AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni: ನಿವೃತ್ತಿ ಯಾವಾಗ? ಮನಬಿಚ್ಚಿ ಮಾತನಾಡಿದ ಧೋನಿ

IPL 2022: ಸಿಎಸ್​ಕೆ ಫ್ರಾಂಚೈಸಿಯು ಧೋನಿಯನ್ನು ಮತ್ತೆ ನಾಯಕನನ್ನಾಗಿ ಮಾಡಿದೆ. ಆದರೆ ಮುಂದಿನ ವರ್ಷವೂ ಮಹಿ ಅದೇ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಾರಾ? ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

MS Dhoni: ನಿವೃತ್ತಿ ಯಾವಾಗ? ಮನಬಿಚ್ಚಿ ಮಾತನಾಡಿದ ಧೋನಿ
MS Dhoni
TV9 Web
| Edited By: |

Updated on: May 02, 2022 | 4:04 PM

Share

IPL 2022: ಸಿಎಸ್​ಕೆ (CSK) ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿಗೆ (Ms Dhoni) 40 ವರ್ಷ ತುಂಬಿದೆ. ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾಗಿದ್ದಾರೆ. ಇನ್ನೊಂದೆಡೆ ಕಳೆದ ಎರಡು ವರ್ಷಗಳಿಂದ ಐಪಿಎಲ್‌ನಿಂದ ಧೋನಿ ನಿವೃತ್ತಿ ಯಾವಾಗ ಎಂಬ ಒಂದೇ ಪ್ರಶ್ನೆ ಮತ್ತೆ ಮತ್ತೆ ಕೇಳಿ ಬರುತ್ತಿದೆ. ಈ ಬಗ್ಗೆ ಖುದ್ದು ಮಹೇಂದ್ರ ಸಿಂಗ್ ಧೋನಿಯೇ ಮಾತನಾಡಿದ್ದಾರೆ. ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದ ಟಾಸ್ ವೇಳೆ ಕಾಮೆಂಟೇಟರ್ ಡ್ಯಾನಿ ಮಾರಿಸನ್ ನೀವು ಮುಂದಿನ ವರ್ಷ ಕೂಡ ಆಡಲಿದ್ದೀರಾ ಎಂದು ಪ್ರಶ್ನಿಸಿದ್ದಾರೆ. ಈ ವೇಳೆ ನಗುತ್ತಾ ಉತ್ತರಿಸಿದ ಧೋನಿ,

ನಾನು ಕಳೆದ ಬಾರಿಯೂ ಯೆಲ್ಲೊ ಜೆರ್ಸಿಯಲ್ಲಿ ಕಾಣಿಸಿಕೊಳ್ಳುತ್ತೇನೆ ಎಂದು ಹೇಳಿದ್ದೆ. ಅದು ಅದು ಯೆಲ್ಲೊ ಜೆರ್ಸಿಯಾಗಿರಲಿ ಅಥವಾ ಇನ್ನಾವುದೇ ಆಗಿರಲಿ, ಅದಕ್ಕಾಗಿ ನೀವು ಕಾಯಬೇಕಾಗಿದೆ ಎಂದಿದ್ದಾರೆ. ಈ ಮೂಲಕ ಸದ್ಯಕ್ಕಂತು ಐಪಿಎಲ್​ನಿಂದ ನಿವೃತ್ತಿ ಆಗುತ್ತಿಲ್ಲ ಎಂದು ಧೋನಿ ಪರೋಕ್ಷವಾಗಿ ತಿಳಿಸಿದ್ದಾರೆ.

ಈ ಹಿಂದೆ ಸಿಎಸ್​ಕೆ ತಂಡವು ನಾಯಕನನ್ನು ಬದಲಿಸಿದಾಗ ಇದು ಮಹೇಂದ್ರ ಸಿಂಗ್ ಧೋನಿ ಕೊನೆಯ ಸೀಸನ್ ಆಗಿರಬಹುದು ಎಂಬ ಊಹಾಪೋಹವಿತ್ತು. ಆದರೆ ಐಪಿಎಲ್ 2022 ರಲ್ಲಿ ಜಡೇಜಾ ನಾಯಕತ್ವದಲ್ಲಿ, ಚೆನ್ನೈ ಹಾಲಿ ಚಾಂಪಿಯನ್ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ತಂಡ ಮೊದಲ 8 ಪಂದ್ಯಗಳಲ್ಲಿ 6 ರಲ್ಲಿ ಸೋತಿದೆ. ಹೀಗಾಗಿ ಧೋನಿಗೆ ಮತ್ತೊಮ್ಮೆ ತಂಡದ ನಾಯಕತ್ವ ನೀಡಲಾಗಿದೆ. ಇದರ ಬೆನ್ನಲ್ಲೇ ಧೋನಿ ನೀಡಿರುವ ಹೇಳಿಕೆಯು ಅಭಿಮಾನಿಗಳಿಗೆ ಖುಷಿ ನೀಡಿದೆ. ಅಂದರೆ ಮಹೇಂದ್ರ ಸಿಂಗ್ ಧೋನಿ ಮುಂದಿನ ಸೀಸನ್​ನಲ್ಲೂ ಐಪಿಎಲ್​ ಆಡುವುದು ಬಹುತೇಕ ಖಚಿತ ಎನ್ನಲಾಗಿದೆ.

CSK ನಾಯಕನಾಗಿ ಧೋನಿ ಮುಂದುವರೆಯುತ್ತಾರಾ? ಇದೀಗ ಸಿಎಸ್​ಕೆ ಫ್ರಾಂಚೈಸಿಯು ಧೋನಿಯನ್ನು ಮತ್ತೆ ನಾಯಕನನ್ನಾಗಿ ಮಾಡಿದೆ. ಆದರೆ ಮುಂದಿನ ವರ್ಷವೂ ಮಹಿ ಅದೇ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಾರಾ? ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆದರೆ ಮುಂದೆಯೂ ನಾನು ಯೆಲ್ಲೊ ಜೆರ್ಸಿಯಲ್ಲಿ ಕಾಣಿಸಿಕೊಳ್ಳುತ್ತೇನೆ ಎಂಬ ಹೇಳಿಕೆಯು ಇದೀಗ ಮುಂದಿನ ಸೀಸನ್​ನಲ್ಲೂ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

ಧೋನಿ ನಂತರ ಯಾರು? ಒಂದು ವೇಳೆ ಸಿಎಸ್​ಕೆ ಧೋನಿಯ ಬದಲಿಗೆ ಮುಂದಿನ ಸೀಸನ್​ನಲ್ಲಿ ಯಾರನ್ನು ನಾಯಕರಾಗಿ ಮಾಡಲಿದ್ದಾರೆ ಎಂಬ ಚರ್ಚೆಗಳು ಶುರುವಾಗಿದೆ. ಏಕೆಂದರೆ ಒಂದಲ್ಲ ಒಂದು ದಿನ ಧೋನಿ ನಿವೃತ್ತರಾಗಲೇಬೇಕು. ಹೀಗಾಗಿಯೇ ರವೀಂದ್ರ ಜಡೇಜಾಗೆ ನಾಯಕತ್ವ ನೀಡಲಾಗಿತ್ತು. ಆದರೆ ಜಡೇಜಾ ಹೊಸ ಜವಾಬ್ದಾರಿಯಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಹೀಗಾಗಿ ಸಿಎಸ್​ಕೆ ಹೊಸ ನಾಯಕನನ್ನು ಆಯ್ಕೆ ಮಾಡಬಹುದು. ಸಿಎಸ್​ಕೆ ತಂಡದಲ್ಲಿ ಡ್ವೇನ್ ಬ್ರಾವೋ, ಅಂಬಟಿ ರಾಯುಡು, ರಾಬಿನ್ ಉತ್ತಪ್ಪ ಅವರಂತಹ ನಾಯಕತ್ವದ ಗುಣಗಳಿರುವ ಆಟಗಾರರಿದ್ದಾರೆ. ಆದರೆ ಬ್ರಾವೋಗೆ 38 ವರ್ಷ, ಅಂಬಟಿ ಮತ್ತು ಉತ್ತಪ್ಪ ಅವರಿಗೂ 36 ವರ್ಷ ಆಗಿದೆ. ಹೀಗಿರುವಾಗ ಸಿಎಸ್ ಕೆ ಮ್ಯಾನೇಜ್​ಮೆಂಟ್ ಯಾರಿಗೆ ನಾಯಕತ್ವ ನೀಡಲಿದೆ ಎಂಬುದೇ ಪ್ರಶ್ನೆ.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?