AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Zim Afro T10 League: ಹೊಸ ಲೀಗ್​ನಲ್ಲಿ ಭಾರತೀಯ ಕ್ರಿಕೆಟಿಗರು..!

Zim Afro T10 League: ಝಿಂಬಾಬ್ವೆ ಕ್ರಿಕೆಟ್ ಬೋರ್ಡ್​ ಸಹಯೋಗದೊಂದಿಗೆ ಆಯೋಜಿಸುತ್ತಿರುವ ಝಿಮ್ ಆಫ್ರೋ ಟಿ10 ಲೀಗ್​ನಲ್ಲಿ ಒಟ್ಟು 5 ಫ್ರಾಂಚೈಸಿಗಳ ತಂಡಗಳು ಕಣಕ್ಕಿಳಿಯಲಿದೆ. ಈ ತಂಡಗಳ ಪಟ್ಟಿ ಈ ಕೆಳಗಿನಂತಿದೆ.

Zim Afro T10 League: ಹೊಸ ಲೀಗ್​ನಲ್ಲಿ ಭಾರತೀಯ ಕ್ರಿಕೆಟಿಗರು..!
Yusuf Pathan-Robin Uthappa
TV9 Web
| Edited By: |

Updated on: Jul 04, 2023 | 4:19 PM

Share

ಐಪಿಎಲ್​ನಿಂದ (IPL) ನಿವೃತ್ತಿ ಹೊಂದಿರುವ ಟೀಮ್ ಇಂಡಿಯಾದ ಮಾಜಿ ಆಟಗಾರರು ವಿದೇಶಿ ಲೀಗ್​ಗಳತ್ತ ಮುಖ ಮಾಡುತ್ತಿದ್ದಾರೆ. ಈಗಾಗಲೇ ಯೂಸುಫ್ ಪಠಾಣ್, ರಾಬಿನ್ ಉತ್ತಪ್ಪ ಹಾಗೂ ಇರ್ಫಾನ್ ಪಠಾಣ್ ಹಲವು ಲೀಗ್​ಗಳಲ್ಲಿ ಕಾಣಿಸಿಕೊಂಡಿದ್ದಾರೆ. ಹಾಗೆಯೇ ಈ ಬಾರಿಯ ಐಪಿಎಲ್​ ಮೂಲಕ ನಿವೃತ್ತಿ ಘೋಷಿಸಿದ್ದ ಅಂಬಾಟಿ ರಾಯುಡು ಇದೀಗ ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಇದರ ಬೆನ್ನಲ್ಲೇ ಝಿಂಬಾಬ್ವೆಯಲ್ಲಿ ನಡೆಯಲಿರುವ ಹೊಸ ಟಿ10 ಲೀಗ್​ಗೂ ಭಾರತೀಯ ಆಟಗಾರರು ಆಯ್ಕೆಯಾಗಿದ್ದಾರೆ. ಅಬುಧಾಬಿ ಟಿ10 ಲೀಗ್ ಆಯೋಜಕರು ಆರಂಭಿಸುತ್ತಿರುವ ಝಿಮ್ ಆಫ್ರೋ T10 ಲೀಗ್‌ನಲ್ಲಿ ಆಡಲು ಟೀಮ್ ಇಂಡಿಯಾದ ಮಾಜಿ ಆಟಗಾರರು ಉತ್ಸುಕರಾಗಿದ್ದಾರೆ.

ಅದರಂತೆ ಇದೀಗ 5 ತಂಡಗಳಲ್ಲಿ ಭಾರತ ತಂಡದ ಮಾಜಿ ವೇಗಿ ಶ್ರೀಶಾಂತ್, ಆಲ್​ರೌಂಡರ್​ಗಳಾದ ಯೂಸುಫ್ ಪಠಾಣ್, ಇರ್ಫಾನ್ ಪಠಾಣ್, ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ರಾಬಿನ್ ಉತ್ತಪ್ಪ ಹೆಸರುಗಳು ಕಾಣಿಸಿಕೊಂಡಿದೆ. ಅಲ್ಲದೆ ಈ ಟೂರ್ನಿಯಲ್ಲಿ ಸ್ಟುವರ್ಟ್ ಬಿನ್ನಿ ಮತ್ತು ಪಾರ್ಥಿವ್ ಪಟೇಲ್ ಕೂಡ ಕಣಕ್ಕಿಳಿಯಲಿದ್ದಾರೆ ಎಂದು ತಿಳಿದು ಬಂದಿದೆ.

ಇದರೊಂದಿಗೆ ಅಬುಧಾಬಿ ಟಿ10 ಲೀಗ್ ಬಳಿಕ ಭಾರತೀಯ ಆಟಗಾರರು ಝಿಮ್ ಆಫ್ರೋ ಟಿ10 ಟೂರ್ನಿಯತ್ತ ಮುಖ ಮಾಡಿರುವುದು ಸ್ಪಷ್ಟ. ಹೀಗಾಗಿ ಮುಂಬರುವ ದಿನಗಳಲ್ಲಿ ಐಪಿಎಲ್​ನಲ್ಲಿ ಅವಕಾಶ ವಂಚಿತರಾಗುವ ಆಟಗಾರರು ವಿದೇಶಿ ಲೀಗ್​ನಲ್ಲಿ ಅದೃಷ್ಟ ಪರೀಕ್ಷೆಗೆ ಇಳಿಯಲಿದ್ದಾರೆ ಎಂದೇ ಹೇಳಬಹುದು.

ಝಿಮ್ ಆಫ್ರೋ ಲೀಗ್‌ ತಂಡಗಳು:

ಝಿಂಬಾಬ್ವೆ ಕ್ರಿಕೆಟ್ ಬೋರ್ಡ್​ ಸಹಯೋಗದೊಂದಿಗೆ ಆಯೋಜಿಸುತ್ತಿರುವ ಝಿಮ್ ಆಫ್ರೋ ಟಿ10 ಲೀಗ್​ನಲ್ಲಿ ಒಟ್ಟು 5 ಫ್ರಾಂಚೈಸಿಗಳ ತಂಡಗಳು ಕಣಕ್ಕಿಳಿಯಲಿದೆ. ಈ ತಂಡಗಳ ಪಟ್ಟಿ ಈ ಕೆಳಗಿನಂತಿದೆ.

  • 1- ಹರಾರೆ ಹರಿಕೇನ್ಸ್,
  • 2- ಬುಲವಾಯೊ ಬ್ರೇವ್ಸ್
  • 3- ಕೇಪ್ ಟೌನ್ ಸ್ಯಾಂಪ್ ಆರ್ಮಿ
  • 4- ಡರ್ಬನ್ ಕ್ಲಾಂಡರ್ಸ್
  • 5- ಜೋಬರ್ಗ್ ಬಫಲೋಸ್
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ