AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾತಿ ನಿಂದನೆ ಆರೋಪ: ಕ್ಷಮೆಯಾಚಿಸಿದ ಯುವರಾಜ್ ಸಿಂಗ್

ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ವಿರುದ್ಧ ಹರಿಯಾಣಾದ ಹನ್ಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹಾಗಾದ್ರೆ ಯುವರಾಜ್ ಯಾರಿಗಾದ್ರೂ ದೋಖಾ ಮಾಡಿದ್ದಾರಾ? ಇಲ್ಲಾ ಹಲ್ಲೆ ಮಾಡಿದ್ರಾ ಅಂತಾ ನೀವು ಯೋಚಿಸ್ತಿರಬಹುದು. ಆದ್ರೆ ಯುವರಾಜ್ ಸಿಂಗ್ ಮೇಲೆ ದೂರು ದಾಖಲಾಗೋದಕ್ಕೆ ಇದ್ಯಾವುದು ಕಾರಣವಲ್ಲ. ಇತ್ತೀಚೆಗೆ ಯುವರಾಜ್‍ ಸಿಂಗ್ ತಮ್ಮ ಇನ್ಸ್​ಟಾಗ್ರಾಂನಲ್ಲಿ ಕ್ರಿಕೆಟಿಗರಾದ ರೋಹಿತ್‍ ಶರ್ಮಾ ಹಾಗೂ ಯಜುವೇಂದ್ರ ಚಹಲ್ ಜೊತೆ ಕ್ರಿಕೆಟ್ ವಿಚಾರವಾಗಿ ಚರ್ಚೆ ನಡೆಸಿದ್ರು. ಈ ವೇಳೆ ಯುವಿ ಕೆಲ ಹಾಸ್ಯ ಚಟಾಕಿಗಳನ್ನ ಹಾರಿಸೋ […]

ಜಾತಿ ನಿಂದನೆ ಆರೋಪ: ಕ್ಷಮೆಯಾಚಿಸಿದ ಯುವರಾಜ್ ಸಿಂಗ್
Yuvraj Singh
ಸಾಧು ಶ್ರೀನಾಥ್​
| Edited By: |

Updated on: Jun 06, 2020 | 11:30 AM

Share

ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ವಿರುದ್ಧ ಹರಿಯಾಣಾದ ಹನ್ಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹಾಗಾದ್ರೆ ಯುವರಾಜ್ ಯಾರಿಗಾದ್ರೂ ದೋಖಾ ಮಾಡಿದ್ದಾರಾ? ಇಲ್ಲಾ ಹಲ್ಲೆ ಮಾಡಿದ್ರಾ ಅಂತಾ ನೀವು ಯೋಚಿಸ್ತಿರಬಹುದು. ಆದ್ರೆ ಯುವರಾಜ್ ಸಿಂಗ್ ಮೇಲೆ ದೂರು ದಾಖಲಾಗೋದಕ್ಕೆ ಇದ್ಯಾವುದು ಕಾರಣವಲ್ಲ.

ಇತ್ತೀಚೆಗೆ ಯುವರಾಜ್‍ ಸಿಂಗ್ ತಮ್ಮ ಇನ್ಸ್​ಟಾಗ್ರಾಂನಲ್ಲಿ ಕ್ರಿಕೆಟಿಗರಾದ ರೋಹಿತ್‍ ಶರ್ಮಾ ಹಾಗೂ ಯಜುವೇಂದ್ರ ಚಹಲ್ ಜೊತೆ ಕ್ರಿಕೆಟ್ ವಿಚಾರವಾಗಿ ಚರ್ಚೆ ನಡೆಸಿದ್ರು. ಈ ವೇಳೆ ಯುವಿ ಕೆಲ ಹಾಸ್ಯ ಚಟಾಕಿಗಳನ್ನ ಹಾರಿಸೋ ಮೂಲಕ ರೋಹಿತ್ ಮತ್ತು ಚಹಲ್ ನಗೆ ಗಡಲಲ್ಲಿ ತೇಲೋ ಹಾಗೇ ಮಾಡಿದ್ರು.

ಮಾತನಾಡುವ ಭರದಲ್ಲಿ ಯುವಿ ಯಡವಟ್ಟು: ಆದ್ರೆ ಇದೇ ವೇಳೆ ಯುವರಾಜ್ ಸಿಂಗ್ ತಮಗೆ ಗೊತ್ತಿಲ್ಲದೇ ತಪ್ಪೊಂದನ್ನ ಮಾಡಿದ್ರು. ಚಹಲ್ ಜೊತೆ ಮಾತನಾಡೋ ವೇಳೆ ಜಾತಿ ನಿಂದನೆಯ ಪದವೊಂದನ್ನ ಬಳಿಸಿಬಿಟ್ಟಿದ್ರು. ಇದು ಯುವಿಗೂ ಗೊತ್ತಿರಲಿಲ್ಲ. ಹಾಗೇ ಚಹಲ್​ಗೂ ಗೊತ್ತಿರಲಿಲ್ಲ. ಆದ್ರೆ ಹರಿಯಾಣದ ದಲಿತ ಹಕ್ಕು ಸೇನೆಯ ಮುಖಂಡ ರಜತ್, ಕಲ್ಸನ್ ಪೊಲೀಸ್ ಠಾಣೆಯಲ್ಲಿ ಯುವರಾಜ್ ಸಿಂಗ್ ಜಾತಿ ನಿಂದನೆ ಮಾಡಿದ್ದಾರೆ ಅಂತಾ ದೂರು ದಾಖಲಿಸಿದ್ದಾರೆ.

ಯುವಿ ಹೇಳಿಕೆಗಳಿಂದ ದಲಿತ ಸಮುದಾಯದ ಜನರ ಭಾವನೆಯನ್ನು ಕೆರಳಿಸುವಂತಿದೆ ಎಂದು ಹೇಳಿ, ಯುವಿ ನೀಡಿದ ಹೇಳಿಕೆಯ ವಿಡಿಯೋದೊಂದಿಗೆ ದೂರು ದಾಖಲಿಸಿದ್ದಾರೆ. ಈ ಸಂಬಂಧ ಡಿಜಿಪಿಗೆ ತಿಳಿಸಿದ್ದು ಯುವಿ ತಪ್ಪು ಮಾಡಿರುವುದು ಸಾಬೀತಾದ್ರೆ, ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹನ್ಸಿ ಎಸ್ಪಿ ಲೋಕೇಂದ್ರ ಸಿಂಗ್ ತಿಳಿಸಿದ್ದಾರೆ.

ಕ್ಷಮೆ ಕೇಳಿದ ಯುವರಾಜ್ ಸಿಂಗ್: ಆದ್ರೀಗ ಈ ವಿಚಾರವಾಗಿ ಟ್ವೀಟ್ ಮಾಡಿರುವ ಯುವರಾಜ್ ಸಿಂಗ್ ತಮ್ಮಿಂದಾದ ತಪ್ಪಿಗೆ ಕ್ಷಮೆ ಕೇಳಿದ್ದಾರೆ. ಅಲ್ಲದೆ, ತಾನು ಉದ್ದೇಶಪೂರ್ವಕವಾಗಿ ಆಗಲಿ ಅಥವಾ ವೈಯಕ್ತಿಕ ನಿಂದನೆಗಾಗಲಿ, ಅಥವಾ ಜಾತಿ ನಿಂದನೆ ಉದ್ದೇಶದಿಂದಾಗಲೀ ಜಾತಿ ಸೂಚಕ ಪದ ಬಳಸಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಒಟ್ನಲ್ಲಿ ಯುವಿ ಮಾತನಾಡೋ ಭರದಲ್ಲಿ ಯಡವಟ್ಟು ಮಾಡಿಕೊಂಡು, ಕ್ಷಮೆ ಕೇಳಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ