AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yuvraj Singh: ಅಭ್ಯಾಸದ ವೇಳೆ ಸಿಕ್ಸ್​ಗಳ ಸುರಿಮಳೆ: ಕಂಬ್ಯಾಕ್ ಸೂಚನೆ ನೀಡಿದ ಯುವಿ

Yuvraj Singh: ಯುಎಇ ಟಿ20 ಲೀಗ್ ಹಾಗೂ ಸೌತ್ ಆಫ್ರಿಕಾ ಟಿ20 ಲೀಗ್​ಗಳಲ್ಲಿ ಐಪಿಎಲ್​ ಫ್ರಾಂಚೈಸಿಗಳು ಬಂಡವಾಳ ಹೂಡಿದ್ದಾರೆ. ಇದಾಗ್ಯೂ ಐಪಿಎಲ್​ ಆಡುವ ಭಾರತೀಯ ಆಟಗಾರರಿಗೆ ಈ ಲೀಗ್​ನಲ್ಲಿ ಭಾಗವಹಿಸಲು ಅವಕಾಶವಿಲ್ಲ ಎಂದು ಬಿಸಿಸಿಐ ತಿಳಿಸಿದೆ.

Yuvraj Singh: ಅಭ್ಯಾಸದ ವೇಳೆ ಸಿಕ್ಸ್​ಗಳ ಸುರಿಮಳೆ: ಕಂಬ್ಯಾಕ್ ಸೂಚನೆ ನೀಡಿದ ಯುವಿ
Yuvraj Singh
TV9 Web
| Edited By: |

Updated on: Aug 16, 2022 | 6:54 PM

Share

ಟೀಮ್ ಇಂಡಿಯಾ (Team India) ಮಾಜಿ ಆಲ್​ರೌಂಡರ್ ಯುವರಾಜ್ ಸಿಂಗ್ (Yuvraj Singh) ಕಂಬ್ಯಾಕ್ ಮಾಡಲಿದ್ದಾರೆ ಎಂಬ ಸುದ್ದಿಗಳು ಹಲವು ಬಾರಿ ಹರಿದಾಡಿದ್ದವು. ಆದರೆ ಬಾರಿ ಖುದ್ದು ಯುವಿ ಭರ್ಜರಿ ಅಭ್ಯಾಸದಲ್ಲಿ ನಿರತರಾಗುವ ಮೂಲಕ ಮತ್ತೆ ಮೈದಾನದಲ್ಲಿ ಕಾಣಿಸಿಕೊಳ್ಳುವ ಸೂಚನೆ ನೀಡಿದ್ದಾರೆ. ಅಷ್ಟೇ ಅಲ್ಲದೆ ಮುಂಬರುವ ಟೂರ್ನಮೆಂಟ್​ಗಾಗಿ ಅಭ್ಯಾಸ ಎಂದು ಕೂಡ ತಿಳಿಸಿದ್ದಾರೆ. ಆದರೆ ಯುವರಾಜ್ ಸಿಂಗ್ ಈಗ ಯಾವುದೇ ಟೂರ್ನಿಯನ್ನು ಆಡುತ್ತಿಲ್ಲ ಎಂಬುದು ವಿಶೇಷ. ಈಗಾಗಲೇ ಅವರ ಐಪಿಎಲ್ ಒಪ್ಪಂದ ಕೂಡ ಮುಗಿದಿದೆ. ಹೀಗಾಗಿ ಮತ್ತೆ ಐಪಿಎಲ್​ಗೆ ಕಂಬ್ಯಾಕ್ ಮಾಡಲು ಸಾಧ್ಯವಿಲ್ಲ.

ಆದರೆ ಇನ್ನೊಂದೆಡೆ ಯುಎಇ ಟಿ20 ಲೀಗ್ ಹಾಗೂ ಸೌತ್ ಆಫ್ರಿಕಾ ಟಿ20 ಲೀಗ್​ಗಳು ಬರುತ್ತಿವೆ. ಬಿಸಿಸಿಐ ಜೊತೆಗಿನ ಒಪ್ಪಂದ ಕೊನೆಗೊಳಿಸಿರುವ ಆಟಗಾರರು ಈ ಲೀಗ್​ನಲ್ಲಿ ಭಾಗವಹಿಸಬಹುದು. ಇದೀಗ ಯುವರಾಜ್ ಸಿಂಗ್ ದಿಢೀರಣೆ ಮೈದಾನದಲ್ಲಿ ಕಾಣಿಸಿಕೊಳ್ಳುವ ಮೂಲಕ ಹೊಸ ಟಿ20 ಲೀಗ್ ಆಡುವ ಸೂಚನೆ ನೀಡಿದ್ದಾರೆ. ಏಕೆಂದರೆ ಇತ್ತ ಯುವರಾಜ್ ಸಿಂಗ್ ಲೆಜೆಂಡ್ಸ್ ಕ್ರಿಕೆಟ್ ಲೀಗ್​ನ ಮಹರಾಜಾಸ್ ತಂಡದಲ್ಲೂ ಹೆಸರು ನೀಡಿಲ್ಲ. ಇದಾಗ್ಯೂ ಅವರು ಪೂರ್ಣ ಪ್ರಮಾಣದ ಮೈದಾನದಲ್ಲೇ ಅಭ್ಯಾಸಕ್ಕೆ ಮುಂದಾಗಿರುವುದು ಕಂಬ್ಯಾಕ್ ಮಾಡುವ ಸೂಚನೆ ಎಂದು ವಿಶ್ಲೇಷಿಸಲಾಗುತ್ತಿದೆ.

ಇದನ್ನೂ ಓದಿ
Image
Team India: 7 ತಿಂಗಳಲ್ಲಿ 7 ನಾಯಕರು: ವಿಶೇಷ ದಾಖಲೆ ಬರೆದ ಟೀಮ್ ಇಂಡಿಯಾ
Image
ಸಚಿನ್, ಧೋನಿಗೂ ಸಿಕ್ಕಿಲ್ಲ ಈ ಗೌರವ: ಇಂಗ್ಲೆಂಡ್ ಕ್ರಿಕೆಟ್ ಸ್ಟೇಡಿಯಂಗೆ ಭಾರತೀಯ ಕ್ರಿಕೆಟಿಗನ ಹೆಸರು..!
Image
Cheteshwar Pujara: ಒಟ್ಟು 997 ರನ್​: ಕೌಂಟಿ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದ ಪೂಜಾರ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಇನ್ನು ಅಭ್ಯಾಸದ ವೇಳೆ ಸಿಕ್ಸ್​ ಫೋರ್​ಗಳ ಮೂಲಕ ವಿಜ್ರಂಭಿಸಿರುವ ಯುವರಾಜ್ ಸಿಂಗ್ ತಮ್ಮ ಹಳೆಯ ಖದರ್ ತೋರಿಸಿದ್ದಾರೆ. ಯುವಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಈ ಆಕ್ರಮಣಕಾರಿ ಬ್ಯಾಟಿಂಗ್​ ವಿಡಿಯೋಗೆ ವೆಸ್ಟ್ ಇಂಡೀಸ್ ಮಾಜಿ ನಾಯಕ ಬ್ರಿಯಾನ್ ಲಾರಾ ಸೇರಿದಂತೆ ಅನೇಕರು ಪ್ರತಿಕ್ರಿಯಿಸಿದ್ದಾರೆ. ಅದರಲ್ಲೂ ಕ್ಲಾಸ್ ಪರ್ಮನೆಂಟ್ ಎಂದು ಶಿಖರ್ ಧವನ್ ಕಮೆಂಟಿಸಿದ್ದಾರೆ. ಇದಲ್ಲದೇ ಸೂರ್ಯಕುಮಾರ್ ಯಾದವ್ ಎಮೋಜಿಯನ್ನು ಶೇರ್ ಮಾಡುವ ಮೂಲಕ ಅದ್ಭುತ ಎಂದಿದ್ದಾರೆ.

ಒಟ್ಟಿನಲ್ಲಿ ಟೂರ್ನಿಗಾಗಿ ಸಜ್ಜಾಗುತ್ತಿದ್ದೇನೆ ಎಂದಿರುವ ಯುವರಾಜ್ ಸಿಂಗ್ ಯಾವ ಟೂರ್ನಮೆಂಟ್ ಎಂಬುದನ್ನು ಮಾತ್ರ ಬಹಿರಂಗಪಡಿಸಿಲ್ಲ. ಅತ್ತ ಯುಎಇ ಟಿ20 ಲೀಗ್ ಹಾಗೂ ಸೌತ್ ಆಫ್ರಿಕಾ ಟಿ20 ಲೀಗ್​ಗಳಲ್ಲಿ ಐಪಿಎಲ್​ ಫ್ರಾಂಚೈಸಿಗಳು ಬಂಡವಾಳ ಹೂಡಿದ್ದಾರೆ. ಇದಾಗ್ಯೂ ಐಪಿಎಲ್​ ಆಡುವ ಭಾರತೀಯ ಆಟಗಾರರಿಗೆ ಈ ಲೀಗ್​ನಲ್ಲಿ ಭಾಗವಹಿಸಲು ಅವಕಾಶವಿಲ್ಲ ಎಂದು ಬಿಸಿಸಿಐ ತಿಳಿಸಿದೆ.

ಇದನ್ನೂ ಓದಿ: CSA T20: ಜೋಹಾನ್ಸ್​ಬರ್ಗ್​ ಸೂಪರ್ ಕಿಂಗ್ಸ್​ ತಂಡಕ್ಕೆ ಐವರು ಆಟಗಾರರು ಆಯ್ಕೆ

ಇದೇ ಕಾರಣದಿಂದಾಗಿ ಇದೀಗ ಯುವರಾಜ್ ಸಿಂಗ್​ನಂತಹ ಸ್ಟಾರ್ ಆಟಗಾರರನ್ನು ಹೊಸ ಲೀಗ್​ಗೆ ಕರೆತರುವ ಪ್ರಯತ್ನಕ್ಕೆ ಐಪಿಎಲ್ ಫ್ರಾಂಚೈಸಿಗಳು ಮುಂದಾಗಿಯಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಒಟ್ಟಿನಲ್ಲಿ ಕಳೆದ ಕೆಲ ವರ್ಷಗಳಿಂದ ಮೈದಾನದಿಂದ ಮರೆಯಾಗಿದ್ದ ಯುವರಾಜ್ ಸಿಂಗ್ ಮತ್ತೆ ಟಿ20 ಲೀಗ್​ನಲ್ಲಿ ಕಾಣಿಸಿಕೊಂಡರೆ ಅವರ ಅಭಿಮಾನಿಗಳಿಗೆ ಅದಕ್ಕಿಂತ ದೊಡ್ಡ ಖುಷಿ ಬೇರೊಂದಿಲ್ಲ ಎನ್ನಬಹುದು.

Follow Us
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ