Sign In

By signing in or creating an account, you agree with Associated Broadcasting Company's Terms & Conditions and Privacy Policy.

33 ಎಸೆತಗಳಲ್ಲಿ ಪಂದ್ಯ ಮುಗಿಸಿದ ಪಾಕಿಸ್ತಾನ್

ಟಿ20 ಕ್ರಿಕೆಟ್​​ನಲ್ಲಿ ಝಿಂಬಾಬ್ವೆ ತಂಡವು ಅತ್ಯಲ್ಪ ಮೊತ್ತ ಕಲೆಹಾಕಿದೆ. ಈ ಹಿಂದೆ ಶ್ರೀಲಂಕಾ ವಿರುದ್ಧ 82 ರನ್​​ಗಳಿಗೆ ಆಲೌಟ್ ಆಗಿ ಕಳಪೆ ದಾಖಲೆ ಬರೆದಿದ್ದ ಝಿಂಬಾಬ್ವೆ ಈ ಬಾರಿ ಕೇವಲ 57 ರನ್​​ಗಳಿಗೆ ಸರ್ವಪತನ ಕಂಡು ಹೀನಾಯ ದಾಖಲೆ ನಿರ್ಮಿಸಿದೆ.

33 ಎಸೆತಗಳಲ್ಲಿ ಪಂದ್ಯ ಮುಗಿಸಿದ ಪಾಕಿಸ್ತಾನ್
Pakistan
Follow us
TV9 Web
| Updated By: ಝಾಹಿರ್ ಯೂಸುಫ್

Updated on: Dec 04, 2024 | 7:14 AM

ಬುಲವಾಯೊದ ಕ್ವೀನ್ಸ್ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ನಡೆದ ಝಿಂಬಾಬ್ವೆ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಪಾಕಿಸ್ತಾನ್ ತಂಡ ಅಮೋಘ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಝಿಂಬಾಬ್ವೆ ತಂಡದ ನಾಯಕ ಸಿಕಂದರ್ ರಾಝ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಝಿಂಬಾಬ್ವೆಗೆ ಆರಂಭಿಕರಾದ ಬ್ರಿಯಾನ್ ಬೆನೆಟ್ ಹಾಗೂ ಮರುಮಾಣಿ ಉತ್ತಮ ಆರಂಭ ಒದಗಿಸಿದ್ದರು.

ಮೊದಲ ವಿಕೆಟ್ ಗೆ 37 ರನ್ ಗಳ ಜೊತೆಯಾಟವಾಡಿದ ಬಳಿಕ ಮರುಮಾಣಿ (16) ವಿಕೆಟ್ ಒಪ್ಪಿಸಿದರು. ಇದರ ಬೆನ್ನಲ್ಲೇ ಬೆನೆಟ್ (21) ಕೂಡ ಔಟಾದರು. ಆರಂಭಿಕರಿಬ್ಬರು ಔಟಾಗುತ್ತಿದ್ದಂತೆ ಪೆವಿಲಿಯನ್ ಪರೇಡ್ ಆರಂಭಿಸಿದ ಝಿಂಬಾಬ್ವೆ ಬ್ಯಾಕ್ ಟು ಬ್ಯಾಕ್ ವಿಕೆಟ್ ಕಳೆದುಕೊಂಡಿತು.

ಸುಫಿಯಾನ್ ಮುಖೀಮ್ ಸ್ಪಿನ್ ಮೋಡಿ ಮುಂದೆ ಕ್ರೀಸ್ ಕಚ್ಚಿ ನಿಲ್ಲಲು ಪರದಾಡಿದ ಝಿಂಬಾಬ್ವೆ ಬ್ಯಾಟರ್​ಗಳು 12.4 ಓವರ್‌ಗಳಲ್ಲಿ ಕೇವಲ 57 ರನ್ ಗಳಿಸಿ ಆಲೌಟ್ ಆದರು. ಪಾಕ್ ಪರ ಸುಫಿಯಾನ್ ಮುಖೀಮ್ 5 ವಿಕೆಟ್ ಕಬಳಿಸಿದರೆ, ಅಬ್ಬಾಸ್ ಅಫ್ರಿದಿ 2 ವಿಕೆಟ್ ಉರುಳಿಸಿದರು.

58 ರನ್ ಗಳ ಸುಲಭ ಗುರಿ:

ಕಡಿಮೆ ಮೊತ್ತದ ಗುರಿ ಪಡೆದ ಪಾಕಿಸ್ತಾನ್ ತಂಡಕ್ಕೆ ಸೈಮ್ ಅಯ್ಯೂಬ್ ಹಾಗೂ ಒಮೈರ್ ಯೂಸುಫ್ ಸ್ಪೋಟಕ ಆರಂಭ ಒದಗಿಸಿದರು. 18 ಎಸೆತಗಳನ್ನು ಎದುರಿಸಿದ ಅಯ್ಯೂಬ್ 1 ಸಿಕ್ಸ್ ಹಾಗೂ 6 ಫೋರ್ ಗಳೊಂದಿಗೆ ಅಜೇಯ 36 ರನ್ ಬಾರಿಸಿದರೆ, ಒಮೈರ್ 15 ಎಸೆತಗಳಲ್ಲಿ 22 ರನ್ ಚಚ್ಚಿದರು.

ಈ ಮೂಲಕ 5.3 ಓವರ್‌ಗಳಲ್ಲಿ 61 ರನ್ ಬಾರಿಸಿ ಪಾಕಿಸ್ತಾನ್ ತಂಡವು 10 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಝಿಂಬಾಬ್ವೆ ವಿರುದ್ಧದ ಮೂರು ಪಂದ್ಯಗಳ ಸರಣಿಯನ್ನು ಪಾಕಿಸ್ತಾನ್ ತಂಡ 2-0 ಅಂತರದಿಂದ ವಶಪಡಿಸಿಕೊಂಡಿದೆ.

ಝಿಂಬಾಬ್ವೆ ಪ್ಲೇಯಿಂಗ್ 11: ಬ್ರಿಯಾನ್ ಬೆನೆಟ್ , ತಡಿವಾನಾಶೆ ಮರುಮಾಣಿ (ವಿಕೆಟ್ ಕೀಪರ್) , ಡಿಯೋನ್ ಮೈಯರ್ಸ್ , ಸಿಕಂದರ್ ರಾಝ (ನಾಯಕ) , ರಿಯಾನ್ ಬರ್ಲ್ , ಕ್ಲೈವ್ ಮದಂಡೆ , ತಶಿಂಗಾ ಮುಸೆಕಿವಾ , ವೆಲ್ಲಿಂಗ್ಟನ್ ಮಸಕಡ್ಜಾ , ರಿಚರ್ಡ್ ನಾಗರವಾ , ಬ್ಲೆಸ್ಸಿಂಗ್ ಮುಜರಬಾನಿ , ಟ್ರೆವರ್ ಗ್ವಾಂಡು.

ಇದನ್ನೂ ಓದಿ: 15.5 ಓವರ್​​ಗಳಲ್ಲಿ ಕೇವಲ 5 ರನ್: ದಾಖಲೆ ಪುಟಕ್ಕೆ ಜೇಡನ್ ಸೀಲ್ಸ್ ಎಂಟ್ರಿ

ಪಾಕಿಸ್ತಾನ್ ಪ್ಲೇಯಿಂಗ್ 11: ಒಮೈರ್ ಯೂಸುಫ್ , ಸೈಮ್ ಅಯೂಬ್ , ಉಸ್ಮಾನ್ ಖಾನ್ (ವಿಕೆಟ್ ಕೀಪರ್) , ಸಲ್ಮಾನ್ ಅಘಾ (ನಾಯಕ) , ತಯ್ಯಬ್ ತಾಹಿರ್ , ಇರ್ಫಾನ್ ಖಾನ್ , ಜಹಂದಾದ್ ಖಾನ್ , ಅಬ್ಬಾಸ್ ಅಫ್ರಿದಿ , ಅಬ್ರಾರ್ ಅಹ್ಮದ್ , ಹರಿಸ್ ರೌಫ್ , ಸುಫಿಯಾನ್ ಮುಖೀಮ್.

ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ ಕಾರು ಜಸ್ಟ್​ ಮಿಸ್, ಬೈಕ್ ಹೋಗೇಬಿಡ್ತು
ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ ಕಾರು ಜಸ್ಟ್​ ಮಿಸ್, ಬೈಕ್ ಹೋಗೇಬಿಡ್ತು
Daily Devotional: ಪ್ರದೂಷ ಕಾಲದ ಮಹತ್ವ ಹಾಗೂ ಹಿಂದಿನ ರಹಸ್ಯ ತಿಳಿಯಿರಿ
Daily Devotional: ಪ್ರದೂಷ ಕಾಲದ ಮಹತ್ವ ಹಾಗೂ ಹಿಂದಿನ ರಹಸ್ಯ ತಿಳಿಯಿರಿ
ಬಾಂಬೆ ಹೈಕೋರ್ಟ್​ ಆವರಣದಲ್ಲಿ ವಾಮಾಚಾರ?
ಬಾಂಬೆ ಹೈಕೋರ್ಟ್​ ಆವರಣದಲ್ಲಿ ವಾಮಾಚಾರ?
Daily Horoscope: ಈ ರಾಶಿಯವರಿಗೆ ಇಂದು ಸಾಲ ಮಾಡುವ ಸಂದರ್ಭ ಬರಬಹುದು
Daily Horoscope: ಈ ರಾಶಿಯವರಿಗೆ ಇಂದು ಸಾಲ ಮಾಡುವ ಸಂದರ್ಭ ಬರಬಹುದು
ರಜತ್, ವಿನಯ್ ಗೌಡ ಮೆಡಿಕಲ್ ಚೆಕಪ್; ಲಾಂಗ್ ಹಿಡಿದವರಿಗೆ ಕಾದಿದೆ ಕಷ್ಟ ಕಾಲ
ರಜತ್, ವಿನಯ್ ಗೌಡ ಮೆಡಿಕಲ್ ಚೆಕಪ್; ಲಾಂಗ್ ಹಿಡಿದವರಿಗೆ ಕಾದಿದೆ ಕಷ್ಟ ಕಾಲ
ಹರಿಯಾಣದ ಸೋನಿಪತ್ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ
ಹರಿಯಾಣದ ಸೋನಿಪತ್ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ
ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್