AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವಕರಿಗೆ ಆದ್ಯತೆ ನೀಡಲು ಸಿಎಸ್​ಕೆ ಹಿಂದೇಟು ಹಾಕುತ್ತಿದೆ!

ಇಂಡಿಯನ್ ಪ್ರಿಮೀಯರ್ ಲೀಗ್​ನಲ್ಲಿ ಆಡುವ ತಂಡಗಳಲ್ಲಿ ಯುವಕರು ಹೆಚ್ಚಿರಬೇಕೋ ಅಥವಾ ಅನುಭವಿಗಳಿಂದ ಪಂದ್ಯಗಳನ್ನು ಗೆಲ್ಲಬಹುದೋ? ಇಂಥದ್ದೊಂದು ಜಿಜ್ಞಾಸೆ ಕ್ರಿಕೆಟ್ ವಲಯದಲ್ಲಿ ಶುರುವಿಟ್ಟುಕೊಂಡಿದೆ. ಅದಕ್ಕೆ ಕಾರಣವೂ ಇಲ್ಲದಿಲ್ಲ. 13ನೇ ಆವೃತಿಯ ಮೊದಲ ಪಂದ್ಯ ಗೆದ್ದ ನಂತರ ಸತತ ಎರಡೂ ಪಂದ್ಯಗಳನ್ನು ಸೋತ ಚೆನೈ ಸೂಪರ್ ಕಿಂಗ್ಸ್ ಹಾಗೆ ಯೋಚಿಸುವಂಥ ಅನಿವಾರ್ಯತೆಯನ್ನು ಸೃಷ್ಟಿಸಿದೆ. ನೀವೊಮ್ಮೆ ಈ ತಂಡದ ಆಟಗಾರರ ವಯಸ್ಸಿನೆಡೆ ಗಮನ ಹರಿಸಿದರೆ ವಿಷಯ ಸ್ಪಷ್ಟವಾಗುತ್ತದೆ. ಕ್ಯಾಪ್ಟನ್ ಮಹೇಂದ್ರ ಸಿಂಗ್​ಗೆ ಈಗ 39, ಆರಂಭ ಆಟಗಾರರಾದ ಶೇನ್ ವ್ಯಾಟ್ಸನ್ ಮತ್ತು […]

ಯುವಕರಿಗೆ ಆದ್ಯತೆ ನೀಡಲು ಸಿಎಸ್​ಕೆ ಹಿಂದೇಟು ಹಾಕುತ್ತಿದೆ!
ಅರುಣ್​ ಕುಮಾರ್​ ಬೆಳ್ಳಿ
|

Updated on: Sep 30, 2020 | 7:28 PM

Share

ಇಂಡಿಯನ್ ಪ್ರಿಮೀಯರ್ ಲೀಗ್​ನಲ್ಲಿ ಆಡುವ ತಂಡಗಳಲ್ಲಿ ಯುವಕರು ಹೆಚ್ಚಿರಬೇಕೋ ಅಥವಾ ಅನುಭವಿಗಳಿಂದ ಪಂದ್ಯಗಳನ್ನು ಗೆಲ್ಲಬಹುದೋ? ಇಂಥದ್ದೊಂದು ಜಿಜ್ಞಾಸೆ ಕ್ರಿಕೆಟ್ ವಲಯದಲ್ಲಿ ಶುರುವಿಟ್ಟುಕೊಂಡಿದೆ. ಅದಕ್ಕೆ ಕಾರಣವೂ ಇಲ್ಲದಿಲ್ಲ. 13ನೇ ಆವೃತಿಯ ಮೊದಲ ಪಂದ್ಯ ಗೆದ್ದ ನಂತರ ಸತತ ಎರಡೂ ಪಂದ್ಯಗಳನ್ನು ಸೋತ ಚೆನೈ ಸೂಪರ್ ಕಿಂಗ್ಸ್ ಹಾಗೆ ಯೋಚಿಸುವಂಥ ಅನಿವಾರ್ಯತೆಯನ್ನು ಸೃಷ್ಟಿಸಿದೆ.

ನೀವೊಮ್ಮೆ ಈ ತಂಡದ ಆಟಗಾರರ ವಯಸ್ಸಿನೆಡೆ ಗಮನ ಹರಿಸಿದರೆ ವಿಷಯ ಸ್ಪಷ್ಟವಾಗುತ್ತದೆ. ಕ್ಯಾಪ್ಟನ್ ಮಹೇಂದ್ರ ಸಿಂಗ್​ಗೆ ಈಗ 39, ಆರಂಭ ಆಟಗಾರರಾದ ಶೇನ್ ವ್ಯಾಟ್ಸನ್ ಮತ್ತು ಫಫ್ ಡು ಪ್ಲೆಸ್ಸಿಯ ವಯಸ್ಸುಗಳು ಕ್ರಮವಾಗಿ 39 ಮತ್ತು 36, ತಾಹಿರ್ ಹುಸ್ಸೇನ್​ಗೆ ಈಗ 42ರ ಪ್ರಾಯ, ವೈಯಕ್ತಿಕ ಕಾರಣಗಳಿಗೆ ಈ ಬಾರಿ ಆಡದಿರಲು ನಿರ್ಧರಿಸಿದ ಹರ್ಭಜನ್ ಸಿಂಗ್ ಮತ್ತು ಸುರೇಶ್ ಅವರ ವಯಸ್ಸುಗಳು ಅನುಕ್ರಮವಾಗಿ 40 ಮತ್ತು 33, ಇನ್ನೊಬ್ಬ ಓಪನರ್ ಮರಳಿ ವಿಜಯ್​ಗೆ 36, ಮಿಡ್ಲ್ ಆರ್ಡರ್ ಬ್ಯಾಟ್ಸ್​ಮನ್ ಕೇದಾರ್ ಜಾಧವ್​ಗೆ 35, ಡ್ವೇನ್ ಬ್ರಾವೊ (ಈ ಬಾರಿ ಆಡುತ್ತಿಲ್ಲ) 36, ಕರ್ಣ್ ಶರ್ಮ 32 ಮತ್ತು ರವೀಂದ್ರ ಜಡೇಜಾಗೆ 31, ಎಲ್ಲಾ 30 ಪ್ಲಸ್​ಗಳೇ.

ಚೆನೈ ಟೀಮಿನಲ್ಲಿ ಯುವ ಆಟಗಾರರು ಇಲ್ಲವಂದೇನಿಲ್ಲ. ಆದರೆ, ಟೀಮ್ ಮ್ಯಾನೇಜ್​ಮೆಂಟ್ ಅನುಭವಕ್ಕೆ ಜಾಸ್ತಿ ಒತ್ತು ನೀಡುತ್ತಿದೆ. ಬೇರೆ ತಂಡಗಳಲ್ಲಿನ ಯುವ ಪ್ರತಿಭೆಗಳು ತಮಗೆ ದೊರೆತ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡಿದ್ದಾರೆ. ವಾಷಿಂಗ್ಟನ್ ಸುಂದರ್, ದೇವದತ್ ಪಡಿಕ್ಕಲ್, ರವಿ ಬಿಷ್ಣೊಯ್, ವರುಣ್ ಚಕ್ರವರ್ತಿ ಮೊದಲಾದವರೆಲ್ಲ ತಮ್ಮ ಮೇಲಿಟ್ಟಿರುವ ನಂಬಿಕೆಯನ್ನು ಹುಸಿಹೋಗಗೊಡದೆ ಅದ್ಭುತ ಪ್ರದರ್ಶನಗಳನ್ನು ನೀಡುತ್ತಿದ್ದಾರೆ.

ಟಿ20 ಕ್ರಿಕೆಟ್​ನಲ್ಲಿ ಆಲ್​ರೌಂಡರ್​ಗಳು ನಿರ್ಣಾಯಕ ಪಾತ್ರ ನಿರ್ವಹಿಸುತ್ತಾರೆ. ಆದರೆ, ಚೆನೈನ ಜಡೇಜಾ ಮತ್ತು ಜಾಧವ್ ತಮ್ಮ ಖ್ಯಾತಿಗೆ ತಕ್ಕ ಆಡವಾಡುತ್ತಿಲ್ಲ. ಕೊಲ್ಲಿ ರಾಷ್ಟ್ರಗಳ ಪಿಚ್​ಗಳು ಸ್ಪಿನ್ನರ್​ಗಳಿಗೆ ನೆರವಾಗುವುದರಿಂದ ಜಡೇಜಾ ಮೇಲೆ ಹೆಚ್ಚಿನ ಜವಾಬ್ದಾರಿಯಿದೆ. ಆದರೆ ಅವರು ಪ್ರತಿ ಪಂದ್ಯದಲ್ಲಿ ದುಬಾರಿಯಾಗುತ್ತಿದ್ದಾರೆ.

ಟೀಮಿನ ಯುವಕರಾದ ನಾರಾಯಣ ಜಗದೀಶನ್, ಕೆಎಮ್ ಆಸಿಫ್, ರವಿಶ್ರೀನಿವಾಸನ್ ಸಾಯಿಕಿಶೋರ್ ಮತ್ತು ಶಾರ್ದುಲ್ ಠಾಕುರ್ ಮುಂತಾದವರನ್ನು ಪ್ರಯೋಗಿಸಲು ಸಿಎಸ್​ಕೆ ಪ್ರಾಯಶಃ ಇನ್ನು ಮುಂದಾಗಬೇಕು.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್