AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yuzvendra Chahal: ಐಪಿಎಲ್​ನಲ್ಲಿ ಹೊಸ ದಾಖಲೆ ಬರೆದ ಯುಜ್ವೇಂದ್ರ ಚಹಾಲ್: ಟಿ-20 ವಿಶ್ವಕಪ್​ಗೆ ಆಯ್ಕೆ ಪಕ್ಕಾ

Yuzvendra Chahal Record, RCB vs PBKS: ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಶಾರುಖ್ ಖಾನ್, ಪೂರನ್ ಮತ್ತು ಮಯಾಂಕ್ ಅಗರ್ವಾಲ್​ ವಿಕೆಟ್ ಕೀಳುವ ಮೂಲಕ ಐಪಿಎಲ್​ನಲ್ಲಿ ಆರ್​ಸಿಬಿ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಹೊಸ ದಾಖಲೆ ಬರೆದಿದ್ದಾರೆ.

Yuzvendra Chahal: ಐಪಿಎಲ್​ನಲ್ಲಿ ಹೊಸ ದಾಖಲೆ ಬರೆದ ಯುಜ್ವೇಂದ್ರ ಚಹಾಲ್: ಟಿ-20 ವಿಶ್ವಕಪ್​ಗೆ ಆಯ್ಕೆ ಪಕ್ಕಾ
Yuzvendra Chahal RCB IPL 2021
Follow us
TV9 Web
| Updated By: Vinay Bhat

Updated on: Oct 04, 2021 | 9:11 AM

ಭಾರತ ಟಿ-20 ವಿಶ್ವಕಪ್ (ICC T20 World Cup) ತಂಡದಲ್ಲಿ ಸ್ಥಾನ ಪಡೆಯಲು ವಿಫಲರಾಗಿರುವ ಯುಜ್ವೇಂದ್ರ ಚಹಾಲ್ (Yuzvendra Chahal) ಐಪಿಎಲ್ 2021 ರಲ್ಲಿ (IPL 2021) ಅಮೋಘ ಪ್ರದರ್ಶನ ನೀಡುತ್ತಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bangalore) ತಂಡದಲ್ಲಿ ಮ್ಯಾಚ್ ವಿನ್ನಿಂಗ್ ಪ್ರದರ್ಶನ ನೀಡುತ್ತಿರುವ ಚಹಾಲ್ ಇದೀಗ ಐಪಿಎಲ್ ಇತಿಹಾಸದಲ್ಲಿ ಹೊಸ ದಾಖಲೆ ಬರೆದಿದ್ದಾರೆ. ಭಾನುವಾರ ನಡೆದ ಆರ್​ಸಿಬಿ ಹಾಗೂ ಪಂಜಾಬ್ ಕಿಂಗ್ಸ್ (RCB vs PBKS) ನಡುವಣ ಪಂದ್ಯದಲ್ಲಿ ಚಹಾಲ್ ವಿಶೇಷ ಸಾಧನೆ ಮಾಡಿದರು. ಬೆಂಗಳೂರು ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಇವರು 4 ಓವರ್ ಬೌಲಿಂಗ್ ಮಾಡಿ 29 ರನ್ ನೀಡಿ ರಾಹುಲ್ (KL Rahul) ಪಡೆಯ ಪ್ರಮುಖ 3 ವಿಕೆಟ್ ಕಿತ್ತರು. ಶಾರುಖ್ ಖಾನ್ (Shahrukh Khan), ನಿಕೋಲಸ್ ಪೂರನ್ ಮತ್ತು ಮಯಾಂಕ್ ಅಗರ್ವಾಲ್ (Mayank Agarwal) ರಂತಹ ಅಪಾಯಕಾರಿ ಬ್ಯಾಟರ್​ಗಳನ್ನು ತಮ್ಮ ಸ್ಪಿನ್ ಮೋಡಿಯಿಂದ ಪೆವಿಲಿನ್​ಗೆ ಅಟ್ಟಿದರು.

ಈ ಮೂಲಕ ಚಹಾಲ್ ಅವರು ಯುಎಇಯಲ್ಲಿ ನಡೆದ ಐಪಿಎಲ್ ಪಂದ್ಯಗಳಲ್ಲಿ ಅತೀ ಹೆಚ್ಚು ವಿಕೆಟ್ ಕಿತ್ತ ಬೌಲರ್​ಗಳ ಸ್ಥಾನದಲ್ಲಿ ನಂಬರ್ ಒನ್ ಸ್ಥಾನ ಪಡೆದುಕೊಂಡಿದ್ದು, ಮುಂಬೈ ಇಂಡಿಯನ್ಸ್ ತಂಡದ ಜಸ್​ಪ್ರೀತ್ ಬುಮ್ರಾ ಜೊತೆ ಜಂಟಿಯಾಗಿದ್ದಾರೆ. ಚಹಾಲ್ ಅವರು ಯುಎಇನಲ್ಲಿ ನಡೆದ ಐಪಿಎಲ್​ನಲ್ಲಿ ಒಟ್ಟು 38 ವಿಕೆಟ್ ಕಿತ್ತ ಸಾಧನೆ ಮಾಡಿದ್ದಾರೆ. ಜಸ್​ಪ್ರೀತ್ ಬುಮ್ರಾ ಕೂಡ 38 ವಿಕೆಟ್ ಪಡೆದು ಎರಡನೇ ಸ್ಥಾನದಲ್ಲಿದ್ದಾರೆ. ಮೂರನೇ ಸ್ಥಾನದಲ್ಲಿ ಕಗಿಸೊ ರಬಾಡ (35 ವಿಕೆಟ್) ಅವರಿದ್ದು, ಮೊಹಮ್ಮದ್ ಶಮಿ (33 ವಿಕೆಟ್) ನಾಲ್ಕನೇ ಸ್ಥಾನದಲ್ಲಿದ್ದಾರೆ.

ಭಾರತದಲ್ಲಿ ನಡೆದ ಐಪಿಎಲ್ 2021 ಪಂದ್ಯಗಳಲ್ಲಿ ಯುಜ್ವೇಂದ್ರ ಚಹಾಲ್ ಅಷ್ಟೊಂದು ಪರಿಣಾಮಕಾರಿಯಾಗಿ ಗೋಚರಿಸಲಿಲ್ಲ. ಆದರೆ, ಸದ್ಯ ಯುಎಇಯಲ್ಲಿ ಭರ್ಜರಿ ಫಾರ್ಮ್​ನಲ್ಲಿದ್ಧಾರೆ. ಆರ್​ಸಿಬಿ ತಂಡದಲ್ಲಿ ಹರ್ಷಲ್ ಪಟೇಲ್ ಬಿಟ್ಟರೆ ಅತಿ ಹೆಚ್ಚು ವಿಕೆಟ್ ಪಡೆದಿರುವುದು ಚಹಾಲ್ ಅವರೇ. ಕಳೆದ ಕೆಲ ಪಂದ್ಯಗಳಲ್ಲಿ ಅಮೋಘ ಬೌಲಿಂಗ್ ಪ್ರದರ್ಶನ ನೀಡಿರುವ ಚಹಲ್ ಅವರು ಪ್ಲೇ ಆಫ್ ಹಂತದಲ್ಲಿ ಆರ್​ಸಿಬಿಯ ಪ್ರಮುಖ ಬೌಲಿಂಗ್ ಅಸ್ತ್ರವಾಗಿದ್ದಾರೆ.

ಇನ್ನೂ ಈ ಬಾರಿ ಟಿ-20 ವಿಶ್ವಕಪ್​ನಲ್ಲಿ ಆಯ್ಕೆಯಾಗಿರುವ ಭಾರತ ತಂಡದಲ್ಲಿ ಯುಜ್ವೇಂದ್ರ ಚಹಾಲ್ ಅವರ ಹೆಸರು ಇಲ್ಲದಿರುವುದಕ್ಕೆ ಅನೇಕ ಮಾಜಿ ಕ್ರಿಕೆಟಿಗರು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಅದ್ಭುತ ಸ್ಪಿನ್ನರ್ ಆಗಿರುವ ಚಹಲ್ ಅವರು ಟಿ-20 ವಿಶ್ವಕಪ್ ತಂಡದಲ್ಲಿ ಆಡಬೇಕಿತ್ತು ಎಂಬುದು ಹಲವರ ಬಲವಾದ ಅನಿಸಿಕೆ. ಹೀಗಾಗಿ ಚಹಾಲ್ ಟಿ-20 ವಿಶ್ವಕಪ್​ನಲ್ಲಿ ಭಾರತ ತಂಡಕ್ಕೆ ಮತ್ತೆ ಆಯ್ಕೆ ಆಗುವ ಸಾಧ್ಯತೆ ಹೆಚ್ಚಿದೆ.

ಭಾನುವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ 20 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 164 ರನ್ ಕಲೆಹಾಕಿತು. ಗ್ಲೆನ್ ಮ್ಯಾಕ್ಸ್​ವೆಲ್ 57 ರನ್ ಬಾರಿಸಿದರೆ, ದೇವದತ್ ಪಡಿಕ್ಕಲ್ 40 ಮತ್ತು ನಾಯಕ ವಿರಾಟ್ ಕೊಹ್ಲಿ 25 ರನ್ ಗಳಿಸಿದರು. ಟಾರ್ಗೆಟ್ ಬೆನ್ನಟ್ಟಿದ ಪಂಜಾಬ್ ಸ್ಫೋಟಕ ಆರಂಭ ಪಡೆದುಕೊಂಡಿದ್ದು ಬಿಟ್ಟರೆ ಬಳಿಕ ವೈಫಲ್ಯ ಅನುಭವಿಸಿತು. ಮಯಾಂಕ್ ಅಗರ್ವಾಲ್ 57 ರನ್ ಬಾರಿಸಿದರೆ, ಕೆ. ಎಲ್ ರಾಹುಲ್ 39 ರನ್ ಪೇರಿಸಿದರು. ಪಂಜಾಬ್ 20 ಓವರ್​​ನಲ್ಲಿ 6 ವಿಕೆಟ್ ನಷ್ಟಕ್ಕೆ 158 ರನ್ ಗಳಿಸಿ ಸೋಲು ಕಂಡಿತು.

Glenn Maxwell: ಆರ್​ಸಿಬಿಯಲ್ಲಿ ಅದ್ಭುತ ಪ್ರದರ್ಶನ: ಕೊನೆಗೂ ಕಾರಣ ಬಿಚ್ಚಿಟ್ಟ ಗ್ಲೆನ್ ಮ್ಯಾಕ್ಸ್​ವೆಲ್​, ಏನಂದ್ರು ಗೊತ್ತಾ?

IPL 2021, DC vs CSK: ಇಂದು ಟೇಬಲ್ ಟಾಪರ್​ಗಳ ರೋಚಕ ಕದನ: ಡೆಲ್ಲಿ vs ಚೆನ್ನೈ ಪಂದ್ಯದಲ್ಲಿ ಯಾರಿಗೆ ಗೆಲುವು?

(Yuzvendra Chahal takes PBKS 3 wickets and Create new record most wickets in IPL matches in the UAE)

Video: ಅಹಮದಾಬಾದ್ ಆಸ್ಪತ್ರೆಗೆ ಪ್ರಧಾನಿ ಮೋದಿ ಭೇಟಿ
Video: ಅಹಮದಾಬಾದ್ ಆಸ್ಪತ್ರೆಗೆ ಪ್ರಧಾನಿ ಮೋದಿ ಭೇಟಿ
Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ