AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಆರ್​ಸಿಬಿ ಜರ್ಸಿ ಕಳಚಿ ಬೌಲ್ಟ್ ನೀಡಿದ ರಾಜಸ್ಥಾನ ಜರ್ಸಿ ತೊಟ್ಟ ಆರ್​ಸಿಬಿ ಅಭಿಮಾನಿ! ವಿಡಿಯೋ ವೈರಲ್

IPL 2022: ಬೌಲ್ಟ್​​ನಿಂದ ಜರ್ಸಿಯನ್ನು ಉಡುಗೂರೆಯಾಗಿ ಪಡೆದ ಈ ಪುಟ್ಟ ಅಭಿಮಾನಿ ತಾನು ಧರಿಸಿದ್ದ ಆರ್​ಸಿಬಿ ಜರ್ಸಿಯನ್ನು ಕಳಚಿ, ಬೌಲ್ಟ್ ನೀಡಿದ ರಾಜಸ್ಥಾನದ ಜರ್ಸಿಯನ್ನು ತೊಟ್ಟುಕೊಂಡಿದ್ದಾನೆ.

IPL 2022: ಆರ್​ಸಿಬಿ ಜರ್ಸಿ ಕಳಚಿ ಬೌಲ್ಟ್ ನೀಡಿದ ರಾಜಸ್ಥಾನ ಜರ್ಸಿ ತೊಟ್ಟ ಆರ್​ಸಿಬಿ ಅಭಿಮಾನಿ! ವಿಡಿಯೋ ವೈರಲ್
ಬೌಲ್ಟ್ ನೀಡಿದ ರಾಜಸ್ಥಾನ ಜರ್ಸಿ ತೊಟ್ಟ ಆರ್​ಸಿಬಿ ಅಭಿಮಾನಿ
TV9 Web
| Edited By: |

Updated on:May 28, 2022 | 5:27 PM

Share

2022 ರ ಇಂಡಿಯನ್ ಪ್ರೀಮಿಯರ್ ಲೀಗ್ (IPL) ನ ಫೈನಲ್‌ನಲ್ಲಿ ತಮ್ಮ ಸ್ಥಾನವನ್ನು ಕಾಯ್ದಿರಿಸಲು ಕೇವಲ ಎರಡು ದಿನಗಳ ಅಂತರದಲ್ಲಿ ರಾಜಸ್ಥಾನ್ ರಾಯಲ್ಸ್ (Rajasthan Royals) ಅದ್ಭುತ ಪುನರಾಗಮನವನ್ನು ಮಾಡಿತು. ಲೀಗ್ ಹಂತದಲ್ಲಿ ಎರಡನೇ ಸ್ಥಾನ ಪಡೆದ ನಂತರ, ರಾಜಸ್ಥಾನವು ಈ ವಾರದ ಆರಂಭದಲ್ಲಿ ಕೋಲ್ಕತ್ತಾದಲ್ಲಿ ಗುಜರಾತ್ ಟೈಟಾನ್ಸ್ (Gujarat Titans) ವಿರುದ್ಧ ಸೋತಿತು, ಎರಡನೇ ಕ್ವಾಲಿಫೈಯರ್‌ನಲ್ಲಿ ಶುಕ್ರವಾರ ಅಹಮದಾಬಾದ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೋಲಿಸುವ ಮೂಲಕ ಫೈನಲ್‌ಗೆ ಎಂಟ್ರಿಕೊಟ್ಟಿದೆ. ಈ ಮೂಲಕ ರಾಜಸ್ಥಾನ್ ರಾಯಲ್ಸ್ ತಂಡದ 14 ವರ್ಷಗಳ ಕಾಯುವಿಕೆ ಕೊನೆಗೂ ಅಂತ್ಯಗೊಂಡಿದೆ. ಐಪಿಎಲ್ ಇತಿಹಾಸದಲ್ಲಿ ಮೊದಲ ಚಾಂಪಿಯನ್ ತಂಡವು ತನ್ನ ಪ್ರಶಸ್ತಿ ಯಶಸ್ಸಿನ ನಂತರ ಮತ್ತೊಮ್ಮೆ ಪ್ರಶಸ್ತಿಯ ಸಮೀಪಕ್ಕೆ ಬಂದಿದೆ. ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ಐಪಿಎಲ್ 2022 ರ ಫೈನಲ್‌ನಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದೆ. ಅಹಮದಾಬಾದ್‌ನಲ್ಲಿ ನಡೆದ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ರಾಜಸ್ಥಾನ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಏಕಪಕ್ಷೀಯ ರೀತಿಯಲ್ಲಿ 7 ವಿಕೆಟ್‌ಗಳ ಅಂತರದಿಂದ ಸೋಲಿಸಿತು.

ಆದರೆ ಪಂದ್ಯವೆಲ್ಲ ಮುಗಿದ ನಂತರ ವಿಶೇಷ ಘಟನೆಯೊಂದು ನಡೆದಿದ್ದು, ಈ ಘಟನೆಯನ್ನು ವಿಡಿಯೋ ಮಾಡಿದ್ದ ರಾಜಸ್ಥಾನ ತಂಡ ತನ್ನ ಟ್ವಿಟರ್ ಹ್ಯಾಂಡಲ್​ನಲ್ಲಿ ಹಂಚಿಕೊಂಡಿದೆ. ಆ ವಿಡಿಯೋದಲ್ಲಿರುವುದೆನೇಂದರೆ, ಪಂದ್ಯದ ನಂತರ, ರಾಜಸ್ಥಾನ್ ರಾಯಲ್ಸ್ ತಂಡದ ವೇಗಿ ಟ್ರೆಂಟ್ ಬೌಲ್ಟ್ ಅವರು RCB ಜರ್ಸಿ ಧರಿಸಿದ್ದ ಯುವ ಅಭಿಮಾನಿಗೆ ತಮ್ಮ ಜೆರ್ಸಿಯನ್ನು ಉಡುಗೊರೆಯಾಗಿ ನೀಡಿದ್ದಾರೆ. ಬೌಲ್ಟ್​​ನಿಂದ ಜರ್ಸಿಯನ್ನು ಉಡುಗೂರೆಯಾಗಿ ಪಡೆದ ಈ ಪುಟ್ಟ ಅಭಿಮಾನಿ ತಾನು ಧರಿಸಿದ್ದ ಆರ್​ಸಿಬಿ ಜರ್ಸಿಯನ್ನು ಕಳಚಿ, ಬೌಲ್ಟ್ ನೀಡಿದ ರಾಜಸ್ಥಾನದ ಜರ್ಸಿಯನ್ನು ತೊಟ್ಟುಕೊಂಡಿದ್ದಾನೆ. ಈ ಪೋರ ಮಾಡುವುದೆಲ್ಲವನ್ನು ವಿಡಿಯೋ ಮೂಲಕ ಸೆರೆ ಹಿಡಿದಿದ್ದ ರಾಜಸ್ಥಾನ ತಂಡ ಇಂದು ಈ ವಿಡಿಯೋವನ್ನು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದು, ಈಗ ಈ ವಿಡಿಯೋ ಸಖತ್ ವೈರಲ್ ಆಗುತ್ತಿದೆ.

ಇದನ್ನೂ ಓದಿ
Image
GT vs RR IPL 2022 Final Live Streaming: ಗುಜರಾತ್- ರಾಜಸ್ಥಾನ ಫೈನಲ್ ವಾರ್! ಪಂದ್ಯದ ಬಗ್ಗೆ ಇಲ್ಲಿದೆ ಮಾಹಿತಿ
Image
GT vs RR Head to Head Records: ಫೈನಲ್ ಕದನದಲ್ಲಿ ಗೆಲುವು ಯಾರಿಗೆ? ಮುಖಾಮುಖಿ ವರದಿ ಕಥೆ ಹೇಳುವುದೇನು?

ಇದನ್ನೂ ಓದಿ:GT vs RR Head to Head Records: ಫೈನಲ್ ಕದನದಲ್ಲಿ ಗೆಲುವು ಯಾರಿಗೆ? ಮುಖಾಮುಖಿ ವರದಿ ಕಥೆ ಹೇಳುವುದೇನು?

ಈ ಐಪಿಎಲ್​ನಲ್ಲಿ ಬೌಲ್ಟ್ ಪ್ರದರ್ಶನ ಹೀಗಿತ್ತು

ಬೌಲ್ಟ್ ರಾಯಲ್ಸ್ ಫೈನಲ್‌ಗೆ ಸಾಗುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ನ್ಯೂಜಿಲೆಂಡ್​ನ ಅಂತರಾಷ್ಟ್ರೀಯ ಆಟಗಾರ 8.24 ರ ಎಕಾನಮಿ ದರದಲ್ಲಿ 15 ವಿಕೆಟ್‌ಗಳನ್ನು ಪಡೆದಿದ್ದಲ್ಲದೆ ಆರಂಭಿಕ ಓವರ್​ಗಳಲ್ಲಿ ರನ್​ ವೇಗಕ್ಕೆ ಕಡಿವಾಣ ಹಾಕುವುದರಲ್ಲಿ ಯಶಸ್ವಿಯಾಗಿದ್ದರು. 2008 ರ ಉದ್ಘಾಟನಾ ಆವೃತ್ತಿಯ ನಂತರ ಐಪಿಎಲ್ ಋತುವಿನಲ್ಲಿ ರಾಜಸ್ಥಾನವು ಎರಡನೇ ಬಾರಿಗೆ ಫೈನಲ್ ತಲುಪಿದೆ. ಅಂದಿನ ಮೊದಲ ಸೀಸನ್​ನಲ್ಲಿ ರಾಜಸ್ಥಾನ ತಂಡದ ನಾಯಕರಾಗಿದ್ದ ಶೇನ್ ವಾರ್ನ್ ಫ್ರಾಂಚೈಸಿಯನ್ನು ಮೊದಲ ಬಾರಿಗೆ ಪ್ರಶಸ್ತಿ ಗೆಲುವಿನತ್ತ ಮುನ್ನಡೆಸಿದ್ದರು.

ಫೈನಲ್ ವಾರ್

ಐಪಿಎಲ್-2022ರ ಫೈನಲ್‌ಗೆ ವೇದಿಕೆ ಸಿದ್ಧವಾಗಿದೆ. ಈ ಸೀಸನ್​ನ ಎರಡು ಫೈನಲಿಸ್ಟ್ ತಂಡಗಳನ್ನು ನಿರ್ಧರಿಸಲಾಗಿದೆ. ವಿಶ್ವದ ಅತಿ ದೊಡ್ಡ ಕ್ರಿಕೆಟ್ ಸ್ಟೇಡಿಯಂ- ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದೆ. ಈ ಸೀಸನ್​ನ ಎರಡು ಅಗ್ರ ತಂಡಗಳ ನಡುವೆ ಪ್ರಶಸ್ತಿ ರೇಸ್ ನಡೆಯಲಿದೆ. ಈ ಪಂದ್ಯ ಗುಜರಾತ್ ಟೈಟಾನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ (GT vs RR) ನಡುವೆ ನಡೆಯಲಿದೆ. ಗುಜರಾತ್ ಮೊದಲ ಸ್ಥಾನದಲ್ಲಿದ್ದರೆ, ರಾಜಸ್ಥಾನ ಎರಡನೇ ಸ್ಥಾನದಲ್ಲಿದೆ. ಕ್ವಾಲಿಫೈಯರ್-1ರಲ್ಲೂ ಈ ಎರಡು ತಂಡಗಳು ಮುಖಾಮುಖಿಯಾಗಿದ್ದು, ಇದರಲ್ಲಿ ಗುಜರಾತ್ ಗೆದ್ದು ನೇರವಾಗಿ ಅಂತಿಮ ಟಿಕೆಟ್ ಕಾಯ್ದಿರಿಸಿತ್ತು. ಅದೇ ಸಮಯದಲ್ಲಿ ರಾಜಸ್ಥಾನ ಎರಡನೇ ಕ್ವಾಲಿಫೈಯರ್ ಪಂದ್ಯವನ್ನು ಆಡಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೋಲಿಸಿ ಫೈನಲ್‌ಗೆ ಟಿಕೆಟ್ ಪಡೆಯಿತು. ಇದೀಗ ಈ ಎರಡು ತಂಡಗಳು ಪ್ರಶಸ್ತಿಗಾಗಿ ಹಣಾಹಣಿ ನಡೆಸಲಿವೆ.

Published On - 5:27 pm, Sat, 28 May 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್