AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yashasvi jaiswal: ಚೊಚ್ಚಲ ಅರ್ಧಶತಕ ಸಿಡಿಸಿದ ಯಶಸ್ವಿ ಜೈಸ್ವಾಲ್

India vs West Indies 1st Test: ಟೀಮ್ ಇಂಡಿಯಾ ಪರ ಯಶಸ್ವಿ ಜೈಸ್ವಾಲ್ ಹಾಗೂ ರೋಹಿತ್ ಶರ್ಮಾ ಆರಂಭಿಕರಾಗಿ ಕಣಕ್ಕಿಳಿದಿದ್ದರು. ಆರಂಭದಲ್ಲಿ ತುಸು ಎಚ್ಚರದಿಂದ ಬ್ಯಾಟ್ ಬೀಸಿದ ಜೈಸ್ವಾಲ್ ಆ ಬಳಿಕ ಆತ್ಮ ವಿಶ್ವಾಸದಿಂದಲೇ ವಿಂಡೀಸ್ ಬೌಲರ್​ಗಳನ್ನು ಎದುರಿಸಿದರು.

Yashasvi jaiswal: ಚೊಚ್ಚಲ ಅರ್ಧಶತಕ ಸಿಡಿಸಿದ ಯಶಸ್ವಿ ಜೈಸ್ವಾಲ್
Yashasvi jaiswal
TV9 Web
| Edited By: |

Updated on: Jul 13, 2023 | 8:55 PM

Share

India vs West Indies 1st Test: ಡೊಮಿನಿಕಾದಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಆಕರ್ಷಕ ಅರ್ಧಶತಕ ಪೂರೈಸಿದ್ದಾರೆ. ಈ ಮೂಲಕ ಪಾದಾರ್ಪಣೆ ಪಂದ್ಯದಲ್ಲೇ ಹಾಫ್ ಸೆಂಚುರಿಸಿದ ಸಾಧಕರ ಪಟ್ಟಿಗೆ ಜೈಸ್ವಾಲ್ ಕೂಡ ಸೇರ್ಪಡೆಯಾದರು. ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ತಂಡದ ನಾಯಕ ಕ್ರೈಗ್ ಬ್ರಾಥ್​ವೈಟ್ ಬ್ಯಾಟಿಂಗ್ ಆಯ್ದುಕೊಂಡಿದ್ದರು.

ಅದರಂತೆ ಇನಿಂಗ್ಸ್​ ಆರಂಭಿಸಿದ ವೆಸ್ಟ್ ಇಂಡೀಸ್ ವಿರುದ್ಧ ರವಿಚಂದ್ರನ್ ಅಶ್ವಿನ್ ಹಾಗೂ ರವೀಂದ್ರ ಜಡೇಜಾ ಸ್ಪಿನ್ ಮೋಡಿ ಮಾಡಿದ್ದರು. ತೇಜ್​ನರೈನ್ ಚಂದ್ರಪಾಲ್ ವಿಕೆಟ್ ಕಬಳಿಸುವ ಶುಭಾರಂಭ ಮಾಡಿದ ಅಶ್ವಿನ್ ಒಟ್ಟು 5 ವಿಕೆಟ್ ಉರುಳಿಸಿದರು. ಮತ್ತೊಂದೆಡೆ ರವೀಂದ್ರ ಜಡೇಜಾ 2 ವಿಕೆಟ್ ಪಡೆದರು. ಪರಿಣಾಮ ಕೇವಲ 150 ರನ್​ಗಳಿಗೆ ವೆಸ್ಟ್ ಇಂಡೀಸ್ ಆಲೌಟ್ ಆಯಿತು.

ಇದಾದ ಬಳಿಕ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಪರ ಯಶಸ್ವಿ ಜೈಸ್ವಾಲ್ ಹಾಗೂ ರೋಹಿತ್ ಶರ್ಮಾ ಆರಂಭಿಕರಾಗಿ ಕಣಕ್ಕಿಳಿದಿದ್ದರು. ಆರಂಭದಲ್ಲಿ ತುಸು ಎಚ್ಚರದಿಂದ ಬ್ಯಾಟ್ ಬೀಸಿದ ಜೈಸ್ವಾಲ್ ಆ ಬಳಿಕ ಆತ್ಮ ವಿಶ್ವಾಸದಿಂದಲೇ ವಿಂಡೀಸ್ ಬೌಲರ್​ಗಳನ್ನು ಎದುರಿಸಿದರು. ಅಲ್ಲದೆ ರೋಹಿತ್ ಶರ್ಮಾ ಜೊತೆಗೂಡಿ ಶತಕದ ಜೊತೆಯಾಟವಾಡಿದರು. ಈ ಹಂತದಲ್ಲಿ ಅಲ್ಝಾರಿ ಜೋಸೆಫ್ ಎಸೆತವನ್ನು ಬೌಂಡರಿಗಟ್ಟುವ ಮೂಲಕ ಯಶಸ್ವಿ ಜೈಸ್ವಾಲ್ 104 ಎಸೆತಗಳಲ್ಲಿ ತಮ್ಮ

ಚೊಚ್ಚಲ ಅರ್ಧಶತಕ ಪೂರೈಸಿದರು. ಈ ಮೂಲಕ ಪಾದಾರ್ಪಣೆ ಪಂದ್ಯದಲ್ಲೇ ಅರ್ಧಶತಕ ಬಾರಿಸಿದ ಭಾರತದ 13ನೇ ಆರಂಭಿಕ ಆಟಗಾರ ಎನಿಸಿಕೊಂಡರು. ಮತ್ತೊಂದೆಡೆ ಅನುಭವವನ್ನು ಧಾರೆಯೆರದ ರೋಹಿತ್ ಶರ್ಮಾ 106 ಎಸೆತಗಳಲ್ಲಿ ಅರ್ಧಶತಕ ಬಾರಿಸಿದರು.

40 ಓವರ್​ ಮುಕ್ತಾಯದ ವೇಳೆ ಟೀಮ್ ಇಂಡಿಯಾ ಯಾವುದೇ ವಿಕೆಟ್ ನಷ್ಟವಿಲ್ಲದೆ 120 ರನ್​ ಕಲೆಹಾಕಿದ್ದು, ಕ್ರೀಸ್​ನಲ್ಲಿ ಯಶಸ್ವಿ ಜೈಸ್ವಾಲ್ (55) ಹಾಗೂ ರೋಹಿತ್ ಶರ್ಮಾ (51) ಬ್ಯಾಟಿಂಗ್ ಮುಂದುವರೆಸಿದ್ದಾರೆ.

ಟೀಮ್ ಇಂಡಿಯಾ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ) , ಯಶಸ್ವಿ ಜೈಸ್ವಾಲ್ , ಶುಭ್​ಮನ್ ಗಿಲ್ , ವಿರಾಟ್ ಕೊಹ್ಲಿ , ಅಜಿಂಕ್ಯ ರಹಾನೆ , ರವೀಂದ್ರ ಜಡೇಜಾ , ಇಶಾನ್ ಕಿಶನ್ (ವಿಕೆಟ್ ಕೀಪರ್) , ರವಿಚಂದ್ರನ್ ಅಶ್ವಿನ್ , ಶಾರ್ದೂಲ್ ಠಾಕೂರ್ , ಜಯದೇವ್ ಉನಾದ್ಕತ್ , ಮೊಹಮ್ಮದ್ ಸಿರಾಜ್.

ಇದನ್ನೂ ಓದಿ: India T20 Squad: ಟೀಮ್ ಇಂಡಿಯಾದಲ್ಲಿ ಇಬ್ಬರೇ ಆಲ್​ರೌಂಡರ್​ಗಳು..!

ವೆಸ್ಟ್ ಇಂಡೀಸ್ ಪ್ಲೇಯಿಂಗ್ 11: ಕ್ರೈಗ್ ಬ್ರಾಥ್‌ವೈಟ್ (ನಾಯಕ) , ತೇಜ್​ನರೈನ್ ಚಂದ್ರಪಾಲ್ , ರೇಮನ್ ರೀಫರ್ , ಜೆರ್ಮೈನ್ ಬ್ಲಾಕ್‌ವುಡ್ , ಅಲಿಕ್ ಅಥಾನಾಝ್ , ಜೋಶುವಾ ಡಾ ಸಿಲ್ವಾ (ವಿಕೆಟ್) , ಜೇಸನ್ ಹೋಲ್ಡರ್ , ರಹಕೀಮ್ ಕಾರ್ನ್‌ವಾಲ್ , ಅಲ್ಝಾರಿ ಜೋಸೆಫ್ , ಕೆಮರ್ ರೋಚ್ , ಜೋಮೆಲ್ ವಾರಿಕನ್.

ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ತಿಪ್ಪೆ ಸೇರಿದ ಸರ್ಕಾರಿ ಆಸ್ಪತ್ರೆ ಔಷಧಿ: ಸ್ಥಳೀಯರ ಆಕ್ರೋಶ
ತಿಪ್ಪೆ ಸೇರಿದ ಸರ್ಕಾರಿ ಆಸ್ಪತ್ರೆ ಔಷಧಿ: ಸ್ಥಳೀಯರ ಆಕ್ರೋಶ