AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಸಿಪ್​ಗಳಿಗೆ ಬ್ರೇಕ್; ಪತ್ನಿಯೊಂದಿಗಿನ ರೋಮ್ಯಾಂಟಿಕ್ ವಿಡಿಯೋವನ್ನು ಪೋಸ್ಟ್ ಮಾಡಿದ ಚಹಲ್

Dhanashree-Yuzvendra Chahal: ಕೆಲವು ವಾರಗಳ ಹಿಂದೆ, ಯುಜುವೇಂದ್ರ ಚಹಲ್ ಮತ್ತು ಧನಶ್ರೀ ವರ್ಮಾ ನಡುವಿನ ಸಂಬಂಧದ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ವದಂತಿಗಳು ಹಬ್ಬಿದ್ದವು. ಜೊತೆಗೆ ಇಬ್ಬರೂ ಬೇರೆಯಾಗಲಿದ್ದಾರೆ ಎಂಬ ಊಹಾಪೋಹಾಗಳು ಹುಟ್ಟಿಕೊಂಡಿದ್ದವು.

ಗಾಸಿಪ್​ಗಳಿಗೆ ಬ್ರೇಕ್; ಪತ್ನಿಯೊಂದಿಗಿನ ರೋಮ್ಯಾಂಟಿಕ್ ವಿಡಿಯೋವನ್ನು ಪೋಸ್ಟ್ ಮಾಡಿದ ಚಹಲ್
ಚಹಲ್ ದಂಪತಿಗಳು
TV9 Web
| Edited By: |

Updated on:Sep 16, 2022 | 3:19 PM

Share

ಏಷ್ಯಾಕಪ್​ನಲ್ಲಿ ನಿರೀಕ್ಷೆ ತಕ್ಕಂತೆ ಆಡದ ಟೀಂ ಇಂಡಿಯಾ ಈಗ ವಿಶ್ವಕಪ್​ಗೆ ಸಿದ್ದತೆ ನಡೆಸುತ್ತಿದೆ. ಆದರೆ ಅದಕ್ಕೂ ಮುನ್ನ ಟೀಂ ಇಂಡಿಯಾ ಆಸ್ಟ್ರೇಲಿಯ ಹಾಗೂ ಆಫ್ರಿಕಾ ಎದುರು ಟಿ20 ಸರಣಿಯನ್ನು ಆಡಬೇಕಿದೆ. ಈ ಎರಡು ದೇಶಗಳೊಂದಿಗಿನ ಸರಣಿಗೆ ಸಾಕಷ್ಟು ಸಮಯವಿದ್ದು, ಹೀಗಾಗಿ ಟೀಂ ಇಂಡಿಯಾ ಆಟಗಾರರು ತಮ್ಮ ಮಡದಿ- ಮಕ್ಕಳೊಂದಿಗೆ ಸಮಯ ಕಳೆಯುತ್ತಿದ್ದಾರೆ. ಅವರ ಸಾಲಿಗೆ ಸೋಶಿಯಲ್ ಮೀಡಿಯಾದಲ್ಲಿ ಸದಾ ಸುದ್ದಿಯಲ್ಲಿರುವ ಚಹಲ್ ದಂಪತಿಗಳು ಸಹ ಸೇರಿದ್ದಾರೆ. ಕೆಲವು ದಿನಗಳಿಂದ ಈ ಜೋಡಿಗಳ ಬಗ್ಗೆ ಅನೇಕ ಗಾಸಿಪ್ಗಳು ಮತ್ತು ವದಂತಿಗಳು ಕೇಳಲಾರಂಬಿಸಿದ್ದವು. ಚಹಲ್- ಹಾಗೂ ಧನಶ್ರೀ ನಡುವಿನ ವೈವಾಹಿಕ ಬದುಕಿನಲ್ಲಿ ಬಿರುಕು ಕಾಣಿಸಿಕೊಂಡಿದೆ ಎಂತಲೂ ಹಲವು ಸುದ್ದಿಗಳು ಬಿತ್ತರಿಸಿದ್ದವು. ಇದಕ್ಕೆ ಈ ದಂಪತಿಗಳು ಮಾಡಿದ ಕೆಲವು ಸೋಶಿಯಲ್ ಮೀಡಿಯಾ ಪೋಸ್ಟ್​ಗಳ ಸಹ ಪುಷ್ಠಿ ನೀಡಿದ್ದವು. ಆದರೆ ಇದೀಗ ಚಹಲ್ ದಂಪತಿಗಳು ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಒಂದನ್ನು ಶೇರ್ ಮಾಡುವ ಮೂಲಕ ಎಲ್ಲ ವದಂತಿಗಳಿಗೆ ತೆರೆ ಎಳೆದಿದ್ದಾರೆ.

ಏಷ್ಯಾಕಪ್ ಯುಜ್ವೇಂದ್ರ ಚಹಲ್‌ಗೆ ಹೆಚ್ಚಿನ ಯಶಸ್ಸನ್ನು ತಂದುಕೊಡದಿದ್ದರೂ, ರನ್ ನೀಡಿದೆ ಎದುರಾಳಿ ಬ್ಯಾಟರ್​ಗಳನ್ನು ಕಟ್ಟಿ ಹಾಕುವಲ್ಲಿ ಚಹಲ್ ಯಶಸ್ವಿಯಾಗಿದ್ದರು. ಆದಾಗ್ಯೂ, ಪಂದ್ಯಾವಳಿಯ ಪ್ರಾರಂಭಕ್ಕೂ ಮುಂಚೆಯೇ, ಅವರು ಕೆಲವು ಆಫ್-ಫೀಲ್ಡ್ ಸುದ್ದಿಗಳಿಂದ ಸದಾ ಸುದ್ದಿಯಲ್ಲಿದ್ದರು. ಏಷ್ಯಾಕಪ್ ಆರಂಭಕ್ಕೂ ಮುನ್ನ ಚಹಲ್ ಹಾಗೂ ಧನಶ್ರೀ ವರ್ಮಾ ಸಂಬಂಧದಲ್ಲಿ ಬಿರುಕು ಮೂಡಿದೆ ಎಂಬ ವದಂತಿ ಹಬ್ಬಿತ್ತು.

ವದಂತಿಗಳಿಗೆ ತಿರುಗೇಟು

Instagram ನಲ್ಲಿ ಅವರಿಬ್ಬರ ಕೆಲವು ಪೋಸ್ಟ್‌ಗಳಿಂದಾಗಿ ಸಾಮಾಜಿಕ ಮಾಧ್ಯಮದಲ್ಲಿ ಕೆಲವು ಹೈಪರ್‌ಆಕ್ಟಿವ್ ಬಳಕೆದಾರರು ಇವರಿಬ್ಬರ ನಡುವಿನ ಬಿರುಕಿನ ವದಂತಿಗಳನ್ನು ಹರಡಲು ಪ್ರಾರಂಭಿಸಿದ್ದರು. ಇನ್ನೂ ಅನೇಕ ಬಳಕೆದಾರರು ಇಬ್ಬರನ್ನೂ ಟ್ರೋಲ್ ಮಾಡಲು ಪ್ರಾರಂಭಿಸಿದ್ದರು. ಹೀಗಿರುವಾಗ ಈ ದಂಪತಿಗಳು ಎಲ್ಲಾ ಸುದ್ದಿಗಳನ್ನು ವದಂತಿ ಎಂದು ಬಣ್ಣಿಸಿ ಹೇಳಿಕೆ ನೀಡಲು ಆರಂಭಿಸಿದ್ದರು. ಈಗ ಚಹಲ್ ತಮ್ಮ ಪತ್ನಿಯೊಂದಿಗಿರುವ ರೋಮ್ಯಾಂಟಿಕ್ ವೀಡಿಯೊವನ್ನು ಸೋಶಿಯಲ್ ಮೀಡಿಯಾದಲ್ಲಿ ಹರಿಯಬಿಡುವ ಮೂಲಕ ಟ್ರೋಲ್‌ಗಳು ಮತ್ತು ವದಂತಿಗಳನ್ನು ಹರಡುವವರ ಬಾಯಿ ಮುಚ್ಚಿಸಿದ್ದಾರೆ.

ವಿಶ್ವಕಪ್​ಗೆ ತಯಾರಿ

ನಾವು ಯುಜ್ವೇಂದ್ರ ಚಹಲ್ ಅವರ ಆಟದ ಬಗ್ಗೆ ಮಾತನಾಡುವುದಾದರೆ, ಭಾರತ ತಂಡದ ಈ ಅನುಭವಿ ಲೆಗ್ ಸ್ಪಿನ್ನರ್ ಕಣ್ಣುಗಳು ಈಗ ಟಿ 20 ವಿಶ್ವಕಪ್ ಮೇಲೆ ನೆಟ್ಟಿದೆ. ಏಷ್ಯಾಕಪ್‌ನಲ್ಲಿ, ಚಹಲ್ ಅವರ ಖಾತೆಗೆ 4 ಪಂದ್ಯಗಳಲ್ಲಿ ಕೇವಲ 4 ವಿಕೆಟ್‌ಗಳಷ್ಟೇ ಬಿದ್ದವು. ಆದರೆ ಇದರ ಹೊರತಾಗಿಯೂ, ಅವರು T20 ವಿಶ್ವಕಪ್‌ಗಾಗಿ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದಾರೆ. ವಿಶ್ವಕಪ್‌ಗೂ ಮುನ್ನ ಚಹಲ್ ಆಸ್ಟ್ರೇಲಿಯಾ ವಿರುದ್ಧ ಸೆಪ್ಟೆಂಬರ್ 20ರಿಂದ ಆರಂಭವಾಗಲಿರುವ ಟಿ20 ಸರಣಿಯಲ್ಲಿ ಪಾಲ್ಗೊಳ್ಳಲಿದ್ದಾರೆ.

Published On - 3:18 pm, Fri, 16 September 22

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ