AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RR vs RCB: ಔಟಾದ ಕೋಪದಲ್ಲಿ ಮೈದಾನ ತೊರೆಯುವಾಗ ಯಶಸ್ವಿ ಜೈಸ್ವಾಲ್ ಏನೆಲ್ಲ ಅವಾಂತರ ಮಾಡಿದರು ನೋಡಿ

Yashasvi Jaiswal Angry: ಯಶಸ್ವಿ ಜೈಸ್ವಾಲ್ ಆರ್​ಸಿಬಿ ವಿರುದ್ಧದ ಐಪಿಎಲ್ 2024ರ ಎಲಿಮಿನೇಟರ್ ಪಂದ್ಯದಲ್ಲಿ 10 ನೇ ಓವರ್‌ನ ಎರಡನೇ ಎಸೆತದಲ್ಲಿ ಕ್ಯಾಮರೂನ್ ಗ್ರೀನ್ ಬೌಲಿಂಗ್​ನಲ್ಲಿ ಔಟಾದರು. ಸ್ವೀಪ್ ಶಾಟ್ ಆಡುವ ಪ್ರಯತ್ನದಲ್ಲಿ ವಿಕೆಟ್ ಹಿಂದೆ ದಿನೇಶ್ ಕಾರ್ತಿಕ್​ಗೆ ಕ್ಯಾಚ್ ನೀಡಿ ನಿರ್ಗಮಿಸಿದರು. ಔಟಾದ ಸಂದರ್ಭ ಜೈಸ್ವಾಲ್ ಏನು ಮಾಡಿದರು ನೋಡಿ.

RR vs RCB: ಔಟಾದ ಕೋಪದಲ್ಲಿ ಮೈದಾನ ತೊರೆಯುವಾಗ ಯಶಸ್ವಿ ಜೈಸ್ವಾಲ್ ಏನೆಲ್ಲ ಅವಾಂತರ ಮಾಡಿದರು ನೋಡಿ
Yashasvi Jaiswal Angry
Vinay Bhat
|

Updated on: May 23, 2024 | 10:08 AM

Share

ಬುಧವಾರ (ಮೇ 22) ಅಹ್ಮದಾಬಾದ್​ನಲ್ಲಿ ನಡೆದ ಐಪಿಎಲ್ 2024 ರ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ (RCB vs RR) ಪರ ಯಶಸ್ವಿ ಜೈಸ್ವಾಲ್ ಅವರು 30 ಎಸೆತಗಳಲ್ಲಿ 45 ರನ್ ಗಳಿಸುವ ಮೂಲಕ ಸಂಜು ಸ್ಯಾಮ್ಸನ್ ನೇತೃತ್ವದ ತಂಡ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದರು. ಜೊತೆಗೆ ಗರಿಷ್ಠ ಸ್ಕೋರರ್ ಎನಿಸಿಕೊಂಡರು. 22ರ ಹರೆಯದ ಎಡಗೈ ಬ್ಯಾಟರ್ ಎಂಟು ಬೌಂಡರಿ ಸಿಡಿಸಿವುದರ ಜೊತೆಗೆ ಟಾಮ್ ಕೊಹ್ಲರ್-ಕ್ಯಾಡ್ಮೋರ್ (20) ಅವರೊಂದಿಗೆ ಮೊದಲ ವಿಕೆಟ್‌ಗೆ 46 ರನ್ ಮತ್ತು ಸಂಜು ಸ್ಯಾಮ್ಸನ್ (17) ಜೊತೆ ಎರಡನೇ ವಿಕೆಟ್‌ಗೆ 35 ರನ್ ಸೇರಿಸಿದರು.

2024 ರ ಟಿ 20 ವಿಶ್ವಕಪ್‌ನಲ್ಲಿ ಭಾರತ ತಂಡದ ಪರ ಸ್ಥಾನ ಪಡೆದುಕೊಂಡಿರುವ ಜೈಸ್ವಾಲ್, 10 ನೇ ಓವರ್‌ನ ಎರಡನೇ ಎಸೆತದಲ್ಲಿ ಕ್ಯಾಮರೂನ್ ಗ್ರೀನ್ ಬೌಲಿಂಗ್​ನಲ್ಲಿ ಔಟಾದರು. ಸ್ವೀಪ್ ಶಾಟ್ ಆಡುವ ಪ್ರಯತ್ನದಲ್ಲಿ ವಿಕೆಟ್ ಹಿಂದೆ ದಿನೇಶ್ ಕಾರ್ತಿಕ್​ಗೆ ಕ್ಯಾಚ್ ನೀಡಿ ನಿರ್ಗಮಿಸಿದರು. ಈ ವರ್ಷ ಆಡಿದ 15 ಪಂದ್ಯಗಳಲ್ಲಿ 393 ರನ್ ಗಳಿಸಿರುವ ಎಡಗೈ ಬ್ಯಾಟರ್, ಔಟಾದ ನಂತರ, ಪೆವಿಲಿಯನ್‌ಗೆ ಹಿಂದಿರುಗುವಾಗ ತಾಳ್ಮೆ ಕಳೆದುಕೊಂಡರು. ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಸೈಡ್ ರೇಲಿಂಗ್‌ಗೆ ಬಡಿದು ಕೋಪದಲ್ಲಿ ಡ್ರೆಸ್ಸಿಂಗ್ ರೂಮ್​ಗೆ ತೆರಳುವುದು ಕಂಡುಬಂತು.

ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ಟ್ರೋಲ್ ಆದ ಆರ್​ಸಿಬಿ: ಇಲ್ಲಿದೆ ಎಕ್ಸ್ ರಿಯಾಕ್ಷನ್

ಯಶಸ್ವಿ ಜೈಸ್ವಾಲ್ ಕೋಪದ ಪ್ರತಿಕ್ರಿಯೆಯ ವಿಡಿಯೋ ಇಲ್ಲಿದೆ:

ಐಪಿಎಲ್ 2023 ರಲ್ಲಿ 14 ಪಂದ್ಯಗಳಲ್ಲಿ 625 ರನ್ ಗಳಿಸುವ ಮೂಲಕ ಆರ್‌ಆರ್‌ಗಾಗಿ ಗರಿಷ್ಠ ಸ್ಕೋರ್ ಮಾಡಿದ ಜೈಸ್ವಾಲ್, ಈ ವರ್ಷ ಸ್ಥಿರ ಪ್ರದರ್ಶನ ನೀಡಲು ವಿಫಲರಾಗಿದ್ದಾರೆ. ಅವರು ಮುಂಬೈ ಇಂಡಿಯನ್ಸ್ ವಿರುದ್ಧ ಅಜೇಯ ಶತಕ ಮತ್ತು ಮೇ 2 ರಂದು ಹೈದರಾಬಾದ್ ವಿರುದ್ಧ 67 ರನ್ ಗಳಿಸಿದ್ದರು, ಅದನ್ನು ಹೊರತುಪಡಿಸಿ, ಹೆಚ್ಚಿನ ಪಂದ್ಯಗಳಲ್ಲಿ ಮಿಂಚಲು ವಿಫಲರಾಗಿದ್ದಾರೆ.

ಪೋಸ್ಟ್ ಮ್ಯಾಚ್​ನಲ್ಲಿ ಆರ್​ಸಿಬಿ ಸೋಲಿಗೆ ನಾಯಕ ಡುಪ್ಲೆಸಿಸ್ ದೂರಿದ್ದು ಯಾರನ್ನ?

ರಾಜಸ್ಥಾನಕ್ಕೆ 4 ವಿಕೆಟ್‌ಗಳ ಜಯ

ಬುಧವಾರ ನಡೆದ ಐಪಿಎಲ್ 2024 ರ ಎಲಿಮಿನೇಟರ್ ಪಂದ್ಯದಲ್ಲಿ ಆರ್‌ಆರ್ ಆರ್‌ಸಿಬಿಯನ್ನು ನಾಲ್ಕು ವಿಕೆಟ್‌ಗಳಿಂದ ಸೋಲಿಸಿತು. ಚೊಚ್ಚಲ ಆವೃತ್ತಿಯ ವಿಜೇತರು 173 ರನ್‌ಗಳ ಗುರಿಯನ್ನು 19 ಓವರ್‌ಗಳಲ್ಲಿ ಆರು ವಿಕೆಟ್‌ಗಳ ನಷ್ಟಕ್ಕೆ ಬೆನ್ನಟ್ಟಿದರು. ವೆಸ್ಟ್ ಇಂಡೀಸ್ ಟಿ20I ನಾಯಕ ರೋವ್‌ಮನ್ ಪೊವೆಲ್ ಅಂತಿಮ ಹಂತದಲ್ಲಿ ಬ್ಯಾಟಿಂಗ್​ಗೆ ಬಂದು ತಂಡಕ್ಕೆ ಜಯ ತಂದುಕೊಟ್ಟರು. ಆರ್​ಸಿಬಿಗೆ ಸೋಲುಣಿಸಿ ರಾಜಸ್ಥಾನ್ ತಂಡ 2ನೇ ಕ್ವಾಲಿಫೈಯರ್​ಗೆ ಅರ್ಹತೆ ಪಡೆದುಕೊಂಡಿದೆ. ಮೇ 24 ರಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯದಲ್ಲಿ ಹೈದರಾಬಾದ್ ಅನ್ನು ಎದುರಿಸಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು