AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yuzvendra Chahal: ಆ ಆಟಗಾರ ಕುಡಿದು ನನ್ನನ್ನು 15ನೇ ಮಹಡಿಯಲ್ಲಿ ನೇತು ಹಾಕಿದ: ಚಹಲ್ ಶಾಕಿಂಗ್ ಹೇಳಿಕೆ

IPL 2022, Yuzvendra Chahal: ಓರ್ವ ಪ್ಲೇಯರ್ ಅತಿಯಾಗಿ ಮದ್ಯ ಸೇವಿಸಿದ್ದ. ಆದರೆ ಅವನ ಹೆಸರನ್ನು ಹೇಳಲು ಇಷ್ಟಪಡುವುದಿಲ್ಲ. ಆ ಪ್ಲೇಯರ್ ನನ್ನ ಎರಡೂ ಕೈಗಳನ್ನು ಆತನ ಕತ್ತಿನಿಂದ ಲಾಕ್ ಮಾಡಿದ್ದ. ಅದು ಹದಿನೈದನೇ ಫ್ಲೋರ್ ಆಗಿತ್ತು - ಶಾಕಿಂಗ್ ಹೇಳಿಕೆ ನೀಡಿದ ಯುಜ್ವೇಂದ್ರ ಚಹಲ್.

Yuzvendra Chahal: ಆ ಆಟಗಾರ ಕುಡಿದು ನನ್ನನ್ನು 15ನೇ ಮಹಡಿಯಲ್ಲಿ ನೇತು ಹಾಕಿದ: ಚಹಲ್ ಶಾಕಿಂಗ್ ಹೇಳಿಕೆ
Yuzvendra Chahal
TV9 Web
| Updated By: Vinay Bhat|

Updated on:Apr 08, 2022 | 11:57 AM

Share

ಯುಜ್ವೇಂದ್ರ ಚಹಾಲ್ (Yuzvendra Chahal) ಸದ್ಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ರಾಜಸ್ಥಾನ್ ರಾಯಲ್ಸ್ (Rajasthan Royals ) ತಂಡದ ಪರ ಆಡುತ್ತಿದ್ದು, ಪ್ರಮುಖ ಸ್ಪಿನ್ನರ್ ಆಗಿ ಮಿಂಚುತ್ತಿದ್ದಾರೆ. ಇದಕ್ಕೂ ಇವರು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಆಡುತ್ತಿದ್ದರು. 2014ರ ಐಪಿಎಲ್ ನಂತರ 2021 ಐಪಿಎಲ್ ವರೆಗೆ ಚಹಲ್ ಆರ್​ಸಿಬಿ ತಂಡದ ಪ್ರಮುಖ ಅಸ್ತ್ರವಾಗಿದ್ದರು. ಆದರೆ, ಐಪಿಎಲ್ 2022ರ (IPL 2022) ವೇಳೆಗೆ ಅಚ್ಚರಿ ಎಂಬಂತೆ ಆರ್​ಸಿಬಿ ಇವರನ್ನು ದಿಢೀರ್ ಆಗಿ ಕೈಬಿಟ್ಟಿತು. ಪರಿಣಾಮ ರಾಜಸ್ಥಾನ್ ರಾಯಲ್ಸ್ ಇವರನ್ನು ಹರಾಜಿನಲ್ಲಿ ಖರೀದಿ ಮಾಡಿದೆ. ಇದೀಗ ಆರ್​ಆರ್​ ತಂಡದ ಸಂದರ್ಶನವೊಂದರಲ್ಲಿ ಚಹಲ್ ಶಾಕಿಂಗ್ ವಿಚಾರವೊಂದನ್ನು ಬಹಿರಂಗ ಪಡಿಸಿದ್ದಾರೆ. ಆರ್​ಆರ್​ ತನ್ನ ಟ್ವಿಟರ್ ಖಾತೆಯಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದು, ಇದರಲ್ಲಿ ಚಹಲ್ ಇದುವರೆಗೆ ಯಾರೊಂದಿಗೂ ಹೇಳದ ಅಚ್ಚರಿಯ ಘಟನೆಯೊಂದನ್ನು ಮೆಲುಕು ಹಾಕಿದ್ದಾರೆ. ಹಾಗಾದ್ರೆ ಚಹಲ್ ಆ ವಿಡಿಯೋದನ್ನು ಏನು ಹೇಳಿದ್ದಾರೆ?, ಇಲ್ಲಿದೆ ನೋಡಿ.

“ಇದು 2013ರಲ್ಲಿ ನಡೆದಂತಹ ಘಟನೆ. ನಾನಾಗ ಮುಂಬೈ ಇಂಡಿಯನ್ಸ್‌ ತಂಡದ ಪರವಾಗಿ ಆಡುತ್ತಿದ್ದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯದ ಬಳಿಕ ಎಲ್ಲ ಆಟಗಾರರ ಗೆಟ್ ಟುಗೆದರ್ ಇತ್ತು. ಅದರಲ್ಲಿ ಓರ್ವ ಪ್ಲೇಯರ್ ಅತಿಯಾಗಿ ಮದ್ಯ ಸೇವಿಸಿದ್ದ. ಆದರೆ ಅವನ ಹೆಸರನ್ನು ಹೇಳಲು ಇಷ್ಟಪಡುವುದಿಲ್ಲ. ತುಂಬಾ ಕುಡಿದಿದ್ದ ಆ ಆಟಗಾರ ಕೆಲ ಹೊತ್ತು ನನ್ನನ್ನೇ ನೋಡಿಕೊಂಡಿದ್ದ. ನಂತರ ಇಲ್ಲಿಗೆ ಬಾ ಎಂದು ನನ್ನನ್ನು ಕರೆದ. ನಾನು ಆತನ ಸಮೀಪಕ್ಕೆ ತೆರಳಿದೆ. ಈ ವೇಳೆ ಆತ ನನ್ನನ್ನು ಬಾಲ್ಕನಿಯಲ್ಲಿ ನೇತಾಡಿಸಿದ,” ಎಂಬ ಶಾಕಿಂಗ್ ಘಟನೆಯನ್ನು ವಿವರಿಸಿದ್ದಾರೆ.

ಆರ್​ಆರ್​ ತಂಡದ ಸಹ ಆಟಗಾರರಾದ ಆರ್. ಅಶ್ವಿನ್ ಮತ್ತು ಕರುಣ್ ನಾಯರ್ ಜೊತೆಗಿನ ಸಂಭಾಷಣೆಯಲ್ಲಿ ಚಹಲ್ ಈ ವಿಚಾರವನ್ನು ಬಹಿರಂಗ ಪಡಿಸಿದ್ದಾರೆ. “ಆ ಪ್ಲೇಯರ್ ನನ್ನ ಎರಡೂ ಕೈಗಳನ್ನು ಆತನ ಕತ್ತಿನಿಂದ ಲಾಕ್ ಮಾಡಿದ್ದ. ಅದು ಹದಿನೈದನೇ ಫ್ಲೋರ್ ಆಗಿತ್ತು. ಇದನ್ನು ಗಮನಿಸಿದ ಇತರೆ ಆಟಗಾರರು ತಕ್ಷಣವೇ ಅಲ್ಲಿಗೆ ಓಡೋಡಿ ಬಂದು ನನ್ನನ್ನು ರಕ್ಷಿಸಿದರು. ಸ್ವಲ್ಪ ಹೆಚ್ಚುಕಮ್ಮಿ ಆಗಿದ್ದರೂ ದುರಂತವೇ ನಡೆಯುತ್ತಿತ್ತು. ಆಗ ನಾನು ಮೂರ್ಛೆ ಹೋದೆ, ಅವರು ನನಗೆ ನೀರು ಕೊಟ್ಟರು. ನಾವು ಎಲ್ಲಿಗಾದರೂ ಹೋದಾಗ ಎಷ್ಟು ಜವಬ್ದಾರಿಯಿಂದ ಇರಬೇಕೆಂದು ಈ ಘಟನೆಯಿಂದ ನನಗೆ ಅರಿವಾಯಿತು,” ಎಂದು ಚಹಲ್ ಹೇಳಿಕೊಂಡಿದ್ದಾರೆ.

ರಾಜಸ್ಥಾನ್ ರಾಯಲ್ಸ್ ತಂಡ ಸೇರಿದ ಬಳಿಕ ಚಹಲ್ ಕೆಲ ಅಚ್ಚರಿಯ ಹೇಳಿಕೆಯನ್ನು ನೀಡುತ್ತಲೇ ಇದ್ದಾರೆ. ಇತ್ತೀಚೆಗಷ್ಟೆ ಆರ್​​ಸಿಬಿ ತನ್ನನ್ನು ಹರಾಜಿಗೂ ಮುನ್ನ ಕೈಬಿಟ್ಟ ವಿಚಾರದ ಬಗ್ಗೆ ಹೇಳಿಕೆ ನೀಡಿದ್ದರು. “ಮೆಗಾ ಹರಾಜಿಗೂ ಮುನ್ನ ಆರ್‌ಸಿಬಿ ತಂಡ ನನ್ನ ಬಳಿಕ ರಿಟೇನ್ ಆಗುವಿರಾ ಎಂದೂ ಕೇಳಲಿಲ್ಲ. ಕೇಳಿದ್ದರೆ ನಾನು ಕಣ್ಣುಮುಚ್ಚಿ ಇರಲು ಒಪ್ಪುತ್ತಿದ್ದೆ. ಹಣಕ್ಕಿಂತ ನನಗೆ ತಂಡದ ಜತೆಗಿನ ಬಾಂಧವ್ಯವೇ ಮುಖ್ಯವಾಗಿತ್ತು. ಆದರೆ ನನ್ನನ್ನು ರಿಟೇನ್ ಮಾಡಿಕೊಳ್ಳದೆ, ಹರಾಜಿನಲ್ಲಿ ಮರಳಿ ಖರೀದಿಸುವೆವು ಎಂದು ತಿಳಿಸಿದ್ದರು. ಹಣವೇ ಮುಖ್ಯವಾಯಿತೇ ಎಂದು ಆರ್‌ಸಿಬಿ ಫ್ಯಾನ್ಸ್ ಈಗಲೂ ನನ್ನನ್ನು ಪ್ರಶ್ನಿಸುತ್ತಿದ್ದಾರೆ. ಆದರೆ ಆರ್‌ಸಿಬಿ ತಂಡದಿಂದ ನನ್ನ ಜೀವನ ಸಾಕಷ್ಟು ಬದಲಾಗಿದೆ ಎಂದು ಚಹಲ್ ಹೇಳಿದ್ದಾರೆ.

Rishabh Pant: ಸತತ ಎರಡು ಸೋಲು: ಪಂದ್ಯ ಮುಗಿದ ಬಳಿಕ ರಿಷಭ್ ಪಂತ್ ಆಡಿದ ಮಾತುಗಳೇನು?

IPL 2022 Points Table: ಅಂಕ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಜಿಗಿದ ರಾಹುಲ್ ಪಡೆ: ಆರೆಂಜ್, ಪರ್ಪಲ್ ಕ್ಯಾಪ್ ಯಾರ ಬಳಿ ಇದೆ?

Published On - 11:53 am, Fri, 8 April 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ