AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಕಜ್ ಮಿಂಚಿಂಗ್, ಪಠಾಣ್ ಅಬ್ಬರ: ವಿಶ್ವ ದೈತ್ಯರ ಮುಂದೆ ಇಂಡಿಯಾ ಮಹಾರಾಜರಿಗೆ ಭರ್ಜರಿ ಜಯ

Legends League Cricket 2022: ಕೇವಲ 31 ಎಸೆತಗಳಲ್ಲಿ 9 ಬೌಂಡರಿ ಹಾಗೂ 1 ಸಿಕ್ಸ್​ನೊಂದಿಗೆ 52 ರನ್ ಬಾರಿಸಿ ಒ ಬ್ರಿಯೆನ್ ಅಬ್ಬರಿಸಿದರು. ಇನ್ನು ಮಧ್ಯಮ ಕ್ರಮಾಂಕದಲ್ಲಿ ವೆಸ್ಟ್ ಇಂಡೀಸ್​ನ ಮಾಜಿ ಆಟಗಾರ ದಿನೇಶ್ ರಾಮ್​ದಿನ್ 29 ಎಸೆತಗಳಲ್ಲಿ 5 ಬೌಂಡರಿ ಹಾಗೂ 1 ಸಿಕ್ಸ್​ನೊಂದಿಗೆ 42 ರನ್​ ಚಚ್ಚಿದರು.

ಪಂಕಜ್ ಮಿಂಚಿಂಗ್, ಪಠಾಣ್ ಅಬ್ಬರ: ವಿಶ್ವ ದೈತ್ಯರ ಮುಂದೆ ಇಂಡಿಯಾ ಮಹಾರಾಜರಿಗೆ ಭರ್ಜರಿ ಜಯ
india maharajas
TV9 Web
| Edited By: |

Updated on: Sep 17, 2022 | 11:32 AM

Share

ಭಾರತದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ವಿಶೇಷ ಪಂದ್ಯದಲ್ಲಿ ವರ್ಲ್ಡ್​ ಜೈಂಟ್ಸ್​ ವಿರುದ್ಧ ಇಂಡಿಯಾ ಮಹಾರಾಜಾಸ್ ಭರ್ಜರಿ ಜಯ ಸಾಧಿಸಿದೆ. ಲೆಜೆಂಡ್ಸ್ ಕ್ರಿಕೆಟ್​ ಲೀಗ್​ನಲ್ಲೇ ನಡೆದ ಈ ಸ್ಪೆಷಲ್ ಮ್ಯಾಚ್​ನಲ್ಲಿ ಟಾಸ್ ಗೆದ್ದ ವರ್ಲ್ಡ್ ಜೈಂಟ್ಸ್​ ತಂಡದ ನಾಯಕ ಜಾಕ್ಸ್ ಕಾಲಿಸ್ ಬ್ಯಾಟಿಂಗ್ ಆಯ್ದುಕೊಂಡರು. ಅದರಂತೆ ಇನಿಂಗ್ಸ್ ಆರಂಭಿಸಿದ ವರ್ಲ್ಡ್​ ಜೈಂಟ್ಸ್ ತಂಡಕ್ಕೆ ಐರ್ಲೆಂಡ್​ನ ಮಾಜಿ ಆಟಗಾರ ಕೆವಿನ್ ಓಬ್ರಿಯಾನ್ ಸ್ಪೋಟಕ ಆರಂಭ ಒದಗಿಸಿದ್ದರು.

ಕೇವಲ 31 ಎಸೆತಗಳಲ್ಲಿ 9 ಬೌಂಡರಿ ಹಾಗೂ 1 ಸಿಕ್ಸ್​ನೊಂದಿಗೆ 52 ರನ್ ಬಾರಿಸಿ ಒ ಬ್ರಿಯೆನ್ ಅಬ್ಬರಿಸಿದರು. ಇನ್ನು ಮಧ್ಯಮ ಕ್ರಮಾಂಕದಲ್ಲಿ ವೆಸ್ಟ್ ಇಂಡೀಸ್​ನ ಮಾಜಿ ಆಟಗಾರ ದಿನೇಶ್ ರಾಮ್​ದಿನ್ 29 ಎಸೆತಗಳಲ್ಲಿ 5 ಬೌಂಡರಿ ಹಾಗೂ 1 ಸಿಕ್ಸ್​ನೊಂದಿಗೆ 42 ರನ್​ ಚಚ್ಚಿದರು. ಪರಿಣಾಮ ನಿಗದಿತ 20 ಓವರ್​ಗಳಲ್ಲಿ ವರ್ಲ್ಡ್​ ಜೈಂಟ್ಸ್​ ತಂಡವು 8 ವಿಕೆಟ್ ನಷ್ಟಕ್ಕೆ 170 ರನ್​ ಕಲೆಹಾಕಿತು. ಇಂಡಿಯಾ ಮಹರಾಜಾಸ್ ಪರ 4 ಓವರ್​ಗಳಲ್ಲಿ ಕೇವಲ 26 ರನ್​ ನೀಡಿ ಪಂಕಜ್ ಸಿಂಗ್ 5 ವಿಕೆಟ್ ಕಬಳಿಸಿ ಮಿಂಚಿದ್ದರು.

ಇನ್ನು 171 ರನ್​ಗಳ ಬೃಹತ್ ಟಾರ್ಗೆಟ್ ಪಡೆದ ಇಂಡಿಯಾ ಮಹಾರಾಜಾಸ್ ಉತ್ತಮ ಆರಂಭ ಪಡೆದಿರಲಿಲ್ಲ. ಕೇವಲ 4 ರನ್​ಗಳಿಸಿ ವೀರೇಂದ್ರ ಸೆಹ್ವಾಗ್ ಔಟಾದರೆ, ಇದರ ಬೆನ್ನಲ್ಲೇ ಪಾರ್ಥಿವ್ ಪಟೇಲ್ 18 ರನ್​ಗಳಿಸಿ ವಿಕೆಟ್ ಒಪ್ಪಿಸಿದರು. ಇನ್ನು ಮೊಹಮ್ಮದ್ ಕೈಫ್ 11 ರನ್​ಗಳಿಸಿ ಹೊರನಡೆದರು. ಈ ಹಂತದಲ್ಲಿ ಜೊತೆಗೂಡಿದ ತನ್ಮಯ್ ಶ್ರೀವಾಸ್ತವ್ ಹಾಗೂ ಯೂಸುಫ್ ಪಠಾಣ್ ಉತ್ತಮ ಜೊತೆಯಾಟ ಪ್ರದರ್ಶಿಸಿದರು.

ಇದನ್ನೂ ಓದಿ
Image
On This Day: ಏಕದಿನ ವಿಶ್ವಕಪ್​: ಕೇವಲ 45 ರನ್​ಗೆ ಆಲೌಟ್..!
Image
Heinrich Klaasen: ಬಡವರ ಧೋನಿ, RCB ಆಟಗಾರ…ಯಾರು ಈ ಹೆನ್ರಿಕ್ ಕ್ಲಾಸೆನ್..?
Image
Hardik Pandya: ದಿನೇಶ್ ಕಾರ್ತಿಕ್ ವಿರುದ್ದ ಸೇಡು ತೀರಿಸಿಕೊಂಡ್ರಾ ಹಾರ್ದಿಕ್ ಪಾಂಡ್ಯ?
Image
Dinesh Karthik: ಟೀಮ್ ಇಂಡಿಯಾ ಪರ ಯಾರೂ ಮಾಡದ ದಾಖಲೆ ಬರೆದ ದಿನೇಶ್ ಕಾರ್ತಿಕ್

ನಾಲ್ಕನೇ ವಿಕೆಟ್​ಗೆ ಯೂಸುಫ್ ಪಠಾಣ್ ಜೊತೆಗೂಡಿ 103 ರನ್​ಗಳ ಜೊತೆಯಾಟವಾಡಿದ ತನ್ಮಯ್ ಶ್ರೀವಾಸ್ತವ್ 39 ಎಸೆತಗಳಲ್ಲಿ 54 ರನ್​ ಬಾರಿಸಿ ವಿಕೆಟ್ ಒಪ್ಪಿಸಿದರು. ಅದಾಗಲೇ ಗೆಲುವಿನ ಸಮೀಪದಲ್ಲಿದ್ದ ಇಂಡಿಯಾ ಮಹಾರಾಜಾಸ್ ಪರ ಯೂಸುಫ್ ಪಠಾಣ್ ಸಿಡಿಲಬ್ಬರದ ಬ್ಯಾಟಿಂಗ್ ಮುಂದುವರೆಸಿದರು. ಪರಿಣಾಮ 35 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 5 ಬೌಂಡರಿಯೊಂದಿಗೆ ಪಠಾಣ್ ಅರ್ಧಶತಕ ಪೂರೈಸಿದರು.

ಮತ್ತೊಂದೆಡೆ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಇರ್ಫಾನ್ ಪಠಾಣ್ 3 ಸಿಕ್ಸ್​ ಒಳಗೊಂಂಡಂತೆ ಕೇವಲ 9 ಎಸೆತಗಳಲ್ಲಿ 20 ರನ್ ಚಚ್ಚಿದರು. ಅದರಂತೆ ಇಂಡಿಯಾ ಮಹಾರಾಜಾಸ್ 18.4 ಓವರ್​ಗಳಲ್ಲಿ 4 ವಿಕೆಟ್​ ನಷ್ಟಕ್ಕೆ 174 ರನ್​ ಬಾರಿಸಿ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು. ಇಂಡಿಯಾ ಮಹಾರಾಜಾಸ್ ಪರ 5 ವಿಕೆಟ್ ಉರುಳಿಸಿ ಮಿಂಚಿದ್ದ ಪಂಕಜ್ ಸಿಂಗ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು. ಇನ್ನು ಈ ಪಂದ್ಯದಲ್ಲಿ ಗೆದ್ದ ಇಂಡಿಯಾ ಮಹಾರಾಜಾಸ್ ತಂಡಕ್ಕೆ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸ್ಮರಣಾರ್ಥ ವಿಶೇಷ ಟ್ರೋಫಿಯನ್ನು ಸಹ ನೀಡಲಾಯಿತು.

ಇಂಡಿಯಾ ಮಹರಾಜಾಸ್ ಪ್ಲೇಯಿಂಗ್ ಇಲೆವೆನ್: ವೀರೇಂದ್ರ ಸೆಹ್ವಾಗ್ , ತನ್ಮಯ್ ಶ್ರೀವಾಸ್ತವ , ಪಾರ್ಥಿವ್ ಪಟೇಲ್ ( ವಿಕೆಟ್ ಕೀಪರ್) , ಮೊಹಮ್ಮದ್ ಕೈಫ್ , ಮನ್ವಿಂದರ್ ಬಿಸ್ಲಾ , ಇರ್ಫಾನ್ ಪಠಾಣ್ , ಯೂಸುಫ್ ಪಠಾಣ್ , ಹರ್ಭಜನ್ ಸಿಂಗ್ (ನಾಯಕ) , ಜೋಗಿಂದರ್ ಶರ್ಮಾ , ಪಂಕಜ್ ಸಿಂಗ್ , ಶ್ರೀಶಾಂತ್ , ಅಶೋಕ್ ದಿಂಡಾ

ವರ್ಲ್ಡ್ ಜೈಂಟ್ಸ್ ಪ್ಲೇಯಿಂಗ್ ಇಲೆವೆನ್: ಕೆವಿನ್ ಒ ಬ್ರಿಯೆನ್ , ಹ್ಯಾಮಿಲ್ಟನ್ ಮಸಕಡ್ಜಾ , ಜಾಕ್ವೆಸ್ ಕಾಲಿಸ್ (ನಾಯಕ) , ದಿನೇಶ್ ರಾಮ್​ದಿನ್ (ವಿಕೆಟ್ ಕೀಪರ್) , ತಿಸಾರಾ ಪೆರೆರಾ , ಟಟೆಂಡಾ ತೈಬು , ರಮೇಶ್ ಕಲುವಿತಾರಣ , ಡೇನಿಯಲ್ ವೆಟ್ಟೋರಿ , ಟಿಮ್ ಬ್ರೆಸ್ನಾನ್ , ಮಾಂಟಿ ಪನೇಸರ್ , ಫಿಡೆಲ್ ಎಡ್ವರ್ಡ್ಸ್

Follow Us
ವಿದ್ಯಾರ್ಥಿಗಳು ತಾಂಬೂಲ ಸೇವನೆ ಮಾಡಬಾರದು ಯಾಕೆ?
ವಿದ್ಯಾರ್ಥಿಗಳು ತಾಂಬೂಲ ಸೇವನೆ ಮಾಡಬಾರದು ಯಾಕೆ?
ಇಂದು ಈ ರಾಶಿಯವರಿಗೆ ಪ್ರೀತಿಪಾತ್ರರೊಂದಿಗೆ ಭಿನ್ನಾಭಿಪ್ರಾಯಗಳು ಬರಬಹುದು
ಇಂದು ಈ ರಾಶಿಯವರಿಗೆ ಪ್ರೀತಿಪಾತ್ರರೊಂದಿಗೆ ಭಿನ್ನಾಭಿಪ್ರಾಯಗಳು ಬರಬಹುದು
ಪೆಟ್ರೋಲ್ ಬಂಕ್​ನಲ್ಲಿ ಡೀಸೆಲ್​ನಿಂದ ಗಾಡಿ ತೊಳೆದ ಯುವಕ!
ಪೆಟ್ರೋಲ್ ಬಂಕ್​ನಲ್ಲಿ ಡೀಸೆಲ್​ನಿಂದ ಗಾಡಿ ತೊಳೆದ ಯುವಕ!
ಬಾಗಲಕೋಟೆ ಬೈ ಎಲೆಕ್ಷನ್​​: ಬಿಜೆಪಿ, ಕಾಂಗ್ರೆಸ್​​ ನಡುವೆ ಕರಪತ್ರ ಫೈಟ್
ಬಾಗಲಕೋಟೆ ಬೈ ಎಲೆಕ್ಷನ್​​: ಬಿಜೆಪಿ, ಕಾಂಗ್ರೆಸ್​​ ನಡುವೆ ಕರಪತ್ರ ಫೈಟ್
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!