AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Zim Afro T10 League: ಹೊಸ ಲೀಗ್​ನಲ್ಲಿ ಭಾರತೀಯ ಕ್ರಿಕೆಟಿಗರು..!

Zim Afro T10 League: ಝಿಂಬಾಬ್ವೆ ಕ್ರಿಕೆಟ್ ಬೋರ್ಡ್​ ಸಹಯೋಗದೊಂದಿಗೆ ಆಯೋಜಿಸುತ್ತಿರುವ ಝಿಮ್ ಆಫ್ರೋ ಟಿ10 ಲೀಗ್​ನಲ್ಲಿ ಒಟ್ಟು 5 ಫ್ರಾಂಚೈಸಿಗಳ ತಂಡಗಳು ಕಣಕ್ಕಿಳಿಯಲಿದೆ. ಈ ತಂಡಗಳ ಪಟ್ಟಿ ಈ ಕೆಳಗಿನಂತಿದೆ.

Zim Afro T10 League: ಹೊಸ ಲೀಗ್​ನಲ್ಲಿ ಭಾರತೀಯ ಕ್ರಿಕೆಟಿಗರು..!
Yusuf Pathan-Robin Uthappa
TV9 Web
| Edited By: |

Updated on: Jul 04, 2023 | 4:19 PM

Share

ಐಪಿಎಲ್​ನಿಂದ (IPL) ನಿವೃತ್ತಿ ಹೊಂದಿರುವ ಟೀಮ್ ಇಂಡಿಯಾದ ಮಾಜಿ ಆಟಗಾರರು ವಿದೇಶಿ ಲೀಗ್​ಗಳತ್ತ ಮುಖ ಮಾಡುತ್ತಿದ್ದಾರೆ. ಈಗಾಗಲೇ ಯೂಸುಫ್ ಪಠಾಣ್, ರಾಬಿನ್ ಉತ್ತಪ್ಪ ಹಾಗೂ ಇರ್ಫಾನ್ ಪಠಾಣ್ ಹಲವು ಲೀಗ್​ಗಳಲ್ಲಿ ಕಾಣಿಸಿಕೊಂಡಿದ್ದಾರೆ. ಹಾಗೆಯೇ ಈ ಬಾರಿಯ ಐಪಿಎಲ್​ ಮೂಲಕ ನಿವೃತ್ತಿ ಘೋಷಿಸಿದ್ದ ಅಂಬಾಟಿ ರಾಯುಡು ಇದೀಗ ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಇದರ ಬೆನ್ನಲ್ಲೇ ಝಿಂಬಾಬ್ವೆಯಲ್ಲಿ ನಡೆಯಲಿರುವ ಹೊಸ ಟಿ10 ಲೀಗ್​ಗೂ ಭಾರತೀಯ ಆಟಗಾರರು ಆಯ್ಕೆಯಾಗಿದ್ದಾರೆ. ಅಬುಧಾಬಿ ಟಿ10 ಲೀಗ್ ಆಯೋಜಕರು ಆರಂಭಿಸುತ್ತಿರುವ ಝಿಮ್ ಆಫ್ರೋ T10 ಲೀಗ್‌ನಲ್ಲಿ ಆಡಲು ಟೀಮ್ ಇಂಡಿಯಾದ ಮಾಜಿ ಆಟಗಾರರು ಉತ್ಸುಕರಾಗಿದ್ದಾರೆ.

ಅದರಂತೆ ಇದೀಗ 5 ತಂಡಗಳಲ್ಲಿ ಭಾರತ ತಂಡದ ಮಾಜಿ ವೇಗಿ ಶ್ರೀಶಾಂತ್, ಆಲ್​ರೌಂಡರ್​ಗಳಾದ ಯೂಸುಫ್ ಪಠಾಣ್, ಇರ್ಫಾನ್ ಪಠಾಣ್, ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ರಾಬಿನ್ ಉತ್ತಪ್ಪ ಹೆಸರುಗಳು ಕಾಣಿಸಿಕೊಂಡಿದೆ. ಅಲ್ಲದೆ ಈ ಟೂರ್ನಿಯಲ್ಲಿ ಸ್ಟುವರ್ಟ್ ಬಿನ್ನಿ ಮತ್ತು ಪಾರ್ಥಿವ್ ಪಟೇಲ್ ಕೂಡ ಕಣಕ್ಕಿಳಿಯಲಿದ್ದಾರೆ ಎಂದು ತಿಳಿದು ಬಂದಿದೆ.

ಇದರೊಂದಿಗೆ ಅಬುಧಾಬಿ ಟಿ10 ಲೀಗ್ ಬಳಿಕ ಭಾರತೀಯ ಆಟಗಾರರು ಝಿಮ್ ಆಫ್ರೋ ಟಿ10 ಟೂರ್ನಿಯತ್ತ ಮುಖ ಮಾಡಿರುವುದು ಸ್ಪಷ್ಟ. ಹೀಗಾಗಿ ಮುಂಬರುವ ದಿನಗಳಲ್ಲಿ ಐಪಿಎಲ್​ನಲ್ಲಿ ಅವಕಾಶ ವಂಚಿತರಾಗುವ ಆಟಗಾರರು ವಿದೇಶಿ ಲೀಗ್​ನಲ್ಲಿ ಅದೃಷ್ಟ ಪರೀಕ್ಷೆಗೆ ಇಳಿಯಲಿದ್ದಾರೆ ಎಂದೇ ಹೇಳಬಹುದು.

ಝಿಮ್ ಆಫ್ರೋ ಲೀಗ್‌ ತಂಡಗಳು:

ಝಿಂಬಾಬ್ವೆ ಕ್ರಿಕೆಟ್ ಬೋರ್ಡ್​ ಸಹಯೋಗದೊಂದಿಗೆ ಆಯೋಜಿಸುತ್ತಿರುವ ಝಿಮ್ ಆಫ್ರೋ ಟಿ10 ಲೀಗ್​ನಲ್ಲಿ ಒಟ್ಟು 5 ಫ್ರಾಂಚೈಸಿಗಳ ತಂಡಗಳು ಕಣಕ್ಕಿಳಿಯಲಿದೆ. ಈ ತಂಡಗಳ ಪಟ್ಟಿ ಈ ಕೆಳಗಿನಂತಿದೆ.

  • 1- ಹರಾರೆ ಹರಿಕೇನ್ಸ್,
  • 2- ಬುಲವಾಯೊ ಬ್ರೇವ್ಸ್
  • 3- ಕೇಪ್ ಟೌನ್ ಸ್ಯಾಂಪ್ ಆರ್ಮಿ
  • 4- ಡರ್ಬನ್ ಕ್ಲಾಂಡರ್ಸ್
  • 5- ಜೋಬರ್ಗ್ ಬಫಲೋಸ್
Follow Us
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ
ಗಾಣಗಾಪುರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ
ಗಾಣಗಾಪುರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ
ದಸರಾ ಗಜಪಡೆಗೆ ಹಣ್ಣು ತಿನ್ನಿಸಿದ ತ್ರಿಷಿಕಾ, ಆದ್ಯವೀರ್
ದಸರಾ ಗಜಪಡೆಗೆ ಹಣ್ಣು ತಿನ್ನಿಸಿದ ತ್ರಿಷಿಕಾ, ಆದ್ಯವೀರ್
2028ಕ್ಕೆ ರಾಮನಗರದಿಂದಲೇ ಸ್ಪರ್ಧೆ: ನಿಖಿಲ್​ ಕುಮಾರಸ್ವಾಮಿ
2028ಕ್ಕೆ ರಾಮನಗರದಿಂದಲೇ ಸ್ಪರ್ಧೆ: ನಿಖಿಲ್​ ಕುಮಾರಸ್ವಾಮಿ
ಎತ್ತಿನಹೊಳೆ ಯೋಜನೆಯ ಕಾಮಗಾರಿ ವೀಕ್ಷಿಸಿದ ಸಚಿವ ಚಲುವರಾಯಸ್ವಾಮಿ
ಎತ್ತಿನಹೊಳೆ ಯೋಜನೆಯ ಕಾಮಗಾರಿ ವೀಕ್ಷಿಸಿದ ಸಚಿವ ಚಲುವರಾಯಸ್ವಾಮಿ
ಪೆಟ್ರೋಲ್ ಬಂಕ್‌ಗಳಲ್ಲಿ ವಂಚನೆ ಆರೋಪದ ಬಗ್ಗೆ ‘ಟಿವಿ9’ ರಿಯಾಲಿಟಿ ಚೆಕ್
ಪೆಟ್ರೋಲ್ ಬಂಕ್‌ಗಳಲ್ಲಿ ವಂಚನೆ ಆರೋಪದ ಬಗ್ಗೆ ‘ಟಿವಿ9’ ರಿಯಾಲಿಟಿ ಚೆಕ್
ಪ್ರಧಾನಿ ಮೋದಿ ಹುಟ್ಟುಹಬ್ಬದ ಹಿನ್ನೆಲೆ ವಿ. ಸೋಮಣ್ಣ ವಿಶೇಷ ಪೂಜೆ
ಪ್ರಧಾನಿ ಮೋದಿ ಹುಟ್ಟುಹಬ್ಬದ ಹಿನ್ನೆಲೆ ವಿ. ಸೋಮಣ್ಣ ವಿಶೇಷ ಪೂಜೆ
ಸಿಎಂ ಬರಲಿರುವ ಸ್ಥಳಕ್ಕೆ ನುಗ್ಗಲು ಯತ್ನಿಸಿದ ಎಸ್​ಎಫ್​ಐ ಮುಖಂಡರು ವಶಕ್ಕೆ
ಸಿಎಂ ಬರಲಿರುವ ಸ್ಥಳಕ್ಕೆ ನುಗ್ಗಲು ಯತ್ನಿಸಿದ ಎಸ್​ಎಫ್​ಐ ಮುಖಂಡರು ವಶಕ್ಕೆ
ಕಲಬುರಗಿಯಲ್ಲಿ ಸಿದ್ದರಾಮಯ್ಯ ಮೂರ್ತಿ ಸ್ಥಾಪನೆ: ಪಾಲಿಕೆಯಿಂದ ತೆರವು
ಕಲಬುರಗಿಯಲ್ಲಿ ಸಿದ್ದರಾಮಯ್ಯ ಮೂರ್ತಿ ಸ್ಥಾಪನೆ: ಪಾಲಿಕೆಯಿಂದ ತೆರವು
ತಾನೇ ವಿಡಿಯೋ ಮಾಡಿಸಿ ಯೂಟ್ಯೂಬರ್ ವಿರುದ್ಧ ಕೇಸ್ ದಾಖಲಿಸಿದ ಇನ್ಸ್​ಪೆಕ್ಟರ್!
ತಾನೇ ವಿಡಿಯೋ ಮಾಡಿಸಿ ಯೂಟ್ಯೂಬರ್ ವಿರುದ್ಧ ಕೇಸ್ ದಾಖಲಿಸಿದ ಇನ್ಸ್​ಪೆಕ್ಟರ್!