AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yuvraj Singh: ಕ್ರಿಕೆಟ್ ಇತಿಹಾಸದಲ್ಲಿ ಅಂದಿನ ಈ ದಿನ; 6,6,6,6,6,6 ಯುವರಾಜ್ ಸಿಂಗ್ ಸಿಕ್ಸರ್​ ಕಿಂಗ್ ಆಗಿ ಬದಲಾದ ದಿನ

ಕ್ರೀಸಿಗಿಳಿದ ಯುವರಾಜ್ ಸಿಂಗ್ ಪಂದ್ಯದ ಚಿತ್ರಣವನ್ನೇ ಬದಲಾಯಿಸಿದರು. ಇಂಗ್ಲೆಂಡ್ ಬಲಗೈ ವೇಗಿ ಸ್ಟುವರ್ಟ್ ಬ್ರಾಡ್ ಎಸೆದ ಓವರ್‌ನ ಎಲ್ಲ ಆರು ಎಸೆತಗಳನ್ನು ಯುವರಾಜ್ ಸಿಂಗ್ ಬೌಂಡರಿಗಟ್ಟಿದ್ದರು.

Yuvraj Singh: ಕ್ರಿಕೆಟ್ ಇತಿಹಾಸದಲ್ಲಿ ಅಂದಿನ ಈ ದಿನ; 6,6,6,6,6,6 ಯುವರಾಜ್ ಸಿಂಗ್ ಸಿಕ್ಸರ್​ ಕಿಂಗ್ ಆಗಿ ಬದಲಾದ ದಿನ
Yuvraj Singh
TV9 Web
| Edited By: |

Updated on: Sep 19, 2021 | 11:55 AM

Share

ಟೀಮ್ ಇಂಡಿಯಾದ ಮಾಜಿ ಬ್ಯಾಟ್ಸ್‌ಮನ್, ಸಿಕ್ಸರ್‌ ಕಿಂಗ್ ಯುವರಾಜ್ ಸಿಂಗ್‌ (Yuvraj Singh) ಸಿಕ್ಸ್ ಸಿಕ್ಸ್ ವಿಶ್ವದಾಖಲೆ ನಿರ್ಮಿಸಿದ್ದು ಇದೇ ದಿನ. 14 ವರ್ಷಗಳ ಹಿಂದೆ ಅಂದಿನ ಇದೇ ದಿನದಲ್ಲಿ ದಕ್ಷಿಣ ಆಫ್ರಿಕಾದ ಡರ್ಬನ್‌ನಲ್ಲಿ ನಡೆದ ಚೊಚ್ಚಲ ಟಿ-20 ವಿಶ್ವಕಪ್ (T20 World Cup) ಕ್ರಿಕೆಟ್‌ನಲ್ಲಿ ಇಂಗ್ಲೆಂಡ್ (England) ವಿರುದ್ಧ ನಡೆದ ಪಂದ್ಯದಲ್ಲಿ ಯುವರಾಜ್ ಸಿಂಗ್ ಓವರ್‌ವೊಂದರ ಎಲ್ಲ ಆರು ಎಸೆತಗಳನ್ನು ಸಿಕ್ಸರ್‌ಗಟ್ಟುವ ಮೂಲಕ ದಾಖಲೆ ಬರೆದಿದ್ದರು. ಈ ಪಂದ್ಯ ನಡೆದಿದ್ದ 2007ರ ಸೆಪ್ಟೆಂಬರ್ 19ರಂದು. ಇಂಗ್ಲೆಂಡ್ ವೇಗಿ ಸ್ಟುವರ್ಟ್ ಬ್ರಾಡ್‌ (Stuart Broad) ಅವರ ಓವರ್ ಒಂದರಲ್ಲಿ ಯುವಿ ಪ್ರತೀ ಎಸೆತಕ್ಕೂ ಸಿಕ್ಸ್ ಬಾರಿಸಿದ್ದರು. ಆ ಪಂದ್ಯದಲ್ಲಿ ಯುವಿ ಕೇವಲ 16 ಎಸತಗಳಿಗೆ 58 ರನ್ ಕಲೆ ಹಾಕಿದ್ದರು.

ಭಾರತ ನಾಯಕ ಮಹೇಂದ್ರ ಸಿಂಗ್ ಧೋನಿ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದರು. ಇದರಂತೆ ಓಪನರ್‌ಗಳಾದ ವೀರೇಂದ್ರ ಸೆಹ್ವಾಗ್ (68) ಹಾಗೂ ಗೌತಮ್ ಗಂಭೀರ್ (58) ಬಿರುಸಿನ ಆರಂಭವೊದಗಿಸಿದ್ದರು. ಬಳಿಕ ಕ್ರೀಸಿಗಿಳಿದ ಯುವರಾಜ್ ಸಿಂಗ್ ಪಂದ್ಯದ ಚಿತ್ರಣವನ್ನೇ ಬದಲಾಯಿಸಿದರು. ಇಂಗ್ಲೆಂಡ್ ಬಲಗೈ ವೇಗಿ ಸ್ಟುವರ್ಟ್ ಬ್ರಾಡ್ ಎಸೆದ ಓವರ್‌ನ ಎಲ್ಲ ಆರು ಎಸೆತಗಳನ್ನು ಯುವರಾಜ್ ಸಿಂಗ್ ಬೌಂಡರಿಗಟ್ಟಿದ್ದರು.

ಇದಕ್ಕೂ ಮೊದಲು ಆಂಡ್ರ್ಯೂ ಫ್ಲಿಂಟಾಫ್ ಕೆಣಕಲು ಮುಂದಾಗಿದ್ದರು. ಇದರಿಂದ ತೀವ್ರ ಕುಪಿತಗೊಂಡಿದ್ದ ಯುವಿ ತಮ್ಮ ಬ್ಯಾಟ್ ಮೂಲಕವೇ ಉತ್ತರ ನೀಡಿದ್ದರು. ಅಷ್ಟೇ ಕೇವಲ 12 ಎಸೆತಗಳಲ್ಲೇ ಅರ್ಧಶತಕ ಬಾರಿಸುವ ಮೂಲಕ ವಿಶ್ವ ದಾಖಲೆ ಬರೆದರು. ಅಂತಿಮವಾಗಿ 16 ಎಸೆತಗಳನ್ನು ಎದುರಿಸಿದ ಯುವಿ ಮೂರು ಬೌಂಡರಿ ಹಾಗೂ ಏಳು ಭರ್ಜರಿ ಸಿಕ್ಸರ್‌ಗಳ ನೆರವಿನಿಂದ 58 ರನ್ ಗಳಿಸಿದರು. ಪರಿಣಾಮ ಭಾರತ ನಾಲ್ಕು ವಿಕೆಟ್ ನಷ್ಟಕ್ಕೆ 218 ರನ್‌ಗಳ ಬೃಹತ್ ಮೊತ್ತ ಪೇರಿಸಿತು.

ಬಳಿಕ ಗುರಿ ಬೆನ್ನಟ್ಟಿದ ಆಂಗ್ಲರ ತಂಡ ಆರು ವಿಕೆಟ್ ನಷ್ಟಕ್ಕೆ 200 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಮೂಲಕ ಭಾರತ 18 ರನ್ ಅಂತರದ ರೋಚಕ ಗೆಲುವು ದಾಖಲಿಸಿತು.

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್