AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ZIM: ಇಂದು ಭಾರತ- ಜಂಬಾಬ್ವೆ ಮೊದಲ ಏಕದಿನ: ಟೀಮ್ ಇಂಡಿಯಾ ಪ್ಲೇಯಿಂಗ್ XI ಹೇಗಿರಲಿದೆ?

India Probable Playing XI vs ZIM, 1st ODI: ಹರಾರೆಯ ಹರಾರೆ ಸ್ಪೋರ್ಟ್ಸ್ ಕ್ಲಬ್​ನಲ್ಲಿ ಇಂದು ಭಾರತ ಹಾಗೂ ಜಿಂಬಾಬ್ವೆ ನಡುವೆ ಮೊದಲ ಏಕದಿನ ಪಂದ್ಯ ಆಯೋಜಿಸಲಾಗಿದೆ. ಇಂಜುರಿಯಿಂದ ಗುಣಮುಖರಾಗಿ ಫಿಟ್ ಆಗಿರುವ ಕೆಎಲ್ ರಾಹುಲ್ (KL Rahul) ತಂಡದವನ್ನು ಮುನ್ನಡೆಸಲಿದ್ದಾರೆ.

IND vs ZIM: ಇಂದು ಭಾರತ- ಜಂಬಾಬ್ವೆ ಮೊದಲ ಏಕದಿನ: ಟೀಮ್ ಇಂಡಿಯಾ ಪ್ಲೇಯಿಂಗ್ XI ಹೇಗಿರಲಿದೆ?
IND vs ZIM 2nd ODI
TV9 Web
| Updated By: Vinay Bhat|

Updated on:Aug 18, 2022 | 7:37 AM

Share

ಮೂರು ಪಂದ್ಯಗಳ ಏಕದಿನ ಸರಣಿಗಾಗಿ ಜಿಂಬಾಬ್ವೆಗೆ ತೆರಳಿರುವ ಭಾರತ ಕ್ರಿಕೆಟ್ ತಂಡ (Zimbabwe vs India) ಇಂದು ಅಗ್ನಿಪರೀಕ್ಷೆಗೆ ಇಳಿಯಲಿದೆ. ಹರಾರೆಯ ಹರಾರೆ ಸ್ಪೋರ್ಟ್ಸ್ ಕ್ಲಬ್​ನಲ್ಲಿ ಮೊದಲ ಏಕದಿನ ಪಂದ್ಯ ಆಯೋಜಿಸಲಾಗಿದೆ. ತಂಡದ ಪ್ರಮುಖ ಹಿರಿಯ ಆಟಗಾರರಾದ ರೋಹಿತ್ ಶರ್ಮಾ (Rohit Sharma), ರಿಷಭ್ ಪಂತ್, ವಿರಾಟ್ ಕೊಹ್ಲಿ ಮತ್ತು ಜಸ್ಪ್ರೀತ್ ಬುಮ್ರಾ ಅವರಿಗೆ ಈ ಸರಣಿಯಿಂದ ವಿಶ್ರಾಂತಿ ನೀಡಲಾಗಿದೆ. ಇಂಜುರಿಯಿಂದ ಗುಣಮುಖರಾಗಿ ಫಿಟ್ ಆಗಿರುವ ಕೆಎಲ್ ರಾಹುಲ್ (KL Rahul) ತಂಡದವನ್ನು ಮುನ್ನಡೆಸಲಿದ್ದಾರೆ. ಇವರಿಗೆ ಶಿಖರ್ ಧವನ್ ಸಾಥ್ ನೀಡಲಿದ್ದಾರೆ. ಇತ್ತ ಜಿಂಬಾಬ್ವೆ ತಂಡವು ತಮ್ಮ ನಿಯಮಿತ ನಾಯಕ ಕ್ರೇಗ್ ಇರ್ವಿನ್ ಇಲ್ಲದೆ ಭಾರತ ವಿರುದ್ಧ ಅಖಾಡಕ್ಕಿಳಿಯಲಿದೆ. ಹೀಗಾಗಿ ತಂಡದ ನಾಯಕತ್ವವನ್ನು ರೆಗಿಸ್ ಚಕಬ್ವಾ ಅವರಿಗೆ ನೀಡಲಾಗಿದೆ.

ಭಾರತ ಪರ ಓಪನರ್​ಗಳಾಗಿ ಶಿಖರ್ ಧವನ್ ಹಾಗೂ ಶುಭ್ಮನ್ ಗಿಲ್ ಕಣಕ್ಕಿಳಿಯುವ ಸಾಧ್ಯತೆ ಇದೆ. ಯಾಕೆಂದರೆ ಕಳೆದ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ ಈ ಜೋಡಿ ತಂಡಕ್ಕೆ ಉತ್ತಮ ಆರಂಭ ಒದಗಿಸಿತ್ತು. ಗಿಲ್ ಓಪನರ್ ಆಗಿ ಯಶಸ್ಸು ಕಂಡಿದ್ದರು. ಅವಕಾಶಕ್ಕಾಗಿ ಕಾಯುತ್ತಿರುವ ರಾಹುಲ್ ತ್ರಿಪಾಠಿ ಮೂರನೇ ಸ್ಥಾನದಲ್ಲಿ ಆಡಿದರೆ, ನಾಯಕ ಕೆಎಲ್ ರಾಹುಲ್ ನಾಲ್ಕನೇ ಕ್ರಮಾಮಂಕದಲ್ಲಿ ಬ್ಯಾಟ್ ಬೀಸಲಿದ್ದಾರೆ.

ವಿಕೆಟ್ ಕೀಪರ್ ಜವಾಬ್ದಾರಿಯನ್ನು ಸಂಜು ಸ್ಯಾಮ್ಸನ್ ನಿರ್ವಹಿಸಲಿದ್ದಾರೆ. ಆಲ್ರೌಂಡರ್​ಗಳಾದ ದೀಪಕ್ ಹೂಡ ಹಾಗೂ ಅಕ್ಷರ್ ಪಟೇಲ್ ಆರು ಮತ್ತು ಏಳನೇ ಕ್ರಮಾಂಕದಲ್ಲಿ ಕ್ರೀಸ್​ಗೆ ಇಳಿಯಬಹುದು. ಮುಖ್ಯ ವೇಗಿಗಳಾಗಿ ದೀಪಕ್ ಚಹರ್, ಶಾರ್ದೂಲ್ ಠಾಕೂರ್ ಹಾಗೂ ಆವೇಶ್ ಖಾನ್ ಕಾಣಿಸಿಕೊಂಡರೆ, ಸ್ಪಿನ್ನರ್ ಆಗಿರುವ ಕುಲ್ದೀಪ್ ಯಾದವ್ ಅಥವಾ ಶಹ್ಹಾಜ್ ಅಹ್ಮದ್​ಗೆ ಸ್ಥಾನ ಸಿಗುವ ಸಂಭವವಿದೆ.

ಇದನ್ನೂ ಓದಿ
Image
ದ್ರಾವಿಡ್ ಬೆಸ್ಟ್ ಕೋಚ್! ರವಿಶಾಸ್ತ್ರಿಗೆ ವೈಫಲ್ಯವನ್ನು ಸಹಿಸಿಕೊಳ್ಳಲಾಗುವುದಿಲ್ಲ: ದಿನೇಶ್ ಕಾರ್ತಿಕ್ ಸ್ಫೋಟಕ ಹೇಳಿಕೆ
Image
ಕೋಟಿ ಕೋಟಿ ನಷ್ಟ ಕಟ್ಟಿಟ್ಟ ಬುತ್ತಿ! ಪಾಕಿಸ್ತಾನಕ್ಕೆ ತಲೆನೋವಾದ ಐಸಿಸಿಯ ಹೊಸ ವೇಳಾಪಟ್ಟಿ
Image
IPL: ಕೆಕೆಆರ್ ತಂಡಕ್ಕೆ ಹೊಸ ಮುಖ್ಯ ಕೋಚ್ ನೇಮಕ; ಮೆಕಲಮ್ ಜಾಗಕ್ಕೆ ಬಂದವರ್ಯಾರು ಗೊತ್ತಾ?
Image
IND vs ZIM: ಜಿಂಬಾಬ್ವೆ ವಿರುದ್ಧ ಮೊದಲ ಏಕದಿನ ಪಂದ್ಯಕ್ಕೆ ಭಾರತದ ಸಂಭಾವ್ಯ XI ಹೀಗಿದೆ

ಹರಾರೆ ಸ್ಪೋರ್ಟ್ಸ್‌ ಕ್ಲಬ್‌ ಕ್ರೀಡಾಂಗಣದ ಪಿಚ್‌ ಬ್ಯಾಟಿಂಗ್‌ಗೆ ಹೆಚ್ಚು ಯೋಗ್ಯವಾಗಿದ್ದು, ಭಾರತದ ಬ್ಯಾಟರ್‌ಗಳಿಗೆ ದೊಡ್ಡ ಮೊತ್ತ ಪೇರಿಸುವುದು ಕಷ್ಟವೆನಿಸದು. ಹೀಗಾಗಿ ಇಂದಿನ ಪಂದ್ಯ ಹೈಸ್ಕೋರ್ ಗೇಮ್ ಆಗುವುದರಲ್ಲಿ ಅನುಮಾನವಿಲ್ಲ. ಅಲ್ಲದೆ ಸುಮಾರು ಆರು ತಿಂಗಳ ನಂತರ ಕೆಎಲ್ ರಾಹುಲ್ ತಂಡದಲ್ಲಿ ತನ್ನ ಸ್ಥಾನವನ್ನು ಮರಳಿ ಪಡೆದಿದ್ದಾರೆ. ಕನ್ನಡಿಗನ ಮೇಲೆ ಎಲ್ಲರ ಕಣ್ಣಿದ್ದು ಯಾವರೀತಿ ಪ್ರದರ್ಶನ ತೋರುತ್ತಾರೆ ಎಂಬುದು ನೋಡಬೇಕಿದೆ.

ಇತ್ತ ರೆಗಿಸ್ ಚಕಬ್ವಾ ನಾಯಕತ್ವದ ಜಿಂಬಾಬ್ವೆ ತಂಡ ಏಕದಿನ ಮತ್ತು ಟಿ20 ಸರಣಿಯಲ್ಲಿ ಬಾಂಗ್ಲಾದೇಶವನ್ನು ಸೋಲಿಸಿದ ನಂತರ ಆತ್ಮವಿಶ್ವಾಸದಿಂದ ತುಂಬಿದೆ. ಸಿಕಂದರ್ ರಾಝಾ ಅವರು ಎರಡೂ ಸರಣಿಯಲ್ಲಿ ಅಪ್ರತಿಮ ಬ್ಯಾಟರ್ ಆಗಿ ಮೂಡಿಬಂದಿದ್ದು, ಇನ್ನೋಸೆಂಟ್ ಕೈಯಾ ಮತ್ತು ರಿಯಾನ್ ಬರ್ಲ್ ಅವರಂತಹವರು ಕೂಡ ದೊಡ್ಡ ಪ್ರಮಾಣದಲ್ಲಿ ಪ್ರಭಾವ ಬೀರಲು ಸಫಲರಾದರು. ಐಸಿಸಿ ಪುರುಷರ ಕ್ರಿಕೆಟ್​ ವಿಶ್ವಕಪ್​ ಸೂಪರ್ ಲೀಗ್​ನ ಭಾಗವಾಗಿ ಈ ಸರಣಿ ನಡೆಯಲಿದ್ದು, ವಿಶ್ವಕಪ್​​​ಗೆ ನೇರ ಅರ್ಹತೆ ಪಡೆದುಕೊಳ್ಳಲು ಜಿಂಬಾಬ್ವೆಗೆ ಈ ಸರಣಿ ಮಹತ್ವ ಪಡೆದುಕೊಂಡಿದೆ.

ಭಾರತ ಮತ್ತು ಜಿಂಬಾಬ್ವೆ ನಡುವಿನ ಮೊದಲ ಏಕದಿನ ಪಂದ್ಯ ಭಾರತೀಯ ಕಾಲಮಾನದ ಪ್ರಕಾರ ಮಧ್ಯಾಹ್ನ 12:45ಕ್ಕೆ ಪ್ರಾರಂಭವಾಗಲಿದೆ. ಸೋನಿ ಚಾನೆಲ್​ (Sony Sports Network) ಲೈವ್ ಟೆಲಿಕಾಸ್ಟ್ ಮಾಡಲಿದೆ. ಹಾಗೆಯೇ ಸೋನಿ ಲೈವ್ ಆ್ಯಪ್​ನಲ್ಲಿ ಲೈವ್ ಸ್ಟ್ರೀಮಿಂಗ್ ಲಭ್ಯವಿರುತ್ತದೆ.

ಭಾರತದ ಸಂಭಾವ್ಯ XI- ಶುಭ್ಮನ್ ಗಿಲ್, ಶಿಖರ್ ಧವನ್, ರಾಹುಲ್ ತ್ರಿಪಾಠಿ, ಕೆಎಲ್ ರಾಹುಲ್, ಸಂಜು ಸ್ಯಾಮ್ಸನ್, ದೀಪಕ್ ಹೂಡಾ, ಅಕ್ಷರ್ ಪಟೇಲ್, ದೀಪಕ್ ಚಾಹರ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಅವೇಶ್ ಖಾನ್.

Published On - 7:37 am, Thu, 18 August 22

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್