
ಜಿಂಬಾಬ್ವೆ ಇನ್ನಿಂಗ್ಸ್ನ 10 ಓವರ್ಗಳು ಮುಗಿದಿವೆ. ಸ್ಕೋರ್ ನಾಲ್ಕು ವಿಕೆಟ್ಗಳಿಗೆ 46. ಮಾಧೇವೆರೆ 5 ಮತ್ತು ರಯಾನ್ ಬರ್ಲ್ 12 ರನ್ ಗಳಿಸಿದ್ದಾರೆ.
ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಹುಳಿಮಾವು ಸಮೀಪದ ದೊಡ್ಡಕಮ್ಮನಹಳ್ಳಿ ಬಳಿಯ ಹಾಸಿಗೆ ಗೋಡೌನ್ ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಏಕಾಏಕಿ ಸಿಲಿಂಡರ್ ಗ್ಯಾಸ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿದೆ. ಇನ್ನು ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಗೋಡೌನ್ ನಲ್ಲಿ ಕಾರ್ಮಿಕರು ಕೂಡಲೇ ಆಚೆ ಓಡೋಡಿ ಬಂದಿದ್ದಾರೆ. ಇದರಿಂದ ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ.
ಮುಳಬಾಗಿಲು ತಾಲೂಕು ಕಚೇರಿಗೆ ಖಾಸಗಿ ವ್ಯಕ್ತಿಗಳು ಪ್ರವೇಶ ಹಿನ್ನೆಲೆಯಲ್ಲಿ ರೆಕಾರ್ಡ್ ರೂಮ್ನ ಮೂವರು ಸಿಬ್ಬಂದಿಯನ್ನು ಅಮಾನತು ಮಾಡಿ ಕೋಲಾರ ಜಿಲ್ಲಾಧಿಕಾರಿ ಡಾ.ಎ.ಆರ್.ರವಿ ಆದೇಶ ಹೊರಡಿಸಿದ್ದಾರೆ. ಮುಳಬಾಗಿಲು ತಾಲೂಕು ಕಚೇರಿಗೆ ಖಾಸಗಿ ವ್ಯಕ್ತಿಗಳು ಪ್ರವೇಶ ಬಗ್ಗೆ ಟಿವಿ9ನಲ್ಲಿ ವರದಿ ಪ್ರಸಾರ ಬೆನ್ನಲ್ಲೇ ಮೂವರು ಸಿಬ್ಬಂದಿ ಅಮಾನತು ಮಾಡಲಾಗಿದೆ.ತಾಲೂಕು ಕಚೇರಿಯ ರೆಕಾರ್ಡ್ ರೂಮ್ನ FDA ತೌಫಿಕ್ ಅಹ್ಮದ್, ಸಿಬ್ಬಂದಿ ವೆಂಕಟಸ್ವಾಮಿ ಹಾಗೂ ಎ.ಸುಮಾ ಎನ್ನುವರನ್ನು ಅಮಾನತು ಮಾಡಲಾಗಿದೆ.
ಜಿಂಬಾಬ್ವೆ ತಂಡ ಮೂರನೇ ವಿಕೆಟ್ ಕಳೆದುಕೊಂಡಿತು. ಮಾಯಾಂಕ್ ಯಾದವ್ ಈ ಬಾರಿ, ಡಿಯೋನ್ ಮೈಯರ್ಸ್ (6) ಅವರನ್ನು ಔಟ್ ಮಾಡಿದರು.
ಜಿಂಬಾಬ್ವೆ ಎರಡನೇ ವಿಕೆಟ್ ಪತನವಾಯಿತು. ಪ್ರಿನ್ಸ್ ಯಾದವ್ ಬೌಲಿಂಗ್ನಲ್ಲಿ ಬೆನ್ ಕರನ್ ಕೇವಲ 10 ರನ್ ಗಳಿಸಿ ಔಟಾದರು.
ನೀಟ್ ಪರೀಕ್ಷೆ ಸೋರಿಕೆ ವಿರುದ್ದ ಕ್ರಮ ಹಾಗೂ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯವನ್ನು ಡಿಸಿಎಂ ಡಾ ಜಿ ಪರಮೇಶ್ವರ್ ಖಂಡಿಸಿದ್ದು, ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ, ಪರೀಕ್ಷಾ ನಿರ್ವಹಣೆಯ ವೈಫಲ್ಯ ಮತ್ತು ವಿದ್ಯಾರ್ಥಿಗಳ ಶಾಂತಿಯುತ ಪ್ರತಿಭಟನೆ ಹತ್ತಿಕ್ಕುತ್ತಿರುವ ನಡೆಯನ್ನು ಪತ್ರದಲ್ಲಿ ಪ್ರಶ್ನಿಸಿದ್ದಾರೆ.ನೀಟ್ ಹಿಂತೆದುಕೊಳ್ಳಿ ಮತ್ತು ಪಾರದರ್ಶಕತೆ ಮತ್ತು ಅರ್ಹತೆಯ ಆಧಾರದ ಸಿಇಟಿಯನ್ನು ಮರುಸ್ಥಾಪಿಸಿ ಕಾಲಮಿತಿಯಲ್ಲಿ ಪಾರದರ್ಶಕ ತನಿಖೆಗೆ ಕ್ರಮವಹಿಸಿ ಎಂದು ಒತ್ತಾಯಿಸಿದ್ದಾರೆ. ಪ್ರಾಣ ಕಳೆದುಕೊಂಡ ವಿದ್ಯಾರ್ಥಿಗಳ ಕುಟುಂಬಕ್ಕೆ ಹಾಗೂ ಹೋರಾಟದಲ್ಲಿ ಗಾಯಗೊಂಡವರಿಗೆ ಪರಿಹಾರ ಒದಗಿಸಬೇಕು. ಲಾಠಿಚಾರ್ಜ್ ಹಾಗೂ ಅಶ್ರುವಾಯು ದಾಳಿಗೆ ಹೊಣೆಗಾರರು ಯಾರು ಎಂಬುದನ್ನು ತಿಳಿಸಿ.ವಿದ್ಯಾರ್ಥಿಗಳು ಹಾಗೂ ಶಿಕ್ಷಣ ತಜ್ಞರ ಜೊತೆ ಅರ್ಥಪೂರ್ಣ ಸಂವಾದ ನಡೆಸಿ ನಮ್ಮ ಶಿಕ್ಷಣ ವ್ಯವಸ್ಥೆ ಮೇಲಿನ ಸಾರ್ವಜನಿಕರ ವಿಶ್ವಾಸಾರ್ಹತೆಯನ್ನು ಮರುಸ್ಥಾಪಿಸಿ. ಪ್ರಶ್ನಿಸುತ್ತಿರುವ ನಮ್ಮ ಯುವಜನತೆಗೆ ಉತ್ತರ ಪಡೆಯುವ ಹಕ್ಕಿದೆ . ಬ್ಯಾರಿಕೇಡ್ಗಳನ್ನು ತೆಗೆಯಿರಿ ಮಾತುಕತೆ ಮೂಲಕ ಬಗೆಹರಿಸಿ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಜಿಂಬಾಬ್ವೆ ತಂಡವು ಮೊದಲ ಎಸೆತದಲ್ಲೇ ವಿಕೆಟ್ ಕಳೆದುಕೊಂಡಿತು. ಸ್ಟಾರ್ ಓಪನರ್ ಬ್ರಿಯಾನ್ ಬೆನೆಟ್ ಔಟಾದರು. ವೇಗದ ಬೌಲರ್ ಮಯಾಂಕ್ ಯಾದವ್ ಮೊದಲ ಎಸೆತದಲ್ಲೇ ವಿಕೆಟ್ ಪಡೆದರು.
ಬ್ರಿಯಾನ್ ಬೆನೆಟ್, ಬೆನ್ ಕರ್ರನ್ (ಚೊಚ್ಚಲ ಪಂದ್ಯ), ಡಿಯೋನ್ ಮೈಯರ್ಸ್, ಸಿಕಂದರ್ ರಝಾ (ನಾಯಕ), ರಿಯಾನ್ ಬರ್ಲ್, ವೆಸ್ಲಿ ಮಾಧೆವೆರೆ, ತಡಿವಾನಾಶೆ ಮರುಮಾನಿ (ವಿಕೆಟ್ ಕೀಪರ್), ಬ್ರಾಡ್ ಇವಾನ್ಸ್, ನ್ಯೂಮನ್ ನ್ಯಾಮ್ಹುರಿ (ಚೊಚ್ಚಲ ಪಂದ್ಯ), ರಿಚರ್ಡ್ ನಾಗರವಾ ಮತ್ತು ಬ್ಲೆಸ್ಸಿಂಗ್ ಮುಜರಬಾನಿ.
ವೈಭವ್ ಸೂರ್ಯವಂಶಿ, ಅಭಿಷೇಕ್ ಶರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ, ರಿಂಕು ಸಿಂಗ್, ಶಿವಂ ದುಬೆ, ರವಿ ಬಿಷ್ಣೋಯ್, ಪ್ರಿನ್ಸ್ ಯಾದವ್, ಅಶೋಕ್ ಶರ್ಮಾ ( ಚೊಚ್ಚಲ ಪಂದ್ಯ) ಮತ್ತು ಮಯಾಂಕ್ ಯಾದವ್.
ಹರಾರೆ ಸ್ಪೋರ್ಟ್ಸ್ ಕ್ಲಬ್ನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಶ್ರೇಯಸ್ ಅಯ್ಯರ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ.
ಭಾರತ ಮತ್ತು ಜಿಂಬಾಬ್ವೆ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯು ಇಂದಿನಿಂದ ಅಂದರೆ ಜುಲೈ 23 ರಿಂದ ಪ್ರಾರಂಭವಾಗಿದೆ. ಸರಣಿಯ ಮೂರೂ ಪಂದ್ಯಗಳು ಹರಾರೆ ಸ್ಪೋರ್ಟ್ಸ್ ಕ್ಲಬ್ನಲ್ಲಿ ನಡೆಯಲಿವೆ. ಸರಣಿಯ ಮೊದಲ ಪಂದ್ಯವನ್ನು ಗೆದ್ದುಕೊಳ್ಳುವ ಮೂಲಕ ಶ್ರೇಯಸ್ ಅಯ್ಯರ್ ನಾಯಕನಾಗಿ ಗೆಲುವಿನ ಖಾತೆ ತೆರೆಯುವ ಇರಾದೆಯಲ್ಲಿದ್ದಾರೆ. ಇತ್ತ ಟೀಂ ಇಂಡಿಯಾ ಕೂಡ ಸತತ 6 ಪಂದ್ಯಗಳ ಸೋಲಿನ ನಂತರ ಗೆಲುವಿನ ಸವಿಸವಿಯುವ ಗುರಿ ಹೊಂದಿದೆ.
Published On - 4:05 pm, Thu, 23 July 26