AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗಿನಲ್ಲಿ ಫುಟ್​ಬಾಲ್ ಕ್ರೇಝ್: ತಲೆ ಎತ್ತಿ ನಿಂತ ಕ್ರಿಸ್ಟಿಯಾನೊ ರೊನಾಲ್ಡೊ!

Fifa World Cup 2026: ಫಿಫಾ ವಿಶ್ವಕಪ್​ 2026 ರಲ್ಲಿ ಪೋರ್ಚುಗಲ್ ತಂಡ ಇನ್ನೂ ಕೂಡ ಅಭಿಯಾನ ಆರಂಭಿಸಿಲ್ಲ. ಅದಕ್ಕೂ ಮುನ್ನವೇ ಕೊಡಗಿನಲ್ಲಿ ಪೋರ್ಚುಗಲ್ ತಂಡದ ನಾಯಕ ಕ್ರಿಸ್ಟಿಯಾನೊ ರೊನಾಲ್ಡೊ (Cristiano Ronaldo) ಅವರ ಬ್ಯಾನರ್ ಹಾಗೂ ಬೃಹತ್ ಆಕಾರದ ಕಟೌಟ್​​ಗಳು ರಾರಾಜಿಸಲಾರಂಭಿಸಿದೆ.

ಕೊಡಗಿನಲ್ಲಿ ಫುಟ್​ಬಾಲ್ ಕ್ರೇಝ್: ತಲೆ ಎತ್ತಿ ನಿಂತ ಕ್ರಿಸ್ಟಿಯಾನೊ ರೊನಾಲ್ಡೊ!
Cristiano RonaldoImage Credit source: IG
ಝಾಹಿರ್ ಯೂಸುಫ್
|

Updated on:Jun 16, 2026 | 10:12 AM

Share

ಕೊಡಗು ಎಂದರೆ ಕೇವಲ ಕಾಫಿ ನಾಡಲ್ಲ, ಅದು ಕ್ರೀಡಾಪಟುಗಳ ತವರೂರು. ಇಲ್ಲಿನವರ ರಕ್ತದಲ್ಲೇ ಕ್ರೀಡಾ ಪ್ರೇಮ ಹರಿಯುತ್ತದೆ ಎಂಬುದಕ್ಕೆ ಈಗ ಮತ್ತೊಂದು ಉದಾಹರಣೆ ಸಿಕ್ಕಿದೆ. ಹೌದು, ಕೊಡಗು ಜಿಲ್ಲೆಯ ಸುಂಟಿಕೊಪ್ಪದ ಗದ್ದೆಹಳ್ಳದಲ್ಲಿ ವಿಶ್ವ ಫುಟ್​ಬಾಲ್​ನ ಕಾಲ್ಚೆಂಡು ಚತುರ, ಪೋರ್ಚುಗಲ್‌ನ ಕ್ರಿಸ್ಟಿಯಾನೊ ರೊನಾಲ್ಡೊ ಅವರ ಬೃಹತ್ ಕಟೌಟ್ ತಲೆ ಎತ್ತಿ ನಿಂಗಿದೆ.

40 ಅಡಿ ಎತ್ತರದ ಕಟೌಟ್:

ಫಿಫಾ ವಿಶ್ವಕಪ್ ಕಾವೇರುತ್ತಿದ್ದಂತೆ ಸ್ಥಳೀಯ ಫುಟ್‌ಬಾಲ್ ಕ್ಲಬ್ ಆದ​ ‘ಅಮಿಟಿ ಯುನೈಟೆಡ್ ಎಫ್​ಸಿ’ ಮತ್ತು ರೊನಾಲ್ಡೊ ಅವರ ಕಟ್ಟಾ ಅಭಿಮಾನಿಗಳು ಸೇರಿ ಸರಿಸುಮಾರು 40 ಅಡಿ ಎತ್ತರದ ಈ ಬೃಹತ್ ಕಟೌಟ್ ಅನ್ನು ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲೇ ನಿಲ್ಲಿಸಿದ್ದಾರೆ. ಇದೀಗ ಈ ಕಟೌಟ್ ಆ ಭಾಗದಲ್ಲಿ ಹಾದುಹೋಗುವ ಪ್ರವಾಸಿಗರು ಮತ್ತು ಸ್ಥಳೀಯರ ಗಮನ ಸೆಳೆಯುತ್ತಿದೆ.

ಕೊಡಗಿನ ಫುಟ್‌ಬಾಲ್ ಕ್ರೇಝ್:

ಕರ್ನಾಟಕದಲ್ಲಿ ಕೊಡಗು ಜಿಲ್ಲೆಯನ್ನು ‘ಹಾಕಿಯ ತವರೂರು’ ಎಂದು ಕರೆಯಲಾಗುತ್ತದೆ. ಆದರೆ ಇಲ್ಲಿ ಹಾಕಿ ಮತ್ತು ಕ್ರಿಕೆಟ್‌ಗೆ ಎಷ್ಟು ಕ್ರೇಝ್ ಇದೆಯೋ, ಅಷ್ಟೇ ಕ್ರೇಝ್ ಫುಟ್‌ಬಾಲ್​ಗೂ ಇದೆ. ಅದರಲ್ಲೂ ಸುಂಟಿಕೊಪ್ಪ ಕೊಡಗಿನ ‘ಫುಟ್​ಬಾಲ್ ಮೆಕ್ಕಾ’ ಎಂದೇ ಗುರುತಿಸಿಕೊಂಡಿದೆ.

ವಿಶ್ವಕಪ್ ಅಥವಾ ಪ್ರಮುಖ ಅಂತಾರಾಷ್ಟ್ರೀಯ ಫುಟ್‌ಬಾಲ್ ಟೂರ್ನಿಗಳು ಬಂದಾಗಲೆಲ್ಲಾ ಕೊಡಗಿನ ಮೂಲೆ ಮೂಲೆಗಳಲ್ಲೂ ಫುಟ್‌ಬಾಲ್ ಫೀವರ್ ಮುಗಿಲೇರುತ್ತದೆ. ಈ ಬಾರಿ ಕ್ರಿಸ್ಟಿಯಾನೊ ರೊನಾಲ್ಡೊ ಅಭಿಮಾನಿಗಳು ತಮ್ಮ ನೆಚ್ಚಿನ ಆಟಗಾರನ ಮೇಲಿನ ಪ್ರೀತಿಯನ್ನು ಈ ಬೃಹತ್ ಕಟೌಟ್ ಮೂಲಕ ಜಗತ್ತಿಗೆ ಸಾರಿದ್ದಾರೆ.

ಫಿಫಾ ಫೀವರ್:

ಸುಂಟಿಕೊಪ್ಪದ ಗದ್ದೆಹಳ್ಳದಲ್ಲಿ ಕೇವಲ ಕ್ರಿಸ್ಟಿಯಾನೊ ರೊನಾಲ್ಡೊ ಅವರ ಕಟೌಟ್ ಮಾತ್ರ ತಲೆ ಎತ್ತಿ ನಿಂತಿಲ್ಲ. ಜಿ-ಟೌನ್ ಫುಟ್​ಬಾಲ್ ಕ್ಲಬ್ ಕೂಡ ಬ್ರೆಝಿಲ್, ಪೋರ್ಚುಗಲ್, ಅರ್ಜೆಂಟೀನಾ ತಂಡಗಳ ಬೃಹತಾಕಾರದ ಬ್ಯಾನರ್​​ ಅನ್ನು ಕೂಡ ನಿಲ್ಲಿಸಿದ್ದಾರೆ. ಈ ಮೂಲಕ ತಮ್ಮ ನೆಚ್ಚಿನ ತಂಡಗಳ ಗೆಲುವಿಗಾಗಿ ಹಾರೈಸಿದ್ದಾರೆ.

ಮೈದಾನದ ಬೇಡಿಕೆ:

ಸುಂಟಿಕೊಪ್ಪ ಕೊಡಗಿನ ‘ಫುಟ್​ಬಾಲ್ ಮೆಕ್ಕಾ’ ಎಂದು ಗುರುತಿಸಿಕೊಂಡರೂ, ಈ ಭಾಗದಲ್ಲಿ ಫುಟ್‌ಬಾಲ್‌ಗೆ ಸೂಕ್ತವಾದ ಸುಸಜ್ಜಿತ ಆಟದ ಮೈದಾನ ಹಾಗೂ ಕ್ರೀಡಾ ಸೌಲಭ್ಯಗಳಿಲ್ಲ ಎಂಬುದೇ ಸತ್ಯ. ಇದೀ ತಂಡಗಳ ಬ್ಯಾನರ್ ಹಾಗೂ ಕಟೌಟ್ ನಿಲ್ಲಿಸುವ ಮೂಲಕ ಸುಂಟಿಕೊಪ್ಪ ಫುಟ್​ಬಾಲ್ ಪ್ರೇಮಿಗಳು ಸುಸಜ್ಜಿತ ಆಟದ ಮೈದಾನಕ್ಕಾಗಿ ಸರ್ಕಾರದ ಗಮನ ಸೆಳೆಯಲು ಮುಂದಾಗಿದ್ದಾರೆ.

ಪ್ರವಾಸಿಗರ ಸೆಲ್ಫಿ ಸ್ಪಾಟ್:

ಸುಂಟಿಕೊಪ್ಪ ಮಾರ್ಗವಾಗಿ ಮಡಿಕೇರಿಗೆ ತೆರಳುವ ಪ್ರವಾಸಿಗರು ಈ 40 ಅಡಿಯ ರೊನಾಲ್ಡೊ ಕಟೌಟ್ ನೋಡಿ ಗಾಡಿ ನಿಲ್ಲಿಸಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲೂ ಈ ಫೋಟೋಗಳು ಸಿಕ್ಕಾಪಟ್ಟೆ ವೈರಲ್ ಆಗುತ್ತಿದ್ದು, “ಕೊಡಗಿನ ಹುಡುಗರ ಫುಟ್‌ಬಾಲ್ ಪ್ರೇಮಕ್ಕೆ ಸಾಟಿಯೇ ಇಲ್ಲ” ಎಂದು ನೆಟ್ಟಿಗರು ಕೊಂಡಾಡುತ್ತಿದ್ದಾರೆ.

ಇದನ್ನೂ ಓದಿ: ಬಿಗ್ ಶಾಕ್… ಬಲಿಷ್ಠ ಸ್ಪೇನ್ ವಿರುದ್ಧ ಸೆಟೆದು ನಿಂತ ಕೇಪ್ ವರ್ಡೆ..!

ಒಟ್ಟಾರೆಯಾಗಿ ಫುಟ್​ಬಾಲ್ ಎನ್ನುವುದು ಕೇವಲ ಆಟವಲ್ಲ, ಅದೊಂದು ಭಾವನೆ ಎಂಬುದನ್ನು ಕೊಡಗಿನ ಕ್ರೀಡಾಭಿಮಾನಿಗಳು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.

Published On - 10:08 am, Tue, 16 June 26

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಮೇಲ್ಛಾವಣಿ ಕುಸಿತದಿಂದ ಜೀವ ಭಯದಲ್ಲೇ ಸರ್ಕಾರಿ ಶಾಲೆಗೆ ಬರುತ್ತಿರುವ ಮಕ್ಕಳು
ಮೇಲ್ಛಾವಣಿ ಕುಸಿತದಿಂದ ಜೀವ ಭಯದಲ್ಲೇ ಸರ್ಕಾರಿ ಶಾಲೆಗೆ ಬರುತ್ತಿರುವ ಮಕ್ಕಳು
ಈ ರಾಶಿಯವರಿಗಿಂದು ಹಣದ ವಿಷಯದಲ್ಲಿ ಆತುರದ ನಿರ್ಧಾರ ಬೇಡ
ಈ ರಾಶಿಯವರಿಗಿಂದು ಹಣದ ವಿಷಯದಲ್ಲಿ ಆತುರದ ನಿರ್ಧಾರ ಬೇಡ
ಗರುಡ ಪುರಾಣದ ಪ್ರಕಾರ ಊಟ ಎಲ್ಲಿ ಮಾಡಬೇಕು, ಎಲ್ಲಿ ಮಾಡಬಾರದು? ಫಲಗಳೇನು?
ಗರುಡ ಪುರಾಣದ ಪ್ರಕಾರ ಊಟ ಎಲ್ಲಿ ಮಾಡಬೇಕು, ಎಲ್ಲಿ ಮಾಡಬಾರದು? ಫಲಗಳೇನು?
2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಸಾರಥ್ಯ?ಇದಕ್ಕೆ ಅವರು ಹೇಳಿದ್ದೇನು?
2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಸಾರಥ್ಯ?ಇದಕ್ಕೆ ಅವರು ಹೇಳಿದ್ದೇನು?
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ