Sign In

By signing in or creating an account, you agree with Associated Broadcasting Company's Terms & Conditions and Privacy Policy.

Yuvraj Singh: 6,6,6,6,6,6,6.. ಯುವಿ ಸಿಡಿಲಬ್ಬರಕ್ಕೆ ಆಸೀಸ್ ದಿಗ್ಗಜರು ಹೈರಾಣು; ವಿಡಿಯೋ ನೋಡಿ

International Masters League T20: ಭಾರತ ಮಾಸ್ಟರ್ಸ್ ಮತ್ತು ಆಸ್ಟ್ರೇಲಿಯಾ ಮಾಸ್ಟರ್ಸ್ ನಡುವಿನ ಇಂಟರ್ನ್ಯಾಷನಲ್ ಮಾಸ್ಟರ್ಸ್ ಲೀಗ್ ಟಿ20 ಸೆಮಿಫೈನಲ್ ಪಂದ್ಯದಲ್ಲಿ ಭಾರತ ಏಕಪಕ್ಷೀಯವಾಗಿ ಗೆಲುವು ಸಾಧಿಸಿತು. ಯುವರಾಜ್ ಸಿಂಗ್ ಅವರ ಅದ್ಭುತ 59 ರನ್‌ಗಳ ಇನ್ನಿಂಗ್ಸ್‌ (30 ಎಸೆತಗಳಲ್ಲಿ 7 ಸಿಕ್ಸರ್‌ಗಳು) ಗೆಲುವಿಗೆ ಪ್ರಮುಖ ಕಾರಣ. ಸಚಿನ್ ಮತ್ತು ಇರ್ಫಾನ್ ಪಠಾಣ್ ಕೂಡ ಉತ್ತಮ ಪ್ರದರ್ಶನ ನೀಡಿದರು. ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ 126 ರನ್‌ಗಳಿಗೆ ಆಲೌಟ್ ಆಯಿತು.

Yuvraj Singh: 6,6,6,6,6,6,6.. ಯುವಿ ಸಿಡಿಲಬ್ಬರಕ್ಕೆ ಆಸೀಸ್ ದಿಗ್ಗಜರು ಹೈರಾಣು; ವಿಡಿಯೋ ನೋಡಿ
Yuvraj Singh
Follow us
ಪೃಥ್ವಿಶಂಕರ
|

Updated on: Mar 14, 2025 | 5:42 PM

ಇಂಟರ್ನ್ಯಾಷನಲ್ ಮಾಸ್ಟರ್ಸ್ ಲೀಗ್ ಟಿ20 ಯ (International Masters League T20) ಮೊದಲ ಸೆಮಿಫೈನಲ್ ಪಂದ್ಯವು ಇಂಡಿಯಾ ಮಾಸ್ಟರ್ಸ್ ಮತ್ತು ಆಸ್ಟ್ರೇಲಿಯಾ ಮಾಸ್ಟರ್ಸ್ ತಂಡಗಳ ನಡುವೆ ನಡೆಯಿತು. ಈ ಪಂದ್ಯದಲ್ಲಿ ಇಂಡಿಯಾ ಮಾಸ್ಟರ್ಸ್ ತಂಡ ಏಕಪಕ್ಷೀಯವಾಗಿ ಗೆಲುವು ಸಾಧಿಸಿ ಫೈನಲ್​ಗೆ ಅರ್ಹತೆ ಪಡೆದುಕೊಂಡಿದೆ. ತಂಡದ ಈ ಗೆಲುವಿನಲ್ಲಿ ಟೀಂ ಇಂಡಿಯಾದ ಮಾಜಿ ಆಟಗಾರ ಯುವರಾಜ್ ಸಿಂಗ್ (Yuvraj Singh) ಅವರ ಸ್ಫೋಟಕ ಇನ್ನಿಂಗ್ಸ್ ಪ್ರಮುಖ ಪಾತ್ರವಹಿಸಿತು. ಆಕ್ರಮಣಕಾರಿ ಬ್ಯಾಟಿಂಗ್‌ಗೆ ಹೆಸರುವಾಸಿಯಾದ ಯುವರಾಜ್ ಈ ಪಂದ್ಯದಲ್ಲಿಯೂ ತಮ್ಮ ಹಳೆಯ ಫಾರ್ಮ್ ಪ್ರದರ್ಶಿಸಿ ಎದುರಾಳಿ ಬೌಲರ್‌ಗಳನ್ನು ಸದೆಬಡಿದರು.

ಸಿಕ್ಸರ್ ಕಿಂಗ್ ಯುವರಾಜ್ ಸಿಂಗ್

ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಇಂಡಿಯಾ ಮಾಸ್ಟರ್ಸ್ ಪರ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಬಂದ ಯುವರಾಜ್ ಆರಂಭದಿಂದಲೂ ಬೌಂಡರಿ ಮತ್ತು ಸಿಕ್ಸರ್‌ಗಳ ಸುರಿಮಳೆಗೈದರು. ಯುವಿಯ ಈ ಹೊಡಿಬಡಿ ಆಟ ಆಸೀಸ್ ಬೌಲರ್​ಗಳ ಲಯವನ್ನು ಹಾಳು ಮಾಡಿದಲ್ಲದೆ, ಆಸೀಸ್ ಲೆಜೆಂಡ್ಸ್, ಯುವಿ ವಿಕೆಟ್ ಪಡೆಯಲು ಸಾಕಷ್ಟು ಬೆವರು ಹರಿಸಬೇಕಾಯಿತು. ಕ್ರೀಸ್​ನಲ್ಲಿ ಇರುವವರೆಗೂ ಆಸೀಸ್ ಬೌಲರ್‌ಗಳನ್ನು ಕಾಡಿದ ಯುವಿ ತಂಡವನ್ನು ಬೃಹತ್ ಮೊತ್ತಕ್ಕೆ ಕೊಂಡೊಯ್ದಿದಲ್ಲದೆ, ಸೆಮಿಫೈನಲ್‌ನಲ್ಲಿ ಗೆಲುವಿನ ಹಾದಿಯನ್ನು ಸುಗಮಗೊಳಿಸಿತು.

ಇದನ್ನೂ ಓದಿ
Image
ಕಿಂಗ್ ಕೊಹ್ಲಿಯ ಹೊಸ ಲುಕ್​ಗೆ ಎಷ್ಟು ಮಾರ್ಕ್ಸ್​ ಕೊಡ್ತೀರಾ? ಫೋಟೋ ನೋಡಿ
Image
ಅನುಭವಿಗೆ ತಂಡದ ನಾಯಕತ್ವವಹಿಸಿದ ಡೆಲ್ಲಿ ಕ್ಯಾಪಿಟಲ್ಸ್
Image
ಆಸ್ಟ್ರೇಲಿಯಾವನ್ನು 94 ರನ್​ಗಳಿಂದ ಮಣಿಸಿ ಫೈನಲ್​ಗೇರಿದ ಇಂಡಿಯಾ ಮಾಸ್ಟರ್ಸ್
Image
ಇಂಟರ್ನ್ಯಾಷನಲ್ ಮಾಸ್ಟರ್ಸ್ ಲೀಗ್; ಇಂಡಿಯಾ ಮಾಸ್ಟರ್ಸ್​ಗೆ ಸತತ 2ನೇ ಜಯ

ಈ ಪಂದ್ಯದಲ್ಲಿ ಯುವರಾಜ್ ಸಿಂಗ್ ಕೇವಲ 30 ಎಸೆತಗಳಲ್ಲಿ 196.67 ಸ್ಟ್ರೈಕ್ ರೇಟ್‌ನಲ್ಲಿ 59 ರನ್ ಚಚ್ಚಿದರು. ಯುವಿಯ ಈ ಸ್ಫೋಟಕ ಇನ್ನಿಂಗ್ಸ್​ನಲ್ಲಿ 1 ಬೌಂಡರಿ ಮತ್ತು 7 ಸಿಕ್ಸರ್‌ಗಳು ಸೇರಿದ್ದವು. ಅಂದರೆ ಯುವಿ ತಮ್ಮ ಇನ್ನಿಂಗ್ಸ್‌ನಲ್ಲಿ ಕೇವಲ ಸಿಕ್ಸರ್‌ಗಳಿಂದಲೇ 42 ರನ್‌ಗಳನ್ನು ಕಲೆಹಾಕಿದರು. ಈ ಲೀಗ್‌ನಲ್ಲಿ ಒಂದೇ ಗೇರ್​ನಲ್ಲಿ ಬ್ಯಾಟಿಂಗ್ ಮಾಡುತ್ತಿರುವ ಯುವಿ ಆಡಿರುವ 5 ಪಂದ್ಯಗಳ 4 ಇನ್ನಿಂಗ್ಸ್‌ಗಳಲ್ಲಿ 193.02 ಸ್ಟ್ರೈಕ್ ರೇಟ್ ಮತ್ತು 166.00 ಸರಾಸರಿಯಲ್ಲಿ 166 ರನ್ ಗಳಿಸಿದ್ದಾರೆ. ಇದರಲ್ಲಿ 13 ಬೌಂಡರಿ ಮತ್ತು 13 ಸಿಕ್ಸರ್‌ಗಳು ಸೇರಿವೆ.

ಇದನ್ನೂ ಓದಿ:IML 2025: ಸಚಿನ್, ಯುವಿ ಸಿಡಿಲಬ್ಬರ; ಆಸ್ಟ್ರೇಲಿಯಾವನ್ನು ಬಗ್ಗುಬಡಿದು ಫೈನಲ್​ಗೇರಿದ ಇಂಡಿಯಾ  

ಇಂಡಿಯಾ ಮಾಸ್ಟರ್ಸ್‌ಗೆ ಏಕಪಕ್ಷೀಯ ಗೆಲುವು

ಪಂದ್ಯದ ಬಗ್ಗೆ ಹೇಳುವುದಾದರೆ, ಮೊದಲು ಬ್ಯಾಟಿಂಗ್ ಮಾಡಿದ ಇಂಡಿಯಾ ಮಾಸ್ಟರ್ಸ್ 20 ಓವರ್‌ಗಳಲ್ಲಿ 7 ವಿಕೆಟ್‌ಗಳ ನಷ್ಟಕ್ಕೆ 220 ರನ್ ಗಳಿಸಿತು. ತಂಡದ ಪರ ಸಚಿನ್ ತೆಂಡೂಲ್ಕರ್ 30 ಎಸೆತಗಳಲ್ಲಿ 42 ರನ್ ಗಳಿಸಿ ನಾಯಕತ್ವದ ಇನ್ನಿಂಗ್ಸ್ ಆಡಿದರೆ, ಯೂಸುಫ್ ಪಠಾಣ್ 10 ಎಸೆತಗಳಲ್ಲಿ 23 ರನ್ ಗಳಿಸಿದರು. ಇರ್ಫಾನ್ ಪಠಾಣ್ ಕೂಡ 7 ಎಸೆತಗಳಲ್ಲಿ 19 ರನ್ ಗಳಿಸಿ ಅಜೇಯರಾಗುಳಿದರು. ಮತ್ತೊಂದೆಡೆ, ಈ ಸವಾಲಿನ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ 18.1 ಓವರ್‌ಗಳಲ್ಲಿ 126 ರನ್‌ಗಳಿಗೆ ಆಲೌಟ್ ಆಯಿತು. ಬೌಲಿಂಗ್‌ನಲ್ಲಿ ಮಿಂಚಿದ ಶಹಬಾಜ್ ನದೀಮ್ ಗರಿಷ್ಠ 4 ವಿಕೆಟ್‌ಗಳನ್ನು ಪಡೆದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸ್ಪೈಸ್‌ಜೆಟ್ ಪ್ರಯಾಣಿಕರೊಂದಿಗೆ ಡ್ಯಾನ್ಸ್ ಮಾಡಿ ಹೋಳಿ ಆಚರಿಸಿದ ಸಿಬ್ಬಂದಿ
ಸ್ಪೈಸ್‌ಜೆಟ್ ಪ್ರಯಾಣಿಕರೊಂದಿಗೆ ಡ್ಯಾನ್ಸ್ ಮಾಡಿ ಹೋಳಿ ಆಚರಿಸಿದ ಸಿಬ್ಬಂದಿ
ಬೆಂಗಳೂರಿನಲ್ಲಿ ಶ್ವಾನದ ಮೇಲೆ ಅತ್ಯಾಚಾರವೆಸಗಿ ವಿಕೃತಿ
ಬೆಂಗಳೂರಿನಲ್ಲಿ ಶ್ವಾನದ ಮೇಲೆ ಅತ್ಯಾಚಾರವೆಸಗಿ ವಿಕೃತಿ
ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಪ್ರದೀಪ್​ ಈಶ್ವರ್
ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಪ್ರದೀಪ್​ ಈಶ್ವರ್
ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ
ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ
ಗೋರಖ್‌ಪುರದಲ್ಲಿ ಬಣ್ಣ ಎರಚಿ ಸಿಎಂ ಯೋಗಿ ಆದಿತ್ಯನಾಥ್ ಹೋಳಿ ಸಂಭ್ರಮ
ಗೋರಖ್‌ಪುರದಲ್ಲಿ ಬಣ್ಣ ಎರಚಿ ಸಿಎಂ ಯೋಗಿ ಆದಿತ್ಯನಾಥ್ ಹೋಳಿ ಸಂಭ್ರಮ
ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್
ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್
‘ಅಪ್ಪು’ ಮರು ಬಿಡುಗಡೆ: ಅಣ್ಣಾವ್ರ ಅಭಿಮಾನಿಗಳಿಂದ ಮತ್ತೊಂದು ಬೇಡಿಕೆ
‘ಅಪ್ಪು’ ಮರು ಬಿಡುಗಡೆ: ಅಣ್ಣಾವ್ರ ಅಭಿಮಾನಿಗಳಿಂದ ಮತ್ತೊಂದು ಬೇಡಿಕೆ
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ
ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ