AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಭಾರತ ಸುಮ್ಮನಿರಲ್ಲ ಎಂಬುದು ಅವರಿಗೆ ತಿಳಿಯಬೇಕು’; ಕೆಣಕ್ಕಿದವರ ಮೇಲೆ ಕೆರಳಿದ ಜೈಸ್ವಾಲ್

Yashasvi Jaiswal: ಕೊಲಂಬೊದಲ್ಲಿ ನಡೆದ ಭಾರತ-ಶ್ರೀಲಂಕಾ 2ನೇ ಟೆಸ್ಟ್‌ನಲ್ಲಿ ಯಶಸ್ವಿ ಜೈಸ್ವಾಲ್ ಮತ್ತು ಅಸಿತಾ ಫೆರ್ನಾಂಡೋ ಮೈದಾನದಲ್ಲಿ ಜಗಳವಾಡಿದ್ದರು. ಫೆರ್ನಾಂಡೋ ಕೆಣಕಿದಾಗ ಜೈಸ್ವಾಲ್ ಹೆಲ್ಮೆಟ್‌ನಿಂದ ಲಘುವಾಗಿ ಗುದ್ದಿದರು. ಈ ಘಟನೆಗೆ ಐಸಿಸಿ ಕ್ರಮ ಕೈಗೊಂಡಿದೆ. ಘಟನೆ ಬಗ್ಗೆ ಮಾಜಿ ಕ್ರಿಕೆಟಿಗರಿಂದ ಟೀಕೆ ಎದುರಿಸಿದ ಜೈಸ್ವಾಲ್, ‘ಅವರು ಏನು ಹೇಳಿದರು ಎಂಬುದನ್ನು ನಿಮಗೆ ತಿಳಿಯದೆ ದಯವಿಟ್ಟು ಯಾವ ನಿರ್ಧಾರಕ್ಕೂ ಬರಬೇಡಿ’ ಎಂದಿದ್ದಾರೆ.

‘ಭಾರತ ಸುಮ್ಮನಿರಲ್ಲ ಎಂಬುದು ಅವರಿಗೆ ತಿಳಿಯಬೇಕು’; ಕೆಣಕ್ಕಿದವರ ಮೇಲೆ ಕೆರಳಿದ ಜೈಸ್ವಾಲ್
Yashasvi
ಪೃಥ್ವಿಶಂಕರ
|

Updated on:Aug 24, 2026 | 6:18 PM

Share

ಕೊಲಂಬೊದಲ್ಲಿ ನಡೆಯುತ್ತಿರುವ ಭಾರತ ಹಾಗೂ ಶ್ರೀಲಂಕಾ (IND vs SL) ನಡುವಿನ ಎರಡನೇ ಟೆಸ್ಟ್ ಪಂದ್ಯದಲ್ಲಿ ಮೈದಾನದಲ್ಲಿ ಪರಸ್ಪರ ಜಗಳ ಮಾಡಿಕೊಂಡಿದ್ದ ಶ್ರೀಲಂಕಾ ವೇಗಿ ಅಸಿತಾ ಫೆರ್ನಾಂಡೋ (Asitha Fernando) ಹಾಗೂ ಟೀಂ ಇಂಡಿಯಾದ ಯುವ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ (Yashasvi Jaiswal) ವಿರುದ್ಧ ಐಸಿಸಿ ಗಂಭೀರ ಕ್ರಮ ಜರುಗಿಸಿದೆ. ಆದರೆ ಆ ಸಂದರ್ಭದಲ್ಲಿ ಏನು ನಡೆಯಿತು ಎಂಬುದನ್ನು ತಿಳಿದುಕೊಳ್ಳುವ ಮೊದಲೇ ಮಾಜಿ ಆಟಗಾರರು ಯಶಸ್ವಿ ಜೈಸ್ವಾಲ್ ಮಾಡಿದ್ದು ತಪ್ಪು ಎಂಬ ಅಭಿಪ್ರಾಯವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಇದರಿಂದ ತಾಳ್ಮೆ ಕಳೆದುಕೊಂಡಿರುವ ಯಶಸ್ವಿ ಜೈಸ್ವಾಲ್ ಖಾರವಾಗಿಯೇ ಉತ್ತರ ನೀಡಿದ್ದಾರೆ.

ನಡೆದದ್ದಾರೂ ಏನು?

ಕೊಲಂಬೊ ಟೆಸ್ಟ್​ನ ಮೊದಲ ಇನ್ನಿಂಗ್ಸ್​ನಲ್ಲಿ ಯಶಸ್ವಿ ಜೈಸ್ವಾಲ್ 45 ರನ್​ಗಳ ಇನ್ನಿಂಗ್ಸ್ ಆಡಿ ತಮ್ಮ ವಿಕೆಟ್ ಒಪ್ಪಿಸಿದರು. ಇತ್ತ ಜೈಸ್ವಾಲ್ ವಿಕೆಟ್ ಪಡೆದ ಸಂತಸದಲ್ಲಿ ಎದುರಾಳಿ ತಂಡದ ವೇಗಿ ಅಸಿತಾ ಫೆರ್ನಾಂಡೋ ಆಕ್ರಮಣಕಾರಿಯಾಗಿ ಸಂಭ್ರಮಿಸಿದ್ದಲ್ಲದೆ ಜೈಸ್ವಾಲ್ ಪೆವಿಲಿಯನತ್ತ ಹೆಜ್ಜೆ ಹಾಕುತ್ತಿರುವಾಗ ಅವರನ್ನು ಕೆಣಕ್ಕುವ ಕೆಲಸಕ್ಕೆ ಕೈಹಾಕಿದರು. ಇದರಿಂದ ಕೆರಳಿದ ಜೈಸ್ವಾಲ್, ಫೆರ್ನಾಂಡೋ ಬಳಿಗೆ ಬಂದು ವಾಗ್ವಾದದಲ್ಲಿ ತೊಡಗಿದರು. ಇದೇ ಸಂದರ್ಭದಲ್ಲಿ ತಮ್ಮ ಹೆಲ್ಮೆಟ್​ನಿಂದ ಫೆರ್ನಾಂಡೋ ತಲೆಗೆ ಲಗುವಾಗಿ ಗುದ್ದಿದರು. ಜೈಸ್ವಾಲ್ ಅವರ ಈ ನಡೆಯೇ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.

ಎದುರಾಳಿ ತಂಡದವರು ಜೈಸ್ವಾಲ್ ವಿರುದ್ಧ ಕ್ರಮ ತೆಗೆದುಕೊಳ್ಳುವುದು ಐಸಿಸಿಗೆ ಬಿಟ್ಟಿದ್ದು ಎಂದು ಹೇಳಿಕೆ ನೀಡಿದರೆ, ಇತ್ತ ಟೀಂ ಇಂಡಿಯಾದ ಮಾಜಿ ಆಟಗಾರರು ಜೈಸ್ವಾಲ್ ಮಾಡಿದ್ದು ತಪ್ಪು ಎಂಬರ್ಥದಲ್ಲಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅಂತಹವರಲ್ಲಿ ಮಾಜಿ ಆಟಗಾರ ಹಾಗೂ ಹಾಲಿ ವೀಕ್ಷಕ ವಿವರಣೆಗಾರನಾಗಿ ಕೆಲಸ ಮಾಡುತ್ತಿರುವ ಹರ್ಷ ಭೋಗ್ಲೆ ಕೂಡ ಸೇರಿದ್ದಾರೆ.

View this post on Instagram

A post shared by Cricbuzz (@cricbuzz)

ಜೈಸ್ವಾಲ್ ಹಾಗೆ ಮಾಡಬಾರದಿತ್ತು

ಜೈಸ್ವಾಲ್ ಮಾಡಿದ್ದು ತಪ್ಪು ಎಂಬರ್ಥದಲ್ಲಿ ಮಾತನಾಡಿರುವ ಹರ್ಷ ಭೋಗ್ಲೆ,‘ಯಾರಾದರೂ ಏನಾದರೂ ಹೇಳಿದರೆ, ನಾವು ಮಾಡಬೇಕಾದ ಅತ್ಯುತ್ತಮ ಕೆಲಸವೆಂದರೆ ದೂರ ಹೋಗುವುದು. ಆದರೆ, ಯಶಸ್ವಿ ಹಾಗೆ ಮಾಡದೆ ಅಸಿತಾ ಫೆರ್ನಾಂಡೋ ಜೊತೆಗೆ ಜಗಳಕ್ಕಿಳಿದರು. ಪೆವಿಲಿಯನತ್ತ ಹೋಗುತ್ತಿದ್ದ ಜೈಸ್ವಾಲ್, ಮತ್ತೆ ಫೆರ್ನಾಂಡೋ ಬಳಿ ಬಂದು ವಾಗ್ವಾದಕ್ಕಿಳಿದರು. ಇದರ ಜೊತೆಗೆ ತಾವು ತಲೆಗೆ ಧರಿಸಿದ್ದ ಹೆಲ್ಮೆಟ್​ನಿಂದ ಫೆರ್ನಾಂಡೋ ತಲೆಗೆ ಲಘುವಾಗಿ ಗುದ್ದಿದರು. ನನ್ನ ಅಭಿಪ್ರಾಯದಲ್ಲಿ ಜೈಸ್ವಾಲ್ ಹಾಗೆ ಮಾಡಬಾರದಿತ್ತು’ ಎಂದಿದ್ದರು.

ಯಾವ ನಿರ್ಧಾರಕ್ಕೂ ಬರಬೇಡಿ

ಹರ್ಷ ಭೋಗ್ಲೆ ಅವರ ಈ ವಿಡಿಯೋಗೆ ಕಾಮೆಂಟ್ ಮೂಲಕ ಉತ್ತರಿಸಿರುವ ಜೈಸ್ವಾಲ್,‘ಅವರು ಏನು ಹೇಳಿದರು ಎಂಬುದನ್ನು ನಿಮಗೆ ತಿಳಿಯದೆ ದಯವಿಟ್ಟು ಯಾವ ನಿರ್ಧಾರಕ್ಕೂ ಬರಬೇಡಿ. ಯಾರಾದರೂ ಗೆರೆ ದಾಟಿದರೆ, ಭಾರತ ಸರಿಯಾದ ತಿರುಗೇಟು ನೀಡುತ್ತದೆ ಎಂಬುದನ್ನು ನಾವು ಅವರಿಗೆ ಮನವರಿಕೆ ಮಾಡಿಕೊಡಬೇಕಿದೆ’ ಎಂದು ಬರೆದಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:16 pm, Mon, 24 August 26

Follow Us
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ