AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಕಜ್ ಮಿಂಚಿಂಗ್, ಪಠಾಣ್ ಅಬ್ಬರ: ವಿಶ್ವ ದೈತ್ಯರ ಮುಂದೆ ಇಂಡಿಯಾ ಮಹಾರಾಜರಿಗೆ ಭರ್ಜರಿ ಜಯ

Legends League Cricket 2022: ಕೇವಲ 31 ಎಸೆತಗಳಲ್ಲಿ 9 ಬೌಂಡರಿ ಹಾಗೂ 1 ಸಿಕ್ಸ್​ನೊಂದಿಗೆ 52 ರನ್ ಬಾರಿಸಿ ಒ ಬ್ರಿಯೆನ್ ಅಬ್ಬರಿಸಿದರು. ಇನ್ನು ಮಧ್ಯಮ ಕ್ರಮಾಂಕದಲ್ಲಿ ವೆಸ್ಟ್ ಇಂಡೀಸ್​ನ ಮಾಜಿ ಆಟಗಾರ ದಿನೇಶ್ ರಾಮ್​ದಿನ್ 29 ಎಸೆತಗಳಲ್ಲಿ 5 ಬೌಂಡರಿ ಹಾಗೂ 1 ಸಿಕ್ಸ್​ನೊಂದಿಗೆ 42 ರನ್​ ಚಚ್ಚಿದರು.

ಪಂಕಜ್ ಮಿಂಚಿಂಗ್, ಪಠಾಣ್ ಅಬ್ಬರ: ವಿಶ್ವ ದೈತ್ಯರ ಮುಂದೆ ಇಂಡಿಯಾ ಮಹಾರಾಜರಿಗೆ ಭರ್ಜರಿ ಜಯ
india maharajas
TV9 Web
| Edited By: |

Updated on: Sep 17, 2022 | 11:32 AM

Share

ಭಾರತದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ವಿಶೇಷ ಪಂದ್ಯದಲ್ಲಿ ವರ್ಲ್ಡ್​ ಜೈಂಟ್ಸ್​ ವಿರುದ್ಧ ಇಂಡಿಯಾ ಮಹಾರಾಜಾಸ್ ಭರ್ಜರಿ ಜಯ ಸಾಧಿಸಿದೆ. ಲೆಜೆಂಡ್ಸ್ ಕ್ರಿಕೆಟ್​ ಲೀಗ್​ನಲ್ಲೇ ನಡೆದ ಈ ಸ್ಪೆಷಲ್ ಮ್ಯಾಚ್​ನಲ್ಲಿ ಟಾಸ್ ಗೆದ್ದ ವರ್ಲ್ಡ್ ಜೈಂಟ್ಸ್​ ತಂಡದ ನಾಯಕ ಜಾಕ್ಸ್ ಕಾಲಿಸ್ ಬ್ಯಾಟಿಂಗ್ ಆಯ್ದುಕೊಂಡರು. ಅದರಂತೆ ಇನಿಂಗ್ಸ್ ಆರಂಭಿಸಿದ ವರ್ಲ್ಡ್​ ಜೈಂಟ್ಸ್ ತಂಡಕ್ಕೆ ಐರ್ಲೆಂಡ್​ನ ಮಾಜಿ ಆಟಗಾರ ಕೆವಿನ್ ಓಬ್ರಿಯಾನ್ ಸ್ಪೋಟಕ ಆರಂಭ ಒದಗಿಸಿದ್ದರು.

ಕೇವಲ 31 ಎಸೆತಗಳಲ್ಲಿ 9 ಬೌಂಡರಿ ಹಾಗೂ 1 ಸಿಕ್ಸ್​ನೊಂದಿಗೆ 52 ರನ್ ಬಾರಿಸಿ ಒ ಬ್ರಿಯೆನ್ ಅಬ್ಬರಿಸಿದರು. ಇನ್ನು ಮಧ್ಯಮ ಕ್ರಮಾಂಕದಲ್ಲಿ ವೆಸ್ಟ್ ಇಂಡೀಸ್​ನ ಮಾಜಿ ಆಟಗಾರ ದಿನೇಶ್ ರಾಮ್​ದಿನ್ 29 ಎಸೆತಗಳಲ್ಲಿ 5 ಬೌಂಡರಿ ಹಾಗೂ 1 ಸಿಕ್ಸ್​ನೊಂದಿಗೆ 42 ರನ್​ ಚಚ್ಚಿದರು. ಪರಿಣಾಮ ನಿಗದಿತ 20 ಓವರ್​ಗಳಲ್ಲಿ ವರ್ಲ್ಡ್​ ಜೈಂಟ್ಸ್​ ತಂಡವು 8 ವಿಕೆಟ್ ನಷ್ಟಕ್ಕೆ 170 ರನ್​ ಕಲೆಹಾಕಿತು. ಇಂಡಿಯಾ ಮಹರಾಜಾಸ್ ಪರ 4 ಓವರ್​ಗಳಲ್ಲಿ ಕೇವಲ 26 ರನ್​ ನೀಡಿ ಪಂಕಜ್ ಸಿಂಗ್ 5 ವಿಕೆಟ್ ಕಬಳಿಸಿ ಮಿಂಚಿದ್ದರು.

ಇನ್ನು 171 ರನ್​ಗಳ ಬೃಹತ್ ಟಾರ್ಗೆಟ್ ಪಡೆದ ಇಂಡಿಯಾ ಮಹಾರಾಜಾಸ್ ಉತ್ತಮ ಆರಂಭ ಪಡೆದಿರಲಿಲ್ಲ. ಕೇವಲ 4 ರನ್​ಗಳಿಸಿ ವೀರೇಂದ್ರ ಸೆಹ್ವಾಗ್ ಔಟಾದರೆ, ಇದರ ಬೆನ್ನಲ್ಲೇ ಪಾರ್ಥಿವ್ ಪಟೇಲ್ 18 ರನ್​ಗಳಿಸಿ ವಿಕೆಟ್ ಒಪ್ಪಿಸಿದರು. ಇನ್ನು ಮೊಹಮ್ಮದ್ ಕೈಫ್ 11 ರನ್​ಗಳಿಸಿ ಹೊರನಡೆದರು. ಈ ಹಂತದಲ್ಲಿ ಜೊತೆಗೂಡಿದ ತನ್ಮಯ್ ಶ್ರೀವಾಸ್ತವ್ ಹಾಗೂ ಯೂಸುಫ್ ಪಠಾಣ್ ಉತ್ತಮ ಜೊತೆಯಾಟ ಪ್ರದರ್ಶಿಸಿದರು.

ಇದನ್ನೂ ಓದಿ
Image
On This Day: ಏಕದಿನ ವಿಶ್ವಕಪ್​: ಕೇವಲ 45 ರನ್​ಗೆ ಆಲೌಟ್..!
Image
Heinrich Klaasen: ಬಡವರ ಧೋನಿ, RCB ಆಟಗಾರ…ಯಾರು ಈ ಹೆನ್ರಿಕ್ ಕ್ಲಾಸೆನ್..?
Image
Hardik Pandya: ದಿನೇಶ್ ಕಾರ್ತಿಕ್ ವಿರುದ್ದ ಸೇಡು ತೀರಿಸಿಕೊಂಡ್ರಾ ಹಾರ್ದಿಕ್ ಪಾಂಡ್ಯ?
Image
Dinesh Karthik: ಟೀಮ್ ಇಂಡಿಯಾ ಪರ ಯಾರೂ ಮಾಡದ ದಾಖಲೆ ಬರೆದ ದಿನೇಶ್ ಕಾರ್ತಿಕ್

ನಾಲ್ಕನೇ ವಿಕೆಟ್​ಗೆ ಯೂಸುಫ್ ಪಠಾಣ್ ಜೊತೆಗೂಡಿ 103 ರನ್​ಗಳ ಜೊತೆಯಾಟವಾಡಿದ ತನ್ಮಯ್ ಶ್ರೀವಾಸ್ತವ್ 39 ಎಸೆತಗಳಲ್ಲಿ 54 ರನ್​ ಬಾರಿಸಿ ವಿಕೆಟ್ ಒಪ್ಪಿಸಿದರು. ಅದಾಗಲೇ ಗೆಲುವಿನ ಸಮೀಪದಲ್ಲಿದ್ದ ಇಂಡಿಯಾ ಮಹಾರಾಜಾಸ್ ಪರ ಯೂಸುಫ್ ಪಠಾಣ್ ಸಿಡಿಲಬ್ಬರದ ಬ್ಯಾಟಿಂಗ್ ಮುಂದುವರೆಸಿದರು. ಪರಿಣಾಮ 35 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 5 ಬೌಂಡರಿಯೊಂದಿಗೆ ಪಠಾಣ್ ಅರ್ಧಶತಕ ಪೂರೈಸಿದರು.

ಮತ್ತೊಂದೆಡೆ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಇರ್ಫಾನ್ ಪಠಾಣ್ 3 ಸಿಕ್ಸ್​ ಒಳಗೊಂಂಡಂತೆ ಕೇವಲ 9 ಎಸೆತಗಳಲ್ಲಿ 20 ರನ್ ಚಚ್ಚಿದರು. ಅದರಂತೆ ಇಂಡಿಯಾ ಮಹಾರಾಜಾಸ್ 18.4 ಓವರ್​ಗಳಲ್ಲಿ 4 ವಿಕೆಟ್​ ನಷ್ಟಕ್ಕೆ 174 ರನ್​ ಬಾರಿಸಿ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು. ಇಂಡಿಯಾ ಮಹಾರಾಜಾಸ್ ಪರ 5 ವಿಕೆಟ್ ಉರುಳಿಸಿ ಮಿಂಚಿದ್ದ ಪಂಕಜ್ ಸಿಂಗ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು. ಇನ್ನು ಈ ಪಂದ್ಯದಲ್ಲಿ ಗೆದ್ದ ಇಂಡಿಯಾ ಮಹಾರಾಜಾಸ್ ತಂಡಕ್ಕೆ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸ್ಮರಣಾರ್ಥ ವಿಶೇಷ ಟ್ರೋಫಿಯನ್ನು ಸಹ ನೀಡಲಾಯಿತು.

ಇಂಡಿಯಾ ಮಹರಾಜಾಸ್ ಪ್ಲೇಯಿಂಗ್ ಇಲೆವೆನ್: ವೀರೇಂದ್ರ ಸೆಹ್ವಾಗ್ , ತನ್ಮಯ್ ಶ್ರೀವಾಸ್ತವ , ಪಾರ್ಥಿವ್ ಪಟೇಲ್ ( ವಿಕೆಟ್ ಕೀಪರ್) , ಮೊಹಮ್ಮದ್ ಕೈಫ್ , ಮನ್ವಿಂದರ್ ಬಿಸ್ಲಾ , ಇರ್ಫಾನ್ ಪಠಾಣ್ , ಯೂಸುಫ್ ಪಠಾಣ್ , ಹರ್ಭಜನ್ ಸಿಂಗ್ (ನಾಯಕ) , ಜೋಗಿಂದರ್ ಶರ್ಮಾ , ಪಂಕಜ್ ಸಿಂಗ್ , ಶ್ರೀಶಾಂತ್ , ಅಶೋಕ್ ದಿಂಡಾ

ವರ್ಲ್ಡ್ ಜೈಂಟ್ಸ್ ಪ್ಲೇಯಿಂಗ್ ಇಲೆವೆನ್: ಕೆವಿನ್ ಒ ಬ್ರಿಯೆನ್ , ಹ್ಯಾಮಿಲ್ಟನ್ ಮಸಕಡ್ಜಾ , ಜಾಕ್ವೆಸ್ ಕಾಲಿಸ್ (ನಾಯಕ) , ದಿನೇಶ್ ರಾಮ್​ದಿನ್ (ವಿಕೆಟ್ ಕೀಪರ್) , ತಿಸಾರಾ ಪೆರೆರಾ , ಟಟೆಂಡಾ ತೈಬು , ರಮೇಶ್ ಕಲುವಿತಾರಣ , ಡೇನಿಯಲ್ ವೆಟ್ಟೋರಿ , ಟಿಮ್ ಬ್ರೆಸ್ನಾನ್ , ಮಾಂಟಿ ಪನೇಸರ್ , ಫಿಡೆಲ್ ಎಡ್ವರ್ಡ್ಸ್

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​