AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yashpal Sharma Death: 1983ರ ವಿಶ್ವಕಪ್ ಗೆಲುವಿನ ತಂಡದಲ್ಲಿದ್ದ ಸ್ಟಾರ್ ಪ್ಲೇಯರ್ ಹೃದಯಾಘಾತದಿಂದ ನಿಧನ

66 ವರ್ಷದ ಪಂಜಾಬ್ ಕ್ರಿಕೆಟರ್ ಯಶ್​ಪಾಲ್ ದಿಢೀರ್ ನಿಧನಕ್ಕೆ ಕ್ರಿಕೆಟ್ ಲೋಕ ಸಂತಾಪ ಸೂಚಿಸಿದೆ.

Yashpal Sharma Death: 1983ರ ವಿಶ್ವಕಪ್ ಗೆಲುವಿನ ತಂಡದಲ್ಲಿದ್ದ ಸ್ಟಾರ್ ಪ್ಲೇಯರ್ ಹೃದಯಾಘಾತದಿಂದ ನಿಧನ
Yashpal Sharma
TV9 Web
| Edited By: |

Updated on:Jul 13, 2021 | 11:46 AM

Share

BREAKING: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ 1983ರ ವಿಶ್ವಕಪ್ ಗೆಲುವಿನ ತಂಡದಲ್ಲಿದ್ದ ಯಶ್​ಪಾಲ್ ಶರ್ಮಾ ನಿಧನರಾಗಿದ್ದಾರೆ. ಮಂಗಳವಾರ ಬೆಳಗಿನ ಜಾವ ಇವರಿಗೆ ಹೃದಯಾಘಾತವಾಗಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. 70, 80ರ ದಶಕತದಲ್ಲಿ ಭಾರತ ಕ್ರಿಕೆಟ್ ತಂಡಕ್ಕೆ ಇವರು ಸಾಕಷ್ಟು ಕೊಡುಗಡೆ ನೀಡಿದ್ದರು. ಅಲ್ಲದೆ 1983ರ ವಿಶ್ವಕಪ್​ನಲ್ಲಿ ಇವರು ಪ್ರಮುಖ ಪಾತ್ರವಹಿಸಿದ್ದರು. 66 ವರ್ಷದ ಪಂಜಾಬ್ ಕ್ರಿಕೆಟರ್ ಯಶ್​ಪಾಲ್ ದಿಢೀರ್ ನಿಧನಕ್ಕೆ ಕ್ರಿಕೆಟ್ ಲೋಕ ಸಂತಾಪ ಸೂಚಿಸಿದೆ.

ಭಾರತ ತಂಡದಲ್ಲಿ ಇವರು ಮಧ್ಯಮ ಕ್ರಮಾಂಕದ ಬ್ಯಾಟ್ಸ್​ಮನ್ ಆಗಿ ಗುರಿತಿಸಿಕೊಂಡಿದ್ದರು. ಭಾರತ ಪರ 37 ಏಕದಿನ ಮತ್ತು 42 ಟೆಸ್ಟ್​ ಪಂದ್ಯಗಳಲ್ಲಿ ಯಶ್​ಪಾಲ್ ಕಣಕ್ಕಿಳಿದಿದ್ದರು. ಕೆಲ ಸಮಯ ರಾಷ್ಟ್ರೀಯ ತಂಡದ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದರು. ಟೆಸ್ಟ್​ನಲ್ಲಿ ಇವರು 2 ಶತಕ, 9 ಅರ್ಧಶತಕ ಬಾರಿಸಿ 1606 ರನ್ ಗಳಿಸಿದ್ದಾರೆ. ಏಕದಿನ ಕ್ರಿಕೆಟ್​ನಲ್ಲಿ 4 ಅರ್ಧಶತಕ ಸಹಿತ 883 ರನ್ ಬಾರಿಸಿದ್ದರು. 1979 ರಲ್ಲಿ ಇಂಗ್ಲೆಂಡ್ ವಿರುದ್ಧ ಲಾರ್ಡ್​ ಕ್ರೀಡಾಂಗಣದಲ್ಲಿ ಯಶ್​ಪಾಲ್ ಅವರು ಭಾರತ ಟಸ್ಟ್ ತಂಡಕ್ಕೆ ಪದಾರ್ಪಣೆ ಮಾಡಿದ್ದರು.

ರಣಜಿಯಲ್ಲಿ ಇವರು ಒಟ್ಟು 160 ಪಂದ್ಯಗಳನ್ನು ಆಡಿದ್ದಾರೆ. 21 ಶತಕದ ಜೊತೆ 8,933 ರನ್ ಬಾರಿಸಿದ್ದು ಅಜೇಯ 201 ರನ್ ಯಶ್​ಪಾಲ್ ಅವರ ಗರಿಷ್ಠ ಸ್ಕೋರ್ ಆಗಿದೆ.

Published On - 11:13 am, Tue, 13 July 21

Follow Us
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ