AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Zim Afro T10 League: ಹೊಸ ಲೀಗ್​ನಲ್ಲಿ ಭಾರತೀಯ ಕ್ರಿಕೆಟಿಗರು..!

Zim Afro T10 League: ಝಿಂಬಾಬ್ವೆ ಕ್ರಿಕೆಟ್ ಬೋರ್ಡ್​ ಸಹಯೋಗದೊಂದಿಗೆ ಆಯೋಜಿಸುತ್ತಿರುವ ಝಿಮ್ ಆಫ್ರೋ ಟಿ10 ಲೀಗ್​ನಲ್ಲಿ ಒಟ್ಟು 5 ಫ್ರಾಂಚೈಸಿಗಳ ತಂಡಗಳು ಕಣಕ್ಕಿಳಿಯಲಿದೆ. ಈ ತಂಡಗಳ ಪಟ್ಟಿ ಈ ಕೆಳಗಿನಂತಿದೆ.

Zim Afro T10 League: ಹೊಸ ಲೀಗ್​ನಲ್ಲಿ ಭಾರತೀಯ ಕ್ರಿಕೆಟಿಗರು..!
Yusuf Pathan-Robin Uthappa
TV9 Web
| Edited By: |

Updated on: Jul 04, 2023 | 4:19 PM

Share

ಐಪಿಎಲ್​ನಿಂದ (IPL) ನಿವೃತ್ತಿ ಹೊಂದಿರುವ ಟೀಮ್ ಇಂಡಿಯಾದ ಮಾಜಿ ಆಟಗಾರರು ವಿದೇಶಿ ಲೀಗ್​ಗಳತ್ತ ಮುಖ ಮಾಡುತ್ತಿದ್ದಾರೆ. ಈಗಾಗಲೇ ಯೂಸುಫ್ ಪಠಾಣ್, ರಾಬಿನ್ ಉತ್ತಪ್ಪ ಹಾಗೂ ಇರ್ಫಾನ್ ಪಠಾಣ್ ಹಲವು ಲೀಗ್​ಗಳಲ್ಲಿ ಕಾಣಿಸಿಕೊಂಡಿದ್ದಾರೆ. ಹಾಗೆಯೇ ಈ ಬಾರಿಯ ಐಪಿಎಲ್​ ಮೂಲಕ ನಿವೃತ್ತಿ ಘೋಷಿಸಿದ್ದ ಅಂಬಾಟಿ ರಾಯುಡು ಇದೀಗ ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಇದರ ಬೆನ್ನಲ್ಲೇ ಝಿಂಬಾಬ್ವೆಯಲ್ಲಿ ನಡೆಯಲಿರುವ ಹೊಸ ಟಿ10 ಲೀಗ್​ಗೂ ಭಾರತೀಯ ಆಟಗಾರರು ಆಯ್ಕೆಯಾಗಿದ್ದಾರೆ. ಅಬುಧಾಬಿ ಟಿ10 ಲೀಗ್ ಆಯೋಜಕರು ಆರಂಭಿಸುತ್ತಿರುವ ಝಿಮ್ ಆಫ್ರೋ T10 ಲೀಗ್‌ನಲ್ಲಿ ಆಡಲು ಟೀಮ್ ಇಂಡಿಯಾದ ಮಾಜಿ ಆಟಗಾರರು ಉತ್ಸುಕರಾಗಿದ್ದಾರೆ.

ಅದರಂತೆ ಇದೀಗ 5 ತಂಡಗಳಲ್ಲಿ ಭಾರತ ತಂಡದ ಮಾಜಿ ವೇಗಿ ಶ್ರೀಶಾಂತ್, ಆಲ್​ರೌಂಡರ್​ಗಳಾದ ಯೂಸುಫ್ ಪಠಾಣ್, ಇರ್ಫಾನ್ ಪಠಾಣ್, ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ರಾಬಿನ್ ಉತ್ತಪ್ಪ ಹೆಸರುಗಳು ಕಾಣಿಸಿಕೊಂಡಿದೆ. ಅಲ್ಲದೆ ಈ ಟೂರ್ನಿಯಲ್ಲಿ ಸ್ಟುವರ್ಟ್ ಬಿನ್ನಿ ಮತ್ತು ಪಾರ್ಥಿವ್ ಪಟೇಲ್ ಕೂಡ ಕಣಕ್ಕಿಳಿಯಲಿದ್ದಾರೆ ಎಂದು ತಿಳಿದು ಬಂದಿದೆ.

ಇದರೊಂದಿಗೆ ಅಬುಧಾಬಿ ಟಿ10 ಲೀಗ್ ಬಳಿಕ ಭಾರತೀಯ ಆಟಗಾರರು ಝಿಮ್ ಆಫ್ರೋ ಟಿ10 ಟೂರ್ನಿಯತ್ತ ಮುಖ ಮಾಡಿರುವುದು ಸ್ಪಷ್ಟ. ಹೀಗಾಗಿ ಮುಂಬರುವ ದಿನಗಳಲ್ಲಿ ಐಪಿಎಲ್​ನಲ್ಲಿ ಅವಕಾಶ ವಂಚಿತರಾಗುವ ಆಟಗಾರರು ವಿದೇಶಿ ಲೀಗ್​ನಲ್ಲಿ ಅದೃಷ್ಟ ಪರೀಕ್ಷೆಗೆ ಇಳಿಯಲಿದ್ದಾರೆ ಎಂದೇ ಹೇಳಬಹುದು.

ಝಿಮ್ ಆಫ್ರೋ ಲೀಗ್‌ ತಂಡಗಳು:

ಝಿಂಬಾಬ್ವೆ ಕ್ರಿಕೆಟ್ ಬೋರ್ಡ್​ ಸಹಯೋಗದೊಂದಿಗೆ ಆಯೋಜಿಸುತ್ತಿರುವ ಝಿಮ್ ಆಫ್ರೋ ಟಿ10 ಲೀಗ್​ನಲ್ಲಿ ಒಟ್ಟು 5 ಫ್ರಾಂಚೈಸಿಗಳ ತಂಡಗಳು ಕಣಕ್ಕಿಳಿಯಲಿದೆ. ಈ ತಂಡಗಳ ಪಟ್ಟಿ ಈ ಕೆಳಗಿನಂತಿದೆ.

  • 1- ಹರಾರೆ ಹರಿಕೇನ್ಸ್,
  • 2- ಬುಲವಾಯೊ ಬ್ರೇವ್ಸ್
  • 3- ಕೇಪ್ ಟೌನ್ ಸ್ಯಾಂಪ್ ಆರ್ಮಿ
  • 4- ಡರ್ಬನ್ ಕ್ಲಾಂಡರ್ಸ್
  • 5- ಜೋಬರ್ಗ್ ಬಫಲೋಸ್
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ