AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Year Ender 2024: ಟೀಂ ಇಂಡಿಯಾದ 11 ವರ್ಷಗಳ ಐಸಿಸಿ ಟ್ರೋಫಿ ಬರ ನೀಗಿಸಿದ ವರ್ಷವಿದು

Year Ender 2024: ಭಾರತ ಕ್ರಿಕೆಟ್​ಗೆ 2024 ಬಹಳ ವಿಶೇಷವಾಗಿತ್ತು. ಈ ವರ್ಷ ಟೀಂ ಇಂಡಿಯಾ ಹಲವು ಮೈಲಿಗಲ್ಲುಗಳನ್ನು ಸಾಧಿಸಿತು. ಅದರಲ್ಲೂ ಈ ವರ್ಷ ನಡೆದ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡ ಅದ್ಭುತ ಪ್ರದರ್ಶನ ನೀಡಿ ಚಾಂಪಿಯನ್ ಆಯಿತು. 11 ವರ್ಷಗಳ ಬಳಿಕ ಐಸಿಸಿ ಟ್ರೋಫಿ ಗೆದ್ದ ಭಾರತ, ಒಂದೇ ಪಂದ್ಯವನ್ನೂ ಸೋಲದೆ ಫೈನಲ್‌ ತಲುಪಿ ದಕ್ಷಿಣ ಆಫ್ರಿಕಾವನ್ನು 7 ರನ್‌ಗಳಿಂದ ಮಣಿಸಿತು. ರೋಹಿತ್ ಶರ್ಮಾ ನಾಯಕತ್ವದ ತಂಡದ ಗೆಲುವು ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಸ್ಮರಣೀಯವಾಗಿದೆ.

Year Ender 2024: ಟೀಂ ಇಂಡಿಯಾದ 11 ವರ್ಷಗಳ ಐಸಿಸಿ ಟ್ರೋಫಿ ಬರ ನೀಗಿಸಿದ ವರ್ಷವಿದು
ಟೀಂ ಇಂಡಿಯಾ
ಪೃಥ್ವಿಶಂಕರ
|

Updated on:Dec 14, 2024 | 6:18 PM

Share

ಭಾರತ ಕ್ರಿಕೆಟ್​ಗೆ 2024 ಬಹಳ ವಿಶೇಷವಾಗಿತ್ತು. ಈ ವರ್ಷ ಟೀಂ ಇಂಡಿಯಾ ಹಲವು ಮೈಲಿಗಲ್ಲುಗಳನ್ನು ಸಾಧಿಸಿತು. ಅದರಲ್ಲಿ ಪ್ರಮುಖವಾಗಿ ಬರೋಬ್ಬರಿ 11 ವರ್ಷಗಳ ನಂತರ ಟೀಂ ಇಂಡಿಯಾ ತನ್ನ ಐಸಿಸಿ ಟ್ರೋಫಿಯ ಬರವನ್ನು ನೀಗಿಸಿಕೊಂಡಿತ್ತು. ಅಮೆರಿಕ ಹಾಗೂ ವೆಸ್ಟ್ ಇಂಡೀಸ್ ಆತಿಥ್ಯದಲ್ಲಿ ನಡೆದಿದ್ದ ಈ ಬಾರಿಯ ಟಿ20 ವಿಶ್ವಕಪ್​ ಟೀಂ ಇಂಡಿಯಾದ ಕೈಸೇರಿತ್ತು. ವೆಸ್ಟ್ ಇಂಡೀಸ್​ನ ಕೆನ್ಸಿಂಗ್ಟನ್ ಓವಲ್ ಬಾರ್ಬಡೋಸ್ ಕ್ರಿಕೆಟ್ ಮೈದಾನದಲ್ಲಿ ನಡೆದಿದ್ದ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಎದುರಿಸಿದ್ದ ಟೀಂ ಇಂಡಿಯಾ 7 ರನ್​ಗಳ ರೋಚಕ ಜಯ ಸಾಧಿಸುವ ಮೂಲಕ ವಿಶ್ವ ಚಾಂಪಿಯನ್‌ ಆಗಿ ಹೊರಹೊಮ್ಮಿತ್ತು.

ಈ ವಿಶ್ವಕಪ್​ನ ಇನ್ನೊಂದು ವಿಶೇಷವೆಂದರೆ ಇಡೀ ಟೂರ್ನಿಯಲ್ಲಿ ಟೀಂ ಇಂಡಿಯಾ ಒಂದೇ ಒಂದು ಪಂದ್ಯವನ್ನು ಸೋತಿರಲಿಲ್ಲ. ರೋಹಿತ್ ಶರ್ಮಾ ನಾಯಕತ್ವದಲ್ಲಿ ವಿಶ್ವಕಪ್ ಕಣಕ್ಕಿಳಿದಿದ್ದ ಭಾರತ ತಂಡ ಬಲಿಷ್ಠ ತಂಡಗಳನ್ನು ಮಣಿಸಿ ವಿಶ್ವ ಕಿರೀಟವನ್ನು ಮುಡಿಗೇರಿಸಿಕೊಂಡಿತ್ತು. ಈ ಮೂಲಕ 17 ವರ್ಷಗಳ ನಂತರ ಮತ್ತೊಮ್ಮೆ ಟಿ20 ಚಾಂಪಿಯನ್ ಆಗುವಲ್ಲಿ ಯಶಸ್ವಿಯಾಗಿತ್ತು.

ದಿಗ್ಗಜರ ವಿದಾಯ

ವಾಸ್ತವವಾಗಿ 2007 ರಲ್ಲಿ ನಡೆದಿದ್ದ ಟಿ20 ವಿಶ್ವಕಪ್​ನ ಚೊಚ್ಚಲ ಆವೃತ್ತಿಯಲ್ಲಿ ಟೀಂ ಇಂಡಿಯಾ ಎಂಎಸ್ ಧೋನಿ ನಾಯಕಯತ್ವದಲ್ಲಿ ಟಿ20 ವಿಶ್ವಕಪ್ ಗೆದ್ದುಕೊಂಡಿತ್ತು. ಆ ಬಳಿಕ ತಂಡ 2016 ರಲ್ಲಿ ಮತ್ತೊಮ್ಮೆ ಫೈನಲ್​ಗೇರಿತ್ತಾದರೂ, ಚಾಂಪಿಯನ್ ಆಗುವಲ್ಲಿ ಎಡವಿತ್ತು. ಆದರೆ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಅಜೇಯ ತಂಡವಾಗಿ ಫೈನಲ್​ಗೆ ಕಾಲಿಟ್ಟಿದ್ದ ಟೀಂ ಇಂಡಿಯಾ ಟಿ20 ವಿಶ್ವಕಪ್ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಈ ಗೆಲುವಿನೊಂದಿಗೆ ತಂಡದ ಲೆಜೆಂಡರಿ ಆಟಗಾರರಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಹಾಗೂ ರವೀಂದ್ರ ಜಡೇಜಾ ಅಂತಾರಾಷ್ಟ್ರೀಯ ಟಿ20 ಮಾದರಿಗೆ ವಿದಾಯ ಹೇಳಿದ್ದರು. ಇವರ ಜೊತೆಗೆ ಅಂದು ತಂಡದ ಮುಖ್ಯ ಕೋಚ್ ಆಗಿದ್ದ ರಾಹುಲ್ ದ್ರಾವಿಡ್​ ಕೂಡ ತಮ್ಮ ಹುದ್ದೆಯಿಂದ ಕೆಳಗಿಳಿದಿದ್ದರು.

ಪಂದ್ಯ ಹೀಗಿತ್ತು

ಬಾರ್ಬಡೋಸ್‌ನ ಬ್ರಿಡ್ಜ್‌ಟೌನ್‌ನಲ್ಲಿರುವ ಕೆನ್ಸಿಂಗ್ಟನ್ ಓವಲ್ ಸ್ಟೇಡಿಯಂನಲ್ಲಿ ನಡೆದಿದ್ದ ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಮಾಡಿ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ ಕಳೆದುಕೊಂಡು 176 ರನ್ ಗಳಿಸಿತು. ತಂಡದ ಪರ ವಿರಾಟ್ ಕೊಹ್ಲಿ ಗರಿಷ್ಠ 76, ಅಕ್ಷರ್ ಪಟೇಲ್ 47 ಮತ್ತು ಶಿವಂ ದುಬೆ 27 ರನ್​ಗಳ ಕಾಣಿಕೆ ನೀಡಿದರು. ಇತ್ತ ದಕ್ಷಿಣ ಆಫ್ರಿಕಾ ಪರ ಕೇಶವ್ ಮಹಾರಾಜ್ ಮತ್ತು ಎನ್ರಿಕ್ ನೋಕಿಯಾ ತಲಾ 2 ವಿಕೆಟ್ ಪಡೆದರೆ, ಮಾರ್ಕೊ ಯಾನ್ಸೆನ್ ಮತ್ತು ಕಗಿಸೊ ರಬಾಡ ತಲಾ 1 ವಿಕೆಟ್ ಪಡೆದರು.

177 ರನ್‌ಗಳ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್‌ ಕಳೆದುಕೊಂಡು 169 ರನ್ ಕಲೆಹಾಕಲಷ್ಟೇ ಶಕತವಾಗಿ 7 ರನ್​ಗಳಿಂದ ಚಾಂಪಿಯನ್ ಪಟ್ಟವನ್ನು ಕಳೆದುಕೊಂಡಿತು. ಆಫ್ರಿಕಾ ಪರ ಏಕಾಂಗಿ ಹೋರಾಟ ನಡೆಸಿದ್ದ ಹೆನ್ರಿಕ್ ಕ್ಲಾಸೆನ್ 52 ರನ್ ಗಳಿಸಿದರೆ, ಕ್ವಿಂಟನ್ ಡಿ ಕಾಕ್ 39 ರನ್, ಟ್ರಿಸ್ಟಾನ್ ಸ್ಟಬ್ಸ್ 31 ರನ್ ಡೇವಿಡ್ ಮಿಲ್ಲರ್ 21 ರನ್​ಗಳ ಇನ್ನಿಂಗ್ಸ್ ಆಡಿದ್ದರು. ಟೀಂ ಇಂಡಿಯಾ ಪರ ಹಾರ್ದಿಕ್ ಪಾಂಡ್ಯ 3 ವಿಕೆಟ್ ಪಡೆದರೆ, ಅರ್ಷದೀಪ್ ಸಿಂಗ್ ಮತ್ತು ಜಸ್ಪ್ರೀತ್ ಬುಮ್ರಾ ತಲಾ 2 ವಿಕೆಟ್ ಪಡೆದರು. ಅಕ್ಷರ್ ಪಟೇಲ್ ಕೂಡ 1 ವಿಕೆಟ್ ಪಡೆದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:18 pm, Sat, 14 December 24

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!