AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yashpal Sharma Death: 1983ರ ವಿಶ್ವಕಪ್ ಗೆಲುವಿನ ತಂಡದಲ್ಲಿದ್ದ ಸ್ಟಾರ್ ಪ್ಲೇಯರ್ ಹೃದಯಾಘಾತದಿಂದ ನಿಧನ

66 ವರ್ಷದ ಪಂಜಾಬ್ ಕ್ರಿಕೆಟರ್ ಯಶ್​ಪಾಲ್ ದಿಢೀರ್ ನಿಧನಕ್ಕೆ ಕ್ರಿಕೆಟ್ ಲೋಕ ಸಂತಾಪ ಸೂಚಿಸಿದೆ.

Yashpal Sharma Death: 1983ರ ವಿಶ್ವಕಪ್ ಗೆಲುವಿನ ತಂಡದಲ್ಲಿದ್ದ ಸ್ಟಾರ್ ಪ್ಲೇಯರ್ ಹೃದಯಾಘಾತದಿಂದ ನಿಧನ
Yashpal Sharma
TV9 Web
| Edited By: |

Updated on:Jul 13, 2021 | 11:46 AM

Share

BREAKING: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ 1983ರ ವಿಶ್ವಕಪ್ ಗೆಲುವಿನ ತಂಡದಲ್ಲಿದ್ದ ಯಶ್​ಪಾಲ್ ಶರ್ಮಾ ನಿಧನರಾಗಿದ್ದಾರೆ. ಮಂಗಳವಾರ ಬೆಳಗಿನ ಜಾವ ಇವರಿಗೆ ಹೃದಯಾಘಾತವಾಗಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. 70, 80ರ ದಶಕತದಲ್ಲಿ ಭಾರತ ಕ್ರಿಕೆಟ್ ತಂಡಕ್ಕೆ ಇವರು ಸಾಕಷ್ಟು ಕೊಡುಗಡೆ ನೀಡಿದ್ದರು. ಅಲ್ಲದೆ 1983ರ ವಿಶ್ವಕಪ್​ನಲ್ಲಿ ಇವರು ಪ್ರಮುಖ ಪಾತ್ರವಹಿಸಿದ್ದರು. 66 ವರ್ಷದ ಪಂಜಾಬ್ ಕ್ರಿಕೆಟರ್ ಯಶ್​ಪಾಲ್ ದಿಢೀರ್ ನಿಧನಕ್ಕೆ ಕ್ರಿಕೆಟ್ ಲೋಕ ಸಂತಾಪ ಸೂಚಿಸಿದೆ.

ಭಾರತ ತಂಡದಲ್ಲಿ ಇವರು ಮಧ್ಯಮ ಕ್ರಮಾಂಕದ ಬ್ಯಾಟ್ಸ್​ಮನ್ ಆಗಿ ಗುರಿತಿಸಿಕೊಂಡಿದ್ದರು. ಭಾರತ ಪರ 37 ಏಕದಿನ ಮತ್ತು 42 ಟೆಸ್ಟ್​ ಪಂದ್ಯಗಳಲ್ಲಿ ಯಶ್​ಪಾಲ್ ಕಣಕ್ಕಿಳಿದಿದ್ದರು. ಕೆಲ ಸಮಯ ರಾಷ್ಟ್ರೀಯ ತಂಡದ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದರು. ಟೆಸ್ಟ್​ನಲ್ಲಿ ಇವರು 2 ಶತಕ, 9 ಅರ್ಧಶತಕ ಬಾರಿಸಿ 1606 ರನ್ ಗಳಿಸಿದ್ದಾರೆ. ಏಕದಿನ ಕ್ರಿಕೆಟ್​ನಲ್ಲಿ 4 ಅರ್ಧಶತಕ ಸಹಿತ 883 ರನ್ ಬಾರಿಸಿದ್ದರು. 1979 ರಲ್ಲಿ ಇಂಗ್ಲೆಂಡ್ ವಿರುದ್ಧ ಲಾರ್ಡ್​ ಕ್ರೀಡಾಂಗಣದಲ್ಲಿ ಯಶ್​ಪಾಲ್ ಅವರು ಭಾರತ ಟಸ್ಟ್ ತಂಡಕ್ಕೆ ಪದಾರ್ಪಣೆ ಮಾಡಿದ್ದರು.

ರಣಜಿಯಲ್ಲಿ ಇವರು ಒಟ್ಟು 160 ಪಂದ್ಯಗಳನ್ನು ಆಡಿದ್ದಾರೆ. 21 ಶತಕದ ಜೊತೆ 8,933 ರನ್ ಬಾರಿಸಿದ್ದು ಅಜೇಯ 201 ರನ್ ಯಶ್​ಪಾಲ್ ಅವರ ಗರಿಷ್ಠ ಸ್ಕೋರ್ ಆಗಿದೆ.

Published On - 11:13 am, Tue, 13 July 21

ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ
ಟಿಎಂಸಿ ಗೂಂಡಾಗಳಿಗೇ ಹೆದರಿಲ್ಲ ಇಲ್ಯಾವ ಲೆಕ್ಕ: ತೇಜಸ್ವಿ ಸೂರ್ಯ ಆಕ್ರೋಶ
ಟಿಎಂಸಿ ಗೂಂಡಾಗಳಿಗೇ ಹೆದರಿಲ್ಲ ಇಲ್ಯಾವ ಲೆಕ್ಕ: ತೇಜಸ್ವಿ ಸೂರ್ಯ ಆಕ್ರೋಶ
ಕಾಂಗ್ರೆಸ್ ಸರ್ಕಾರ ಖಾಲಿ ಸರ್ಕಾರ ಎಂದು ಬರೆದಿರುವ ಟ್ರಂಕ್ ಹಿಡಿದ ತೇಜಸ್ವಿ !
ಕಾಂಗ್ರೆಸ್ ಸರ್ಕಾರ ಖಾಲಿ ಸರ್ಕಾರ ಎಂದು ಬರೆದಿರುವ ಟ್ರಂಕ್ ಹಿಡಿದ ತೇಜಸ್ವಿ !
ತಮಿಳುನಾಡಲ್ಲಿ ಕರ್ನಾಟಕ ಧ್ವಜ ಎತ್ತಿ ಹಿಡಿದ ಬಗ್ಗೆ ಸುದೀಪ್ ಮಾತು
ತಮಿಳುನಾಡಲ್ಲಿ ಕರ್ನಾಟಕ ಧ್ವಜ ಎತ್ತಿ ಹಿಡಿದ ಬಗ್ಗೆ ಸುದೀಪ್ ಮಾತು