IND vs ZIM: ಭಾರತ ತಂಡದಲ್ಲಿ ಮೂರು ಬದಲಾವಣೆ ಸಾಧ್ಯತೆ

Zimbabwe vs India: ಭಾರತ ಮತ್ತು ಝಿಂಬಾಬ್ವೆ ನಡುವಣ 5 ಪಂದ್ಯಗಳ ಟಿ20 ಸರಣಿಯ ಮೊದಲೆರಡು ಮ್ಯಾಚ್​ಗಳು ಮುಗಿದಿವೆ. ಮೊದಲ ಪಂದ್ಯದಲ್ಲಿ ಝಿಂಬಾಬ್ವೆ ತಂಡವು 13 ರನ್​ಗಳ ರೋಚಕ ಜಯ ಸಾಧಿಸಿದರೆ, 2ನೇ ಪಂದ್ಯದಲ್ಲಿ ಟೀಮ್ ಇಂಡಿಯಾ 100 ರನ್​ಗಳ ಅಮೋಘ ಗೆಲುವು ದಾಖಲಿಸಿದೆ. ಇದೀಗ ಮೂರನೇ ಪಂದ್ಯಕ್ಕಾಗಿ ಉಭಯ ತಂಡಗಳು ಸಜ್ಜಾಗಿ ನಿಂತಿದೆ.

IND vs ZIM: ಭಾರತ ತಂಡದಲ್ಲಿ ಮೂರು ಬದಲಾವಣೆ ಸಾಧ್ಯತೆ
Team India
Follow us
|

Updated on: Jul 10, 2024 | 9:00 AM

ಭಾರತ ಮತ್ತು ಝಿಂಬಾಬ್ವೆ (India vs Zimbabwe) ನಡುವಣ ಮೂರನೇ ಟಿ20 ಪಂದ್ಯ ಇಂದು (ಜೂ.10) ನಡೆಯಲಿದೆ. ಹರಾರೆಯ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ಜರುಗಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ (Team India) ಮೂರು ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ. ಏಕೆಂದರೆ ಕಳೆದೆರಡು ಪಂದ್ಯಗಳಿಂದ ಹೊರಗುಳಿದಿದ್ದ ಸಂಜು ಸ್ಯಾಮ್ಸನ್, ಯಶಸ್ವಿ ಜೈಸ್ವಾಲ್ ಹಾಗೂ ಶಿವಂ ದುಬೆ ಇದೀಗ ತಂಡವನ್ನು ಕೂಡಿಕೊಂಡಿದ್ದಾರೆ.

ಈ ಮೂವರು ಆಟಗಾರರು ಟಿ20 ವಿಶ್ವಕಪ್ ಗೆದ್ದ ಭಾರತ ತಂಡದ ಭಾಗವಾಗಿದ್ದರು. ಹೀಗಾಗಿ ಝಿಂಬಾಬ್ವೆ ಸರಣಿಗೆ ತೆರಳಲು ವಿಳಂಬವಾಗಿದೆ. ಇದೀಗ ಮೂವರು ಆಟಗಾರರು ಹರಾರೆಯಲ್ಲಿ ಟೀಮ್ ಇಂಡಿಯಾವನ್ನು ಕೂಡಿಕೊಂಡಿದ್ದಾರೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಇವರು ಕಣಕ್ಕಿಳಿಯುವ ಸಾಧ್ಯತೆಯಿದೆ.

ಆದರೆ ಈ ಮೂವರು ಆಟಗಾರರಿಗಾಗಿ ಇಲ್ಲಿ ಯಾರನ್ನು ಕೈ ಬಿಡಲಿದ್ದಾರೆ ಎಂಬುದೇ ಪ್ರಶ್ನೆ. ಏಕೆಂದರೆ ನಾಯಕನಾಗಿ ಶುಭ್​ಮನ್ ಗಿಲ್ ಕಣಕ್ಕಿಳಿಯುವುದು ಖಚಿತ. ಅತ್ತ ಕಳೆದ ಪಂದ್ಯದಲ್ಲಿ ಅಭಿಷೇಕ್ ಶರ್ಮಾ (100) ಶತಕ ಸಿಡಿಸಿದರೆ, ರುತುರಾಜ್ ಗಾಯಕ್ವಾಡ್ (77) ಅರ್ಧಶತಕ ಬಾರಿಸಿ ಮಿಂಚಿದ್ದಾರೆ. ಹೀಗಾಗಿ ಟಾಪ್-3 ನಿಂದ ಮೂವರನ್ನು ಕೈ ಬಿಡಲು ಸಾಧ್ಯವಾಗುವುದಿಲ್ಲ.

ಇದಾಗ್ಯೂ 4ನೇ ಕ್ರಮಾಂಕದಲ್ಲಿರುವ ಸಾಯಿ ಸುದರ್ಶನ್ ಅವರನ್ನು ಕೈ ಬಿಟ್ಟರೆ ಯಶಸ್ವಿ ಜೈಸ್ವಾಲ್​ಗೆ ಸ್ಥಾನ ಸಿಗಬಹುದು. ಇನ್ನು ಧ್ರುವ್ ಜುರೇಲ್ ಸ್ಥಾನದಲ್ಲಿ ವಿಕೆಟ್ ಕೀಪರ್ ಆಗಿ ಸಂಜು ಸ್ಯಾಮ್ಸನ್ ಕಣಕ್ಕಿಳಿಯಬಹುದು. ಅದೇ ರೀತಿ ರಿಯಾನ್ ಪರಾಗ್ ಬದಲಿಗೆ ಆಲ್​ರೌಂಡರ್ ಆಗಿ ಶಿವಂ ದುಬೆ ಕಣಕ್ಕಿಳಿಯುವ ಸಾಧ್ಯತೆಯಿದೆ. ಈ ಮೂರು ಬದಲಾವಣೆಯೊಂದಿಗೆ ಟೀಮ್ ಇಂಡಿಯಾ ಮೂರನೇ ಟಿ20 ಪಂದ್ಯಗಳಲ್ಲಿ ಕಣಕ್ಕಿಳಿಯಬಹುದು. ಅದರಂತೆ ಭಾರತ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ…

ಟೀಮ್ ಇಂಡಿಯಾ ಸಂಭಾವ್ಯ ಪ್ಲೇಯಿಂಗ್ 11: ಶುಭಮನ್ ಗಿಲ್ (ನಾಯಕ) , ಅಭಿಷೇಕ್ ಶರ್ಮಾ , ಯಶಸ್ವಿ ಜೈಸ್ವಾಲ್, ರುತುರಾಜ್ ಗಾಯಕ್ವಾಡ್ , ಶಿವಂ ದುಬೆ, ರಿಂಕು ಸಿಂಗ್ , ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್) , ವಾಷಿಂಗ್ಟನ್ ಸುಂದರ್ , ರವಿ ಬಿಷ್ಣೋಯ್ , ಅವೇಶ್ ಖಾನ್ , ಮುಖೇಶ್ ಕುಮಾರ್.

ಇದನ್ನೂ ಓದಿ: ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ನಿವೃತ್ತಿ ಘೋಷಿಸಿದ ಐವರು ಆಟಗಾರರು..!

ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?

ಭಾರತ ಮತ್ತು ಝಿಂಬಾಬ್ವೆ ಸರಣಿಯನ್ನು ಸೋನಿ ಸ್ಪೋರ್ಟ್ಸ್ ಚಾನೆಲ್​ನಲ್ಲಿ ವೀಕ್ಷಿಸಬಹುದು. ಹಾಗೆಯೇ ಸೋನಿ ಲೈವ್ ಆ್ಯಪ್​ನಲ್ಲೂ ಈ ಪಂದ್ಯದ ನೇರ ಪ್ರಸಾರ ಇರಲಿದೆ. ಈ ಪಂದ್ಯವು ಸಂಜೆ 4.30 ರಿಂದ ಶುರುವಾಗಲಿದೆ.

ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ