AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ಧ ನಿಮಿಷಕ್ಕೆ 50 ಲಕ್ಷ ರೂ. ಖರ್ಚು! ಮಡದಿಯ ಜನ್ಮದಿನಕ್ಕೆ ಮರೆಯಲಾಗದ ಉಡುಗೂರೆ ಕೊಟ್ಟ ರೊನಾಲ್ಡೊ

Cristiano Ronaldo: ದುಬೈನ ಹೃದಯಭಾಗದಲ್ಲಿರುವ ಐಕಾನಿಕ್ ಟವರ್‌ ಮೇಲೆ ತನ್ನ ಮಡದಿಗೆ ಜನ್ಮ ದಿನದ ಶುಭಾಷಯ ಕೋರಲು ಬರೋಬ್ಬರಿ 50,000 ಪೌಂಡ್‌ಗಳನ್ನು ಖರ್ಚು ಮಾಡಿದ್ದಾರೆ ಎಂದು ವರದಿಯಾಗಿದೆ.

ಅರ್ಧ ನಿಮಿಷಕ್ಕೆ 50 ಲಕ್ಷ ರೂ. ಖರ್ಚು! ಮಡದಿಯ ಜನ್ಮದಿನಕ್ಕೆ ಮರೆಯಲಾಗದ ಉಡುಗೂರೆ ಕೊಟ್ಟ ರೊನಾಲ್ಡೊ
ಮಡದಿಯೊಂದಿಗೆ ರೊನಾಲ್ಡೊ
TV9 Web
| Edited By: |

Updated on: Jan 28, 2022 | 10:05 PM

Share

ಮ್ಯಾಂಚೆಸ್ಟರ್ ಯುನೈಟೆಡ್‌ನ ಸ್ಟಾರ್ ಫುಟ್‌ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೊ (Cristiano Ronaldo) ತಮ್ಮ ಮಡದಿ ಜಾರ್ಜಿನಾ ರೊಡ್ರಿಗಸ್‌ ಹುಟ್ಟುಹಬ್ಬಕ್ಕೆ ಮರೆಯಲಾಗದ ಉಡುಗೊರೆ ನೀಡಿದ್ದಾರೆ. ಅದೆನೆಂದರೆ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನಲ್ಲಿರುವ ಬುರ್ಜ್ ಖಲೀಫಾದ ಮೇಲೆ ತಮ್ಮ ಮಡದಿಯ ಭಾವಚಿತ್ರವಿರುವ ಲೇಸರ್ ಶೋ ಏರ್ಪಡಿಸುವ ಮೂಲಕ ಮಡದಿ ಜಾರ್ಜಿನಾ ರೊಡ್ರಿಗಸ್​ಗೆ ಸವಿ ನೆನಪಿನ ಕಾಣಿಕೆ ನೀಡಿದ್ದಾರೆ. ಐದು ಬ್ಯಾಲನ್ ಡಿ ಓರ್ ಪ್ರಶಸ್ತಿಗಳ ವಿಜೇತ ರೊನಾಲ್ಡೊ, ದುಬೈನ ಹೃದಯಭಾಗದಲ್ಲಿರುವ ಐಕಾನಿಕ್ ಟವರ್‌ ಮೇಲೆ ತನ್ನ ಮಡದಿಗೆ ಜನ್ಮ ದಿನದ ಶುಭಾಷಯ ಕೋರಲು ಬರೋಬ್ಬರಿ 50,000 ಪೌಂಡ್‌ಗಳನ್ನು ಖರ್ಚು ಮಾಡಿದ್ದಾರೆ ಎಂದು ವರದಿಯಾಗಿದೆ.

370 ಮಿಲಿಯನ್ ಪೌಂಡ್‌ ಆಸ್ತಿಯ ಒಡೆಯನಾಗಿರುವ 36 ವರ್ಷದ ರೊನಾಲ್ಡೊ, ಗುರುವಾರ ರಾತ್ರಿ ಗಗನಚುಂಬಿ ಕಟ್ಟಡದ ಮೇಲೆ ತನ್ನ 28 ವರ್ಷದ ಮಾಡೆಲ್ ಗೆಳತಿಯ ಚಿತ್ರಗಳು ಮತ್ತು ವೀಡಿಯೊಗಳನ್ನು ಐಕಾನಿಕ್ ಟವರ್‌ನ ಮೇಲೆ 30 ಸೆಕೆಂಡುಗಳ ಕಾಲ ಪೋಸ್ಟ್ ಮಾಡಿದ್ದಾರೆ. ಸದ್ಯ ಇಂಗ್ಲಿಷ್ ಪ್ರೀಮಿಯರ್ ಲೀಗ್‌ನಲ್ಲಿ ಭಾಗವಹಿಸಿರುವ ರೊನಾಲ್ಡೊ, ಚಳಿಗಾಲದ ವಿರಾಮದ ಸಮಯವನ್ನು ಕುಟುಂಬದೊಂದಿಗೆ ದುಬೈನಲ್ಲಿ ಕಳೆಯುತ್ತಿದ್ದಾರೆ. ರೊನಾಲ್ಡೊ ಮತ್ತು ಜಾರ್ಜಿನಾ ದಂಪತಿಗಳಿಗೆ ನಾಲ್ಕು ವರ್ಷದ ಮಗನೂ ಇದ್ದು, ಆತ ಕೂಡ ಅವರೊಂದಿಗೆ ರಜೆಯ ಮಜಾದಲ್ಲಿದ್ದಾನೆ.

ಲೈಟ್ ಮತ್ತು ಲೇಸರ್ ಶೋನಲ್ಲಿ ಮಾಜಿ ರಿಯಲ್ ಮ್ಯಾಡ್ರಿಡ್ ಮತ್ತು ಜುವೆಂಟಸ್ ತಂಡದ ಆಟಗಾರ ರೊನಾಲ್ಡೊ ಹಾಗೂ ಅವರ ಗೆಳತಿಯ ಹೆಸರು ಗೋಪುರದ ಮೇಲೆ ಪ್ರದರ್ಶನಗೊಂಡಿತು. ನಂತರ ಹ್ಯಾಪಿ ಬರ್ತ್‌ಡೇ ಜಿಯೋ ಸಂದೇಶದೊಂದಿಗೆ ಕೊನೆಗೊಂಡಿತು.

ಐಕಾನಿಕ್ ಟವರ್ ರಾತ್ರಿಯಲ್ಲಿ ವಿಶ್ವದ ಅತಿದೊಡ್ಡ ಪ್ರದರ್ಶನ ಪರದೆಯಾಗುತ್ತದೆ. ಇತ್ತೀಚಿನ ವರದಿಗಳ ಪ್ರಕಾರ ಗೋಪುರದ ಮುಂಭಾಗದಲ್ಲಿ ಮೂರು-ನಿಮಿಷದ ಪ್ರಚಾರ ಜಾಹೀರಾತು ಅಥವಾ ಸಂದೇಶವನ್ನು ಹಾಕಲು ಬರೊಬ್ಬರಿ ಕನಿಷ್ಠ 50,000 ಪೌಂಡ್‌ಗಳನ್ನು ಪಾವತಿಸಬೇಕು. ವರದಿಗಳ ಪ್ರಕಾರ ಈ ಮೊತ್ತ ವಾರಾಂತ್ಯದಲ್ಲಿ ಇನ್ನೂ ಹೆಚ್ಚಾಗಿರುತ್ತದೆ.

Follow Us
Web contact
Web contact

TV9 Kannada

Read More
4500 ಕೋಟಿ ರೂ. ವಂಚನೆ ಕೇಸ್: ಶಿವಂ ಅಸೋಸಿಯೇಟ್‌ ಮಾಲೀಕ ಅರೆಸ್ಟ್​​​
4500 ಕೋಟಿ ರೂ. ವಂಚನೆ ಕೇಸ್: ಶಿವಂ ಅಸೋಸಿಯೇಟ್‌ ಮಾಲೀಕ ಅರೆಸ್ಟ್​​​
ಹೈದರಾಬಾದ್-ಜೈಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ದುರಂತ
ಹೈದರಾಬಾದ್-ಜೈಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ದುರಂತ
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ