Sign In

By signing in or creating an account, you agree with Associated Broadcasting Company's Terms & Conditions and Privacy Policy.

Yuvraj Singh: 6,6,6,6,6,6,6.. ಯುವಿ ಸಿಡಿಲಬ್ಬರಕ್ಕೆ ಆಸೀಸ್ ದಿಗ್ಗಜರು ಹೈರಾಣು; ವಿಡಿಯೋ ನೋಡಿ

International Masters League T20: ಭಾರತ ಮಾಸ್ಟರ್ಸ್ ಮತ್ತು ಆಸ್ಟ್ರೇಲಿಯಾ ಮಾಸ್ಟರ್ಸ್ ನಡುವಿನ ಇಂಟರ್ನ್ಯಾಷನಲ್ ಮಾಸ್ಟರ್ಸ್ ಲೀಗ್ ಟಿ20 ಸೆಮಿಫೈನಲ್ ಪಂದ್ಯದಲ್ಲಿ ಭಾರತ ಏಕಪಕ್ಷೀಯವಾಗಿ ಗೆಲುವು ಸಾಧಿಸಿತು. ಯುವರಾಜ್ ಸಿಂಗ್ ಅವರ ಅದ್ಭುತ 59 ರನ್‌ಗಳ ಇನ್ನಿಂಗ್ಸ್‌ (30 ಎಸೆತಗಳಲ್ಲಿ 7 ಸಿಕ್ಸರ್‌ಗಳು) ಗೆಲುವಿಗೆ ಪ್ರಮುಖ ಕಾರಣ. ಸಚಿನ್ ಮತ್ತು ಇರ್ಫಾನ್ ಪಠಾಣ್ ಕೂಡ ಉತ್ತಮ ಪ್ರದರ್ಶನ ನೀಡಿದರು. ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ 126 ರನ್‌ಗಳಿಗೆ ಆಲೌಟ್ ಆಯಿತು.

Yuvraj Singh: 6,6,6,6,6,6,6.. ಯುವಿ ಸಿಡಿಲಬ್ಬರಕ್ಕೆ ಆಸೀಸ್ ದಿಗ್ಗಜರು ಹೈರಾಣು; ವಿಡಿಯೋ ನೋಡಿ
Yuvraj Singh
Follow us
ಪೃಥ್ವಿಶಂಕರ
|

Updated on: Mar 14, 2025 | 5:42 PM

ಇಂಟರ್ನ್ಯಾಷನಲ್ ಮಾಸ್ಟರ್ಸ್ ಲೀಗ್ ಟಿ20 ಯ (International Masters League T20) ಮೊದಲ ಸೆಮಿಫೈನಲ್ ಪಂದ್ಯವು ಇಂಡಿಯಾ ಮಾಸ್ಟರ್ಸ್ ಮತ್ತು ಆಸ್ಟ್ರೇಲಿಯಾ ಮಾಸ್ಟರ್ಸ್ ತಂಡಗಳ ನಡುವೆ ನಡೆಯಿತು. ಈ ಪಂದ್ಯದಲ್ಲಿ ಇಂಡಿಯಾ ಮಾಸ್ಟರ್ಸ್ ತಂಡ ಏಕಪಕ್ಷೀಯವಾಗಿ ಗೆಲುವು ಸಾಧಿಸಿ ಫೈನಲ್​ಗೆ ಅರ್ಹತೆ ಪಡೆದುಕೊಂಡಿದೆ. ತಂಡದ ಈ ಗೆಲುವಿನಲ್ಲಿ ಟೀಂ ಇಂಡಿಯಾದ ಮಾಜಿ ಆಟಗಾರ ಯುವರಾಜ್ ಸಿಂಗ್ (Yuvraj Singh) ಅವರ ಸ್ಫೋಟಕ ಇನ್ನಿಂಗ್ಸ್ ಪ್ರಮುಖ ಪಾತ್ರವಹಿಸಿತು. ಆಕ್ರಮಣಕಾರಿ ಬ್ಯಾಟಿಂಗ್‌ಗೆ ಹೆಸರುವಾಸಿಯಾದ ಯುವರಾಜ್ ಈ ಪಂದ್ಯದಲ್ಲಿಯೂ ತಮ್ಮ ಹಳೆಯ ಫಾರ್ಮ್ ಪ್ರದರ್ಶಿಸಿ ಎದುರಾಳಿ ಬೌಲರ್‌ಗಳನ್ನು ಸದೆಬಡಿದರು.

ಸಿಕ್ಸರ್ ಕಿಂಗ್ ಯುವರಾಜ್ ಸಿಂಗ್

ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಇಂಡಿಯಾ ಮಾಸ್ಟರ್ಸ್ ಪರ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಬಂದ ಯುವರಾಜ್ ಆರಂಭದಿಂದಲೂ ಬೌಂಡರಿ ಮತ್ತು ಸಿಕ್ಸರ್‌ಗಳ ಸುರಿಮಳೆಗೈದರು. ಯುವಿಯ ಈ ಹೊಡಿಬಡಿ ಆಟ ಆಸೀಸ್ ಬೌಲರ್​ಗಳ ಲಯವನ್ನು ಹಾಳು ಮಾಡಿದಲ್ಲದೆ, ಆಸೀಸ್ ಲೆಜೆಂಡ್ಸ್, ಯುವಿ ವಿಕೆಟ್ ಪಡೆಯಲು ಸಾಕಷ್ಟು ಬೆವರು ಹರಿಸಬೇಕಾಯಿತು. ಕ್ರೀಸ್​ನಲ್ಲಿ ಇರುವವರೆಗೂ ಆಸೀಸ್ ಬೌಲರ್‌ಗಳನ್ನು ಕಾಡಿದ ಯುವಿ ತಂಡವನ್ನು ಬೃಹತ್ ಮೊತ್ತಕ್ಕೆ ಕೊಂಡೊಯ್ದಿದಲ್ಲದೆ, ಸೆಮಿಫೈನಲ್‌ನಲ್ಲಿ ಗೆಲುವಿನ ಹಾದಿಯನ್ನು ಸುಗಮಗೊಳಿಸಿತು.

ಇದನ್ನೂ ಓದಿ
Image
ಕಿಂಗ್ ಕೊಹ್ಲಿಯ ಹೊಸ ಲುಕ್​ಗೆ ಎಷ್ಟು ಮಾರ್ಕ್ಸ್​ ಕೊಡ್ತೀರಾ? ಫೋಟೋ ನೋಡಿ
Image
ಅನುಭವಿಗೆ ತಂಡದ ನಾಯಕತ್ವವಹಿಸಿದ ಡೆಲ್ಲಿ ಕ್ಯಾಪಿಟಲ್ಸ್
Image
ಆಸ್ಟ್ರೇಲಿಯಾವನ್ನು 94 ರನ್​ಗಳಿಂದ ಮಣಿಸಿ ಫೈನಲ್​ಗೇರಿದ ಇಂಡಿಯಾ ಮಾಸ್ಟರ್ಸ್
Image
ಇಂಟರ್ನ್ಯಾಷನಲ್ ಮಾಸ್ಟರ್ಸ್ ಲೀಗ್; ಇಂಡಿಯಾ ಮಾಸ್ಟರ್ಸ್​ಗೆ ಸತತ 2ನೇ ಜಯ

ಈ ಪಂದ್ಯದಲ್ಲಿ ಯುವರಾಜ್ ಸಿಂಗ್ ಕೇವಲ 30 ಎಸೆತಗಳಲ್ಲಿ 196.67 ಸ್ಟ್ರೈಕ್ ರೇಟ್‌ನಲ್ಲಿ 59 ರನ್ ಚಚ್ಚಿದರು. ಯುವಿಯ ಈ ಸ್ಫೋಟಕ ಇನ್ನಿಂಗ್ಸ್​ನಲ್ಲಿ 1 ಬೌಂಡರಿ ಮತ್ತು 7 ಸಿಕ್ಸರ್‌ಗಳು ಸೇರಿದ್ದವು. ಅಂದರೆ ಯುವಿ ತಮ್ಮ ಇನ್ನಿಂಗ್ಸ್‌ನಲ್ಲಿ ಕೇವಲ ಸಿಕ್ಸರ್‌ಗಳಿಂದಲೇ 42 ರನ್‌ಗಳನ್ನು ಕಲೆಹಾಕಿದರು. ಈ ಲೀಗ್‌ನಲ್ಲಿ ಒಂದೇ ಗೇರ್​ನಲ್ಲಿ ಬ್ಯಾಟಿಂಗ್ ಮಾಡುತ್ತಿರುವ ಯುವಿ ಆಡಿರುವ 5 ಪಂದ್ಯಗಳ 4 ಇನ್ನಿಂಗ್ಸ್‌ಗಳಲ್ಲಿ 193.02 ಸ್ಟ್ರೈಕ್ ರೇಟ್ ಮತ್ತು 166.00 ಸರಾಸರಿಯಲ್ಲಿ 166 ರನ್ ಗಳಿಸಿದ್ದಾರೆ. ಇದರಲ್ಲಿ 13 ಬೌಂಡರಿ ಮತ್ತು 13 ಸಿಕ್ಸರ್‌ಗಳು ಸೇರಿವೆ.

ಇದನ್ನೂ ಓದಿ:IML 2025: ಸಚಿನ್, ಯುವಿ ಸಿಡಿಲಬ್ಬರ; ಆಸ್ಟ್ರೇಲಿಯಾವನ್ನು ಬಗ್ಗುಬಡಿದು ಫೈನಲ್​ಗೇರಿದ ಇಂಡಿಯಾ  

ಇಂಡಿಯಾ ಮಾಸ್ಟರ್ಸ್‌ಗೆ ಏಕಪಕ್ಷೀಯ ಗೆಲುವು

ಪಂದ್ಯದ ಬಗ್ಗೆ ಹೇಳುವುದಾದರೆ, ಮೊದಲು ಬ್ಯಾಟಿಂಗ್ ಮಾಡಿದ ಇಂಡಿಯಾ ಮಾಸ್ಟರ್ಸ್ 20 ಓವರ್‌ಗಳಲ್ಲಿ 7 ವಿಕೆಟ್‌ಗಳ ನಷ್ಟಕ್ಕೆ 220 ರನ್ ಗಳಿಸಿತು. ತಂಡದ ಪರ ಸಚಿನ್ ತೆಂಡೂಲ್ಕರ್ 30 ಎಸೆತಗಳಲ್ಲಿ 42 ರನ್ ಗಳಿಸಿ ನಾಯಕತ್ವದ ಇನ್ನಿಂಗ್ಸ್ ಆಡಿದರೆ, ಯೂಸುಫ್ ಪಠಾಣ್ 10 ಎಸೆತಗಳಲ್ಲಿ 23 ರನ್ ಗಳಿಸಿದರು. ಇರ್ಫಾನ್ ಪಠಾಣ್ ಕೂಡ 7 ಎಸೆತಗಳಲ್ಲಿ 19 ರನ್ ಗಳಿಸಿ ಅಜೇಯರಾಗುಳಿದರು. ಮತ್ತೊಂದೆಡೆ, ಈ ಸವಾಲಿನ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ 18.1 ಓವರ್‌ಗಳಲ್ಲಿ 126 ರನ್‌ಗಳಿಗೆ ಆಲೌಟ್ ಆಯಿತು. ಬೌಲಿಂಗ್‌ನಲ್ಲಿ ಮಿಂಚಿದ ಶಹಬಾಜ್ ನದೀಮ್ ಗರಿಷ್ಠ 4 ವಿಕೆಟ್‌ಗಳನ್ನು ಪಡೆದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
VIDEO: ಆಂಬ್ಯುಲೆನ್ಸ್​ಗೆ ಕರೆ ಮಾಡಿ, ಆದರೆ ಅದು ನನಗಲ್ಲ..!
VIDEO: ಆಂಬ್ಯುಲೆನ್ಸ್​ಗೆ ಕರೆ ಮಾಡಿ, ಆದರೆ ಅದು ನನಗಲ್ಲ..!
ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ ಕಾರು ಜಸ್ಟ್​ ಮಿಸ್, ಬೈಕ್ ಹೋಗೇಬಿಡ್ತು
ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ ಕಾರು ಜಸ್ಟ್​ ಮಿಸ್, ಬೈಕ್ ಹೋಗೇಬಿಡ್ತು
Daily Devotional: ಪ್ರದೂಷ ಕಾಲದ ಮಹತ್ವ ಹಾಗೂ ಹಿಂದಿನ ರಹಸ್ಯ ತಿಳಿಯಿರಿ
Daily Devotional: ಪ್ರದೂಷ ಕಾಲದ ಮಹತ್ವ ಹಾಗೂ ಹಿಂದಿನ ರಹಸ್ಯ ತಿಳಿಯಿರಿ
ಬಾಂಬೆ ಹೈಕೋರ್ಟ್​ ಆವರಣದಲ್ಲಿ ವಾಮಾಚಾರ?
ಬಾಂಬೆ ಹೈಕೋರ್ಟ್​ ಆವರಣದಲ್ಲಿ ವಾಮಾಚಾರ?