AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಸಿಬಿ ಆಟಗಾರ ಯಜ್ವೇಂದ್ರ ಚಹಲ್ ತಂದೆ- ತಾಯಿಗೆ ಕೊರೊನಾ ಪಾಸಿಟಿವ್; ಮಾಹಿತಿ ಹಂಚಿಕೊಂಡ ಧನಶ್ರೀ ವರ್ಮಾ

ಯುಜ್ವೇಂದ್ರ ಚಾಹಲ್ ಅವರ ತಂದೆಯ ಸ್ಥಿತಿ ಚಿಂತಾಜನಕವಾಗಿದೆ. ತೀವ್ರ ರೋಗಲಕ್ಷಣಗಳಿಂದಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನನ್ನ ಅತ್ತೆ ಕೊರೊನಾ ಪಾಸಿಟಿವ್ ಎಂದು ಕಂಡುಬಂದಿದೆ.

ಆರ್​ಸಿಬಿ ಆಟಗಾರ ಯಜ್ವೇಂದ್ರ ಚಹಲ್ ತಂದೆ- ತಾಯಿಗೆ ಕೊರೊನಾ ಪಾಸಿಟಿವ್; ಮಾಹಿತಿ ಹಂಚಿಕೊಂಡ ಧನಶ್ರೀ ವರ್ಮಾ
ಯಜ್ವೇಂದ್ರ ಚಹಲ್
ಪೃಥ್ವಿಶಂಕರ
|

Updated on: May 13, 2021 | 4:47 PM

Share

ಟೀಂ ಇಂಡಿಯಾ ಕ್ರಿಕೆಟಿಗ ಯಜ್ವೇಂದ್ರ ಚಹಲ್ ಅವರ ತಾಯಿ ಮತ್ತು ತಂದೆ ಕೊರೊನಾ ವೈರಸ್‌ಗೆ ತುತ್ತಾಗಿದ್ದಾರೆ. ಚಾಹಲ್ ಅವರ ಪತ್ನಿ ಧನಶ್ರೀ ವರ್ಮಾ ಈ ಮಾಹಿತಿಯನ್ನು ಇನ್ಸ್ಟಾಗ್ರಾಮ್​ನಲ್ಲಿ ಪೋಸ್ಟ್​ ಮಾಡುವ ಮೂಲಕ ನೀಡಿದ್ದಾರೆ. ಯುಜ್ವೇಂದ್ರ ಚಾಹಲ್ ಅವರ ತಂದೆಯ ಸ್ಥಿತಿ ಚಿಂತಾಜನಕವಾಗಿದೆ. ತೀವ್ರ ರೋಗಲಕ್ಷಣಗಳಿಂದಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನನ್ನ ಅತ್ತೆ ಕೊರೊನಾ ಪಾಸಿಟಿವ್ ಎಂದು ಕಂಡುಬಂದಿದೆ. ಇಬ್ಬರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಮಾವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ ಅತ್ತೆ ಮನೆಯಲ್ಲೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದಿದ್ದಾರೆ.

ಐಪಿಎಲ್ ಬಯೋ ಬಬಲ್‌ನಲ್ಲಿದ್ದೆ ಇದಕ್ಕೂ ಮೊದಲು ಧನಶ್ರೀ ಅವರ ತಾಯಿ ಮತ್ತು ಸಹೋದರ ಕೊರೊನಾ ಪಾಸಿಟಿವ್ ಆಗಿದ್ದರು. ಆ ಸಮಯದಲ್ಲಿ ಧನಶ್ರೀ ಐಪಿಎಲ್​ನ ಬಯೋ ಬಬಲ್​ನಲ್ಲಿದ್ದರು. ಆದರೆ, ಈಗ ಧನಶ್ರೀ ಅವರ ತಾಯಿ ಮತ್ತು ಸಹೋದರ ಚೇತರಿಸಿಕೊಂಡಿದ್ದಾರೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಧನಶ್ರೀ, ಇದು ತುಂಬಾ ಕಷ್ಟಕರ ಮತ್ತು ಸವಾಲಿನ ಸಂಗತಿಯಾಗಿದೆ. ನನ್ನ ತಾಯಿ ಮತ್ತು ಸಹೋದರ ಕೊರೊನಾ ಪಾಸಿಟಿವ್​ ಆಗಿದ್ದರು. ಆದರೆ ನಾನು ಆ ಸಮಯದಲ್ಲಿ ಐಪಿಎಲ್ ಬಯೋ ಬಬಲ್‌ನಲ್ಲಿದ್ದೆ ಮತ್ತು ಅಸಹಾಯಕಳಾಗಿದ್ದೆ ಆದರೆ ಕಾಲಕಾಲಕ್ಕೆ ಅವರ ಆರೋಗ್ಯದ ಬಗ್ಗೆ ವಿಚಾರಿಸುತ್ತಿದ್ದೆ. ಕುಟುಂಬದಿಂದ ದೂರವಿರುವುದು ತುಂಬಾ ಕಷ್ಟ. ಅವರು ಚೇತರಿಸಿಕೊಂಡಿರುವುದು ಒಳ್ಳೆಯದು ಎಂದಿದ್ದಾರೆ.

ಮಾಹಿತಿ ಹಂಚಿಕೊಂಡ ಧನಶ್ರೀ ವರ್ಮಾ

ಧನಶ್ರೀ ಚಿಕ್ಕಪ್ಪ ಮತ್ತು ಚಿಕ್ಕಮ್ಮ ಕೊರೊನಾದಿಂದ ನಿಧನ ಕೊರೊನಾಗೆ ಸಂಬಂಧಿಸಿದ ಸಮಸ್ಯೆಗಳಿಂದಾಗಿ ಚಿಕ್ಕಪ್ಪ ಮತ್ತು ಚಿಕ್ಕಮ್ಮ ಮೃತಪಟ್ಟಿದ್ದಾರೆ ಎಂದು ಧನಶ್ರೀ ಹೇಳಿದ್ದಾರೆ. ಯುಜ್ವೇಂದ್ರ ಚಾಹಲ್ ಇತ್ತೀಚೆಗೆ ಅಮಾನತುಗೊಂಡ ಐಪಿಎಲ್ 2021 ರಲ್ಲಿ ಆಡುತ್ತಿದ್ದರು. ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಭಾಗವಾಗಿದ್ದರು. ತಂಡದ ಪರ ಎಲ್ಲಾ ಏಳು ಪಂದ್ಯಗಳನ್ನು ಆಡಿ, ನಾಲ್ಕು ವಿಕೆಟ್ ಪಡೆದುಕೊಂಡಿದ್ದರು. ಈ ತಂಡದ ಪ್ರಮುಖ ಆಟಗಾರರಲ್ಲಿ ಚಹಲ್ ಕೂಡ ಒಬ್ಬರು. ಪಂದ್ಯಾವಳಿಯಲ್ಲಿ ಅವರ ಪತ್ನಿ ಧನಶ್ರೀ ಕೂಡ ಅವರೊಂದಿಗೆ ಇದ್ದರು. ನಂತರ, ಕೊರೊನಾ ಪ್ರಕರಣ ಬೆಳಕಿಗೆ ಬಂದಾಗ ಐಪಿಎಲ್ 2021 ಅನ್ನು ಅಮಾನತುಗೊಳಿಸಲಾಗಿದೆ.

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಅಲ್ಲೆಲ್ಲೋ ಯುದ್ಧ ನಡೀತಿದ್ರೆ ಇಲ್ಯಾಕೆ ಚಿನ್ನ ಖರೀದಿ ಮಾಡಬಾರದು?
ಅಲ್ಲೆಲ್ಲೋ ಯುದ್ಧ ನಡೀತಿದ್ರೆ ಇಲ್ಯಾಕೆ ಚಿನ್ನ ಖರೀದಿ ಮಾಡಬಾರದು?
ಸಾರ್ವಜನಿಕರೇ ಬೆಂಗಳೂರಿನ ಈ ರಸ್ತೆಗಳಲ್ಲಿ ಓಡಾಡುವಾಗ ಹುಷಾರ್!
ಸಾರ್ವಜನಿಕರೇ ಬೆಂಗಳೂರಿನ ಈ ರಸ್ತೆಗಳಲ್ಲಿ ಓಡಾಡುವಾಗ ಹುಷಾರ್!
ಲವ್ ವಿಚಾರಕ್ಕೆ 17ರ ಮಗಳನ್ನೇ ಕೊಂದ ಅಪ್ಪ: ತಂದೆಯ ಅಸಲಿ ಮುಖ ಬಯಲು
ಲವ್ ವಿಚಾರಕ್ಕೆ 17ರ ಮಗಳನ್ನೇ ಕೊಂದ ಅಪ್ಪ: ತಂದೆಯ ಅಸಲಿ ಮುಖ ಬಯಲು
ಶತಕದ ಪಂದ್ಯದಲ್ಲಿ ಒಂದೇ ರನ್​ಗೆ ಸುಸ್ತಾದ ಶ್ರೇಯಸ್ ಅಯ್ಯರ್
ಶತಕದ ಪಂದ್ಯದಲ್ಲಿ ಒಂದೇ ರನ್​ಗೆ ಸುಸ್ತಾದ ಶ್ರೇಯಸ್ ಅಯ್ಯರ್
ಅರಬ್ಬಿ ಸಮುದ್ರದಲ್ಲಿ ಹೆಚ್ಚಿದ ಗಾಳಿಯ ವೇಗ: ಲಂಗರು ಹಾಕಿದ ನೂರಾರು ಬೋಟ್​​​​
ಅರಬ್ಬಿ ಸಮುದ್ರದಲ್ಲಿ ಹೆಚ್ಚಿದ ಗಾಳಿಯ ವೇಗ: ಲಂಗರು ಹಾಕಿದ ನೂರಾರು ಬೋಟ್​​​​
ನಿಯಂತ್ರಣ ತಪ್ಪಿ ಏಕಾಏಕಿ ರೆಸ್ಟೋರೆಂಟ್ ಒಳಗೆ ನುಗ್ಗಿದ ಕಾರು
ನಿಯಂತ್ರಣ ತಪ್ಪಿ ಏಕಾಏಕಿ ರೆಸ್ಟೋರೆಂಟ್ ಒಳಗೆ ನುಗ್ಗಿದ ಕಾರು
ಜಿಟಿ ದೇವೇಗೌಡಗೆ ಶಾಕ್: ಸ್ವಪಕ್ಷದ ಶಾಸಕರನ್ನ ದೂರವಿಟ್ಟು​ ಸಮಾವೇಶ
ಜಿಟಿ ದೇವೇಗೌಡಗೆ ಶಾಕ್: ಸ್ವಪಕ್ಷದ ಶಾಸಕರನ್ನ ದೂರವಿಟ್ಟು​ ಸಮಾವೇಶ
ಕಲಬುರಗಿಯಲ್ಲಿ ಮಾಜಿ ಸೈನಿಕನ ಬರ್ಬರ ಹತ್ಯೆ: ಆಗಿದ್ದೇನು?
ಕಲಬುರಗಿಯಲ್ಲಿ ಮಾಜಿ ಸೈನಿಕನ ಬರ್ಬರ ಹತ್ಯೆ: ಆಗಿದ್ದೇನು?
ನಿರಾಶ್ರಿತರ ಕೇಂದ್ರದಲ್ಲಿದ್ದ ವಿದೇಶಿ ಅಕ್ರಮ ವಲಸಿಗರು ಪರಾರಿ!
ನಿರಾಶ್ರಿತರ ಕೇಂದ್ರದಲ್ಲಿದ್ದ ವಿದೇಶಿ ಅಕ್ರಮ ವಲಸಿಗರು ಪರಾರಿ!
ಶನಿ ಅಮಾವಾಸ್ಯೆ, ವೀಕೆಂಡ್ ಹಿನ್ನೆಲೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತಸಾಗರ
ಶನಿ ಅಮಾವಾಸ್ಯೆ, ವೀಕೆಂಡ್ ಹಿನ್ನೆಲೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತಸಾಗರ