AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

50 ಓವರ್ ಪಂದ್ಯದಲ್ಲಿ 20 ರನ್ ಬಾರಿಸದ ಬ್ಯಾಟ್ಸ್​ಮನ್​ಗಳು: ಗೆದ್ದಿದ್ದು ಕೇವಲ 1 ವಿಕೆಟ್​ನಿಂದ..!

Yorkshire - Derbyshire: ಇಂತಹದೊಂದು ಅಪರೂಪದ ಪಂದ್ಯಕ್ಕೆ ಸಾಕ್ಷಿಯಾಗಿದ್ದು ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ ರಾಯಲ್ ಲಂಡನ್ ಕಪ್. ಗ್ರೂಪ್-ಬಿ ನಲ್ಲಿ ನಡೆದ ಈ ಪಂದ್ಯದಲ್ಲಿ ಡರ್ಬಿಶೈರ್ ಹಾಗೂ ಯಾರ್ಕ್​ಶೈರ್ ತಂಡಗಳು ಮುಖಾಮುಖಿಯಾಗಿತ್ತು.

50 ಓವರ್ ಪಂದ್ಯದಲ್ಲಿ 20 ರನ್ ಬಾರಿಸದ ಬ್ಯಾಟ್ಸ್​ಮನ್​ಗಳು: ಗೆದ್ದಿದ್ದು ಕೇವಲ 1 ವಿಕೆಟ್​ನಿಂದ..!
Yorkshire - Derbyshire
TV9 Web
| Edited By: |

Updated on: Aug 22, 2022 | 1:24 PM

Share

50 ಓವರ್​ ಪಂದ್ಯ…ಅಂದರೆ ಬರೋಬ್ಬರಿ 300 ಎಸೆತಗಳು…ಆದರೆ ಇಲ್ಲೊಂದು ತಂಡದ ಬ್ಯಾಟ್ಸ್​ಮನ್​ಗಳ ವೈಯುಕ್ತಿಕ ಮೊತ್ತ 20 ರನ್ ದಾಟಿರಲಿಲ್ಲ ಎಂಬುದು ವಿಶೇಷ. ಇದಾಗ್ಯೂ 109 ರನ್ ಕಲೆಹಾಕುವಲ್ಲಿ ಯಶಸ್ವಿಯಾಗಿದೆ. ಇದರಲ್ಲಿ ವೈಡ್-ನೋಬಾಲ್​ ಮೂಲಕ 10 ರನ್​ಗಳು ಹೆಚ್ಚುವರಿಯಾಗಿ ಲಭಿಸಿತ್ತು. ಅಚ್ಚರಿಯೆಂದರೆ 110 ರನ್​ಗಳ ಮೊತ್ತವನ್ನು ಬೆನ್ನತ್ತಿದ ಎದುರಾಳಿ ತಂಡ ಕೂಡ 9 ವಿಕೆಟ್ ಕಳೆದುಕೊಂಡು ರೋಚಕ ಜಯ ಸಾಧಿಸಿತ್ತು.

ಇಂತಹದೊಂದು ಅಪರೂಪದ ಪಂದ್ಯಕ್ಕೆ ಸಾಕ್ಷಿಯಾಗಿದ್ದು ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ ರಾಯಲ್ ಲಂಡನ್ ಕಪ್. ಗ್ರೂಪ್-ಬಿ ನಲ್ಲಿ ನಡೆದ ಈ ಪಂದ್ಯದಲ್ಲಿ ಡರ್ಬಿಶೈರ್ ಹಾಗೂ ಯಾರ್ಕ್​ಶೈರ್ ತಂಡಗಳು ಮುಖಾಮುಖಿಯಾಗಿತ್ತು. ಮೊದಲು ಬ್ಯಾಟ್ ಮಾಡಿದ ಡರ್ಬಿಶೈರ್ ತಂಡವು ಯಾರ್ಕ್​ಶೈರ್ ಬೌಲರ್​ಗಳ ದಾಳಿಗೆ ತತ್ತರಿಸಿತು.

ರನ್​ಗಳಿಸುವುದು ಇರಲಿ, ಕ್ರೀಸ್​ ಕಚ್ಚಿ ನಿಲ್ಲುವ ಪ್ರಯತ್ನ ಮಾಡಿದ ಡರ್ಬಿಶೈರ್ ಅಂತಿಮವಾಗಿ 42.4 ಓವರ್​ಗಳಲ್ಲಿ 109 ರನ್​ಗಳಿಗೆ ಆಲೌಟ್ ಆಯಿತು. ತಂಡದ ಪರ ಹ್ಯಾರಿ ಕೇಮ್ 58 ಎಸೆತಗಳಲ್ಲಿ 19 ರನ್​ಗಳಿಸಿದ್ದು ಗರಿಷ್ಠ ಸ್ಕೋರ್. ಇದಾಗ್ಯೂ ಯಾವುದೇ ಬ್ಯಾಟ್ಸ್​ಮನ್​ಗಳ ಸ್ಕೋರ್ 20ರ ಗಡಿದಾಟಿರಲಿಲ್ಲ. ಹಾಗೆಯೇ 10 ಹೆಚ್ಚುವರಿ ರನ್​ಗಳ ನೆರವಿನಿಂದ ಡರ್ಬಿಶೈರ್ 109 ರನ್​ಗಳನ್ನು ಕಲೆಹಾಕಿತು.

ಇದನ್ನೂ ಓದಿ
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
Team India: ಟೀಮ್ ಇಂಡಿಯಾದ ಸರ್ವಶ್ರೇಷ್ಠ ಆರಂಭಿಕ ಆಟಗಾರ ಯಾರು ಗೊತ್ತಾ?
Image
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

110 ರನ್​ಗಳ ಸಾಧಾರಣ ಸವಾಲು ಪಡೆದ ಯಾರ್ಕ್​ಶೈರ್ ತಂಡವು 78 ರನ್​ಗಳಿಸುವಷ್ಟರಲ್ಲಿ 6 ವಿಕೆಟ್ ಕಳೆದುಕೊಂಡಿತು. ಇದರೊಂದಿಗೆ ಪಂದ್ಯವು ರೋಚಕತೆಯತ್ತ ಸಾಗಲಾರಂಭಿಸಿತು. 101 ರನ್​ಗಳಿಗೆ 8 ವಿಕೆಟ್ ಉರುಳಿಸಿದ ಡರ್ಬಿಶೈರ್ ಒಂದು ಹಂತದಲ್ಲಿ ಗೆಲ್ಲುವ ಸೂಚನೆ ನೀಡಿತು. ಆದರೆ 10ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಹ್ಯಾರಿಸ್ ಸುಲ್ಲಿವನ್ 17 ಎಸೆತಗಳನ್ನು ಎದುರಿಸಿ 7 ರನ್ ಕಲೆಹಾಕಿದರು. ಇದಾಗ್ಯೂ 109 ರನ್​ಗಳಿಸಿದ್ದ ವೇಳೆ 9ನೇ ವಿಕೆಟ್ ಕೂಡ ಪತನಗೊಂಡಿತು. ಈ ಹಂತದಲ್ಲಿ ಎಚ್ಚರಿಕೆಯ ಆಟವಾಡಿದ ಸುಲ್ಲಿವನ್ ಒಂದು ರನ್​ಗಳಿಸುವ ಮೂಲಕ ತಂಡಕ್ಕೆ ಒಂದು ವಿಕೆಟ್​ನ ರೋಚಕ ಜಯ ತಂದುಕೊಟ್ಟರು.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ