AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Zim Afro T10 2023: ಝಝೈ ಭರ್ಜರಿ ಬ್ಯಾಟಿಂಗ್: ಡರ್ಬನ್ ತಂಡಕ್ಕೆ ಜಯ

Durban Qalandars vs Joburg Buffaloes: ಕಠಿಣ ಗುರಿ ಬೆನ್ನತ್ತಿದ ಡರ್ಬನ್ ಖಲಂದರ್ಸ್ ತಂಡಕ್ಕೆ ಅಫ್ಘಾನ್ ಆಟಗಾರ ಹಝರತುಲ್ಲಾ ಝಝೈ ಸ್ಪೋಟಕ ಆರಂಭ ಒದಗಿಸಿದ್ದರು.

Zim Afro T10 2023: ಝಝೈ ಭರ್ಜರಿ ಬ್ಯಾಟಿಂಗ್: ಡರ್ಬನ್ ತಂಡಕ್ಕೆ ಜಯ
Durban Qalandars
TV9 Web
| Edited By: |

Updated on: Jul 23, 2023 | 6:43 PM

Share

Zim Afro T10 2023: ಹರಾರೆಯಲ್ಲಿ ನಡೆಯುತ್ತಿರುವ ಝಿಮ್ ಆಫ್ರೊ ಟಿ10 ಲೀಗ್​ನ 5ನೇ ಪಂದ್ಯದಲ್ಲಿ ಜೋಬರ್ಗ್ ಬಫಲೋಸ್ ವಿರುದ್ಧ ಡರ್ಬನ್ ಖಲಂದರ್ಸ್ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಜೋಬರ್ಗ್ ಬಫಲೋಸ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಅದರಂತೆ ಇನಿಂಗ್ಸ್ ಆರಂಭಿಸಿದ ಟಾಮ್ ಬ್ಯಾಂಟನ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಮೊದಲ ಓವರ್​ನಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ಬ್ಯಾಂಟನ್ 31 ಎಸೆತಗಳಲ್ಲಿ 2 ಭರ್ಜರಿ ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ ಅಜೇಯ 55 ರನ್ ಬಾರಿಸಿದರು.

ಮತ್ತೊಂದೆಡೆ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವಿಕೆಟ್ ಕೀಪರ್ ಬ್ಯಾಟರ್ ಮುಶ್ಫಿಕುರ್ ರಹೀಮ್ 19 ರನ್​ ಕಲೆಹಾಕಿದರು. ಈ ಮೂಲಕ ಜೋಬರ್ಗ್ ಬಫಲೋಸ್ ತಂಡವು 10 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 94 ರನ್ ಕಲೆಹಾಕಿತು.

95 ರನ್​ಗಳ ಗುರಿ ಬೆನ್ನತ್ತಿದ ಡರ್ಬನ್ ಖಲಂದರ್ಸ್ ತಂಡಕ್ಕೆ ಅಫ್ಘಾನ್ ಆಟಗಾರ ಹಝರತುಲ್ಲಾ ಝಝೈ ಸ್ಪೋಟಕ ಆರಂಭ ಒದಗಿಸಿದ್ದರು. 25 ಎಸೆತಗಳನ್ನು ಎದುರಿಸಿದ ಝಝೈ 3 ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ ಅಜೇಯ 41 ರನ್ ಚಚ್ಚಿದರು.

ಇನ್ನು ಮಧ್ಯಮ ಕ್ರಮಾಂಕದಲ್ಲಿ ಆಸಿಫ್ ಅಲಿ 13 ಎಸೆತಗಳಲ್ಲಿ 23 ರನ್ ಬಾರಿಸಿ ಉತ್ತಮ ಸಾಥ್ ನೀಡಿದರು. ಪರಿಣಾಮ 9.1 ಓವರ್​ಗಳಲ್ಲಿ 3 ವಿಕೆಟ್ ನಷ್ಟಕ್ಕೆ ಡರ್ಬನ್ ಖಲಂದರ್ಸ್ ತಂಡವು ಗುರಿ ಮುಟ್ಟಿತು. ಈ ಮೂಲಕ ಜೋಬರ್ಗ್​ ಬಫಲೋಸ್ ವಿರುದ್ಧ ಡರ್ಬನ್ ಖಲಂದರ್ಸ್ 7 ವಿಕೆಟ್​ಗಳ ಜಯ ಸಾಧಿಸಿದೆ.

ಡರ್ಬನ್ ಖಲಂದರ್ಸ್​ ಪ್ಲೇಯಿಂಗ್ 11: ಟಿಮ್ ಸೀಫರ್ಟ್ (ವಿಕೆಟ್ ಕೀಪರ್) , ಹಝರತುಲ್ಲಾ ಝಝೈ, ಆಂಡ್ರೆ ಫ್ಲೆಚರ್ , ಕ್ರೇಗ್ ಎರ್ವಿನ್ (ನಾಯಕ) , ಆಸಿಫ್ ಅಲಿ , ನಿಕ್ ವೆಲ್ಚ್ , ಜಾರ್ಜ್ ಲಿಂಡೆ , ಬ್ರಾಡ್ ಇವಾನ್ಸ್ , ಓವನ್ ಮುಝೊಂಡೋ , ಡೇರಿನ್ ಡುಪಾವಿಲ್ಲನ್ , ಟೆಂಡೈ ಚಟಾರಾ.

ಇದನ್ನೂ ಓದಿ: Team India: ಒಟ್ಟು 47 ಪ್ಲೇಯರ್ಸ್​: ಟೀಮ್ ಇಂಡಿಯಾದಿಂದ 32 ಆಟಗಾರರು ಔಟ್..!

ಜೋಬರ್ಗ್ ಬಫಲೋಸ್ ಪ್ಲೇಯಿಂಗ್ 11: ಟಾಮ್ ಬ್ಯಾಂಟನ್ , ವಿಲ್ ಸ್ಮೀಡ್ , ಮೊಹಮ್ಮದ್ ಹಫೀಜ್ (ನಾಯಕ) , ಮುಶ್ಫಿಕುರ್ ರಹೀಮ್ (ವಿಕೆಟ್ ಕೀಪರ್) , ಯೂಸುಫ್ ಪಠಾಣ್ , ವೆಸ್ಲಿ ಮಾಧೆವೆರೆ , ವೆಲ್ಲಿಂಗ್ಟನ್ ಮಸಕಡ್ಜಾ , ಜೂನಿಯರ್ ದಲಾ , ಬ್ಲೆಸ್ಸಿಂಗ್ ಮುಜರಬಾನಿ , ವಿಕ್ಟರ್ ನ್ಯಾಯುಚಿ , ನೂರ್ ಅಹ್ಮದ್.

Follow Us
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ