AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: ಮೈದಾನದಲ್ಲಿ ಕೊಹ್ಲಿ-ರೋಹಿತ್ ನಡುವೆ ನಡೆದ ಆ ಘಟನೆ ಕಂಡು ಶಾಕ್ ಆದ ಫ್ಯಾನ್ಸ್

Virat Kohli Rohit Sharma Celebration Viral Video: ರೋಹಿತ್ ಶರ್ಮಾ ನಾಯಕತ್ವದಡಿಯಲ್ಲಿ ವಿರಾಟ್ ಕೊಹ್ಲ ಇದೇ ಮೊದಲ ಬಾರಿಗೆ ಆಡುತ್ತಿರುವ ಕಾರಣ ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ಮೊದಲ ಏಕದಿನ ಪಂದ್ಯ ಸಾಕಷ್ಟು ಕುತೂಹಲ ಕೆರಳಿಸಿತ್ತು. ಹೀಗಿರುವಾಗ ಈ ಪಂದ್ಯದಲ್ಲಿ ನಡೆದ ಘಟನೆಯ ವಿಡಿಯೋ ಒಂದು ಸಖತ್ ವೈರಲ್ ಆಗಿದೆ.

IND vs WI: ಮೈದಾನದಲ್ಲಿ ಕೊಹ್ಲಿ-ರೋಹಿತ್ ನಡುವೆ ನಡೆದ ಆ ಘಟನೆ ಕಂಡು ಶಾಕ್ ಆದ ಫ್ಯಾನ್ಸ್
Kohli Rohit celebration ND vs WI
TV9 Web
| Edited By: |

Updated on: Feb 07, 2022 | 11:04 AM

Share

ಅಹ್ಮದಾಬಾದ್​ನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ (India vs West Indies) ಸಂಪೂರ್ಣ ಮೇಲುಗೈ ಸಾಧಿಸಿತು. ಟೀಮ್ ಇಂಡಿಯಾದ (Team India) ಹೊಸ ನಾಯಕನ ಹೊಸ ಯೋಜನೆಗೆ ತಬ್ಬಿಬ್ಬಾದ ಪ್ರವಾಸಿಗರು ಬ್ಯಾಟಿಂಗ್- ಬೌಲಂಗ್ ಎರಡರಲ್ಲೂ ನೀರಸ ಪ್ರದರ್ಶನ ತೋರಿದರು. 6 ವಿಕೆಟ್​ಗಳ ಭರ್ಜರಿ ಜಯ ಕಾಣುವ ಮೂಲಕ ಭಾರತ ತಂಡ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ರೋಹಿತ್ ಶರ್ಮಾ ಪರಿಪೂರ್ಣ ನಾಯಕನಾಗಿ ಮೊದಲ ಏಕದಿನ ಪಂದ್ಯವನ್ನು ಮುನ್ನಡೆಸಿದರೆ, ವಿರಾಟ್ ಕೊಹ್ಲಿ ರೋಹಿತ್ ನಾಯಕತ್ವದಡಿಯಲ್ಲಿ ಮೊದಲ ಪಂದ್ಯವನ್ನು ಆಡಿದರು. ಇದಕ್ಕಾಗಿಯೇ ಈ ಪಂದ್ಯ ಸಾಕಷ್ಟು ಕುತೂಹಲ ಕೆರಳಿಸಿತ್ತು. ಯಾಕೆಂದರೆ ಕೊಹ್ಲಿ- ರೋಹಿತ್ (Virat Kohli-Rohit Sharma) ನಡುವೆ ಎಲ್ಲವೂ ಸರಿಯಿಲ್ಲ ಎಂಬ ಮಾತು ಕಳೆದ ಕೆಲವು ವರ್ಷಗಳಿಂದ ಕೇಳಿಬರುತ್ತಲೇ ಇದೆ. ಆದರೆ, ನಿನ್ನೆಯ ಪಂದ್ಯದಲ್ಲಿ ಇವರಿಬ್ಬರ ನಡುವೆ ನಡೆದ ಆ ಒಂದು ಘಟನೆ ಈರೀತಿ ಅಂದುಕೊಳ್ಳುತ್ತಿದ್ದವರಿಗೆ ಶಾಕ್ ನೀಡಿತು.

ಈ ಘಟನೆಗೆ ಕಾರಣವಾಗಿದ್ದು 20ನೇ ಓವರ್​ನಲ್ಲಿ ಯುಜ್ವೇಂದ್ರ ಚಹಲ್ ಕಿತ್ತ ವಿಕೆಟ್. ತಮ್ಮ ಮೊದಲ ಓವರ್​ನ ಮೂರನೇ ಎಸೆತದಲ್ಲೇ ಚಹಲ್ ನಿಕೋಲಸ್ ಪೂರನ್​ರನ್ನು ಎಲ್​ಬಿಡಬ್ಲ್ಯೂ ಮಾಡಿ ಪೆವಿಲಿಯನ್​​ಗೆ ಅಟ್ಟಿದರು. ಇದರ ಮುಂದಿನ ಎಸೆತದಲ್ಲೇ ವಿಂಡೀಸ್ ನಾಯಕ ಪ್ರಮುಖ ವಿಕೆಟ್ ಕೀರೊನ್ ಪೊಲಾರ್ಡ್​ರನ್ನು ಕ್ಲೀನ್ ಬೌಲ್ಡ್ ಮಾಡಿದರು. ಎರಡು ಎಸೆತದಲ್ಲಿ 2 ವಿಕೆಟ್ ಪಡೆದುಕೊಂಡ ಭಾರತ ಖುಷಿಯಲ್ಲಿ ತೇಲಾಡಿತು. ಅದರಲ್ಲೂ ಕೊಹ್ಲಿ ಹಾಗೂ ರೋಹಿತ್ ಸಂಭ್ರಮಕ್ಕೆ ಪಾರವೇ ಇರಲಿಲ್ಲ. ಇಬ್ಬರೂ ಜಿಗಿದುಕೊಂಡು ಕೈ-ಕೈ ತಾಗಿಸಿ ನಗುತ್ತಾ ಖುಷಿಯಲ್ಲಿ ಸಂಭ್ರಮಿಸಿದರು.

ರೋಹಿತ್- ಕೊಹ್ಲಿ ಅವರ ಈ ಸಂಭ್ರಮವನ್ನು ಕಂಡು ಅನೇಕರು ಇದು ಈ ಪಂದ್ಯದ ಸ್ಮರಣೀಯ ಕ್ಷಣ ಎಂದು ಬಣ್ಣಿಸಿದ್ದಾರೆ. ಇನ್ನೂ ಕೆಲವರು ಕೊಹ್ಲಿ-ರೋಹಿತ್ ನಡುವೆ ಸರಿಯಿಲ್ಲ ಎಂಬವರು ಒಮ್ಮೆ ಈ ವಿಡಿಯೋ ನೋಡಿ ಟಾಂಗ್ ಕೊಟ್ಟಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಇಲ್ಲಿದೆ ನೋಡಿ ಆ ವಿಡಿಯೋ.

ಇನ್ನು ಚಹಲ್ ಅವರ 2ನೇ ಓವರ್​ನಲ್ಲೂ ಭಾರತದ ಖುಷಿ ಮತ್ತಷ್ಟು ಹೆಚ್ಚಿಸಿತು. 73 ರನ್​ಗೆ 5 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿ ವಿಂಡೀಸ್​ಗೆ ಚಹಲ್ ತಮ್ಮ 2ನೇ ಓವರ್​ನಲ್ಲೇ ಮತ್ತೊಂದು ಶಾಕ್ ನೀಡಿದರು. ವಿಂಡೀಸ್ ಬ್ಯಾಟರ್​ ಶಮರ್​ ಬ್ರೂಕ್ಸ್​ ಬ್ಯಾಟ್​ಗೆ ಚೆಂಡು ಸ್ವಲ್ಪ ತಗುಲಿ ಕೀಪರ್​ ರಿಷಭ್​ ಪಂತ್‌ ಕೈಗೆ ಸೇರಿತ್ತು. ಆದರೆ, ನಾಯಕ ರೋಹಿತ್ ಸೇರಿದಂತೆ ಇಡೀ ತಂಡ ಎಲ್​ಬಿಡಬ್ಲ್ಯೂಗೆ ಮನವಿ ಮಾಡಿತು. ಇತ್ತ ಆನ್​ಫೀಲ್ಡ್​ ಅಂಪೈರ್​ ನಾಟೌಟ್ ಎಂಬ ತೀರ್ಪು ನೀಡಿದರು.

ಆದರೆ, ಭಾರತಕ್ಕೆ ಇದು ಸರಿ ಕಾಣಲಿಲ್ಲ. ರೋಹಿತ್ ವಿಕೆಟ್ ಕೀಪರ್​ ಪಂತ್​ರನ್ನು ಚೆಂಡು ಎಡ್ಜ್​ ಆಗಿರಬಹುದಾ? ಎಂದು ಕೇಳಿದರು. ಈ ಸಂದರ್ಭ ಅಲ್ಲಿಗೆ ಮಧ್ಯ ಪ್ರವೇಶಿಸಿದ ಕಿಂಗ್ ಕೊಹ್ಲಿ ಚೆಂಡು ಬ್ಯಾಟ್​ಗೆ ತಾಗಿದೆ ಎಂದು ರೋಹಿತ್​ರನ್ನು ಮನವರಿಕೆ ಮಾಡಿ ಡಿಆರ್​ಎಸ್​ ತೆಗೆದುಕೊಳ್ಳುವಂತೆ ಸೂಚಿಸಿದರು. ಅದರಂತೆ ರೋಹಿತ್ ಡಿಆರ್​ಎಸ್​ ಮೊರೆಹೋದರು. ಇವರ ನಡುವಣ ಸಂಭಾಷಣೆ ಸ್ಟಂಪ್ ಮೈಕ್​ನಲ್ಲಿ ಸೆರೆಯಾಗಿದೆ. ಟಿವಿ ರಿಪ್ಲೇನಲ್ಲಿ ಚೆಂಡು ಬ್ಯಾಟಿಗೆ ತಾಗಿರುವುದು ಸ್ಪಷ್ಟವಾಗಿ ಗೋಚರಿಸಿ ಔಟ್ ಎಂಬ ತೀರ್ಪು ಬಂತು.

Rohit Sharma Six Video: ಹಿಟ್​ಮ್ಯಾನ್ ರೋಹಿತ್ ಶರ್ಮಾ ಸಿಡಿಸಿದ ಸಿಕ್ಸ್​ ಕಂಡು ಪೊಲಾರ್ಡ್ ಮಾಡಿದ್ದೇನು ನೋಡಿ

Rohit Sharma: ಪಂದ್ಯ ಮುಗಿದ ಬಳಿಕ ಮಹತ್ವದ ಮಾಹಿತಿ ಹಂಚಿಕೊಂಡ ನಾಯಕ ರೋಹಿತ್ ಶರ್ಮಾ

Follow Us
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ