RR vs RCB: ಔಟಾದ ಕೋಪದಲ್ಲಿ ಮೈದಾನ ತೊರೆಯುವಾಗ ಯಶಸ್ವಿ ಜೈಸ್ವಾಲ್ ಏನೆಲ್ಲ ಅವಾಂತರ ಮಾಡಿದರು ನೋಡಿ

Yashasvi Jaiswal Angry: ಯಶಸ್ವಿ ಜೈಸ್ವಾಲ್ ಆರ್​ಸಿಬಿ ವಿರುದ್ಧದ ಐಪಿಎಲ್ 2024ರ ಎಲಿಮಿನೇಟರ್ ಪಂದ್ಯದಲ್ಲಿ 10 ನೇ ಓವರ್‌ನ ಎರಡನೇ ಎಸೆತದಲ್ಲಿ ಕ್ಯಾಮರೂನ್ ಗ್ರೀನ್ ಬೌಲಿಂಗ್​ನಲ್ಲಿ ಔಟಾದರು. ಸ್ವೀಪ್ ಶಾಟ್ ಆಡುವ ಪ್ರಯತ್ನದಲ್ಲಿ ವಿಕೆಟ್ ಹಿಂದೆ ದಿನೇಶ್ ಕಾರ್ತಿಕ್​ಗೆ ಕ್ಯಾಚ್ ನೀಡಿ ನಿರ್ಗಮಿಸಿದರು. ಔಟಾದ ಸಂದರ್ಭ ಜೈಸ್ವಾಲ್ ಏನು ಮಾಡಿದರು ನೋಡಿ.

RR vs RCB: ಔಟಾದ ಕೋಪದಲ್ಲಿ ಮೈದಾನ ತೊರೆಯುವಾಗ ಯಶಸ್ವಿ ಜೈಸ್ವಾಲ್ ಏನೆಲ್ಲ ಅವಾಂತರ ಮಾಡಿದರು ನೋಡಿ
Yashasvi Jaiswal Angry
Follow us
|

Updated on: May 23, 2024 | 10:08 AM

ಬುಧವಾರ (ಮೇ 22) ಅಹ್ಮದಾಬಾದ್​ನಲ್ಲಿ ನಡೆದ ಐಪಿಎಲ್ 2024 ರ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ (RCB vs RR) ಪರ ಯಶಸ್ವಿ ಜೈಸ್ವಾಲ್ ಅವರು 30 ಎಸೆತಗಳಲ್ಲಿ 45 ರನ್ ಗಳಿಸುವ ಮೂಲಕ ಸಂಜು ಸ್ಯಾಮ್ಸನ್ ನೇತೃತ್ವದ ತಂಡ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದರು. ಜೊತೆಗೆ ಗರಿಷ್ಠ ಸ್ಕೋರರ್ ಎನಿಸಿಕೊಂಡರು. 22ರ ಹರೆಯದ ಎಡಗೈ ಬ್ಯಾಟರ್ ಎಂಟು ಬೌಂಡರಿ ಸಿಡಿಸಿವುದರ ಜೊತೆಗೆ ಟಾಮ್ ಕೊಹ್ಲರ್-ಕ್ಯಾಡ್ಮೋರ್ (20) ಅವರೊಂದಿಗೆ ಮೊದಲ ವಿಕೆಟ್‌ಗೆ 46 ರನ್ ಮತ್ತು ಸಂಜು ಸ್ಯಾಮ್ಸನ್ (17) ಜೊತೆ ಎರಡನೇ ವಿಕೆಟ್‌ಗೆ 35 ರನ್ ಸೇರಿಸಿದರು.

2024 ರ ಟಿ 20 ವಿಶ್ವಕಪ್‌ನಲ್ಲಿ ಭಾರತ ತಂಡದ ಪರ ಸ್ಥಾನ ಪಡೆದುಕೊಂಡಿರುವ ಜೈಸ್ವಾಲ್, 10 ನೇ ಓವರ್‌ನ ಎರಡನೇ ಎಸೆತದಲ್ಲಿ ಕ್ಯಾಮರೂನ್ ಗ್ರೀನ್ ಬೌಲಿಂಗ್​ನಲ್ಲಿ ಔಟಾದರು. ಸ್ವೀಪ್ ಶಾಟ್ ಆಡುವ ಪ್ರಯತ್ನದಲ್ಲಿ ವಿಕೆಟ್ ಹಿಂದೆ ದಿನೇಶ್ ಕಾರ್ತಿಕ್​ಗೆ ಕ್ಯಾಚ್ ನೀಡಿ ನಿರ್ಗಮಿಸಿದರು. ಈ ವರ್ಷ ಆಡಿದ 15 ಪಂದ್ಯಗಳಲ್ಲಿ 393 ರನ್ ಗಳಿಸಿರುವ ಎಡಗೈ ಬ್ಯಾಟರ್, ಔಟಾದ ನಂತರ, ಪೆವಿಲಿಯನ್‌ಗೆ ಹಿಂದಿರುಗುವಾಗ ತಾಳ್ಮೆ ಕಳೆದುಕೊಂಡರು. ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಸೈಡ್ ರೇಲಿಂಗ್‌ಗೆ ಬಡಿದು ಕೋಪದಲ್ಲಿ ಡ್ರೆಸ್ಸಿಂಗ್ ರೂಮ್​ಗೆ ತೆರಳುವುದು ಕಂಡುಬಂತು.

ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ಟ್ರೋಲ್ ಆದ ಆರ್​ಸಿಬಿ: ಇಲ್ಲಿದೆ ಎಕ್ಸ್ ರಿಯಾಕ್ಷನ್

ಯಶಸ್ವಿ ಜೈಸ್ವಾಲ್ ಕೋಪದ ಪ್ರತಿಕ್ರಿಯೆಯ ವಿಡಿಯೋ ಇಲ್ಲಿದೆ:

ಐಪಿಎಲ್ 2023 ರಲ್ಲಿ 14 ಪಂದ್ಯಗಳಲ್ಲಿ 625 ರನ್ ಗಳಿಸುವ ಮೂಲಕ ಆರ್‌ಆರ್‌ಗಾಗಿ ಗರಿಷ್ಠ ಸ್ಕೋರ್ ಮಾಡಿದ ಜೈಸ್ವಾಲ್, ಈ ವರ್ಷ ಸ್ಥಿರ ಪ್ರದರ್ಶನ ನೀಡಲು ವಿಫಲರಾಗಿದ್ದಾರೆ. ಅವರು ಮುಂಬೈ ಇಂಡಿಯನ್ಸ್ ವಿರುದ್ಧ ಅಜೇಯ ಶತಕ ಮತ್ತು ಮೇ 2 ರಂದು ಹೈದರಾಬಾದ್ ವಿರುದ್ಧ 67 ರನ್ ಗಳಿಸಿದ್ದರು, ಅದನ್ನು ಹೊರತುಪಡಿಸಿ, ಹೆಚ್ಚಿನ ಪಂದ್ಯಗಳಲ್ಲಿ ಮಿಂಚಲು ವಿಫಲರಾಗಿದ್ದಾರೆ.

ಪೋಸ್ಟ್ ಮ್ಯಾಚ್​ನಲ್ಲಿ ಆರ್​ಸಿಬಿ ಸೋಲಿಗೆ ನಾಯಕ ಡುಪ್ಲೆಸಿಸ್ ದೂರಿದ್ದು ಯಾರನ್ನ?

ರಾಜಸ್ಥಾನಕ್ಕೆ 4 ವಿಕೆಟ್‌ಗಳ ಜಯ

ಬುಧವಾರ ನಡೆದ ಐಪಿಎಲ್ 2024 ರ ಎಲಿಮಿನೇಟರ್ ಪಂದ್ಯದಲ್ಲಿ ಆರ್‌ಆರ್ ಆರ್‌ಸಿಬಿಯನ್ನು ನಾಲ್ಕು ವಿಕೆಟ್‌ಗಳಿಂದ ಸೋಲಿಸಿತು. ಚೊಚ್ಚಲ ಆವೃತ್ತಿಯ ವಿಜೇತರು 173 ರನ್‌ಗಳ ಗುರಿಯನ್ನು 19 ಓವರ್‌ಗಳಲ್ಲಿ ಆರು ವಿಕೆಟ್‌ಗಳ ನಷ್ಟಕ್ಕೆ ಬೆನ್ನಟ್ಟಿದರು. ವೆಸ್ಟ್ ಇಂಡೀಸ್ ಟಿ20I ನಾಯಕ ರೋವ್‌ಮನ್ ಪೊವೆಲ್ ಅಂತಿಮ ಹಂತದಲ್ಲಿ ಬ್ಯಾಟಿಂಗ್​ಗೆ ಬಂದು ತಂಡಕ್ಕೆ ಜಯ ತಂದುಕೊಟ್ಟರು. ಆರ್​ಸಿಬಿಗೆ ಸೋಲುಣಿಸಿ ರಾಜಸ್ಥಾನ್ ತಂಡ 2ನೇ ಕ್ವಾಲಿಫೈಯರ್​ಗೆ ಅರ್ಹತೆ ಪಡೆದುಕೊಂಡಿದೆ. ಮೇ 24 ರಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯದಲ್ಲಿ ಹೈದರಾಬಾದ್ ಅನ್ನು ಎದುರಿಸಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಸೆಂಟ್ರಲ್ ಜೈಲಿನ ಬಳಿ ಬಂದ ಕುಡುಕನಿಗೆ ದರ್ಶನ್ ರನ್ನು ನೋಡಲೇಬೇಕೆಂಬ ಹಠ
ಸೆಂಟ್ರಲ್ ಜೈಲಿನ ಬಳಿ ಬಂದ ಕುಡುಕನಿಗೆ ದರ್ಶನ್ ರನ್ನು ನೋಡಲೇಬೇಕೆಂಬ ಹಠ
ರಾಹುಲ್ ಮಾತಾಡುವಾಗ ಮೈಕ್ ಆಫ್ ಮಾಡಲಾಯಿತೆಂಬ ಆರೋಪ ಸುಳ್ಳು: ಶೋಭಾ ಕರಂದ್ಲಾಜೆ
ರಾಹುಲ್ ಮಾತಾಡುವಾಗ ಮೈಕ್ ಆಫ್ ಮಾಡಲಾಯಿತೆಂಬ ಆರೋಪ ಸುಳ್ಳು: ಶೋಭಾ ಕರಂದ್ಲಾಜೆ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ದಾಟಿ ಕಾರಿಗೆ ಡಿಕ್ಕಿ ಹೊಡೆದ KSRTC ಬಸ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ದಾಟಿ ಕಾರಿಗೆ ಡಿಕ್ಕಿ ಹೊಡೆದ KSRTC ಬಸ
ನಿನ್ನೆ ದೆಹಲಿಯಲ್ಲಿದ್ದ ಕೇಂದ್ರ ಸಚಿವ ಸೋಮಣ್ಣರಿಂದ ಇಂದು ಬೆಂಗಳೂರಲ್ಲಿ ಸಭೆ
ನಿನ್ನೆ ದೆಹಲಿಯಲ್ಲಿದ್ದ ಕೇಂದ್ರ ಸಚಿವ ಸೋಮಣ್ಣರಿಂದ ಇಂದು ಬೆಂಗಳೂರಲ್ಲಿ ಸಭೆ
ದೈವ ಕ್ಷೇತ್ರದಲ್ಲಿ ಪವಾಡ; ಆಫ್ ಮಾಡಿದ್ದರೂ ತನ್ನಂತಾನೆ ಚಲಿಸಿದ ಆಟೋ
ದೈವ ಕ್ಷೇತ್ರದಲ್ಲಿ ಪವಾಡ; ಆಫ್ ಮಾಡಿದ್ದರೂ ತನ್ನಂತಾನೆ ಚಲಿಸಿದ ಆಟೋ
ಸಿಎಂ/ಡಿಸಿಎಂ ಅಗಬೇಕೆನ್ನುವವರು ಮತ್ತೊಮ್ಮೆ ಚುನಾವಣೆ ಎದುರಿಸಲಿ:ಡಿಕೆ ಸುರೇಶ್
ಸಿಎಂ/ಡಿಸಿಎಂ ಅಗಬೇಕೆನ್ನುವವರು ಮತ್ತೊಮ್ಮೆ ಚುನಾವಣೆ ಎದುರಿಸಲಿ:ಡಿಕೆ ಸುರೇಶ್
ಶಿವಕುಮಾರ್ ಸಿಎಂ ಆಗಬೇಕು ಎಂದಷ್ಟೇ ಹೇಳಿದ್ದು: ಚಂದ್ರಶೇಖರನಾಥ ಸ್ವಾಮೀಜಿ
ಶಿವಕುಮಾರ್ ಸಿಎಂ ಆಗಬೇಕು ಎಂದಷ್ಟೇ ಹೇಳಿದ್ದು: ಚಂದ್ರಶೇಖರನಾಥ ಸ್ವಾಮೀಜಿ
ಸೋಲಿಗೆ ಮಾಧ್ಯಮಗಳ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ ಡಿಕೆ ಸುರೇಶ್
ಸೋಲಿಗೆ ಮಾಧ್ಯಮಗಳ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ ಡಿಕೆ ಸುರೇಶ್
ಹಣವನ್ನು ಗಾಳಿಯಲ್ಲಿ ತೂರಿ ಹುಟ್ಟುಹಬ್ಬ ಆಚರಿಸಿಕೊಂಡ ಹುಬ್ಬಳ್ಳಿಯ ಯುವಕ
ಹಣವನ್ನು ಗಾಳಿಯಲ್ಲಿ ತೂರಿ ಹುಟ್ಟುಹಬ್ಬ ಆಚರಿಸಿಕೊಂಡ ಹುಬ್ಬಳ್ಳಿಯ ಯುವಕ
ಯುವಕರ ನೆಚ್ಚಿನ ಸ್ಟೈಲಿಶ್ ಕ್ಯಾಸಿಯೋ G Shock ಸ್ಮಾರ್ಟ್​ವಾಚ್ ಬಿಡುಗಡೆ
ಯುವಕರ ನೆಚ್ಚಿನ ಸ್ಟೈಲಿಶ್ ಕ್ಯಾಸಿಯೋ G Shock ಸ್ಮಾರ್ಟ್​ವಾಚ್ ಬಿಡುಗಡೆ