AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾತಿ ನಿಂದನೆ ಆರೋಪ: ಕ್ಷಮೆಯಾಚಿಸಿದ ಯುವರಾಜ್ ಸಿಂಗ್

ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ವಿರುದ್ಧ ಹರಿಯಾಣಾದ ಹನ್ಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹಾಗಾದ್ರೆ ಯುವರಾಜ್ ಯಾರಿಗಾದ್ರೂ ದೋಖಾ ಮಾಡಿದ್ದಾರಾ? ಇಲ್ಲಾ ಹಲ್ಲೆ ಮಾಡಿದ್ರಾ ಅಂತಾ ನೀವು ಯೋಚಿಸ್ತಿರಬಹುದು. ಆದ್ರೆ ಯುವರಾಜ್ ಸಿಂಗ್ ಮೇಲೆ ದೂರು ದಾಖಲಾಗೋದಕ್ಕೆ ಇದ್ಯಾವುದು ಕಾರಣವಲ್ಲ. ಇತ್ತೀಚೆಗೆ ಯುವರಾಜ್‍ ಸಿಂಗ್ ತಮ್ಮ ಇನ್ಸ್​ಟಾಗ್ರಾಂನಲ್ಲಿ ಕ್ರಿಕೆಟಿಗರಾದ ರೋಹಿತ್‍ ಶರ್ಮಾ ಹಾಗೂ ಯಜುವೇಂದ್ರ ಚಹಲ್ ಜೊತೆ ಕ್ರಿಕೆಟ್ ವಿಚಾರವಾಗಿ ಚರ್ಚೆ ನಡೆಸಿದ್ರು. ಈ ವೇಳೆ ಯುವಿ ಕೆಲ ಹಾಸ್ಯ ಚಟಾಕಿಗಳನ್ನ ಹಾರಿಸೋ […]

ಜಾತಿ ನಿಂದನೆ ಆರೋಪ: ಕ್ಷಮೆಯಾಚಿಸಿದ ಯುವರಾಜ್ ಸಿಂಗ್
Yuvraj Singh
ಸಾಧು ಶ್ರೀನಾಥ್​
| Edited By: |

Updated on: Jun 06, 2020 | 11:30 AM

Share

ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ವಿರುದ್ಧ ಹರಿಯಾಣಾದ ಹನ್ಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹಾಗಾದ್ರೆ ಯುವರಾಜ್ ಯಾರಿಗಾದ್ರೂ ದೋಖಾ ಮಾಡಿದ್ದಾರಾ? ಇಲ್ಲಾ ಹಲ್ಲೆ ಮಾಡಿದ್ರಾ ಅಂತಾ ನೀವು ಯೋಚಿಸ್ತಿರಬಹುದು. ಆದ್ರೆ ಯುವರಾಜ್ ಸಿಂಗ್ ಮೇಲೆ ದೂರು ದಾಖಲಾಗೋದಕ್ಕೆ ಇದ್ಯಾವುದು ಕಾರಣವಲ್ಲ.

ಇತ್ತೀಚೆಗೆ ಯುವರಾಜ್‍ ಸಿಂಗ್ ತಮ್ಮ ಇನ್ಸ್​ಟಾಗ್ರಾಂನಲ್ಲಿ ಕ್ರಿಕೆಟಿಗರಾದ ರೋಹಿತ್‍ ಶರ್ಮಾ ಹಾಗೂ ಯಜುವೇಂದ್ರ ಚಹಲ್ ಜೊತೆ ಕ್ರಿಕೆಟ್ ವಿಚಾರವಾಗಿ ಚರ್ಚೆ ನಡೆಸಿದ್ರು. ಈ ವೇಳೆ ಯುವಿ ಕೆಲ ಹಾಸ್ಯ ಚಟಾಕಿಗಳನ್ನ ಹಾರಿಸೋ ಮೂಲಕ ರೋಹಿತ್ ಮತ್ತು ಚಹಲ್ ನಗೆ ಗಡಲಲ್ಲಿ ತೇಲೋ ಹಾಗೇ ಮಾಡಿದ್ರು.

ಮಾತನಾಡುವ ಭರದಲ್ಲಿ ಯುವಿ ಯಡವಟ್ಟು: ಆದ್ರೆ ಇದೇ ವೇಳೆ ಯುವರಾಜ್ ಸಿಂಗ್ ತಮಗೆ ಗೊತ್ತಿಲ್ಲದೇ ತಪ್ಪೊಂದನ್ನ ಮಾಡಿದ್ರು. ಚಹಲ್ ಜೊತೆ ಮಾತನಾಡೋ ವೇಳೆ ಜಾತಿ ನಿಂದನೆಯ ಪದವೊಂದನ್ನ ಬಳಿಸಿಬಿಟ್ಟಿದ್ರು. ಇದು ಯುವಿಗೂ ಗೊತ್ತಿರಲಿಲ್ಲ. ಹಾಗೇ ಚಹಲ್​ಗೂ ಗೊತ್ತಿರಲಿಲ್ಲ. ಆದ್ರೆ ಹರಿಯಾಣದ ದಲಿತ ಹಕ್ಕು ಸೇನೆಯ ಮುಖಂಡ ರಜತ್, ಕಲ್ಸನ್ ಪೊಲೀಸ್ ಠಾಣೆಯಲ್ಲಿ ಯುವರಾಜ್ ಸಿಂಗ್ ಜಾತಿ ನಿಂದನೆ ಮಾಡಿದ್ದಾರೆ ಅಂತಾ ದೂರು ದಾಖಲಿಸಿದ್ದಾರೆ.

ಯುವಿ ಹೇಳಿಕೆಗಳಿಂದ ದಲಿತ ಸಮುದಾಯದ ಜನರ ಭಾವನೆಯನ್ನು ಕೆರಳಿಸುವಂತಿದೆ ಎಂದು ಹೇಳಿ, ಯುವಿ ನೀಡಿದ ಹೇಳಿಕೆಯ ವಿಡಿಯೋದೊಂದಿಗೆ ದೂರು ದಾಖಲಿಸಿದ್ದಾರೆ. ಈ ಸಂಬಂಧ ಡಿಜಿಪಿಗೆ ತಿಳಿಸಿದ್ದು ಯುವಿ ತಪ್ಪು ಮಾಡಿರುವುದು ಸಾಬೀತಾದ್ರೆ, ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹನ್ಸಿ ಎಸ್ಪಿ ಲೋಕೇಂದ್ರ ಸಿಂಗ್ ತಿಳಿಸಿದ್ದಾರೆ.

ಕ್ಷಮೆ ಕೇಳಿದ ಯುವರಾಜ್ ಸಿಂಗ್: ಆದ್ರೀಗ ಈ ವಿಚಾರವಾಗಿ ಟ್ವೀಟ್ ಮಾಡಿರುವ ಯುವರಾಜ್ ಸಿಂಗ್ ತಮ್ಮಿಂದಾದ ತಪ್ಪಿಗೆ ಕ್ಷಮೆ ಕೇಳಿದ್ದಾರೆ. ಅಲ್ಲದೆ, ತಾನು ಉದ್ದೇಶಪೂರ್ವಕವಾಗಿ ಆಗಲಿ ಅಥವಾ ವೈಯಕ್ತಿಕ ನಿಂದನೆಗಾಗಲಿ, ಅಥವಾ ಜಾತಿ ನಿಂದನೆ ಉದ್ದೇಶದಿಂದಾಗಲೀ ಜಾತಿ ಸೂಚಕ ಪದ ಬಳಸಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಒಟ್ನಲ್ಲಿ ಯುವಿ ಮಾತನಾಡೋ ಭರದಲ್ಲಿ ಯಡವಟ್ಟು ಮಾಡಿಕೊಂಡು, ಕ್ಷಮೆ ಕೇಳಿದ್ದಾರೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?