IND vs ZIM: ಟೀಂ ಇಂಡಿಯಾಗೆ ಬಂತು ಆನೆ ಬಲ; ತಂಡ ಸೇರಿಕೊಂಡ ಮೂವರು ಸ್ಟಾರ್ ಬ್ಯಾಟರ್ಸ್

IND vs ZIM: ಮೂರನೇ ಟಿ20 ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಕ್ಕೆ ಇನ್ನಷ್ಟು ಬಲ ಬಂದಿದ್ದು, ಟಿ20 ವಿಶ್ವಕಪ್​ ಚಾಂಪಿಯನ್ ತಂಡದ ಸದಸ್ಯರಾಗಿದ್ದ ಶಿವಂ ದುಬೆ, ಸಂಜು ಸ್ಯಾಮ್ಸನ್ ಮತ್ತು ಯಶಸ್ವಿ ಜೈಸ್ವಾಲ್ ಇದೀಗ ಜಿಂಬಾಬ್ವೆಯಲ್ಲಿ ಟೀಂ ಇಂಡಿಯಾವನ್ನು ಸೇರಿಕೊಂಡಿದ್ದಾರೆ. ಹೀಗಾಗಿ ಮುಂದಿನ ಪಂದ್ಯಕ್ಕೆ ಪ್ಲೇಯಿಂಗ್ 11 ಆಯ್ಕೆ ಮಾಡುವುದು ನಾಯಕ ಹಾಗೂ ಕೋಚ್​ಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

IND vs ZIM: ಟೀಂ ಇಂಡಿಯಾಗೆ ಬಂತು ಆನೆ ಬಲ; ತಂಡ ಸೇರಿಕೊಂಡ ಮೂವರು ಸ್ಟಾರ್ ಬ್ಯಾಟರ್ಸ್
ಟೀಂ ಇಂಡಿಯಾ
Follow us
|

Updated on: Jul 08, 2024 | 5:32 PM

ಭಾರತ ಮತ್ತು ಜಿಂಬಾಬ್ವೆ ನಡುವೆ 5 ಪಂದ್ಯಗಳ ಟಿ20 ಕ್ರಿಕೆಟ್ ಸರಣಿ ನಡೆಯುತ್ತಿದೆ. ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ ಜಿಂಬಾಬ್ವೆ ವಿರುದ್ಧ ಹೀನಾಯ ಸೋಲು ಎದುರಿಸಬೇಕಾಯಿತು. ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಕಮ್ ಬ್ಯಾಕ್ ಮಾಡಿ 100 ರನ್​ಗಳ ಅಂತರದಿಂದ ಜಿಂಬಾಬ್ವೆ ತಂಡವನ್ನು ಸೋಲಿಸಿತು. ಈ ಪಂದ್ಯದಲ್ಲಿ ಭಾರತ ತಂಡದ ಬ್ಯಾಟ್ಸ್‌ಮನ್‌ಗಳು ಅದ್ಭುತ ಪ್ರದರ್ಶನ ನೀಡಿದ್ದರು. ಇದೀಗ ಮೂರನೇ ಟಿ20 ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಕ್ಕೆ ಇನ್ನಷ್ಟು ಬಲ ಬಂದಿದ್ದು, ಟಿ20 ವಿಶ್ವಕಪ್​ ಚಾಂಪಿಯನ್ ತಂಡದ ಸದಸ್ಯರಾಗಿದ್ದ ಶಿವಂ ದುಬೆ, ಸಂಜು ಸ್ಯಾಮ್ಸನ್ ಮತ್ತು ಯಶಸ್ವಿ ಜೈಸ್ವಾಲ್ ಇದೀಗ ಜಿಂಬಾಬ್ವೆಯಲ್ಲಿ ಟೀಂ ಇಂಡಿಯಾವನ್ನು ಸೇರಿಕೊಂಡಿದ್ದಾರೆ. ಹೀಗಾಗಿ ಮುಂದಿನ ಪಂದ್ಯಕ್ಕೆ ಪ್ಲೇಯಿಂಗ್ 11 ಆಯ್ಕೆ ಮಾಡುವುದು ನಾಯಕ ಹಾಗೂ ಕೋಚ್​ಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ಮೂವರೂ ಅನುಭವಿಗಳು

ಟೀಂ ಇಂಡಿಯಾ ಸರಣಿಯ ಮೊದಲ ಪಂದ್ಯದಲ್ಲಿಯೇ ನಾಚಿಕೆಗೇಡಿನ ಸೋಲನ್ನು ಎದುರಿಸಬೇಕಾಯಿತು. ಆದರೆ, ಎರಡನೇ ಪಂದ್ಯದಲ್ಲಿ ತಂಡ ಅದ್ಭುತ ಜಯ ದಾಖಲಿಸಿತು. ಆದರೆ ಟೀಂ ಇಂಡಿಯಾ ಈಗ ಯಾವುದೇ ಸಂದರ್ಭದಲ್ಲೂ ರಿಸ್ಕ್ ತೆಗೆದುಕೊಳ್ಳುವ ಸ್ಥಿತಿಯಲ್ಲಿಲ್ಲ. ಅನುಭವಿ ಬ್ಯಾಟ್ಸ್‌ಮನ್‌ಗಳಾದ ಸಂಜು ಸ್ಯಾಮ್ಸನ್, ಯಶಸ್ವಿ ಜೈಸ್ವಾಲ್ ಮತ್ತು ಶಿವಂ ದುಬೆ ಅವರನ್ನು ಪ್ಲೇಯಿಂಗ್-11 ರಲ್ಲಿ ಸೇರಿಸುವುದು ತಂಡದ ನಾಯಕ ಮತ್ತು ಕೋಚ್ ಮುಂದಿರುವ ಸವಾಲು. ಏಕೆಂದರೆ ಮೊದಲ ಪಂದ್ಯದಲ್ಲಿ ತಂಡದ ಸೋಲಿಗೆ ಆಟಗಾರರ ಅನುಭವದ ಕೊರತೆಯೇ ದೊಡ್ಡ ಕಾರಣ. ಆತುರದಿಂದಾಗಿ ತಂಡಕ್ಕೆ ಅತ್ಯಂತ ಸರಳ ಗುರಿ ಸಾಧಿಸಲು ಸಾಧ್ಯವಾಗಲಿಲ್ಲ.

ಯಾರಿಗೆ ಗೇಟ್​ಪಾಸ್?

ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಪರ ಪದಾರ್ಪಣೆ ಮಾಡಿದ್ದ ರಿಯಾನ್ ಪರಾಗ್ ಮತ್ತು ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಧ್ರುವ್ ಜುರೆಲ್ ಅವರನ್ನು ತಂಡದಿಂದ ಹೊರಗಿಡಬಹುದು. ಮೊದಲ ಪಂದ್ಯದಲ್ಲಿ ಉಭಯ ಆಟಗಾರರ ಪ್ರದರ್ಶನ ಕಳಪೆಯಾಗಿತ್ತು. ಹೀಗಾಗಿ ರಿಯಾನ್ ಪರಾಗ್ ಬದಲಿಗೆ ಯಶಸ್ವಿ ಜೈಸ್ವಾಲ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಬಹುದು. ಯಶಸ್ವಿ ಜೈಸ್ವಾಲ್ ಅವರನ್ನೂ ಟೀಂ ಇಂಡಿಯಾದ ಟಿ20 ವಿಶ್ವಕಪ್ ತಂಡದಲ್ಲಿ ಸೇರಿಸಲಾಗಿತ್ತು ಆದರೆ ಅವರಿಗೆ ಆಡುವ ಅವಕಾಶ ಸಿಕ್ಕಿರಲಿಲ್ಲ.

ಅದೇ ಸಮಯದಲ್ಲಿ, ಧ್ರುವ್ ಜುರೆಲ್ ಬದಲಿಗೆ ಸಂಜು ಸ್ಯಾಮ್ಸನ್ ಅವರನ್ನು ತಂಡಕ್ಕೆ ಸೇರಿಸುವುದು ಬಹುತೇಕ ಖಚಿತವೆಂದು ಪರಿಗಣಿಸಲಾಗಿದೆ. ಮೊದಲ ಪಂದ್ಯದಲ್ಲಿ ಧ್ರುವ್ ಜುರೆಲ್ ಭಾರತದ ಪರ ಕಠಿಣ ಪರಿಸ್ಥಿತಿಯಲ್ಲೂ 14 ಎಸೆತಗಳಲ್ಲಿ ಕೇವಲ 6 ರನ್ ಬಾರಿಸಿ ತಂಡದ ಒತ್ತಡ ಹೆಚ್ಚಿಸಿದರು. ಹೀಗಾಗಿ ಸಂಜು ಸ್ಯಾಮ್ಸನ್ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ಆಗಿ ತಂಡವನ್ನು ಸೇರಿಕೊಳ್ಳಬಹುದು.

ಶಿವಂ ದುಬೆಗೂ ಅವಕಾಶ

ಟೀಂ ಇಂಡಿಯಾವನ್ನು ಟಿ20 ಕ್ರಿಕೆಟ್‌ನ ವಿಶ್ವ ಚಾಂಪಿಯನ್ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಶಿವಂ ದುಬೆ ಅವರನ್ನು ಜಿಂಬಾಬ್ವೆ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಪ್ಲೇಯಿಂಗ್-11 ರಲ್ಲಿ ಸೇರಿಸಿಕೊಳ್ಳಬಹುದು. 2024 ರ ಟಿ20 ವಿಶ್ವಕಪ್‌ನಲ್ಲಿ ಶಿವಂ ದುಬೆ ಭಾರತದ ಪರ ಒಟ್ಟು 8 ಪಂದ್ಯಗಳನ್ನು ಆಡಿದ್ದು, 133 ರನ್ ಬಾರಿಸಿದ್ದರು. ಶಿವಂ ದುಬೆ ಇಡೀ ವಿಶ್ವಕಪ್‌ನಲ್ಲಿ ಹೇಳಿಕೊಳ್ಳುವಂತಹ ಪ್ರದರ್ಶನ ನೀಡದಿದ್ದರೂ,ದಕ್ಷಿಣ ಆಫ್ರಿಕಾ ವಿರುದ್ಧದ ಫೈನಲ್ ಪಂದ್ಯದಲ್ಲಿ ಅವರು 16 ಎಸೆತಗಳಲ್ಲಿ 27 ರನ್‌ಗಳ ಪ್ರಮುಖ ಇನ್ನಿಂಗ್ಸ್ ಆಡಿದರು ಮತ್ತು ತಂಡವನ್ನು ಚಾಂಪಿಯನ್ ಮಾಡುವಲ್ಲಿ ದೊಡ್ಡ ಪಾತ್ರವನ್ನು ವಹಿಸಿದರು.

ಜಿಂಬಾಬ್ವೆ ವಿರುದ್ಧದ ಮೂರನೇ ಪಂದ್ಯದಲ್ಲಿ ವಾಷಿಂಗ್ಟನ್ ಸುಂದರ್ ಬದಲಿಗೆ ಶಿವಂ ದುಬೆ ಅವರನ್ನು ಪ್ಲೇಯಿಂಗ್-11 ರಲ್ಲಿ ಸೇರಿಸಿಕೊಳ್ಳಬಹುದು. ವಾಷಿಂಗ್ಟನ್ ಸುಂದರ್ ಮೊದಲ ಪಂದ್ಯದಲ್ಲಿ 34 ಎಸೆತಗಳಲ್ಲಿ 27 ರನ್ ಬಾರಿಸಿದರು. ಆದರೆ ತಂಡವನ್ನು ಗೆಲುವಿನತ್ತ ಕೊಂಡೊಯ್ಯಲು ಸಾಧ್ಯವಾಗಲಿಲ್ಲ. ವಾಷಿಂಗ್ಟನ್ ಸುಂದರ್ ಖಂಡಿತವಾಗಿಯೂ ಬೌಲಿಂಗ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದರೂ, ಶಿವಂ ದುಬೆಗೆ ಅವಕಾಶ ನೀಡಲು ವಾಷಿಂಗ್ಟನ್ ಸುಂದರ್ ಅವರನ್ನು ಮೂರನೇ ಪಂದ್ಯದಲ್ಲಿ ಕೈಬಿಡಬಹುದು.

ಮೂರನೇ ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ: ಶುಭ್​ಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಅಭಿಷೇಕ್ ಶರ್ಮಾ, ರುತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರಿಂಕು ಸಿಂಗ್, ಶಿವಂ ದುಬೆ, ಸಾಯಿ ಸುದರ್ಶನ್, ರವಿ ಬಿಷ್ಣೋಯ್, ಅವೇಶ್ ಖಾನ್ ಮತ್ತು ಮುಖೇಶ್ ಕುಮಾರ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು