರ್ ಎನಿಸಿಕೊಂಡಿದ್ದರು.

ಇದೀಗ ಈ ದಾಖಲೆ ಪಟ್ಟಿಗೆ ಯಶಸ್ವಿ ಜೈಸ್ವಾಲ್ ಕೂಡ ಸೇರ್ಪಡೆಯಾಗಿದ್ದಾರೆ. ಟೀಮ್ ಇಂಡಿಯಾದ ಯುವ ಎಡಗೈ ದಾಂಡಿಗ ಈ ವರ್ಷ ತವರಿನಲ್ಲಿ 1000+ ಟೆಸ್ಟ್ ರನ್ ಕಲೆಹಾಕಿದ್ದಾರೆ. ಈ ಮೂಲಕ ಗುಂಡಪ್ಪ ವಿಶ್ವನಾಥ್ ಸಾಧನೆಯನ್ನು ಯಶಸ್ವಿ ಜೈಸ್ವಾಲ್ ಪುನರಾವರ್ತಿಸಿದ್ದಾರೆ.

ಅಷ್ಟೇ ಅಲ್ಲದೆ ಗುಂಡಪ್ಪ ವಿಶ್ವನಾಥ್ ಅವರ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದಿದ್ದಾರೆ. ಅಂದರೆ 1979 ರಲ್ಲಿ ವಿಶ್ವನಾಥ್ ಅವರು ಒಟ್ಟು 1047 ರನ್​ ಬಾರಿಸಿ ತವರಿನಲ್ಲಿ ಕ್ಯಾಲೆಂಡರ್ ವರ್ಷದೊಳಗೆ ಅತ್ಯಧಿಕ ರನ್ ಕಲೆಹಾಕಿದ ದಾಖಲೆ ನಿರ್ಮಿಸಿದ್ದರು.

ಇದೀಗ ಯಶಸ್ವಿ ಜೈಸ್ವಾಲ್ 1056 ರನ್ ಪೇರಿಸುವ ಮೂಲಕ ಭಾರತದಲ್ಲಿ ವರ್ಷವೊಂದರಲ್ಲಿ ಟೆಸ್ಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಮೂಲಕ 45 ವರ್ಷಗಳ ಹಿಂದೆ ಗುಂಡಪ್ಪ ವಿಶ್ವನಾಥ್ ಬರೆದಿದ್ದ ದಾಖಲೆಯನ್ನು ಮುರಿಯುವಲ್ಲಿ 22 ವರ್ಷದ ಯಶಸ್ವಿ ಜೈಸ್ವಾಲ್ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: ಝಿಂಬಾಬ್ವೆ ಅಬ್ಬರಕ್ಕೆ ಟೀಮ್ ಇಂಡಿಯಾದ ವಿಶ್ವ ದಾಖಲೆ ಉಡೀಸ್

ಇನ್ನು ಒಂದು ಕ್ಯಾಲೆಂಡರ್ ವರ್ಷದೊಳಗೆ ಟೆಸ್ಟ್​ನಲ್ಲಿ ಭಾರತದ ಪರ ಅತ್ಯಧಿಕ ರನ್ ಕಲೆಹಾಕಿದ ಆರಂಭಿಕರ ಪೈಕಿ ವೀರೇಂದ್ರ ಸೆಹ್ವಾಗ್ ಅಗ್ರಸ್ಥಾನದಲ್ಲಿದ್ದಾರೆ. 2008 ರಲ್ಲಿ 14 ಪಂದ್ಯಗಳಲ್ಲಿ ಸೆಹ್ವಾಗ್ 1,462 ರನ್ ಕಲೆಹಾಕಿ ಈ ದಾಖಲೆ ಬರೆದಿದ್ದರು. ಈ ವರ್ಷ 14 ಪಂದ್ಯಗಳಲ್ಲಿ 1,305 ರನ್ ಗಳಿಸಿರುವ ಯಶಸ್ವಿ ಜೈಸ್ವಾಲ್ ವೀರೇಂದ್ರ ಸೆಹ್ವಾಗ್ ಅವರ ದಾಖಲೆ ಮುರಿಯುವ ನಿರೀಕ್ಷೆಯಿದೆ.

Follow Us
ಇಂದಿನಿಂದ ಫ್ರೀ ಬಸ್ ಪಾಸ್​ಗೆ ಅರ್ಜಿ ಸಲ್ಲಿಕೆ
ಇಂದಿನಿಂದ ಫ್ರೀ ಬಸ್ ಪಾಸ್​ಗೆ ಅರ್ಜಿ ಸಲ್ಲಿಕೆ
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ