AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yuvraj Singh: ಕ್ರಿಕೆಟ್ ಇತಿಹಾಸದಲ್ಲಿ ಅಂದಿನ ಈ ದಿನ; 6,6,6,6,6,6 ಯುವರಾಜ್ ಸಿಂಗ್ ಸಿಕ್ಸರ್​ ಕಿಂಗ್ ಆಗಿ ಬದಲಾದ ದಿನ

ಕ್ರೀಸಿಗಿಳಿದ ಯುವರಾಜ್ ಸಿಂಗ್ ಪಂದ್ಯದ ಚಿತ್ರಣವನ್ನೇ ಬದಲಾಯಿಸಿದರು. ಇಂಗ್ಲೆಂಡ್ ಬಲಗೈ ವೇಗಿ ಸ್ಟುವರ್ಟ್ ಬ್ರಾಡ್ ಎಸೆದ ಓವರ್‌ನ ಎಲ್ಲ ಆರು ಎಸೆತಗಳನ್ನು ಯುವರಾಜ್ ಸಿಂಗ್ ಬೌಂಡರಿಗಟ್ಟಿದ್ದರು.

Yuvraj Singh: ಕ್ರಿಕೆಟ್ ಇತಿಹಾಸದಲ್ಲಿ ಅಂದಿನ ಈ ದಿನ; 6,6,6,6,6,6 ಯುವರಾಜ್ ಸಿಂಗ್ ಸಿಕ್ಸರ್​ ಕಿಂಗ್ ಆಗಿ ಬದಲಾದ ದಿನ
Yuvraj Singh
TV9 Web
| Edited By: |

Updated on: Sep 19, 2021 | 11:55 AM

Share

ಟೀಮ್ ಇಂಡಿಯಾದ ಮಾಜಿ ಬ್ಯಾಟ್ಸ್‌ಮನ್, ಸಿಕ್ಸರ್‌ ಕಿಂಗ್ ಯುವರಾಜ್ ಸಿಂಗ್‌ (Yuvraj Singh) ಸಿಕ್ಸ್ ಸಿಕ್ಸ್ ವಿಶ್ವದಾಖಲೆ ನಿರ್ಮಿಸಿದ್ದು ಇದೇ ದಿನ. 14 ವರ್ಷಗಳ ಹಿಂದೆ ಅಂದಿನ ಇದೇ ದಿನದಲ್ಲಿ ದಕ್ಷಿಣ ಆಫ್ರಿಕಾದ ಡರ್ಬನ್‌ನಲ್ಲಿ ನಡೆದ ಚೊಚ್ಚಲ ಟಿ-20 ವಿಶ್ವಕಪ್ (T20 World Cup) ಕ್ರಿಕೆಟ್‌ನಲ್ಲಿ ಇಂಗ್ಲೆಂಡ್ (England) ವಿರುದ್ಧ ನಡೆದ ಪಂದ್ಯದಲ್ಲಿ ಯುವರಾಜ್ ಸಿಂಗ್ ಓವರ್‌ವೊಂದರ ಎಲ್ಲ ಆರು ಎಸೆತಗಳನ್ನು ಸಿಕ್ಸರ್‌ಗಟ್ಟುವ ಮೂಲಕ ದಾಖಲೆ ಬರೆದಿದ್ದರು. ಈ ಪಂದ್ಯ ನಡೆದಿದ್ದ 2007ರ ಸೆಪ್ಟೆಂಬರ್ 19ರಂದು. ಇಂಗ್ಲೆಂಡ್ ವೇಗಿ ಸ್ಟುವರ್ಟ್ ಬ್ರಾಡ್‌ (Stuart Broad) ಅವರ ಓವರ್ ಒಂದರಲ್ಲಿ ಯುವಿ ಪ್ರತೀ ಎಸೆತಕ್ಕೂ ಸಿಕ್ಸ್ ಬಾರಿಸಿದ್ದರು. ಆ ಪಂದ್ಯದಲ್ಲಿ ಯುವಿ ಕೇವಲ 16 ಎಸತಗಳಿಗೆ 58 ರನ್ ಕಲೆ ಹಾಕಿದ್ದರು.

ಭಾರತ ನಾಯಕ ಮಹೇಂದ್ರ ಸಿಂಗ್ ಧೋನಿ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದರು. ಇದರಂತೆ ಓಪನರ್‌ಗಳಾದ ವೀರೇಂದ್ರ ಸೆಹ್ವಾಗ್ (68) ಹಾಗೂ ಗೌತಮ್ ಗಂಭೀರ್ (58) ಬಿರುಸಿನ ಆರಂಭವೊದಗಿಸಿದ್ದರು. ಬಳಿಕ ಕ್ರೀಸಿಗಿಳಿದ ಯುವರಾಜ್ ಸಿಂಗ್ ಪಂದ್ಯದ ಚಿತ್ರಣವನ್ನೇ ಬದಲಾಯಿಸಿದರು. ಇಂಗ್ಲೆಂಡ್ ಬಲಗೈ ವೇಗಿ ಸ್ಟುವರ್ಟ್ ಬ್ರಾಡ್ ಎಸೆದ ಓವರ್‌ನ ಎಲ್ಲ ಆರು ಎಸೆತಗಳನ್ನು ಯುವರಾಜ್ ಸಿಂಗ್ ಬೌಂಡರಿಗಟ್ಟಿದ್ದರು.

ಇದಕ್ಕೂ ಮೊದಲು ಆಂಡ್ರ್ಯೂ ಫ್ಲಿಂಟಾಫ್ ಕೆಣಕಲು ಮುಂದಾಗಿದ್ದರು. ಇದರಿಂದ ತೀವ್ರ ಕುಪಿತಗೊಂಡಿದ್ದ ಯುವಿ ತಮ್ಮ ಬ್ಯಾಟ್ ಮೂಲಕವೇ ಉತ್ತರ ನೀಡಿದ್ದರು. ಅಷ್ಟೇ ಕೇವಲ 12 ಎಸೆತಗಳಲ್ಲೇ ಅರ್ಧಶತಕ ಬಾರಿಸುವ ಮೂಲಕ ವಿಶ್ವ ದಾಖಲೆ ಬರೆದರು. ಅಂತಿಮವಾಗಿ 16 ಎಸೆತಗಳನ್ನು ಎದುರಿಸಿದ ಯುವಿ ಮೂರು ಬೌಂಡರಿ ಹಾಗೂ ಏಳು ಭರ್ಜರಿ ಸಿಕ್ಸರ್‌ಗಳ ನೆರವಿನಿಂದ 58 ರನ್ ಗಳಿಸಿದರು. ಪರಿಣಾಮ ಭಾರತ ನಾಲ್ಕು ವಿಕೆಟ್ ನಷ್ಟಕ್ಕೆ 218 ರನ್‌ಗಳ ಬೃಹತ್ ಮೊತ್ತ ಪೇರಿಸಿತು.

ಬಳಿಕ ಗುರಿ ಬೆನ್ನಟ್ಟಿದ ಆಂಗ್ಲರ ತಂಡ ಆರು ವಿಕೆಟ್ ನಷ್ಟಕ್ಕೆ 200 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಮೂಲಕ ಭಾರತ 18 ರನ್ ಅಂತರದ ರೋಚಕ ಗೆಲುವು ದಾಖಲಿಸಿತು.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ