AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Zimbabwe vs Nepal: ಜಿಂಬಾಬ್ವೆ ಅಭಿಮಾನಿಗಳಿಗೊಂದು ಸಲಾಂ: ಪಂದ್ಯ ಮುಗಿದ ಬಳಿಕ ಇಡೀ ಸ್ಟೇಡಿಯಂ ಕ್ಲೀನ್ ಮಾಡಿದ ಫ್ಯಾನ್ಸ್

ICC Cricket World Cup Qualifiers 2023: ಜಿಂಬಾಬ್ವೆಯಲ್ಲಿ ವಿಶ್ವಕಪ್ ಅರ್ಹತಾ ಸುತ್ತಿನ ಪಂದ್ಯಗಳನ್ನು ಆಯೋಜಿಸುತ್ತಿರುವುದಕ್ಕೆ ಫ್ಯಾನ್ಸ್ ಖುಷಿ ಆಗಿದ್ದರು. ತಮ್ಮ ತಂಡವನ್ನು ಬೆಂಬಲ ನೀಡುವುದಕ್ಕೆ ಸ್ಟೇಡಿಯಂನಲ್ಲಿ ಕೂಡ ಹಾಜರಿದ್ದರು.

Zimbabwe vs Nepal: ಜಿಂಬಾಬ್ವೆ ಅಭಿಮಾನಿಗಳಿಗೊಂದು ಸಲಾಂ: ಪಂದ್ಯ ಮುಗಿದ ಬಳಿಕ ಇಡೀ ಸ್ಟೇಡಿಯಂ ಕ್ಲೀನ್ ಮಾಡಿದ ಫ್ಯಾನ್ಸ್
Zimbabwe fans
Vinay Bhat
|

Updated on: Jun 20, 2023 | 9:06 AM

Share

ಈ ವರ್ಷ ಭಾರತದಲ್ಲಿ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್​ಗಾಗಿ (ICC ODI World Cup) ಅರ್ಹತಾ ಸುತ್ತಿನ ಪಂದ್ಯಗಳು ಆರಂಭವಾಗಿದೆ. ಜಿಂಬಾಬ್ವೆಯಲ್ಲಿ ಈ ಪಂದ್ಯಗಳು ನಡೆಯುತ್ತಿದ್ದು ಎರಡು ಸ್ಥಾನಕ್ಕಾಗಿ ಹತ್ತು ತಂಡಗಳು ಸೆಣೆಸಾಟ ನಡೆಸುತ್ತಿದೆ. ಈಗಾಗಲೇ 8 ತಂಡಗಳು ಕ್ವಾಲಿಫೈ ಆಗಿದೆ. ಕ್ವಾಲಿಫೈಯರ್​ನ ಮೊದಲ ಪಂದ್ಯದಲ್ಲಿ ಜಿಂಬಾಬ್ವೆ ಹಾಗೂ ನೇಪಾಳ (Zimbabwe vs Nepal) ಮುಖಾಮುಖಿ ಆಗಿತ್ತು. ಹರಾರೆಯ ಹರಾರೆ ಸ್ಪೋರ್ಟ್ಸ್ ಕ್ಲಬ್​ನಲ್ಲಿ ನಡೆದ ಈ ಪಂದ್ಯದಲ್ಲಿ ಜಿಂಬಾಬ್ವೆ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ನಾಯಕ ಕ್ರೈಗ್ ಎರ್ವಿನ್ (Craig Ervine) ಹಾಗೂ ಸೀನ್ ವಿಲಿಯಮ್ಸ್ ಅವರ ಶತಕದ ನೆರವಿನಿಂದ ಜಿಂಬಾಬ್ವೆ ಅಮೋಘ ಗೆಲುವು ಕಂಡಿತು.

ಮೊದಲ ಪಂದ್ಯದಲ್ಲಿ ಜಿಂಬಾಬ್ವೆ ಗೆದ್ದ ಬಳಿಕ ಅಲ್ಲಿನ ಅಭಿಮಾನಿಗಳು ನಡೆದುಕೊಂಡ ರೀತಿಗೆ ಉತ್ತಮ ಪ್ರತಿಕ್ರಿಯೆ ಕೇಳಿಬರುತ್ತಿದೆ. ಜಿಂಬಾಬ್ವೆಯಲ್ಲಿ ವಿಶ್ವಕಪ್ ಅರ್ಹತಾ ಸುತ್ತಿನ ಪಂದ್ಯಗಳನ್ನು ಆಯೋಜಿಸುತ್ತಿರುವುದಕ್ಕೆ ಫ್ಯಾನ್ಸ್ ಖುಷಿ ಆಗಿದ್ದಾರೆ. ತಮ್ಮ ತಂಡವನ್ನು ಬೆಂಬಲ ನೀಡುವುದಕ್ಕೆ ಸ್ಟೇಡಿಯಂನಲ್ಲಿ ಕೂಡ ಹಾಜರಿದ್ದರು. ಇದೀಗ ಪಂದ್ಯ ಮುಗಿದ ಬಳಿಕ ಅಭಿಮಾನಿಗಳು ಮನೆಗೆ ತೆರಳುವ ಮುನ್ನ ಇಡೀ ಸ್ಟೇಡಿಯಂ ಅನ್ನು ಸ್ವಚ್ಚಗೊಳಿಸಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಇದನ್ನೂ ಓದಿ
Image
ENG vs AUS, Ashes Test: ತಾನೇ ತೋಡಿದ ಹಳ್ಳಕ್ಕೆ ಬಿದ್ದ ಇಂಗ್ಲೆಂಡ್?: ರೋಚಕ ಘಟ್ಟದತ್ತ ಆ್ಯಶಸ್ ಪ್ರಥಮ ಟೆಸ್ಟ್
Image
India Squad for WI: ವಿಂಡೀಸ್ ವಿರುದ್ಧದ ಟಿ20 ಸರಣಿಗೆ ಐಪಿಎಲ್​ನ ಈ 5 ಸ್ಟಾರ್ ಪ್ಲೇಯರ್ಸ್ ಆಯ್ಕೆ ಖಚಿತ
Image
World Cup Qualifiers 2023: 6 ವಿಕೆಟ್ ಕಬಳಿಸಿದ ಹಸರಂಗ: ಶ್ರೀಲಂಕಾಗೆ 175 ರನ್​ಗಳ ಭರ್ಜರಿ ಜಯ
Image
IND vs PAK: ಪಾಕಿಸ್ತಾನ್ ತಂಡ ಭಾರತದ ವಿರುದ್ಧ ಆಡಬಾರದು: ಜಾವೇದ್ ಮಿಯಾಂದಾದ್

Ashes 2023: ಮೊದಲ ದಿನವೇ ಡಿಕ್ಲೇರ್ ಘೋಷಿಸಿ ಸಂಕಷ್ಟಕ್ಕೆ ಸಿಲುಕಿದ ಇಂಗ್ಲೆಂಡ್

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ನೇಪಾಳ ಬೊಂಬಾಟ್ ಬ್ಯಾಟಿಂಗ್ ನಡೆಸಿತು. ಓಪನರ್​ಗಳಾದ ಕುಶಲ್ ಬುರ್ತೆಲ್ ಹಾಗೂ ಆಸಿಫ್ ಶೇಖ್ ಮೊದಲ ವಿಕೆಟ್​ಗೆ 171 ರನ್​ಗಳ ಜೊತೆಯಾಟ ಆಡಿದರು. ಕುಶಾಲ್ 95 ಎಸೆತಗಳಲ್ಲಿ 99 ರನ್ ಗಳಿಸಿ 1 ರನ್​ನಿಂದ ಶತಕ ವಂಚಿತರಾದರೆ ಆಸಿಫ್ 66 ರನ್ ಬಾರಿಸಿದರು. ಮಲ್ಲ 41 ರನ್​ಗಳ ಕೊಡುಗೆ ನೀಡಿದರು. ನಾಯಕ ರೋಹಿತ್ ಪೌಡೆಲ್ 31 ರನ್ ಗಳಿಸಿದರು. ನೇಪಾಳ 50 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 290 ರನ್ ಕಲೆಹಾಕಿತು. ಜಿಂಬಾಬ್ವೆ ಪರ ನಗರ್ವ 4 ವಿಕೆಟ್ ಕಿತ್ತರು.

ಸವಾಲಿನ ಟಾರ್ಗೆಟ್ ಬೆನ್ನಟ್ಟಿದ ಜಿಂಬಾಬ್ವೆ ಬೇಗನೆ ಜೋಲಾರ್ಡ್ ಗುಂಬೀ (25) ಹಾಗೂ ವೆಸ್ಲಿ ಮಧೆವೀರೆ (32) ವಿಕೆಟ್ ಕಳೆದುಕೊಂಡಿತು. ಆದರೆ, ಮೂರನೇ ವಿಕೆಟ್​ಗೆ ನಾಯಕ ಕ್ರೈಗ್ ಎರ್ವಿನ್ ಹಾಗೂ ಸೀನ್ ವಿಲಿಯಮ್ಸ್ ಜೊತೆಯಾಗಿ ಭರ್ಜರಿ ಆಟವಾಡಿ ತಂಡಕ್ಕೆ ಜಯ ತಂದುಕೊಟ್ಟರು. ಕ್ರೈಹ್ 128 ಎಸೆತಗಳಲ್ಲಿ ಅಜೇಯ 121 ರನ್ ಸಿಡಿಸಿದರೆ, ವಿಲಿಯಮ್ಸ್ ಕೇವಲ 70 ಎಸೆತಗಳಲ್ಲಿ 102 ರನ್ ಚಚ್ಚಿದರು. ಜಿಂಬಾಬ್ವೆ 44.1 ಓವರ್​ನಲ್ಲೇ 2 ವಿಕೆಟ್ ನಷ್ಟಕ್ಕೆ 291 ರನ್ ಕಲೆಹಾಕಿ ಜಯ ಸಾಧಿಸಿತು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​