AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yudhvir Singh: ಜಮ್ಮು ಕಾಶ್ಮೀರದ ಯುವ ವೇಗಿಗೆ ಟೀಮ್ ಇಂಡಿಯಾದಿಂದ ಬುಲಾವ್

ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಟೆಸ್ಟ್ ಸರಣಿಯು ಸೆಪ್ಟೆಂಬರ್ 19 ರಿಂದ ಶುರುವಾಗಲಿದೆ. ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯಕ್ಕಾಗಿ 16 ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಈ ತಂಡದಲ್ಲಿ ಹೊಸಮುಖವಾಗಿ ಎಡಗೈ ವೇಗಿ ಯಶ್ ದಯಾಳ್ ಆಯ್ಕೆಯಾಗಿದ್ದು, ಇವರ ಜೊತೆ ಸರ್ಫರಾಝ್ ಖಾನ್ ಹಾಗೂ ಆಕಾಶ್​ ದೀಪ್ ಸಹ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

Yudhvir Singh: ಜಮ್ಮು ಕಾಶ್ಮೀರದ ಯುವ ವೇಗಿಗೆ ಟೀಮ್ ಇಂಡಿಯಾದಿಂದ ಬುಲಾವ್
Yudhvir Singh
TV9 Web
| Edited By: |

Updated on: Sep 10, 2024 | 7:23 AM

Share

ಜಮ್ಮು ಕಾಶ್ಮೀರದ ಯುವ ವೇಗಿ ಯುಧ್ವೀರ್ ಸಿಂಗ್ ಚರಕ್ ಅವರನ್ನು ಭಾರತ ತಂಡದ ಕ್ಯಾಂಪ್​ಗೆ ಆಯ್ಕೆ ಮಾಡಲಾಗಿದೆ. ಮುಂಬರುವ ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ನೆಟ್ ಬೌಲರ್​ ಆಗಿ ಭಾರತ ತಂಡದ ಶಿಬಿರವನ್ನು ಕೂಡಿಕೊಳ್ಳುವಂತೆ ಆಯ್ಕೆ ಸಮಿತಿ ಯುಧ್ವೀರ್​ಗೆ ತಿಳಿಸಿದೆ. ಅದರಂತೆ ಸೆಪ್ಟೆಂಬರ್ 12 ರಿಂದ ಆರಂಭವಾಗಲಿರುವ ಟೀಮ್ ಇಂಡಿಯಾ ಶಿಬಿರದಲ್ಲಿ ಜಮ್ಮು ಕಾಶ್ಮೀರದ ವೇಗಿ ಕೂಡ ಕಾಣಿಸಿಕೊಳ್ಳಲಿದ್ದಾರೆ.

ಯುಧ್ವೀರ್ ಸಿಂಗ್ ಚರಕ್ ಅತ್ಯುತ್ತಮ ವೇಗದ ಬೌಲಿಂಗ್​ ಮೂಲಕ ಗಮನ ಸೆಳೆಯುತ್ತಿದ್ದಾರೆ. ಇತ್ತೀಚೆಗೆ ನಡೆದ ಬುಚ್ಚಿ ಬಾಬು ಟೂರ್ನಿ, ರಣಜಿ ಟ್ರೋಫಿ, ವಿಜಯ್ ಹಜಾರೆ ಟ್ರೋಫಿ, ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಪ್ರಭಾವಶಾಲಿ ಪ್ರದರ್ಶನ ನೀಡಿದ್ದರು. ಹೀಗಾಗಿ ಟೀಮ್ ಇಂಡಿಯಾ ಆಯ್ಕೆ ಸಮಿತಿ ಇದೀಗ ಯುವ ವೇಗಿಯನ್ನು ನೆಟ್ ಬೌಲರ್ ಆಗಿ ಆಯ್ಕೆ ಮಾಡಿಕೊಂಡಿದೆ.

ಯುಧ್ವೀರ್ ಸಿಂಗ್ ಚರಕ್

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಭಾಗವಾಗಿರುವ ಯುಧ್ವೀರ್ ಕಳೆದ ಸೀಸನ್​ನಲ್ಲಿ 5 ಪಂದ್ಯಗಳನ್ನಾಡಿದ್ದರು. ಈ ವೇಳೆ 4 ವಿಕೆಟ್ ಕಬಳಿಸಿದ್ದರು. ಇದೇ ವೇಳೆ ಉತ್ತಮ ವೇಗದ ಬೌಲಿಂಗ್​ನೊಂದಿಗೆ ಗಮನ ಸೆಳೆದಿದ್ದರು. ಇದೀಗ ಯುವ ವೇಗಿಯನ್ನು ನೆಟ್ ಬೌಲರ್​ ಆಗಿ ಆಯ್ಕೆ ಮಾಡಲಾಗಿದ್ದು, ಈ ಮೂಲಕ ಅನುಭವಿ ಆಟಗಾರರೊಂದಿಗೆ ಬೆರೆಯಲು ಅವಕಾಶ ಕಲ್ಪಿಸಲಾಗಿದೆ.

ಭಾರತ-ಬಾಂಗ್ಲಾದೇಶ್ ಟೆಸ್ಟ್ ಸರಣಿ:

ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಟೆಸ್ಟ್ ಸರಣಿಯು ಸೆಪ್ಟೆಂಬರ್ 19 ರಿಂದ ಶುರುವಾಗಲಿದೆ. ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯಕ್ಕಾಗಿ 16 ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಈ ತಂಡದಲ್ಲಿ ಹೊಸಮುಖವಾಗಿ ಎಡಗೈ ವೇಗಿ ಯಶ್ ದಯಾಳ್ ಆಯ್ಕೆಯಾಗಿದ್ದು, ಇವರ ಜೊತೆ ಸರ್ಫರಾಝ್ ಖಾನ್ ಹಾಗೂ ಆಕಾಶ್​ ದೀಪ್ ಸಹ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಹಾಗೆಯೇ ಇಂಗ್ಲೆಂಡ್ ವಿರುದ್ದದ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದ ವಿರಾಟ್ ಕೊಹ್ಲಿ, ರಿಷಭ್ ಪಂತ್ ಹಾಗೂ ಕೆಎಲ್ ರಾಹುಲ್ ಈ ಸರಣಿಯೊಂದಿಗೆ ಟೆಸ್ಟ್ ಕ್ರಿಕೆಟ್​​ಗೆ ಮರಳಲಿದ್ದಾರೆ.

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಸರ್ಫರಾಝ್ ಖಾನ್, ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಜಸ್​ಪ್ರೀತ್ ಬುಮ್ರಾ , ಆಕಾಶ್ ದೀಪ್ ಮತ್ತು ಯಶ್ ದಯಾಳ್.

ಇದನ್ನೂ ಓದಿ: ಒಂದೇ ವರ್ಷ ಟೀಮ್ ಇಂಡಿಯಾದ 8 ಆಟಗಾರರು ನಿವೃತ್ತಿ..!

ಭಾರತ vs ಬಾಂಗ್ಲಾದೇಶ್ ಸರಣಿ ವೇಳಾಪಟ್ಟಿ:

ತಂಡಗಳು ದಿನಾಂಕ ಸಮಯ ಸ್ಥಳ
1ನೇ ಟೆಸ್ಟ್, ಭಾರತ vs ಬಾಂಗ್ಲಾದೇಶ ಗುರುವಾರ, 19 ಸೆಪ್ಟೆಂಬರ್ 2024 9:30 AM ಚೆನ್ನೈ
2ನೇ ಟೆಸ್ಟ್, ಭಾರತ vs ಬಾಂಗ್ಲಾದೇಶ ಶುಕ್ರವಾರ, 27 ಸೆಪ್ಟೆಂಬರ್ 2024 9:30 AM ಕಾನ್ಪುರ
1ನೇ ಟಿ20, ಭಾರತ vs ಬಾಂಗ್ಲಾದೇಶ ಸೋಮವಾರ, 7 ಅಕ್ಟೋಬರ್ 2024 7 PM ಗ್ವಾಲಿಯರ್
2ನೇ ಟಿ20, ಭಾರತ vs ಬಾಂಗ್ಲಾದೇಶ ಗುರುವಾರ, 10 ಅಕ್ಟೋಬರ್ 2024 7 PM ದೆಹಲಿ
3ನೇ ಟಿ20, ಭಾರತ vs ಬಾಂಗ್ಲಾದೇಶ ಭಾನುವಾರ, 13 ಅಕ್ಟೋಬರ್ 2024 7 PM ಹೈದರಾಬಾದ್

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು